ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …
Read More »ಇಂದಿನಿಂದ ರುಪ್ಸಾ ಆನ್ಲೈನ್ ಕ್ಲಾಸ್ ಬಂದ್: ಡಿ.31ರವರೆಗೆ ಸರ್ಕಾರಕ್ಕೆ ಡೆಡ್ಲೈನ್
ಬೆಂಗಳೂರು(ಡಿ.21): ಶಿಕ್ಷಣ ಇಲಾಖೆ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ, ಇಂದಿನಿಂದ ರುಪ್ಸಾ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳ ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿದೆ. ಜೊತೆಗೆ ಸಂಪೂರ್ಣ ಶೈಕ್ಷಣಿಕ ವರ್ಷವನ್ನು ಸ್ಥಗಿತ ಮಾಡಲು ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ. ಸರ್ಕಾರ ಶಾಲೆಗಳನ್ನು ಪುನರಾರಂಭಿಸುವ ಸಮಯದಲ್ಲಿ ಶಾಲೆಗಳನ್ನು ಮುಚ್ಚಲು ಖಾಸಗಿ ಶಿಕ್ಷಣ ಮಂಡಳಿ ಮುಂದಾಗಿದೆ. ಇಂದಿನಿಂದ ರುಪ್ಸಾ ಅಡಿಯ ಖಾಸಗಿ ಶಾಲೆಗಳ ಆನ್ ಲೈನ್ ಕ್ಲಾಸ್ ಬಂದ್ …
Read More »ಹೆಚ್ಡಿಕೆ & ಯಡಿಯೂರಪ್ಪ ಅವರ ವಿರುದ್ಧವೂ ಏಕವಚನದಲ್ಲೇ ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಅದರ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧವೂ ಏಕವಚನದಲ್ಲೇ ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ರೈತ ಹೋರಾಟಗಾರ ಅಂತ ಹಸಿರು ಶಾಲು ಹಾಕಿಕೊಳ್ತಾನೆ. ಬಡವರ ಅಕ್ಕಿಯನ್ನ ಐದು ಕೆ.ಜಿ.ಗೆ ಇಳಿಸಿದ್ದಾನೆ. ಯಾಕೆ ಕಡಿಮೆ ಮಾಡಿದ್ರು, ಏನ್ ಅವರಪ್ಪನ ಮನೆಯಿಂದ ಕೊಡ್ತಿದ್ನಾ.. ಬಡವರ ಪರ ಹೃದಯವೇ ಇಲ್ಲದ ನಿಮ್ಮನ್ನ ಮನುಷ್ಯರು ಅಂತ ಕರೆಯಬೇಕಾ..? ಬಿಎಸ್ವೈ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ …
Read More »ಬೇಕಾಬಿಟ್ಟಿ ವಸೂಲಿಗೆ ನಿಂತಿರುವ ಖಾಸಗಿ ಶಾಲೆಗಳ ಜೊತೆಗೆ ಸರ್ಕಾರ ಶಾಮೀಲಾಗಿದೆ; ಸಿದ್ದರಾಮಯ್ಯ
ಬೆಂಗಳೂರು (ಡಿಸೆಂಬರ್ 20); ಕೊರೋನಾ ಸೋಂಕಿನ ಕಾರಣದಿಂದಾಗಿ ಕಳೆದ 9 ತಿಂಗಳಿನಿಂದ ಶಾಲೆಗಳು ಬಂದ್ ಆಗಿವೆ. ಆದರೆ, ಕೆಲವು ಖಾಸಗಿ ಶಾಲೆಗಳಲ್ಲಿ ಮಾತ್ರ ಆನ್ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಈ ನಡುವೆ ಶಾಲೆಗಳ ಆಡಳಿತ ಮಂಡಲಿ ನಿತ್ಯ ತರಗತಿಗಳು ಇಲ್ಲದಿದ್ದರೂ ಬೇಕಾಬಿಟ್ಟಿ ಶುಲ್ಕ ವಸೂಲಾತಿ ನಡೆಸುತ್ತಿವೆ. ಈ ಕುರಿತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರೂ ಸರ್ಕಾರ ಮಾತ್ರ ಗಮನವಹಿಸುತ್ತಿಲ್ಲ. ಈ ಕುರಿತು ಸರಣಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ …
Read More »ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ
ಬೆಂಗಳೂರು, ಡಿ.20- ರಾಜ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ರೈತರು ಮತ್ತು ಕಾರ್ಮಿಕರು ಪ್ರತಿಭಟನೆ ಹಾಗೂ ಸತ್ಯಾಗ್ರಹಗಳಲ್ಲಿ ತೊಡಗಿದ್ದಾರೆ. ಪ್ರತಿಭಟನಾ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಬಿಡದಿಯ ಟೊಯೋಟಾ ಕಂಪೆನಿ ಕೈಗಾರಿಕಾ ಪ್ರದೇಶದಲ್ಲಿ ಹಲವು ಘಟಕಗಳನ್ನು ಹೊಂದಿದೆ. ಅದರ ಒಂದು ಘಟಕದಲ್ಲಿ ಸುಮಾರು ಎರಡು ಸಾವಿರ ಜನರು ಖಾಯಂ ನೌಕರರಾಗಿ ಕೆಲಸ ಮಾಡುತ್ತಿದ್ದರು. ಈ …
Read More »ಗ್ರಾ.ಪಂ.ಚುನಾವಣೆ : ಹಳ್ಳಿಗಲ್ಲಿ ಜೋರಾಗಿದೆ ಗುಂಡು ತುಂಡಿನ ಪಾರ್ಟಿ…!
