Breaking News

ಬೆಂಗಳೂರು

ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ.

ಬೆಂಗಳೂರು,- ಕೋವಿಡ್ -19 ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಇಲ್ಲವೇ ಅಪಘಾತಕ್ಕೆ ತುತ್ತಾದ ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆಯ ಸೌಲಭ್ಯ ಒದಗಿಸಲಾಗಿದ್ದು, ಮತ್ತೆ ಈ ಸೌಲಭ್ಯವನ್ನು 6 ತಿಂಗಳಿಗೆ ವಿಸ್ತರಿಸಲಾಗಿದೆ. ರೋಗಿಗಳೊಂದಿಗೆ ನೇರ ಸಂಪರ್ಕ …

Read More »

ಈ ನಿರ್ಧಾರವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರು : ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಸಂಸ್ಥೆ ನೀಡುವ ಐಎಸ್‌ಐ ಮಾರ್ಕ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾಪ್ರಹಾರ ಮಾಡಿದ್ದು, ಈ ನಿರ್ಧಾರವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್‌ ಪ್ರಮಾಣಪತ್ರ ಪಡೆಯಲು ಸಾವಿರಾರು ರೂ. ವೆಚ್ಚ ಸಣ್ಣ ಬೊಂಬೆಗಳ ತಯಾರಕರಿಗೆ ದುಬಾರಿ ಆಗಲಿದ್ದು, ದೇಶೀಯ ಬೊಂಬೆ ಉತ್ಪಾದಕರ ಭವಿಷ್ಯಕ್ಕೆ ಮಾರಕವಾಗಲಿದೆ. ಕೇಂದ್ರದ ಈ …

Read More »

ವಾರದ ಎಲ್ಲಾ ದಿನಗಳಂದು ಅನುಮೋದಿತ ಏಕರೂಪ ಪ್ರಯಾಣದರ

ಬೆಂಗಳೂರು: ವಾರಾಂತ್ಯ ದಿನಗಳಂದು ಪ್ರತಿಷ್ಠಿತ ಸಾರಿಗೆಗಳಲ್ಲಿ ಶೇ.10ರಷ್ಟು ವಿಧಿಸಲಾಗುತ್ತಿದ್ದ ಹೆಚ್ಚುವರಿ ಪ್ರಯಾಣದ ದರವನ್ನು ಕೆಎಸ್‍ಆರ್ ಟಿಸಿ ರದ್ದುಪಡಿಸಿದೆ. ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಪ್ರತಿಷ್ಠಿತ ಹವಾನಿಯಂತ್ರಿತ ಸಾರಿಗೆಗಳಲ್ಲಿ ಪ್ರಯಾಣಿಸಲು ಸಾರ್ವಜನಿಕರು ಆಸಕ್ತಿಯನ್ನು ತೋರುತ್ತಿಲ್ಲ. ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆಗಳಲ್ಲಿ …

Read More »

ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿಯಾಗಿದ್ದು, ತಾವಿರುವ ಹುದ್ದೆಯ ಬಗ್ಗೆ ಅರಿವಿಲ್ಲದವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್ ಗಳ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಹಾಗೆ ನಳಿನ್ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಪರ್ಸಂಟೇಜ್ ಸರ್ಕಾರ, ಲಂಚ …

Read More »

ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ.

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶ ನೀಡಿದೆ. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ. ಮೋಟಾರು ವಾಹನ ಕಾಯ್ದೆಯಡಿ ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದ್ದು, ಬೈಕ್ ಸವಾರ ಹಾಗೂ ಹಿಂಬದಿಯ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದ್ದರೆ 3 ತಿಂಗಳು ಕಾಲ ಲೈಸನ್ಸ್ ರದ್ದುಗೊಳಿಸಲಾಗುವುದು. ಅಲ್ಲದೇ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಿದೆ. ಹಲವು …

Read More »

ಪದೇ ಪದೇ ನನ್ನನ್ನು ಕೆಣಕಬೇಡಿ- ಸಿದ್ದರಾಮಯ್ಯಗೆ ಎಚ್‍ಡಿಕೆ ವಾರ್ನಿಂಗ್

ಬೆಂಗಳೂರು: ಜಾತಿ ಸಮೀಕ್ಷೆ ಬಿಡುಗಡೆಗೆ ಎಚ್‍ಡಿಕೆ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೆಂಡಾಮಂಡಲರಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪದೇ ಪದೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ರಾಜಕೀಯ ತೆವಲಿಗೆ ಸಿದ್ದರಾಮ್ಯಯ ಅವರು ಏನೋನೋ ಮಾತಾಡೋದು ಬೇಡ. ಅವರಿಗೆ ಜಾತಿ ಸಮೀಕ್ಷೆಗೆ ಅಡ್ಡಗಾಲು ಹಾಕಿದ್ದು, ನಿನ್ನೆ ರಾತ್ರಿ ಅವರಿಗೆ ಕನಸ್ಸು ಬಿದ್ದಿದಂತಾ? ನನ್ನ ವಿರುದ್ಧ ಟೀಕೆ ಮಾಡಲು ಬೇರೆ …

Read More »

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿಯೂ ಗೆಲುವು

ಬೆಂಗಳೂರು :  ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಕ್ರಮವಾಗಿ ಚುನಾವಣೆ ನಡೆಯುತ್ತಿದೆ ಎಂದು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್‌ಗೆ ಹಿನ್ನಡೆಯಾಗಿದೆ. ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಲು ಈ ಚುನಾವಣೆ ಸಹಕಾರಿಯಾಗಿದೆ.ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಕ್ಷೇತರ ಶಾಸಕ ಶರತ್ …

Read More »

ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದ ನಟಿ ಅಮೂಲ್ಯ

ಬೆಂಗಳೂರು: ನಟಿ ಅಮೂಲ್ಯ ಸೇರಿದಂತೆ ಅವರ ಮಾವ ಮಾಜಿ ಕಾರ್ಪೋರೇಟರ್ ಜಿ.ಎಚ್.ರಾಮಚಂದ್ರ ಹಾಗೂ ಪತಿ ಜಗದೀಶ್ ಅವರು ಬಿಜೆಪಿ ರಾಜ್ಯ ಉಸ್ತುವಾರಿ ಸಿ.ಟಿ.ರವಿ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಅಮೂಲ್ಯ ಬಿಜೆಪಿ ಸೇರ್ಪಡೆ ವೇಳೆ ಆರ್ ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಕೂಡಾ ಹಾಜರಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಆರ್ ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದ ಜಿ.ಎಚ್.ರಾಮಚಂದ್ರ ಅವರ ಪರ ಸೊಸೆ ಅಮೂಲ್ಯ …

Read More »

ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?:H.D.K.

ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ …

Read More »

ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನ:ಸಿ.ಟಿ.ರವಿ

ಬೆಂಗಳೂರು, ಅ.18-ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನದ ಪರಮಾವಧಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪದ ಮೇಲೆ ತಿಹಾರ್ ಜೈಲಿಗೆ ಹೋಗಿ ಬಂದವರು, ಜನರಿಂದ ಹಾರ, ತುರಾಯಿ ಹಾಕಿಸಿಕೊಂಡು ಮೆರವಣಿಗೆ ಮಾಡುತ್ತಿದ್ದಾರೆ. ಅಂತಹವರು ಕೂಡ ನಾನು ಬಂಡೆ ಎಂದು ಕೊಚ್ಚಿಕೊಳ್ಳುವುದು ಕೂಡ ಒಂದು ರೀತಿ ಭಂಡತನವೇ ಎಂದು …

Read More »