Breaking News

ಬೆಂಗಳೂರು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಜೈಲುಶಿಕ್ಷೆ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನಯಯಾಲಯ ಆದೇಶ ಹೊರಡಿಸಿದೆ. ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ 1,38,65,000 ರೂಪಾಯಿ ಹಣ ನೀಡಬೇಕಿತ್ತು. ಆದರೆ ಹಣ ಕೊಡದೇ ಸಮಸ್ಯೆ ಮಾಡಿದ್ದರು. ಇದರಿಂದ ಬೇಸತ್ತ ಹೂವಪ್ಪ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಕೋರ್ಟ್, ಶಾಸಕ ಎಂ.ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ …

Read More »

ರಾಜ್ಯಕ್ಕೆ ಕೇಂದ್ರ ಕೊಟ್ಟಿದ್ದೆಷ್ಟು ಮೋದಿ ಅವರೇ: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಜಿಎಸ್‌ಟಿ ಸೇರಿ ರಾಜ್ಯದಿಂದ ಕೇಂದ್ರ ಸರಕಾರದ ಬೊಕ್ಕಸಕ್ಕೆ ತೆರಿಗೆ ಹಣ ಹರಿದು ಹೋಗುತ್ತಿದ್ದರೂ ರಾಜ್ಯಕ್ಕೆ ಕೊಟ್ಟಿದ್ದು ಎಷ್ಟು ಎಂಬುದು ರಾಜ್ಯಕ್ಕೆ ಬಂದಾಗ ಲೆಕ್ಕ ಕೊಡಿ ಮೋದಿ ಅವರೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.   ಕೇಂದ್ರ ಸರಕಾರದ ಪಾಲಿಗೆ ಕರ್ನಾಟಕವು ಕಾಮಧೇನು. ಅದರ ಖಜಾನೆ ತುಂಬುವಲ್ಲಿ ನಮ್ಮದು ದೊಡ್ಡ ಪಾಲಿದೆ. ದುರದೃಷ್ಟವಶಾತ್‌, ದೇಶದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ರಾಜ್ಯಕ್ಕೆ ತೆರಿಗೆ, ಜಿಎಸ್‌ಟಿಯಲ್ಲಿ ಸಮರ್ಪಕ ಪಾಲು ಸಿಗುವುದಿಲ್ಲ. …

Read More »

ವಿಧಾನಸೌಧಕ್ಕೆ ಪೇಶ್ವೆ ನಾಯಕ; ಬಿಜೆಪಿ ಉತ್ತರಿಸಲಿ -ಕುಮಾರಸ್ವಾಮಿ

ಬೆಂಗಳೂರು: ‘ವಿಧಾನಸೌಧದಲ್ಲಿ ಪೇಶ್ವೆ ವಂಶದ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ಬಿಜೆಪಿ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು, ತಾಕತ್ತು ತೋರಿಸುತ್ತಿಲ್ಲ ಏಕೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.   ಸರಣಿ ಟ್ವೀಟ್‌ ಮಾಡಿ, ‘ಶೃಂಗೇರಿ ಮಠದ ಮೇಲೆ ದಾಳಿ ನಡೆಸಿದ್ದ ಪೇಶ್ವೆಗಳ ವಂಶದ ವ್ಯಕ್ತಿಯನ್ನು ಸಿ.ಎಂ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂಬ ನನ್ನ ಹೇಳಿಕೆಯಲ್ಲಿ ಗೊಂದಲವಿಲ್ಲ, ಬ್ರಾಹ್ಮಣ ಸಮೂಹವನ್ನು ನಿಂದಿಸಿಲ್ಲ. ಗರ್ಭಗುಡಿಯಲ್ಲಿ …

Read More »

ಮುರುಘಾ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ 13ಕ್ಕೆ

ಬೆಂಗಳೂರು:’ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ಅಧಿಕಾರ ಚಲಾವಣೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್‌ ಇದೇ 13ರಂದು ವಿಚಾರಣೆ ನಡೆಸಲಿದೆ.   ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯ 2022ರ ಡಿಸೆಂಬರ್‌ 15ರಂದು …

Read More »

ನೋಂದಣಿ: ನಕಲಿ ತಡೆಗೆ ತಮಿಳುನಾಡು ಮಾದರಿ- ಮುದ್ರಾಂಕ ?

ಬೆಂಗಳೂರು: ನಕಲಿ ದಾಖಲೆಗಳನ್ನು ಬಳಸಿಕೊಂಡು ಸ್ಥಿರಾಸ್ತಿಗಳ ನೋಂದಣಿ ಮಾಡಿಸಿ ಪರರ ಆಸ್ತಿಗಳನ್ನು ಕಬಳಿಸುವವರನ್ನು ನಿಯಂತ್ರಿಸುವುದಕ್ಕಾಗಿ ತಮಿಳುನಾಡು ಮಾದರಿಯಲ್ಲಿ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವಂತೆ ನೋಂದಣಿ ಮತ್ತು ಮುದ್ರಾಂಕ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ.   ಒಬ್ಬರ ಆಸ್ತಿಯನ್ನು ಬೇರೊಬ್ಬರು ನಕಲಿ ದಾಖಲೆಗಳನ್ನು ಬಳಸಿಕೊಂಡು ನೋಂದಣಿ ಮಾಡಿಸಿಕೊಂಡರೆ ಅಥವಾ ಸರ್ಕಾರಿ ಆಸ್ತಿಗಳನ್ನು ಪರಭಾರೆ ಮಾಡಿದರೆ ನೋಂದಣಿ ರದ್ದುಪಡಿಸಲು ನ್ಯಾಯಾಲಯದ ಮೊರೆಹೋಗಬೇಕಿದೆ. ತಮಿಳುನಾಡು ಸರ್ಕಾರವು ನೋಂದಣಿ ಕಾಯ್ದೆಗೆ ತಿದ್ದುಪಡಿ ತಂದು, ಅಂತಹ ನೋಂದಣಿಗಳನ್ನು …

