Breaking News

ಬೆಂಗಳೂರು

ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸುತ್ತಿದ್ದ ಆರು ಮಂದಿಯನ್ನು ಭಾರತೀನಗರ ಪೊಲೀಸರು ಬಂಧಿಸಿ 5.83 ಲಕ್ಷ ಹಣವನ್ನು ವಶ

ಬೆಂಗಳೂರು,:- ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸುತ್ತಿದ್ದ ಆರು ಮಂದಿಯನ್ನು ಭಾರತೀನಗರ ಪೊಲೀಸರು ಬಂಧಿಸಿ 5.83 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಾಹೀಲ್ ಅಹಮ್ಮದ್(25), ಸಯ್ಯದ್ ಸುಹೇಲ್(25), ಸಯ್ಯದ್ ಜವಾದ್(20), ಮಹಮದ್ ಸಾಲ್ಹೆ ಅಲಿ ಅಪೀಸ್(20), ಮಹಮದ್ ಶಾಬಾಜ್(24) ಮತ್ತು ಸಯ್ಯದ್ ರವೂಪ್(19) ಬಂಧಿತರು. ಆರೋಪಿಗಳು ಎಕೆಝೆಡ್ ಸೀಫುಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ರಾತ್ರಿ ವೇಳೆ ಸಂಚು ರೂಪಿಸಿ ದರೋಡೆ ನಡೆಸಿ, ನಂತರ ಅವರೇ ಠಾಣೆಗೆ ಬಂದು ದೂರು ನೀಡುತ್ತಿದ್ದರು ನವೆಂಬರ್ 9 …

Read More »

ಡಿಸೆಂಬರ್ 10ರ ವರೆಗೆ ಬಸ್‍ಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಬಹುದಾಗಿದೆ.

ಬೆಂಗಳೂರು: ವಿದ್ಯಾರ್ಥಿಗಳು ಕಾಲೇಜಿಗೆ ಸಂಚರಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದ್ದು, 2019-20ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್ ಬಳಸಿ ಡಿಸೆಂಬರ್ 10ರ ವರೆಗೆ ಸಂಚರಿಸಲು ಅವಕಾಶ ನೀಡಿದೆ. ಈ ಕುರಿತು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನವೆಂಬರ್ 17ರಿಂದ ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು, ಪದವಿ, ವೂದ್ಯಕೀಯ, ತಾಂತ್ರಿಕ, ಡಿಪ್ಲೋಮಾ, ಅನುದಾನಿತ, ಅನುದಾನ ರಹಿತ ಕಾಲೇಜುಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. …

Read More »

B.S.Y.ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಮಹದೇವ ಪ್ರಕಾಶ್ ಅವರು ಮಾಧ್ಯಮ ಸಲಹೆಗಾರರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.ಮೂಲಗಳ ಪ್ರಕಾರ ಇತ್ತೀಚಿಗೆ ಮಹಾದೇವ ಪ್ರಕಾಶ್ ಕಾರ್ಯವೈಖರಿಗೆ, ಯಡಿಯೂರಪ್ಪ ಅವರು …

Read More »

ಕನ್ನಡಿಗರನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ.:ವಾಟಾಳ್ ನಾಗರಾಜ್ , ಸಾ.ರಾ.ಗೋವಿಂದು

ಬೆಂಗಳೂರು, ನ.19- ಕನ್ನಡಿಗರನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ. ಯಾವುದೇ ಧಮ್ಕಿಗೂ ಹೆದರುವುದಿಲ್ಲ, ಜಗ್ಗುವುದಿಲ್ಲ. ಉಸಿರು ಇರುವವರೆಗೂ ಹೋರಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಇಂದು ವಿಧಾನಸೌಧದ ದೇವರಾಜ ಅರಸು ಪ್ರತಿಮೆ ಮುಂಭಾಗ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ವಾಟಾಳ್ ನಾಗರಾಜ್ , ಸಾ.ರಾ.ಗೋವಿಂದು ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದಕ್ಕೂ ಮುನ್ನ ಮಾತನಾಡಿದ ವಾಟಾಳ್, ಸರ್ಕಾರ ತನ್ನ ಧೋರಣೆಯನ್ನು ಬದಲಿಸದಿದ್ದರೆ ಡಿ.5ರಂದು ಅಖಂಡ ಕರ್ನಾಟಕ ಬಂದ್ …

Read More »

ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.

ಬೆಂಗಳೂರು: ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ಹೊಯ್ಸಳ ಕ್ಯಾಬ್ ಕನ್ನಡಿಗರ ಸ್ಟಾರ್ಟಪ್ ಆಗಿದ್ದು, ಕನ್ನಡತಿ ಸುಧಾ ಉಮಾಶಂಕರ್ ಅವರು ಈ ಕ್ಯಾಬ್ ಸೇವೆ ಅರ್ಪಿಸಿದ್ದಾರೆ. ನಗರಗಳಲ್ಲಿದ್ದ ಕ್ಯಾಬ್ ಸೇವೆ ಇನ್ನು ರಾಜ್ಯದ ಎಲ್ಲೆಡೆ ಸೇವೆಗೆ ಆರಂಭಿಸಲಿದೆ. ಈ ಕ್ಯಾಬ್‍ಗಳು ಕಡಿಮೆ ದರದಲ್ಲಿ ಸುಭದ್ರ ಸೇವೆ ನೀಡಲಿವೆ. ಹೊಯ್ಸಳ …

