ಬೆಂಗಳೂರು: ಚುನಾವಣೆ ಹೊಸ್ತಿಲಲ್ಲೇ ಪ್ರಧಾನಿನರೇಂದ್ರ ಮೋದಿ ಅವರು ಕರ್ನಾಟಕಕ್ಕೆಆಗಮಿಸುತ್ತಲೇ (PM Narendra Modi Karnataka Visit) ಇದ್ದು, ಇದೀಗ ಫೆ.6ರಂದು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 10.55ಕ್ಕೆ ಬೆಂಗಳೂರಿಗೆ ಆಗಮಿಸುವ ಮೋದಿ, 11.30ಕ್ಕೆ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (BIEC) ಇಂಡಿಯಾ ಎನರ್ಜಿ ಸಪ್ತಾಹವನ್ನು (India Energy Week) ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 2.45ಕ್ಕೆ ಬಿಐಇಸಿಯಿಂದ ತುಮಕೂರಿನ ಗುಬ್ಬಿಗೆ (PM Narendra Modi Tumakuru Visit) ಹೆಲಿಕಾಫ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಗುಬ್ಬಿ ತಾಲೂಕಿನಲ್ಲಿ ಮಧ್ಯಾಹ್ನ …
Read More »ಸ್ಯಾಂಡಲ್ ವುಡ್ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ
ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಅವರು ಕೊನೆಯುಸಿರೆಳೆದಿದ್ದಾರೆ. 73 ವರ್ಷದ ಮಂದೀಪ್ ರಾಯ್ ಅವರಿಗೆ ಮಧ್ಯರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮಂದೀಪ್ ರಾಯ್ ಅವರು ಮೂಲತಃ ಮುಂಬೈನವರು. ಬಾಲ್ಯದಲ್ಲಿ ಕರಾಟೆ, ಕುಂಗ್ ಫು ಅಭ್ಯಾಸ ಮಾಡಿದ್ದ ಮಂದೀಪ್ ಅವರು ಒಂಬತ್ತನೇ ವಯಸ್ಸಿನಲ್ಲಿ ರಂಗಭೂಮಿ ಒಲವು ಮೂಡಿಸಿಕೊಂಡರು. ರಂಗಭೂಮಿಯಲ್ಲಿ ಪರಿಚಯವಾದ ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಕಾರಣದಿಂದ …
Read More »ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’
ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ 15 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತಾಯಿ ಮೇಲೆ ಆಣೆ ಮಾಡಿ ಈಗ ಮರೆತಿದ್ದಾರೆ. ಆದ್ದರಿಂದ …
Read More »ಮುಂದಿನ ತಿಂಗಳಿನಿಂದ ಪಡಿತರ ಪುನಃ 10 ಕೆಜಿಗೆ ಹೆಚ್ಚಳ : ಕಂದಾಯ ಸಚಿವ ಆರ್. ಅಶೋಕ್
ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಬರುವ ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದುಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಇಂದು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ರಾಗಿಯ ರಾಶಿಪೂಜೆ ಸಲ್ಲಿಸಿ,ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು, ಬಡ ನಿವೇಶನ ರಹಿತರ ಹಕ್ಕುಗಳನ್ನು ಕಾಯಲು …
Read More »ಕೆಳಗಿನ ಮನೆ ಆಂಟಿ ಜೊತೆಗೆ ಮೇಲಿನ ಮನೆ ಅಂಕಲ್ ಜೂಟ್!
