Breaking News

ಬೆಂಗಳೂರು

ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ.

ಬೆಂಗಳೂರು: ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ. ಸರ್ಕಾರದ ಯಾವುದೇ ಬೆದರಿಕೆಗೆ ನಾವು ಬಗ್ಗಲ್ಲ. ಸರ್ಕಾರ ನಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದ್ರೂ ನಾವು ಸುಮ್ಮನಿರಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ನಾವು ಬಂದ್ ಮಾಡೇ ಮಾಡ್ತೀವಿ ಅಂತಾ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದು, ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೆ …

Read More »

ಬಿ.ಸಿ. ಪಾಟೀಲ್‍ರಿಂದ ರೈತ ಸಮುದಾಯಕ್ಕೆ ಅವಮಾನ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »

ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ

ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ.ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ ಸಿಬ್ಬಂದಿ, ಪ್ರತಿ ವಿಭಾಗದಲ್ಲಿ ಡಿ ಗ್ರೂಪ್ ನೌಕರರು ಇದ್ದಾರೆ. ಈಗಾಗಲೇ ಪ್ರತಿದಿನ ವಿಧಾನಸೌಧದ ಪ್ರತಿ ಕಚೇರಿ ಹಾಗೂ ಕಾರಿಡಾರ್ ಗಳನ್ನು ಸ್ವಚ್ಛಗೊಳಿಸಲಾಗುತ್ತೆ. ಇವೆಲ್ಲ ಇದ್ದರೂ ವಿಧಾನಸೌಧ ಕ್ಲೀನ್ ಮಾಡಲು ಹೊಸ ಟೆಂಡರ್ ಕರೆಯಲಾಗಿದೆ. ವಿಧಾನಸೌಧದಲ್ಲಿರುವ ಕಚೇರಿಗಳನ್ನು ಆಯಾ ಇಲಾಖೆಯಲ್ಲಿನ ಡಿ ಗ್ರೂಪ್ ನೌಕರರು …

Read More »

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು.

ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಅವರು ಸಾಯುವಾಗ ತನ್ನ ಕುಟುಂಬದ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆಯಲ್ಲಿ ಮಾತಾನಾಡಿದ ಅವರು ರೈತರ ಆತ್ಮಹತ್ಯೆಗೆ ನೀರಾವರಿ ಕಾರಣವಲ್ಲ, ಮಂಡ್ಯದಲ್ಲಿ ನೀರಾವರಿ ಸೌಲಭ್ಯವಿದ್ದರೂ ಅತೀ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರದಲ್ಲಿ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ ಎಂದರು. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿಗಳು ಮಾಡುವ ಕೆಲಸ. ಯಾರು …

Read More »

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ತಾಂತ್ರಿಕ ಸಮಿತಿ ಶಿಫಾರಸು

ಬೆಂಗಳೂರು, ಡಿ.3- ರಾಜ್ಯದಲ್ಲಿ ಮುಂದಿನ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಆರಂಭವಾಗುವ ಸಾಧ್ಯತೆಗಳಿರುವುದಾಗಿ ಕೋವಿಡ್ ತಾಂತ್ರಿಕ ಸಮಿತಿ ಹೇಳಿದ್ದು, ಈ ಭೀತಿ ನಡುವೆಯೇ ಜನವರಿಯಿಂದಲೇ 10 ಮತ್ತು 12ನೆ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಬಹುದು. ಬಳಿಕ 9 ಮತ್ತು 11ನೆ ತರಗತಿ ಮಕ್ಕಳಿಕೆ ಶಾಲೆ ಆರಂಭಿಸಬಹುದು ಎಂದು ಶಿಫಾರಸು ಮಾಡಿದೆ. ಸಮಿತಿಯ ಈ ಶಿಫಾರಸು ಸರ್ಕಾರವನ್ನು ಗೊಂದಲಕ್ಕೊಳಗಾಗುವಂತೆ ಮಾಡಿದೆ. ಕೊರೊನಾ ತಾಂತ್ರಿಕ ಸಮಿತಿ ಈ ಹಿಂದೆ ನೀಡಿದ್ದ …

Read More »

ಮೊದಲ ರಾತ್ರಿಯೇ ಕಂಠ ಪೂರ್ತಿ ಕುಡಿದುಬಂದ ಪತಿ ಮದುವೆಯಾದ ಒಂದೇ ತಿಂಗಳಲ್ಲಿ ಮುರಿದುಬಿತ್ತು ದಾಂಪತ್ಯ ಜೀವನ

