Breaking News

ಬೆಂಗಳೂರು

ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಭರ್ತಿ

ಬೆಂಗಳೂರು,ನ.2- ಈ ಬಾರಿ ಮುಂಗಾರು ಬೆಳೆ ವಾಡಿಕೆಗಿಂತ ಹೆಚ್ಚಾದ ಪರಿಣಾಮ ರಾಜ್ಯದ ಬಹುತೇಕ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದಲ್ಲದೆ ನೆರೆಯ ರಾಜ್ಯಗಳಿಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ನೀರಿನ ಹರಿಸಲಾಗಿದೆ. ಕೃಷ್ಣ ಕೊಳ್ಳದ ಜಲಾಶಯಗಳು ಭರ್ತಿ ಯಾಗಿದ್ದು, ನೆರೆಯ ಆಂಧ್ರಪ್ರದೇಶಕ್ಕೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಬಿಡಲಾಗಿದೆ. ಅದೇ ರೀತಿ ಕಾವೇರಿ ಕೊಳ್ಳದಿಂದಲೂ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನೇ ಬಿಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕಾವೇರಿ ಜಲಾನಯನ ಭಾಗದಿಂದ …

Read More »

ಆರ್.ಆರ್.ನಗರ, ಶಿರಾ ಉಪ ಕದನಗಳಿಗೆ ಇವತ್ತು ಮತದಾನ, ಕೊರೊನಾ ಸೋಂಕಿತರು ಮತದಾನ ಮಾಡಬಹುದಾಗಿದೆ.

ಬೆಂಗಳೂರು: ಪ್ರತಿಷ್ಠೆಯ, ಜಿದ್ದಾಜಿದ್ದಿನ ಕ್ಷೇತ್ರ ಎನಿಸಿಕೊಂಡಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ. ಕೊರೊನಾ ಹೊತ್ತಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಉಪ ಚುನಾವಣೆ ಇದಾಗಿದೆ. ಕೊರೊನಾಗೆ ಆತಂಕಗೊಳ್ಳದೇ ಮತಗಟ್ಟೆಗೆ ಬಂದು ನಿಮ್ಮ ಹಕ್ಕು ಚಲಾಯಿಸಿ ಎಂದು ಚುನಾವಣಾ ಆಯೋಗ ಮನವಿ ಮಾಡಿದೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ …

Read More »

ಬೊಕ್ಕಸದ ದುಡ್ಡು ಎಲ್ಲಿ ಹೋಯ್ತು..? : ಸಿದ್ದು

ಬೆಂಗಳೂರು, ನ.2- ನೆರೆ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೂ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಬೋಕ್ಕಸ ಮಾತ್ರ ಖಾಲಿಯಾಗಿದೆ. ಹಾಗಿದ್ದರೆ ಹಣ ಎಲ್ಲಾ ಎಲ್ಲಿ ಹೋಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ವರ್ಷದಿಂದ ನೆರೆ ಸಂತ್ರಸ್ಥರಿಗೆ ಪರಿಹಾರ ಪಾವತಿಸಿಲ್ಲ ಎಂಬ ವರದಿಯನ್ನು ಟ್ಯಾಗ್ ಮಾಡಿ ಪ್ರಶ್ನೆ ಕೇಳಿರುವ ಸಿದ್ದರಾಮಯ್ಯ, ಉತ್ತರ ಕೊಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ …

Read More »

ಪ್ರಶಸ್ತಿ ವಿತರಣೆ ವೇಳೆ ಯುವತಿಯ ಗೋಲ್ಡ್ ಕೋಟೆಡ್ ಬಳೆ ಗಮನಿಸಿದ ಸಿಎಂ, ಕೈ ಹಿಡಿದು ಏನಮ್ಮಾ ಈ ಬಳೆ ಚಿನ್ನದ್ದಾ ಅಂತ ಪ್ರಶ್ನಿಸಿದರು

ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸಿಎಂ ಯಡಿಯೂರಪ್ಪ ಹಾಸ್ಯ ಎಲ್ಲರ ಗಮನ ಸೆಳೆಯಿತು. ಪ್ರಶಸ್ತಿ ವಿತರಣೆ ವೇಳೆ ಯುವತಿಯ ಗೋಲ್ಡ್ ಕೋಟೆಡ್ ಬಳೆ ಗಮನಿಸಿದ ಸಿಎಂ, ಕೈ ಹಿಡಿದು ಏನಮ್ಮಾ ಈ ಬಳೆ ಚಿನ್ನದ್ದಾ ಅಂತ ಪ್ರಶ್ನಿಸಿದರು. ಯುವತಿ ಚಿನ್ನದ್ದು ಅಲ್ಲ ಅಂದಾಗ ಸಿಎಂ ನಕ್ಕು, ಗೋಲ್ಡ್ ಹಾಕಿಕೊಂಡು ಬರಬೇಕಿತ್ತಾ ಅಲ್ವಾ ಎಂದರು. ನನ್ನ ಕೈಯಲ್ಲಿ ದೊಡ್ಡ ಬಳೆ ನೋಡಿ ಚಿನ್ನದ್ದಾ ಅಂತ ಕೇಳಿದರು. ಅಲ್ಲ …

Read More »

ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್

ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ. 8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ …

Read More »

ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ:.ಕಾಂಗ್ರೆಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ನಿರಂತರ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವೀಟ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ. ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ. ಇವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ. …

Read More »

ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ

ಬೆಂಗಳೂರು: ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗಿರಿನಗರ ಸಮೀಪ ಮುನೇಶ್ವರ ಬ್ಲಾಕ್‌ನಲ್ಲಿ ಭಾನುವಾರ ನಡೆದಿದೆ. ಮುನೇಶ್ವರ ಬ್ಲಾಕ್‌ನ ನಿವಾಸಿ ಮಹಾಲಕ್ಷ್ಮಿ (16) ಮೃತ ದುರ್ದೈವಿ. ಮನೆಯಲ್ಲಿ ತನ್ನ ಎಂಟು ವರ್ಷದ ತಮ್ಮನನ್ನು ಸ್ನಾನಗೃಹದಲ್ಲಿ ಕೂಡಿಹಾಕಿ ಬಳಿಕ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕನ ಚೀರಾಟ ಕೇಳಿ ನೆರೆ ಹೊರೆಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು …

Read More »

ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …

Read More »

ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು

ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …

Read More »

ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯವನ್ನು ವ್ಯವಸ್ಥಿತವಾಗಿ ನಾಶ ಮಾಡುವ ಎಲ್ಲ ರೀತಿಯ ಹುನ್ನಾರಗಳನ್ನೂ ಮಾಡುತ್ತಿದೆ:. ಸಿದ್ದರಾಮಯ್ಯ

ಬೆಂಗಳೂರು, ನ.1- ನ್ಯಾಯಯುತವಾಗಿ ನೀಡಬೇಕಾದ ತೆರಿಗೆ ಪಾಲನ್ನು ಕೇಂದ್ರ ನೀಡದೆ ವಂಚಿಸುತ್ತಿರುವುದರಿಂದ ನಮ್ಮಂತಹ ರಾಜ್ಯಗಳು ಅಭಿವೃದ್ಧಿಯಲ್ಲಿ ಹಿಂದೆ ಬೀಳುತ್ತಿವೆ. ಅನುದಾನವಿಲ್ಲದೆ ಮೂಲಸೌಕರ್ಯ ಕಲ್ಪಿಸಲಾಗಿದೆ. ರಾಜ್ಯಕ್ಕೆ ಹರಿದುಬರಬೇಕಾದ ಬಂಡವಾಳ ಹೂಡಿಕೆ ಸಮರ್ಪಕವಾಗಿ ಬರದಿದ್ದರೆ ಉದ್ಯೋಗ ಸೃಷ್ಟಿಯಾಗಲು ಸಾಧ್ಯವಾಗುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯವು ಅಭಿವೃದ್ಧಿ ಹೊಂದಬೇಕಾದಷ್ಟು ಪ್ರಮಾಣದಲ್ಲಿ ಅಭಿವೃದ್ಧಿಯಾಗುವುದಿಲ್ಲ. ಕರ್ನಾಟಕವು ಮುಂದಿನ ದಿನಗಳಲ್ಲಿ ಹಿಂದುಳಿದ ಅಥವಾ ಬಡ …

Read More »