Breaking News

ಬೆಂಗಳೂರು

ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ …

Read More »

BIG BREAKING : ನಾಳೆ 3.50ಕ್ಕೆ ನೂತನ ಸಚಿವರ ಪ್ರಮಾಣವಚನ : 8 ಶಾಸಕರು ಸಂಪುಟ ಸೇರ್ಪಡೆ – ಸಿಎಂ ಯಡಿಯೂರಪ್ಪ

ಬೆಂಗಳೂರು : 7 ರಿಂದ 8 ಶಾಸಕರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳುವ ಬಗ್ಗೆ ನಾಳೆ 3.50 ಗಂಟೆಗೆ ತೀರ್ಮಾನ ಕೈಗೊಳ್ಳಲಾಗುವುದು. ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಒಬ್ಬರನ್ನು ಕೈಬಿಡುವ ಚರ್ಚೆ ಕೂಡ ನಡೆದಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ನಾಳೆ ಸಂಜೆ 3.50ಕ್ಕೆ ನೂತನ ಸಚಿವರು ಸಂಪುಟ ಸೇರ್ವಡೆಗೊಳ್ಳಲಿದ್ದಾರೆ. 7 ರಿಂದ …

Read More »

ಎಫ್‌ಐಆರ್ ದಾಖಲಿಸಲು ₹ 1 ಲಕ್ಷ ಲಂಚ: ಬೈಯಪ್ಪನಹಳ್ಳಿ ಠಾಣೆ ಪಿಎಸ್‌ಐ ಸೌಮ್ಯಾ ಬಂಧನ

ಬೆಂಗಳೂರು: ಪ್ರಕರಣವೊಂದರಲ್ಲಿ‌ ಎಫ್‌ಐಆರ್ ದಾಖಲಿಸಲು ದೂರುದಾರರಿಂದ ₹ 1 ಲಕ್ಷ ಲಂಚ ಪಡೆಯುತ್ತಿದ್ದ ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸೌಮ್ಯಾ ಮತ್ತು ಹೆಡ್ ಕಾನ್ ಸ್ಟೆಬಲ್ ಜೆ.ಪಿ. ರೆಡ್ಡಿ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಎಸಿಬಿ ಕಾರ್ಯಾಚರಣೆ ವೇಳೆ …

Read More »

ಮಗಳ ಮದುವೆಗೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದ ಜಮೀರ್ ಅಹ್ಮದ್ ಖಾನ್

ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಮಗಳ ಮದುವೆಗೆ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುಉತ್ತಿದ್ದು, ನಿನ್ನೆ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿಯಾಗಿ ಆಹ್ವಾನ ನೀಡಿದ್ದಾರೆ. ನಿನ್ನೆ ರಾತ್ರಿ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಜಮೀರ್ ಅಹ್ಮದ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಗಳ ಮದುವೆಗೆ ಆಮಂತ್ರಣ ನೀಡಿ ಮದುವೆಗೆ ದಯಮಾಡಿ ಬರಬೇಕು ಸಾರ್ ಎಂದರು. ಇದೇ ವೇಳೆ ಯಡಿಯೂರಪ್ಪ ಪುತ್ರ …

Read More »

BREAKING : ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಬಂಧನ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಪೊಲೀಸರು ನಿನ್ನೆ ರಾತ್ರಿ ಚೆನ್ನೈನಲ್ಲಿ ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ 6 ನೇ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಚಾಮರಾಜನಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ …

Read More »

ಸಂಪುಟ ವಿಸ್ತರಣೆಯೋ,ಪುನರ್ ರಚನೆಯೋ ಇಂದೇ ಗೊತ್ತಾಗತ್ತೆ: ಸಿಎಂ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿದ ಟೆನ್ಸನ್!!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಏನೆಂಬುದು ಇಂದೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಆ ಮೂಲಕ ಸಚಿವರು ಹಾಗೂ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ‌ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಸೋಮವಾರ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ …

Read More »

ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು: ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ

ಬೆಂಗಳೂರು: ‘ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು’ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ಭಾನುವಾರ ಹೇಳಿದರು. ಕರ್ನಾಟಕ ರಾಜ್ಯ ರೈತ ಸಂಘ ಆಯೋಜಿಸಿದ್ದ ‘ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನ ಆಗಲಿದೆಯೆ?’ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಸಂವಿಧಾನದತ್ತವಾಗಿರುವ ಮೂಲಭೂತ ಹಕ್ಕುಗಳು, ನಿರ್ದೇಶಕ ತತ್ವಗಳ ವಿರುದ್ಧವಾಗಿ …

Read More »

ಬಿಜೆಪಿ ದರಿದ್ರ ಸರ್ಕಾರ:ಸಿದ್ದರಾಮಯ್ಯ ಲೇವಡಿ

ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ …

Read More »

‘ಆನ್‌ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್‌ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದಹೈಕೋರ್ಟ್

ಬೆಂಗಳೂರು: ‘ಆನ್‌ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್‌ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸ್ನ್ಯಾಪ್‌ಡೀಲ್ ಸಂಸ್ಥೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆ ರದ್ದು ಪಡಿಸಿದ ನ್ಯಾಯಾಲಯ, ಈ ಅಭಿಪ್ರಾಯಪಟ್ಟಿದೆ. ವೆಬ್‌ಸೈಟ್‌ನಲ್ಲಿ ಜಾಹೀರಾತು ಪ್ರದರ್ಶಿಸಿರುವ ಉತ್ಪನ್ನವೊಂದು ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆಗೆ ವಿರುದ್ಧವಾಗಿದೆ ಸ್ನ್ಯಾಪ್‌ಡೀಲ್ ವಿರುದ್ಧ ಮೈಸೂರಿನ ಉಪ ಔಷಧ ನಿಯಂತ್ರಕರು ‌ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಸ್ನ್ಯಾಪ್‌ಡೀಲ್ ಪರವಾಗಿ ಹಾಜರಾದ ಹಿರಿಯ ವಕೀಲ …

Read More »

ಯಶ್‍ ಅಭಿಮಾನಿಗಳ ಪ್ರೀತಿ ಮತ್ತು ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಬೆಂಗಳೂರು: ಕೆಜಿಎಫ್-2 ಚಿತ್ರದ ಟೀಸರ್ ನೋಡಿ ಯಶ್‍ಗೆ ಅಭಿಮಾನಿಗಳೂ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ಟೀಸರ್ ನಿಂದಲೇ ದಾಖಲೆ ನಿರ್ಮಿಸಲು ಹೊರಡುತ್ತಿದ್ದಂತೆ ಯಶ್ ಅಭಿಮಾನಿಗಳ ಪ್ರೀತಿ ಮತ್ತು ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಕೆಜಿಎಫ್-2 ಚಿತ್ರದ ಟೀಸರ್ ಗುರುವಾರ ರಾತ್ರಿ ಬಿಡುಗಡೆ ಗೊಳಿಸಿದ್ದರು. ಈಗಾಗಲೇ ಸುಮಾರು 10 ಕೋಟಿಗೂ ಅಧಿಕ ವ್ಯೂವ್, ಲೈಕ್ ಮತ್ತು ಕಮೆಂಟ್‍ಗಳನ್ನು ಹಾಕುವ ಮೂಲಕ ಕನ್ನಡ ಚಿತ್ರವೊಂದು ಎಲ್ಲಾ ಯೂಟ್ಯೂಬ್ ದಾಖಲೆಗಳನ್ನು ಪುಡಿಗಟ್ಟಿದೆ. ಈ ಸಂಭ್ರಮವನ್ನು ಇದೀಗ್ ಯಶ್ …

Read More »