    ಬೆಂಗಳೂರು: ಪತಿ ಮಹಾಶಯ ಫಸ್ಟ್ ನೈಟ್ ದಿನವೇ ಕಂಠಪೂರ್ತಿ ಕುಡಿದು ಬಂದು ಥಳಿಸಿದ್ದೂ ಅಲ್ಲದೇ ಅದಾಗಲೇ ಒಂದು ಮದೆಯಾಗಿದ್ದ ವಿಷಯವನ್ನೂ ಮುಚ್ಚಿಟ್ಟು ವಂಚಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 29ರಂದು ಭರತ್ ಎಂಬಾತನನ್ನು ವಿವಾಹವಾಗಿದ್ದ ಯುವತಿ, ಇದೀಗ ಪತಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಫಸ್ಟ್ ನೈಟ್ ದಿನವೇ ಕುಡಿದು ಬಂದ ಪತಿಯನ್ನು ಕಂಡು ಶಾಕ್ ಆದ ಯುವತಿ ಫಸ್ಟ್ …

Read More »

ಹೆಚ್ಚಿದ ಅಗರಬತ್ತಿ ಬೇಡಿಕೆ, ವಿದೇಶಕ್ಕೂ ಪಸರಿಸಿದ ಪರಿಮಳ..!

ಬೆಂಗಳೂರು, ಡಿ.2- ಭಾರತೀಯ ಅಗರ್‍ಬತ್ತಿ ಉದ್ಯಮವು ದೇಶೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ವರ್ಷಗಳಿಂದ ಕ್ಷಿಪ್ರಗತಿಯಲ್ಲಿ ರಫ್ತಿನಲ್ಲೂ ಸಕಾರಾತ್ಮಕ ಬೆಳವಣಿಗೆ ಕಾಣುತ್ತಿದೆ ಎಂದು ಅಖಿಲ ಭಾರತ ಅಗರ್‍ಬತ್ತಿ ಉತ್ಪಾದಕರ ಸಂಘದ ಅಧ್ಯಕ್ಷ ಅರ್ಜುನ್ ರಂಗಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ಆದಾಯಕ್ಕೆ ಹೋಲಿಸಿದರೆ ಈ ವರ್ಷ ಕೇವಲ 10 ತಿಂಗಳಲ್ಲೇ ದಾಖಲೆಯ ವಹಿವಾಟು ನಡೆದಿದೆ. ಅಮೆರಿಕ, ಇಂಗ್ಲೆಂಡ್, ಮಲೇಷಿಯಾ, ನೈಜೀರಿಯಾ ರಾಷ್ಟ್ರಗಳು ಅಗರ್‍ಬತ್ತಿ ಹಾಗೂ ಸಂಬಂಧಿತ ಉತ್ಪನ್ನಗಳಿಗೆ ಹೆಚ್ಚಿನ …

Read More »

ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು: ನಳೀನ್ ಕುಮಾರ್ ಕಟೀಲ್

ಬೆಂಗಳೂರು : ಬಿಜೆಪಿಯಲ್ಲಿ ಮೂಲ, ವಲಸಿಗ ಬಿಜೆಪಿಗರು ಎಂಬುದು ಇಲ್ಲ. ನಾವೆಲ್ಲರೂ ಒಂದೇ ಯಾಗಿದ್ದೇವೆ. ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು. ಸಿಎಂ ಹಾಗೂ ಬಿಜೆಪಿ ವರಿಷ್ಠರ ಜೊತೆಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.   ಬೆಂಗಳೂರಿನ ಆನೇಕಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲ, ಪುನರ್ ರಚನೆಯಾಗಲಿದೆ ಎಂಬ ಸುಳಿವು ನೀಡಿದರು. ರಾಜ್ಯದಲ್ಲಿ ಮೂಲ …

Read More »

LPG ಗ್ರಾಹಕರಿಗೆ ಶಾಕ್: ಸಿಲಿಂಡರ್ ದರ 55 ರೂ. ಹೆಚ್ಚಳ

ನವದೆಹಲಿ: ಕಚ್ಚಾತೈಲದ ಬೆಲೆ ಏರಿಕೆಯಾಗಿರುವ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾದಿಯಲ್ಲಿದೆ. ಅದೇ ರೀತಿ ಎಲ್ಪಿಜಿ ಗ್ರಾಹಕರಿಗೂ ಕೂಡ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 55 ರೂಪಾಯಿ ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಬದಲಾವಣೆ ಮಾಡಿಲ್ಲ. ಜುಲೈನಲ್ಲಿ 14.2 ಕೆಜಿ ಗೃಹ ಬಳಕೆ ಸಿಲಿಂಡರ್ ದರ ಪರಿಷ್ಕರಿಸಿದ್ದು, 4 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಅದಕ್ಕಿಂತ ಹಿಂದೆ …

Read More »

ರಾಜ್ಯದಲ್ಲಿ 2 ದಿನ ಭಾರೀ ಮಳೆ : 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಡಿಸೆಂಬರ್ 3 ರಂದು ಕನ್ಯಾಕುಮಾರಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ …

Read More »