ಬೆಂಗಳೂರು: ಒಂದೇ ಕಟ್ಟಡದ ಕೆಳ ಮನೆಯಲ್ಲಿದ್ದ ಆಂಟಿ ಹಾಗೂ ಮೇಲಿನ ಮನೆಯಲ್ಲಿದ್ದ ಎರಡು ಮಕ್ಕಳ ತಂದೆ ಜತೆಯಾಗಿ ಪರಾರಿಯಾಗಿರುವ ವಿಚಿತ್ರ ಲವ್ ಸ್ಟೋರಿ ಜ್ಞಾನಭಾರತೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರುತಿ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೆಳ ಮಹಡಿಯಲ್ಲಿ ವಾಸವಿದ್ದ ಮುಬಾರಕ್ (28) ಅವರು ತಮ್ಮ ಪತ್ನಿ ಶಾಜಿಯಾ (22) ನಾಪತ್ತೆಯಾಗಿರುವುದಾಗಿ ಹಾಗೂ ಮೇಲ್ಮನೆಯಲ್ಲಿರುವ ಝೀನತ್ (29) ಅವರು ತಮ್ಮ ಪತಿ ಮೊಹಮ್ಮದ್ ನವೀದ್ (37) ಕಾಣೆಯಾಗಿರುವುದಾಗಿ ಪೊಲೀಸ್ …
Read More »ಈ ಖತರ್ನಾಕ್ ಕಳ್ಳರ ಟಾರ್ಗೆಟ ಮೊಬೈಲ್ ಟವರ್
ಬೆಂಗಳೂರು: ಮೊಬೈಲ್ ಟವರ್ಗಳನ್ನೇ ಟಾರ್ಗೇಟ್ ಮಾಡಿ RRU ಕಾರ್ಡ್ಗಳನ್ನು ಇಬ್ಬರು ಖತರ್ನಾಕ ಕಳ್ಳರು ಕಳ್ಳತನ ಮಾಡುತ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಬ್ಬರು ಖತರ್ನಾಕ ಕಳ್ಳರು ಟವರ್ ಬಳಿ RRU ಕಾರ್ಡ್ ಕಳ್ಳತನ ಮಾಡುತ್ತಿದ್ದರು. ಕೆಂಗೇರಿ, ನಾಗರಬಾವಿ, ಚಂದ್ರಲೇಔಟ್, ಪದ್ಮನಾಭನಗರ ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಲ್ಲಿಯವರೆಗೆ 10 ಲಕ್ಷಕ್ಕೂ ಹೆಚ್ಚು ಮೌಲ್ಯದ RRU (Riote Radio Unit) ಕಳ್ಳತನ ಮಾಡಿದ್ದಾರೆ. ಈ ಘಟನೆ ಸಂಬಂಧ ಇಂಡಸ್ …
Read More »ಇಡಿ ಅಧಿಕಾರಿಗಳು ಫಿಲ್ಡ್ಗೆ ಇಳಿದು ಹುಡುಕಿದ್ರು ಸಿಗದ ಬಿಬಿಎಂಪಿ ಕೊರೆದ 9,588 ಕೊಳವೆ ಬಾವಿಗಳು
ಬೆಂಗಳೂರು: ನಗರದಲ್ಲಿ ಕೊಳವೆ ಬಾವಿ (Borewells) ಹಾಗೂ ಶುದ್ಧಕುಡಿಯುವ ನೀರಿನ ಘಟಕ (Drinking water plants) ಸ್ಥಾಪನೆ ವಿಚಾರದಲ್ಲಿ ನಡೆದ ಮಹಾ ಭ್ರಷ್ಟಾಚಾರದ (Corruption) ಬೆನ್ನು ಬಿದ್ದ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ತಲೆ ಕೆಡಿಸಿಕೊಳ್ಳುವಂತಾಗಿದೆ. ಬಿಬಿಎಂಪಿ (BBMP) ವತಿಯಿಂದ ಕೊರೆಯಲಾದ ಸಾವಿರಾರು ಕೊಳವೆ ಬಾವಿಗಳೇ ಅಧಿಕಾರಿಗಳ ಕಣ್ಣಿಗೆ ಕಾಣಿಸುತ್ತಿಲ್ಲ. ಸ್ಥಳ ಪರಿಶೀಲನೆ ವೇಳೆಯೂ 9,588 ಕೊಳವೆ ಬಾವಿಗಳ ಪೈಕಿ 5 ಸಾವಿರ ಕೊಳವೆ ಬಾವಿಗಳ ಲೆಕ್ಕ ಸಿಗುತ್ತಿಲ್ಲ. ನೂರಾರು ಕೋಟಿ ಖರ್ಚು ಮಾಡಿ ಕೊರೆಸಿದ ಕೊಳವೆ ಬಾವಿಗಳೇ ನಾಪತ್ತೆಯಾಗಿದೆ. ಹಾಗಿದ್ದರೆ ಬಿಬಿಎಂಪಿಯಿಂದ …