Read More »

ದೇವರ ಮುಂದೆ ಅಪ್ಪ- ಅಮ್ಮ ಕುಳಿತಿರುವ ಫೋಟೋ ಹಾಕಿಭಾವುಕರಾದ ಜಗ್ಗೇಶ್

ಬೆಂಗಳೂರು: ಇತ್ತೀಚೆಗಷ್ಟೇ ತಮ್ಮ ಸಿನಿ ಜರ್ನಿಗೆ 40 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದ ನವರಸ ನಾಯಕ ಜಗ್ಗೇಶ್ ಅವರು ಇದೀಗ ತಮ್ಮ ಅಪ್ಪ- ಅಮ್ಮನ ಫೋಟೋವನ್ನು ಇನ್‍ಸ್ಟಾದಲ್ಲಿ ಶೇರ್ ಮಾಡಿಕೊಂಡು ಭಾವುಕರಾಗಿದ್ದಾರೆ. ದೇವರ ಮುಂದೆ ಅಪ್ಪ- ಅಮ್ಮ ಕುಳಿತಿರುವ ಫೋಟೋ ಹಾಕಿ ಬರೆದುಕೊಂಡಿರುವ ಜಗ್ಗೇಶ್, ಹಿರಿ ಅಕ್ಕನಿಗೆ ಸಿಕ್ಕ ಕಳೆದು ಹೋಗಿದ್ದ ಅಮ್ಮ-ಅಪ್ಪನ ಜೊತೆಯಿದ್ದ ಅಪರೂಪದ ಚಿತ್ರ. ಇಬ್ಬರು ಹೀಗೆ ಒಟ್ಟಿಗೆ ಕೂತು ದಿನನಿತ್ಯ ಭಕ್ತಿಯಿಂದ ಶಿವಪೂಜೆ …

Read More »

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯನಿಶ್ಚಿತಾರ್ಥನವ ಜೋಡಿಗೆ ಹಾರೈಸಿದ B.S.Y.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಸುಬ್ರಮಣ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆಯುತ್ತಿದ್ದು, ಕಡಿಮೆ ಜನರನ್ನು ಆಹ್ವಾನಿಸಿದ್ದರೂ ಸಂಭ್ರಮಕ್ಕೆ ಮಾತ್ರ ಕೊರತೆ ಇಲ್ಲ ಎಂಬಂತೆ ನಡೆಸಲಾಗುತ್ತಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯುತ್ತಿದೆ. ಆಯ್ದ ಗಣ್ಯರು ಹಾಗೂ ಕುಟುಂಬಸ್ಥರು, ಸ್ನೇಹಿತರಿಗಷ್ಟೇ ಆಹ್ವಾನ ನೀಡಲಾಗಿದ್ದು, ಒಟ್ಟು 250 ಜನರನ್ನು ಆಹ್ವಾನಿಸಲಾಗಿದೆ. ಈಗಾಗಲೇ …

Read More »

ಕಾಲ್‍ಗರ್ಲ್ ಆಗಿ ಹೋಗಿ ಎನ್‍ಜಿಒ ಅಧಿಕಾರಿಯಾಗಿ ನಟಿಸಿ ಯುವಕನಿಗೆ ಬರೋಬ್ಬರಿ 97 ಸಾವಿರ ವಂಚನೆ

ಬೆಂಗಳೂರು: ಮಹಿಳೆಯೊಬ್ಬಳು ಕಾಲ್‍ಗರ್ಲ್ ಆಗಿ ಹೋಗಿ ಎನ್‍ಜಿಒ ಅಧಿಕಾರಿಯಾಗಿ ನಟಿಸಿ ಯುವಕನಿಗೆ ಬರೋಬ್ಬರಿ 97 ಸಾವಿರ ವಂಚನೆ ಮಾಡಿದ ಪ್ರಕರಣವೊಂದು ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಸುಂದರೇಶನ್ ಎಂಬ ಯುವಕ ಆನ್‍ಲೈನ್ ಆ್ಯಪ್ ಮೂಲಕ ಕಾಲ್ ಗರ್ಲ್ ಬೇಕೆಂದು ಬುಕ್ ಮಾಡಿದ್ದಾನೆ. ಹೀಗಾಗಿ ಮಹಿಳೆಯೊಬ್ಬಳು ಕಾಲ್ ಗರ್ಲ್ ಆಗಿ ಯುವಕನ ಮನೆಗೆ ಬಂದಿದ್ದಾಳೆ. ಅಲ್ಲದೆ ಯುವಕನಿಂದ 10 ಸಾವಿರ ಗೂಗಲ್ ಪೇ ಮಾಡಿಸಿಕೊಂಡಿದ್ದಾಳೆ. ಇತ್ತ ಸಮಯ ಕಳೆಯುತ್ತಿದ್ದಂತೆ ನಾನು ಎನ್‍ಜಿಒ …

Read More »

ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‍ವೊಂದರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Read More »

ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ.: B.S.Y.

ಬೆಂಗಳೂರು: ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಅಜಿತ್ ಅವರ ಈ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಹೊರತು ಬೇರಾವ ಉದ್ದೇಶದಿಂದಲ್ಲ. ಈ ಬಗ್ಗೆ ಗೊಂದಲಗಳು ಬೇಡ ಎಂದು ಹೇಳಿದರು. …

Read More »