Read More »

ಪುನೀತ್‌ ಸಮಾಧಿ ಸ್ಥಳದಲ್ಲಿ ಶೀಘ್ರ ಸ್ಮಾರಕ: ಸಿಎಂ ಬೊಮ್ಮಾಯಿ

ಬೆಂಗಳೂರು: ಪುನೀತ್‌ ಹೆಸರನ್ನು ಮತ್ತಷ್ಟು ಚಿರಸ್ಥಾಯಿಯಾಗಿ ಮಾಡಲು ಅಪ್ಪು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಿಂಗ್‌ ರೋಡ್‌ ರಸ್ತೆಗೆ ಡಾ.ಪುನೀತ್‌ ಹೆಸರು ನಾಮಕರಣ ಮಾಡಿ ಮಾತನಾಡಿದ ಅವರು, ಸ್ಮಾರಕದಲ್ಲಿ ಡಾ|ರಾಜ್‌, ಪುನೀತ್‌ ಜೀವನ ಸಾಧನೆ ಜನರಿಗೆ ತಿಳಿಹೇಳುವ ಕೆಲಸ ಮಾಡಲಾಗುವುದು ಎಂದರು.   ಹಾಗೆಯೇ ಅಂಬರೀಶ್‌ ಕೂಡ ಕನ್ನಡ ಚಿತ್ರರಂಗದಲ್ಲಿ ಕೊಡಗೈ ದಾನಿ ಎನಿಸಿ¨ªಾರೆ. …

Read More »

ಬೆಳಗಾವಿಯಲ್ಲಿ ಕಾಂಗ್ರೆಸ್ 12 ಸೀಟು ಗೆಲ್ಲುವುದು ಖಚಿತ ಎಂದ ಎಂ.ಬಿ.ಪಾಟೀಲ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಗಳ ಬಗ್ಗೆ, ಅವರ ಮಾತಿನ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ಅದಕ್ಕೆ ಉತ್ತರ ಕೊಡಬೇಕಾದದ್ದು ಅಧ್ಯಕ್ಷರು. ಅವರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಯಾರನ್ನೂ ಯಾರೂ ಮುಗಿಸಲು ಆಗಲ್ಲ. ಎಲ್ಲವನ್ನೂ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಬೆಳಗಾವಿಯಲ್ಲಿ ನಾವು 12 ಸ್ಥಾನ ಗೆಲ್ಲುವುದು ಖಚಿತ. ಮುಂಬೈ ಕರ್ನಾಟಕದಲ್ಲಿ ಹೆಚ್ಚಿನ ಸೀಟು …

Read More »

ಪಂಚಮಸಾಲಿ ಮೀಸಲಾತಿ: ಆಯೋಗದ ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವ ಕುರಿತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆ.3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.   ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ …

Read More »

ಜಾರಕಿಹೊಳಿ ‘ಸಿಡಿ’ ಪ್ರಕರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಕೈವಾಡ : ಮಾಜಿ ಶಾಸಕ ನಾಗರಾಜ್ ಹೊಸ ಬಾಂಬ್

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಕೈವಾಡವಿದೆ ಎಂದು ಮಾಜಿ ಶಾಸಕ ಹಾಗೂ ರಮೇಶ್ ಜಾರಕಿಹೊಳಿ ಆಪ್ತ ನಾಗರಾಜ್ ಹೊಸ ಬಾಂಬ್ ಸಿಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವ ವಿಚಾರ ಗೊತ್ತಾಯ್ತು, ಈ ವಿಚಾರವನ್ನು ನಾನು 2 ಬಾರಿ ರಮೇಶ್ ಗೆ ಹೇಳಿದ್ದೆ, ಅವರು ಇಂತಹ ನೂರು ಸಿಡಿ ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದಿದ್ದರು. ಸಿಡಿ …

Read More »

ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಪತ್ನಿಗೆ ಚಾಕು ಇರಿದ ಪತಿರಾಯ

ಬೆಂಗಳೂರು: ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಗಂಡನನ್ನೇ ಪತ್ನಿಗೆ ಚಾಕು ಇರಿದ ಘಟನೆ ನಡೆದಿದೆ.ನಗರದ ಜಕ್ಕೂರು ಬಳಿಯ ಮುನೇಶ್ವರ ಬೀದಿಯಲ್ಲಿ ನಡೆದಿದೆ. 33 ವರ್ಷದ ಜಯಶ್ರೀ ಮೃತ ದುರ್ದೈವಿ. ಇವರಿಬ್ಬರು 15 ವರ್ಷದ ಹಿಂದೆ ವಿವಾಹವಾಗಿದ್ದರು. ಇಬ್ಬರು ಮಕ್ಕಳ ಜೊತೆ ಮುನೇಶ್ವರ ಬೀದಿಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ನಾಗರಾಜ್‌ ಹಣ ನೀಡುವಂತೆ ಪದೇ ಪದೇ ಪತ್ನಿಗೆ ಪೀಡಿಸುತ್ತಿದ್ದ. ಇದರಿಂದ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ನಾಗರಾಜ್​ ಕೂಲಿ ಕೆಲಸ …

Read More »