Breaking News

ಬೆಂಗಳೂರು

ಇಸ್ರೇಲ್ ನಿಂದ ತವರಿಗೆ ಬಂದ ಕನ್ನಡಿಗರು

ಬೆಂಗಳೂರು : ಪೌರಾಡಳಿತ ಅಧ್ಯಯನಕ್ಕೆಂದು ಇಸ್ರೇಲ್ ಪ್ರವಾಸಕ್ಕೆ ರಾಜ್ಯದಿಂದ ತೆರಳಿದ್ದ 18 ಜನರ ತಂಡ ರಾಜ್ಯಕ್ಕೆ ಗುರುವಾರ ಹಿಂದಿರುಗಿದೆ. ಇಸ್ರೇಲ್ ದೇಶದಲ್ಲಿ ಪೌರಾಡಳಿತ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಅಧ್ಯಯನ ಮಾಡುವುದಕ್ಕಾಗಿ ರಾಜ್ಯದಿಂದ ಬಿ ಪ್ಯಾಕ್ ತಂಡದಲ್ಲಿ 18 ಜನರು ತೆರಳಿದ್ದರು. ಇರಾನ್​ -ಇಸ್ರೇಲ್​ ದೇಶಗಳ ನಡುವೆ ಕಳೆದ ಕೆಲ ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದೆ. ಈ ಮಧ್ಯೆ ಇಸ್ರೇಲ್​ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಇಸ್ರೇಲ್ ನಿಂದ ಕುವೈತ್​, ಕುವೈತ್​ನಿಂದ ಮುಂಬೈ …

Read More »

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?

ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ  (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಪಾವತಿಸಲು ಆದೇಶ ಹೊರಡಿಸಿದೆ. 1-4-2025ರಿಂದ …

Read More »

ಬಂಧನ ಭೀತಿಯಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಲೋಕಾಯುಕ್ತ ಐಪಿಎಸ್

ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳೇ ಭ್ರಷ್ಟರಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹೆಡ್ ಕಾನ್ ಸ್ಟೇಬಲ್ ನಿಂಗಪ್ಪ ಜೊತೆ ಸಂಪರ್ಕದಲ್ಲಿದ್ದ ಲೋಕಾಯುಕ್ತ ಎಸ್ಪಿ-1 ಆಗಿದ್ದ ಶ್ರೀನಾಥ್ ಮಹದೇವನ್ ಜೋಷಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಲೋಕಾಯುಕ್ತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತದಲ್ಲಿ ಲಂಚಾವತಾರ ಆರೋಪ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ …

Read More »

ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಆದೇಶಿಸಿದ ಪೊಲೀಸ್ ಇಲಾಖೆ

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಚಿನ್ನದ ವ್ಯಾಪಾರಿಗೆ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಕುರಿತು ಐಶ್ವರ್ಯ ಗೌಡ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಗಳ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ಪೊಲೀಸ್ ಇಲಾಖೆಯು ಆದೇಶಿಸಿದೆ. ಚಂದ್ರಾಲೇಔಟ್, ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು ಹಾಗೂ ಮಂಡ್ಯದಲ್ಲಿ ದಾಖಲಾಗಿದ್ದ ಎರಡು ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ತನಿಖೆ ನಡೆಸುವಂತೆ ಇಲಾಖೆಯು ಸಿಐಡಿಗೆ ಆದೇಶಿಸಿದೆ. ಡಿ.ಕೆ. ಸುರೇಶ್ …

Read More »

ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿದು ಕ್ರಿಪ್ಟೋದಲ್ಲಿ ಹೂಡಿಕೆ ಮಾಡುತ್ತಿದ್ದ ಮಾಜಿ ಕಾನ್​ಸ್ಟೇಬಲ್ ನಿಂಗಪ್ಪ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯ ಭೀತಿ ಹುಟ್ಟಿಸಿ ಸರ್ಕಾರಿ ಅಧಿಕಾರಿಗಳಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಹಣ ಪಡೆಯುತ್ತಿದ್ದುದಾಗಿ ಮಾಜಿ ಪೊಲೀಸ್ ಹೆಡ್ ​ಕಾನ್‌ಸ್ಟೇಬಲ್​ ನಿಂಗಪ್ಪ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ. ಚಿತ್ರದುರ್ಗದ ನಿಂಗಪ್ಪ ಅಲಿಯಾಸ್ ಸಾವಂತ್ ವಿರುದ್ಧ ಲೋಕಾಯುಕ್ತ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದಾಗ, ತಾನು ಕಳೆದ ಆರು …

Read More »

2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ

2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಬೆಂಗಳೂರು: 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ಸರ್ಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದೆ. ಈ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರ ವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ …

Read More »

ನೀಟ್‌ ಸೀಟು: ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ- ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, …

Read More »

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿಯಿಂದ ಸೈಬರ್ ಠಾಣೆಗೆ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಬರ್ ಪೊಲೀಸ್ ಠಾಣೆಗೆ ಬಿಜೆಪಿ ನಿಯೋಗ ದೂರು ನೀಡಿದೆ. ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದರು. ಇಂದು …

Read More »

ಜೈಲಿನಿಂದ ಬಿಡುಗಡೆಯಾದ ದಿನವೇ ಹತ್ಯೆ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದವನನ್ನು ಮಾತುಕತೆಗೆಂದು ಕರೆಸಿ ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನು ಜೆ.ಜೆ‌. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ದೀಪು (28) ಹಾಗೂ ಅರುಣ್ (27) ಎಂಬ ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿದೆ. ಶನಿವಾರ ರಾತ್ರಿ ಜೆ. ಜೆ. ನಗರದ ಜನತಾ ಕಾಲೋನಿಯಲ್ಲಿ ವಿಜಯ್ (26) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಆರೋಪಿಗಳು ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ …

Read More »

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ …

Read More »