ಬೆಂಗಳೂರು, ಡಿ.20- ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದ್ದು, ನಾನಾ ತಂತ್ರಗಳ ಮೂಲಕ ಮತದಾರರ ಮನಗೆಲ್ಲಲು ಕಣದಲ್ಲಿರುವ ಅಭ್ಯರ್ಥಿಗಳು ಅಂತಿಮ ಕಸರತ್ತು ನಡೆಸಿದ್ದಾರೆ.ನಗರ, ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಹಣ ಹಂಚಿಕೆ, ಗುಂಡು-ತುಂಡು ಪಾರ್ಟಿ ಭರ್ಜರಿಯಾಗಿಯೇ ನಡೆದಿದೆ. ತೋಟದ ಮನೆ, ಡಾಬಾ, ಇಟ್ಟಿಗೆ ಶೆಡ್ ಎಲ್ಲೆಂದರಲ್ಲಿ ಪಾರ್ಟಿಗಳನ್ನು ಆಯೋಜಿಸಿ ಮತದಾರರ ಮನವೊಲಿಕೆಯ ಕಸರತ್ತು ನಡೆಯುತ್ತಿದೆ. ಅದರ ಜತೆಗೆ ಹಣ ಇನ್ನಿತರ ಆಮಿಷಗಳ ಸುರಿಮಳೆಯಾಗುತ್ತಿದೆ. ಇನ್ನು …
Read More »ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್
ಬೆಂಗಳೂರು – ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಖಾಸಗಿ ಶಾಲೆಗಳನ್ನು ಬಂದ್ ಮಾಡಲು ಖಾಸಗಿ ಶಾಲೆಗಳ ಒಕ್ಕೂಟ- ರುಪ್ಸ್ ನಿರ್ಧರಿಸಿದೆ. ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ರುಪ್ಸ್ ನಲ್ಲಿ ನೋಂದಾಯಿತ 12800 ಶಾಲೆಗಳಿವೆ. ಶಾಲೆಗಳ ನೋಂದಣಿ ನವೀಕರಿಸುವ ನೂತನ ರೂಲ್ಸ್ ಸೇರಿದಂತೆ ವಿವಿಧ 15 ಬೇಡಿಕೆಗಳನ್ನು ಒಕ್ಕೂಟ ಸರಕಾರದ ಮುಂದಿಟ್ಟಿದೆ. ಸರಕಾರ ಬೇಡಿಕೆಗಳಿಗೆ ಮಣಿಯುವವರೆಗೂ ಹೋರಾಟ ನಡೆಸಲಾಗುವುದು. …
Read More »ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ
ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಶಾಲೆಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರಕಾರ ಇಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಾಗೆಯೇ 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದರು. ತರಗತಿಗಳ ಅವಧಿ ಮತ್ತಿತರ ವಿಷಯಗಳ …
Read More »ಟ್ವಿಟ್ಟರ್ ನಲ್ಲಿ ಸಿದ್ದು ವಿರುದ್ಧ ಕುಮ್ಮಿ ಕಿಡಿ….
ಬೆಂಗಳೂರು,ಡಿ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಒಳ ಒಪ್ಪಂದಗಳ ಜನಕ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರಾದೇಶಿಕ ಪಕ್ಷ ಕಟ್ಟಿ ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತನಾಡಬೇಡಿ. ತಾವು ರಾಜಕೀಯ ಒಳ ಒಪ್ಪಂದಗಳ ಜನಕ ಎಂಬುದು ಯಾವಾಗಲೋ ಸಾಬೀತಾಗಿದೆ. ಇನ್ನೆಂದೂ …
Read More »ರೈಲ್ವೆ ಪ್ಲಾಟ್ಫಾರಂ ಟಿಕೆಟ್ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ
ಬೆಂಗಳೂರು, ಡಿ.17- ರೈಲಿನಲ್ಲಿ ಹೋಗುವವರನ್ನು ಬೀಳ್ಕೊಡಲು ಅಪ್ಪಿತಪ್ಪಿಯೂ ರೈಲ್ವೆ ನಿಲ್ದಾಣಗಳತ್ತ ತಲೆ ಹಾಕಬೇಡಿ. ಏಕೆಂದರೆ, ಬೆಂಗಳೂರಿನ ಪ್ರಮುಖ ರೈಲ್ವೆ ಪ್ಲಾಟ್ಫಾರಂಗಳ ಟಿಕೆಟ್ ದರವನ್ನು ಐದು ಪಟ್ಟು ಹೆಚ್ಚಿಸಲಾಗಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೆಂಗೇರಿ, ಕೆಆರ್ ಪುರಂ, ಬಾಣಸವಾಡಿ, ಯಲಹಂಕ, ವೈಟ್ಫೀಲ್ಡ್, ಬೆಂಗಳೂರು ಹೊರತುಪಡಿಸಿ ಬಂಗಾರಪೇಟೆ, ತುಮಕೂರು, ಹೊಸೂರು, ಮಂಡ್ಯ ರೈಲ್ವೆ ನಿಲ್ದಾಣಗಳ ಪ್ಲಾಟ್ಫಾರಂ ಟಿಕೆಟ್ಗಳನ್ನು 10ರೂ.ನಿಂದ 50ರೂ.ಗೆ ಹೆಚ್ಚಿಸಲಾಗಿದೆ. ಇದು ನವೆಂಬರ್ 30 …
Read More »