Breaking News

ಬೆಂಗಳೂರು

ಇವರಿಗೆ ಕಾಮನ್ ಸೆನ್ಸ್ ಇದೆಯಾ? 10 ರೂ. ಪಾವತಿಸಿ ಅಂತ ತಿಳಿಸಲು ಈ ವಿ.ವಿ. ಖರ್ಚು ಮಾಡಿದ್ದು 22 ರೂ.!

ಧಾರವಾಡ: ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ದೇಶದ ಯಾವುದೇ ಪ್ರಜೆ ಯಾವುದೇ ರೀತಿಯ ಮಾಹಿತಿಯನ್ನು ಪಡೆಯಬಹುದು. ಅದೇ ರೀತಿಯ ಮಾಹಿತಿಯನ್ನು ಕೇಳಿ ಒಬ್ಬರು ಸಲ್ಲಿಸಿದ್ದ ಅರ್ಜಿಗೆ ಕರ್ನಾಟಕ ವಿಶ್ವವಿದ್ಯಾಲಯದ ಆರ್​ಟಿಐ ಉತ್ತರಿಸಿದ ಅಧಿಕಾರಿಗಳು ಉತ್ತರಿಸಿದ ರೀತಿಯೇ ನಗು ತರಿಸುವಂತಿದೆ. ಧಾರವಾಡದ ಕೆ.ಎಸ್. ಜಯಂತ್​ ಕೆಲವು ಮಾಹಿತಿ ಕೋರಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ 2021ರ ಜನವರಿ 1ರಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಫೆಬ್ರವರಿ 10ರಂದು ಉತ್ತರ ಬಂದಿದೆ. ‘ನೀವು ಕೇಳಿರುವ …

Read More »

ವಿಚಿತ್ರ ಸಮಸ್ಯೆಯಿಂದ ಬಳಲುತ್ತಿರುವ 11ತಿಂಗಳ ಕಂದ; ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿಗೆ ಪತ್ರ ಬರೆದ ಸಂಸದ

ಬೆಂಗಳೂರು: ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆಯಿಂದ ಬಳಲುತ್ತಿರುವ 11 ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. 11 ತಿಂಗಳ ಮಗು ಜನೀಶ್ ಚಿಕಿತ್ಸೆಗೆ 16 ಕೋಟಿ ರೂ.ಇಂಜಕ್ಷನ್ ಅಗತ್ಯವಿದ್ದು, ಇದನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದೆ. ಹೀಗಾಗಿ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯ ನೀಡುವಂತೆ ಮನವಿ ಮಾಡಿದ್ದು, ಔಷಧದ ಮೇಲಿನ ಎಲ್ಲಾ ತೆರಿಗೆಗಳನ್ನು ಮನ್ನಾ ಮಾಡುವ ಮೂಲಕ ಮಗುವಿಗೆ ನೆರವಾಗುವಂತೆ ಪತ್ರದಲ್ಲಿ …

Read More »

ಬೆಲೆ ಏರಿಕೆ ಎಫೆಕ್ಟ್ , ಭಾರವಾಯ್ತು ಜನರ ಬದುಕು..!

ಬೆಂಗಳೂರು, ಫೆ.12- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ, ತರಕಾರಿ ಬೆಲೆಗಳ ನಿರಂತರ ಏರಿಕೆಯಿಂದ ಜನರ ಬದುಕು ದುಸ್ತರವಾಗಿದೆ. ಕೊರೊನಾ ಸೋಂಕಿನಿಂದ ಆರ್ಥಿಕವಾಗಿ ಕಂಗೆಟ್ಟು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಕೆಲವು ವಾರಗಳಿಂದ ಬೇಳೆಕಾಳು, ಆಹಾರ ಪದಾರ್ಥ, ಹಣ್ಣು-ತರಕಾರಿಗಳ ಬೆಲೆ ಗಗನ ಮುಖಿಯಾಗಿದ್ದು, ಜನ ತತ್ತರಗೊಂಡಿದ್ದಾರೆ. ಕೆಳ ಹಾಗೂ ಮಧ್ಯಮ ವರ್ಗದ ಜನರ ಬದುಕಂತೂ ಹೇಳತೀರದಾಗಿದೆ. ಬೆಲೆ ಏರಿಕೆಗಳ ಹುಚ್ಚಾಟದಿಂದ ಪ್ರತಿದಿನ ಬಡವರ ಪರದಾಟ ಹೆಚ್ಚಾಗಿದೆ. ಪೆಟ್ರೋಲ್, …

Read More »

ಹೊಸ ಮದ್ಯದಂಗಡಿಗೆ ಲೈಸನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ :ಸಚಿವ ಗೋಪಾಲಯ್ಯ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಹೊಸ ಲೈಸನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ. ಈಗಾಗಲೇ ಹಳೆ ನಿಯಮದಂತೆ CL-07 ಲೈಸನ್ಸ್ ನೀಡುತ್ತಿದ್ದು, ಕಾನೂನು ಮೀರಿ ಲೈಸನ್ಸ್ ನೀಡಿದ್ದರೆ ಅದನ್ನು ರದ್ದು ಮಾಡಿ, ಅಧಿಕಾರಿಗಳನ್ನು ಅಮಾನತು ಮಾಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಂದು ಲೈಸನ್ಸ್ ಪಡೆದು ಮೂರ್ನಾಲ್ಕು ಬಾರ್​​​ಗಳನ್ನು ನಡೆಸುತ್ತಿರುವ ವಿಚಾರದ ಬಗ್ಗೆ ಸಚಿವರ ಗಮನ ಸೆಳೆದಾಗ, ಆ ರೀತಿ ಯಾವುದೇ ದೂರುಗಳು ನನ್ನ ಗಮನಕ್ಕೆ …

