Breaking News
Home / ಜಿಲ್ಲೆ / ಬೆಂಗಳೂರು (page 23)

ಬೆಂಗಳೂರು

ನಾಳೆಯಿಂದ ವಿಧಾನಮಂಡಲ ಅಧಿವೇಶನ;

ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್‌, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಹಲವು ವಿಧೇಯಕಗಳ ಮಂಡನೆಯಾಗಲಿದೆ. ಪ್ರವಾಹ ಪರಿಹಾರ, ಮಳೆ ಅನಾಹುತ, ಪಿಎಸ್‌ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ. ಇನ್ನು, ಜನಸ್ಪಂದನ ಸಮಾವೇಶದ ಹುಮ್ಮಸ್ಸಿನಲ್ಲಿರುವ …

Read More »

ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಇಲ್ಲಿದೆ ಭಾಷಣದ ಹೈಲೈಟ್ಸ್

ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತ ಹಿಂದಿನ ಕಾಂಗ್ರೆಸ್‌ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ನಾವೇ ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಧಮ್‌ ಇದ್ರೆ ತಡೆಯಿರಿ ಅಂತ ಕಾಂಗ್ರೆಸ್‌ಗೆ ಸವಾಲ್‌ ಹಾಕಿದರು. …

Read More »

KSRTC ಸಿಬ್ಬಂದಿ’ಗಳಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ‘ಪ್ರತಿ ತಿಂಗಳು 1ನೇ ತಾರೀಕು ವೇತನ ಪಾವತಿ’

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( Karnataka State Road Transport Corporation -KSRTC) ಸಮಸ್ತ ಸಿಬ್ಬಂದಿಗಳಿಗೆ ಅಕ್ಟೋಬರ್ 2022ರಿಂದ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿ ಮಾಡುವ ಉಪ ಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಹೀಗಾಗಿ ನಿಗಮದ ಸಮಸ್ತ ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ತಾರೀಕಿನಂದೇ ವೇತನ ಪಾವತಿಯಾಗಲಿದೆ.   ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ …

Read More »

ಸಚಿವ ನಿತಿನ್‌ ಗಡ್ಕರಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕನಕಪುರದಲ್ಲಿ ಹಾದುಹೋಗುವ ದಿಂಡಗಲ್‌-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ- 209ರಲ್ಲಿ ಸಂಚಾರದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಕಾವತಿ ನದಿ ಉದ್ದಕ್ಕೂ ಇರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ. ಶುಕ್ರವಾರ ಸಂಸದ ಡಿ.ಕೆ.ಸುರೇಶ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಜತೆಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಕಿ.ಮೀ. 419.550ರಿಂದ …

Read More »

ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್‌ ಎಕ್ಸಿಕ್ಯೂಟಿವ್‌ ಹುದ್ದೆಗಳಿಗೆ ವರ್ಗಾಯಿಸಿದೆ.

ಬೆಂಗಳೂರು: ಲೋಕಾಯುಕ್ತ, ಇಲಾಖಾ ವಿಚಾರಣೆ ಸೇರಿದಂತೆ ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್‌ ಎಕ್ಸಿಕ್ಯೂಟಿವ್‌ ಹುದ್ದೆಗಳಿಗೆ ವರ್ಗಾಯಿಸಿದೆ. ಜತೆಗೆ ನಾಲ್ವರು ಶಿಕ್ಷಣಾಧಿ ಕಾರಿಗಳನ್ನೂ ವಿವಿಧ ಹುದ್ದೆ ಗಳಿಗೆ ವರ್ಗಾಯಿಸಲಾಗಿದೆ. ಎಕ್ಸಿಕ್ಯೂಟಿವ್‌ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಗಳು ಕೇಳಿಬಂದರೆ, ಅವರ ವಿರುದ್ಧ ತನಿಖೆ, ವಿಚಾರಣೆ ನಡೆಯುತ್ತಿದ್ದರೆ. ಅಂಥವರನ್ನು ನಾನ್‌ ಎಕ್ಸಿಕ್ಯೂಟಿವ್‌ ಹುದ್ದೆಗಳಿಗೆ ವರ್ಗಾಯಿಸಬೇಕು ಎಂಬ ನಿಯಮದ ಅನ್ವಯ ಈ ವರ್ಗಾ ವಣೆ ಮಾಡಲಾಗಿದೆ ಎಂದು …

Read More »

ಹೈಕೋರ್ಟ್‌ ಆದೇಶದಂತೆ ಎಸಿಬಿ ರದ್ದು: ಲೋಕಾಯುಕ್ತಕ್ಕೆ ಬಲ

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿದೆ.   ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಇರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. 2016ರಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಭ್ರಷ್ಟಾಚಾರ …

Read More »

ಕರ್ನಾಟಕ ಸಂಪುಟ: ಸಿಎಂ ಬಸವರಾಜ ಬೊಮ್ಮಾಯಿಗೆ 8 ಖಾತೆಗಳ ಜವಾಬ್ದಾರಿ ಒತ್ತಡ!