Read More »ವಿಧಾನಸೌಧದ ಬಳಿ ಹಣ ಪತ್ತೆ: ಪೊಲೀಸರ ವಿರುದ್ಧ ಆರೋಪಿ ಜಗದೀಶ್ ಪರ ವಕೀಲ ಗರಂ
ಬೆಂಗಳೂರು: ವಿಧಾನಸೌಧ ಬಳಿ ಪಿಡಬ್ಲ್ಯೂಡಿ ಎಂಜಿನಿಯರ್ ಜಗದೀಶ್ ಎಂಬವರಿಂದ 10 ಲಕ್ಷ ರೂಪಾಯಿ ಹಣ ಸಿಕ್ಕಿರುವ ಪ್ರಕರಣ ನಿನ್ನೆ ನಡೆದಿತ್ತು. ಈ ಕುರಿತು ಟ್ವೀಟ್ ಮಾಡಿರುವ ಬಂಧಿತ ಎಂಜಿನಿಯರ್ ಜಗದೀಶ್ ಪರ ವಕೀಲ ರಾಜು ಗಡೇಕರ್, ‘ಡಿಸಿಪಿ ಆಣತಿಯಂತೆ ವಕೀಲರೊಂದಿಗೆ ಠಾಣೆಗೆ ಹಾಜರಾದ ವ್ಯಕ್ತಿಯನ್ನು ಅಕ್ರಮವಾಗಿ ಕೂಡಿ ಹಾಕಿದ್ದು, ನಂತರ ಭೇಟಿ ಮಾಡಲು ಅವಕಾಶ ಕಲ್ಪಿಸಿಲ್ಲ’ ಎಂದು ಆರೋಪಿಸಿದ್ದಾರೆ. ಎಂಜಿನಿಯರ್ ಜಗದೀಶ್ ಬ್ಯಾಗ್ನಲ್ಲಿ ಹಣ ಪತ್ತೆ: ಮಂಡ್ಯದ ಸಹಾಯಕ ಕಾರ್ಯ …
Read More »ಸಿದ್ದರಾಮಯ್ಯ- ರಮೇಶ ಜಾರಕಿಹೊಳಿ ರಹಸ್ಯ ಸಭೆ: ಮೂಲ ಗೂಡಿಗೆ ಮರಳಲಿದ್ದಾರಾ ಪ್ರಭಾವಿ ಮುಖಂಡ?
ಬೆಂಗಳೂರು, : ರಾಜ್ಯ ರಾಜಕಾರಣವು ಹೊಸದೊಂದು ಸಂಚಲನಕ್ಕೆ ಅಣಿಯಾಗುತ್ತಿದೆ ಎಂಬ ಮಾತುಗಳು ಓಡಾಡುತ್ತಿವೆ. ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ತಮ್ಮ ಗುರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು. ಆದರೆ, ಅವರಿಬ್ಬರ ನಡುವೆ ನಡೆದ ಮಾತುಕತೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲದ ಪ್ರಕಾರ, ರಮೇಶ ಜಾರಕಿಹೊಳಿ ಅವರು ಬಿಜೆಪಿಯ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ತಮಗೆ ಸಚಿವ ಸ್ಥಾನ ನೀಡಬೇಕೆಂದು …
Read More »ಮೀಸಲಾತಿ | ರಂಗನ ಮಂಗ ಮಾಡಲು ಹೊರಟಿದ್ದಾರೆ” H.D.K
ತುಮಕೂರು: ಒಕ್ಕಲಿಗ, ಲಿಂಗಾಯತ ಸಮುದಾಯದ ಮೀಸಲಾತಿ ಸಂಬಂಧ ಪ್ರವರ್ಗ ಬದಲಾವಣೆ ಮಾಡುವ ಮೂಲಕ ‘ರಂಗನ ಮಂಗ ಮಾಡಲು’ ಬಿಜೆಪಿಯವರು ಹೊರಟಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಶುಕ್ರವಾರ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರವರ್ಗ ಬದಲಾವಣೆ ಮಾಡಿರುವುದರಿಂದ ಎರಡೂ ಸಮುದಾಯಗಳಿಗೂ ಯಾವುದೇ ಪ್ರಯೋಜನವಿಲ್ಲ. ಇದರಿಂದ ಮೀಸಲಾತಿ ಪ್ರಮಾಣದಲ್ಲಿ ಯಾವುದೇ ಹೆಚ್ಚಳ ಆಗುವುದಿಲ್ಲ. ಪ್ರವರ್ಗ ಬದಲಾವಣೆ ಮಾಡಿರುವುದೇ ಸಾಧನೆ. ಈವರೆಗೆ ಮೂಗಿಗೆ ತಪ್ಪ ಹಚ್ಚುತ್ತಿದ್ದವರು, ಈಗ ಹಣೆಗೆ ಹಚ್ಚಿದ್ದಾರೆ. …
Read More »