Read More »

ಖೋಡೇಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ: ರೂ.878 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು: ಮದ್ಯ ತಯಾರಿಕಾ ಕ್ಷೇತ್ರದ ಪ್ರಮುಖ ಕಂಪನಿ ಖೋಡೇಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ರೂ.878.82 ಕೋಟಿಗಳಷ್ಟು ಅಘೋಷಿತ ಆದಾಯ ಪತ್ತೆ ಹಚ್ಚಿದ್ದಾರೆ. ಖೋಡೇಸ್ ಗ್ರೂಪ್’ನ ಮಾಲೀಕರ ಮನೆ, ಕಚೇರಿ ಸೇರಿದಂತೆ ಒಟ್ಟು 26 ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅವುಗಳನ್ನು ಪರಿಶೀಲನೆ ನಡೆಸಿದಾಗ ರೂ.878 ಕೋಟಿಯಷ್ಟು ಅಘೋಷಿತ ಆದಾಯ …

Read More »

ಸಿದ್ದರಾಮಯ್ಯ ಜೊತೆಗೂಡಿ ಮತ್ತೆ ಹೋರಾಟಕ್ಕೆ ಮರಳಿದ್ದೇನೆ: ಡಾ.ಎಚ್‌.ಸಿ. ಮಹದೇವಪ್ಪ

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ, ಅಹಿಂದ ವೇದಿಕೆಯನ್ನು ನಾವೇ ಸೃಷ್ಟಿ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿ, ಮಾತುಕತೆ ನಡೆಸಿದರು. ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ‘ನಾನು ಮತ್ತು ಸಿದ್ದರಾಮಯ್ಯ 1989 ರಿಂದಲೂ ಆತ್ಮೀಯರು. …

Read More »

ಹೆಚ್ಚುವರಿ ₹534 ಕೋಟಿಗೆ ಬೇಡಿಕೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಡುತ್ತಿರುವ ಅಪೌಷ್ಟಿಕತೆ ಮತ್ತು ರಕ್ತಹೀನತೆ ಸಮಸ್ಯೆಗಳನ್ನು ಹೋಗಲಾಡಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಬಜೆಟ್‌ನಲ್ಲಿ ₹534 ಕೋಟಿ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಇಲಾಖೆಗೆ ಪ್ರತಿ ವರ್ಷ ಸುಮಾರು ₹5,000 ಕೋಟಿ ಬಜೆಟ್‌ನಲ್ಲಿ ನೀಡಲಾಗುತ್ತದೆ. ಇದಲ್ಲದೇ ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರವೇ ಅನುದಾನ ನೀಡುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ …

Read More »

ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೆ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿಯವರು …

Read More »

ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಸಂಪ್ಲಿಮೆಂಟರಿ ಚಾರ್ಜಶೀಟ್ ನಲ್ಲಿ ಕೊಲೆಗೆ ಸಂಬಂಧಿಸಿದಂತೆ ಇಂಚಿಂಚು ಮಾಹಿತಿ

ಧಾರವಾಡ(ಫೆ. 10):  ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಸಿಬಿಐ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ ಸಂಪ್ಲಿಮೆಂಟರಿ ಚಾರ್ಜಶೀಟ್ ಸಲ್ಲಿಸಿದ್ದಾರೆ. ಚಾರ್ಜಶೀಟ್ ನಲ್ಲಿರು ಏನಿದೆ ಎಂಬುದರ  ಪ್ರತಿ‌ ಇದೀಗ ಲಭ್ಯವಾಗಿದೆ‌‌. ಸಿಬಿಐ ತನಿಖೆ ಕೈಗೆತ್ತಿಕೊಂಡ ಬಳಿಕ‌ ನಡೆದ‌ ಎಲ್ಲ ಮಾಹಿತಿಯನ್ನು ಕಲೆಹಾಕಿದ್ದಾರೆ. ಯೋಗೇಶಗೌಡ ಕೊಲೆಗೆ ಸಂಬಂಧಿಸಿದಂತೆ ಹಲವರನ್ನು ಕರೆಸಿ ತನಿಖೆ ಆರಂಭ ಮಾಡಿದ್ದರು. ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಸಂಪ್ಲಿಮೆಂಟರಿ ಚಾರ್ಜಶೀಟ್ ನಲ್ಲಿ  ಕೊಲೆಗೆ ಸಂಬಂಧಿಸಿದಂತೆ …

Read More »

ಜಾನುವಾರು ಹತ್ಯೆ ಪ್ರತಿಬಂಧಕ ಮಸೂದೆ ಅಂಗೀಕಾರ ಸರಿಯಾಗಿದೆ: ಸಭಾಪತಿ ರೂಲಿಂಗ್‌

ಬೆಂಗಳೂರು: ಕಾಂಗ್ರೆಸ್‌ ಸದಸ್ಯರ ಧರಣಿ ಮಧ್ಯೆಯೇ, ‘ಧ್ವನಿ ಮತದಿಂದ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಮಸೂದೆಗೆ ನೀಡಿರುವ ಅನುಮೋದನೆ ಸರಿಯಾಗಿದೆ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ರೂಲಿಂಗ್‌ ನೀಡಿದರು. ಅಲ್ಲದೆ, ಕಾಂಗ್ರೆಸ್‌ ಸದಸ್ಯ ಧಿಕ್ಕಾರ ಘೋಷಣೆಯ ನಡುವೆಯೇ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಉತ್ತರ ನೀಡಿದರು. ಆ ಬಳಿಕ, ಕಲಾಪವನ್ನು ಸಭಾಪತಿ ಅನಿರ್ದಿಷ್ಟ ಅವಧಿಗೆ ಮುಂದೂಡಿದರು. …

Read More »