ಬೆಂಗಳೂರು, ಸೆಪ್ಟೆಂಬರ್, 09: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಂಕಟಕ್ಕೆ ಮುಕ್ತಿ ಯಾವಾಗ ಅನ್ನೋ ಪ್ರಶ್ನೆ ಮೂಡಿದೆ. ಬಸವರಾಜ ಬೊಮ್ಮಾಯಿ ಹೆಗಲ ಮೇಲೆ ಮತ್ತಷ್ಟು ಹೊರೆ ಹೆಚ್ಚಾಗುತ್ತಿದೆ. ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಖಾತೆ ಸೇರಿದಂತೆ ಉಮೇಶ್ ಕತ್ತಿ ಸಾವಿನಿಂದ ಅರಣ್ಯ ಖಾತೆಯ ಜವಾಬ್ದಾರಿಯು ಸಿಎಂ ಲಭಿಸಿದೆ.   ಬಸವರಾಜ ಬೊಮ್ಮಾಯಿ ಪ್ರಸ್ತುತ 8 ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಹಣಕಾಸು, ಬೆಂಗಳೂರು ನಗರಾಭಿವೃದ್ದಿ, ಗುಪ್ತಚರ, …

Read More »

ಕರ್ನಾಟಕದ ನೀಟ್ ಸಾಧನೆ: ಟಾಪ್ 50 ಪಟ್ಟಿಯಲ್ಲಿ 9 ರ‌್ಯಾಂಕ್; 72000 ವಿದ್ಯಾರ್ಥಿಗಳಿಗೆ ಅರ್ಹತೆ

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ರಾಜ್ಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ. ಅಖಿಲ ಭಾರತ ಮಟ್ಟದ ಟಾಪ್ 20ರಲ್ಲಿ 6 ಹಾಗೂ 50ರ ಪಟ್ಟಿಯಲ್ಲಿ ಒಟ್ಟು 9 ಅಭ್ಯರ್ಥಿಗಳು ಸ್ಥಾನ ಪಡೆೆದಿದ್ದಾರೆ. ಇದಲ್ಲದೆ, ವಿವಿಧ ವಿಭಾಗಗಳಲ್ಲಿನ ಟಾಪರ್​ಗಳನ್ನು ಸೇರಿಸಿದಲ್ಲಿ ಸಂಖ್ಯೆ 14ಕ್ಕೆ ಏರಿಕೆಯಾಗುತ್ತದೆ. ಈ ಮೂಲಕ ಹಿಂದಿನ ಎಲ್ಲ ದಾಖಲೆಗಳನ್ನು ಮೀರಿದಂತಾಗಿದೆ. ಅರ್ಹತೆಯಲ್ಲೂ ರೆಕಾರ್ಡ್: ಈ ಬಾರಿ ರಾಜ್ಯದ 1,22,423 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಟ್ಟಾರೆ 72,262 ಜನರು …

Read More »

ನೀಟ್‌: ರಾಜ್ಯದ 72,262 ವಿದ್ಯಾರ್ಥಿಗಳು ಅರ್ಹ

ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ ರಾಜ್ಯದ 72,262 ವಿದ್ಯಾರ್ಥಿ ಗಳು ಅರ್ಹತೆ ಪಡೆದಿದ್ದಾರೆ. ರಾಜ್ಯದಿಂದ 1,22,423 ವಿದ್ಯಾರ್ಥಿಗಳು ಹಾಜರಾಗಿ ದ್ದರು. ಅಖಿಲಭಾರತ ಮಟ್ಟದ ಮೊದಲ ಐದು ಸ್ಥಾನಗಳಲ್ಲಿ ರಾಜ್ಯದ ಇಬ್ಬರು, ಅಗ್ರ 10 ಸ್ಥಾನಗಳಲ್ಲಿ ಮೂವರು ವಿದ್ಯಾರ್ಥಿಗಳು ಇದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಮೂರನೇ ರ್‍ಯಾಂಕ್ ಪಡೆದ ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸ್‌ಲೆನ್ಸ್‌ನ ಹೃಷಿಕೇಶ್ ನಾಗ ಭೂಷಣ ಗಂಗುಲೆ ರಾಜ್ಯಕ್ಕೆ ಮೊದಲಿಗ. ರಾಜ್ಯ ಸಿಇಟಿಯಲ್ಲಿ ಪ್ರಕೃತಿ …

Read More »

ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು

ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು ಬೆಂಗಳೂರು: ಮುಂದಿನ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ನಿರಂತರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕೆಲವು ದಿನಗಳ ಕಾಲ ಜನರು ಸದ್ಯದ ಪರಿಸ್ಥಿತಿಯನ್ನು ಸಹಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ರೈಲ್ವೇ ಅಲರ್ಟ್ ಆಗಿರುವ ಹಿನ್ನೆಲೆಯಲ್ಲಿ ಅನಾಹುತಕ್ಕೆ ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರವಾಹ ಪೀಡಿತ ಜನರಿಗೆ ಸ್ಪಂದಿಸಲು …

Read More »