Breaking News

ಬೆಂಗಳೂರು

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews https://youtu.be/YbVu7tmiprE

Read More »

2020 ಜೀವ ಉಳಿಸುವ ವರ್ಷವಾಗಿದೆ, ಇದನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ: ಶೋಭಾ

ಚಿಕ್ಕಮಗಳೂರು: 2020 ಜೀವ ಉಳಿಸುವ ವರ್ಷವಾಗಿದೆ, ಈ ವರ್ಷವನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಜೀವ ಉಳಿಸೋಣ, ನಂತರ ಜೀವನ ಮಾಡೋಣ ಎಂದು ಪ್ರಧಾನಿ ಮೋದಿ ಹೇಳಿದ್ದರು. ಹೀಗಾಗಿ ಮೊದಲು ಜೀವ ಉಳಿಸೋಣ, ನಂತರ ಜೀವನ ಮಾಡೋಣ. ಸದ್ಯಕ್ಕೆ ಯಾವುದೇ ಕಾರಣಕ್ಕೂ ಶಾಲೆ ಆರಂಭ ಬೇಡ. ಆನ್‍ಲೈನ್ ತರಗತಿಗಳನ್ನು ಮುಂದುವರಿಸಲು ಅಭ್ಯಂತರವಿಲ್ಲ ಎಂದು ಅವರು ಸರ್ಕಾಕ್ಕೆ ಸಲಹೆ …

Read More »

ಡಿಕೆಶಿಗೆ ಮತ್ತೆ ಶಾಕ್ – ಸಿಬಿಐ ಬೆನ್ನಲ್ಲೇ ಫೀಲ್ಡಿಗೆ ಇಳಿದ ಇಡಿ

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಮತ್ತು ಮನಿ ಲಾಂಡ್ರಿಂಗ್ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಅವರನ್ನು ತನಿಖಾ ಸಂಸ್ಥೆಗಳು ಬಿಡುವಂತೆ ಕಾಣ್ತಿಲ್ಲ. ಸಿಬಿಐ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಕೂಡ ಫೀಲ್ಡಿಗೆ ಇಳಿದಿದೆ.ಡಿಕೆಶಿ ಆಪ್ತರು ಮತ್ತು ಬಂಧುಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಬೇಕು ಎಂದು ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಆದೇಶ ನೀಡಿದೆ. ಡಿಕೆಶಿ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸುವ ಸಂಬಂಧ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡುವಂತೆ ಜಾರಿ ನಿರ್ದೇಶನಾಲಯದ …

Read More »

ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಜೈಲಿನಲ್ಲೇ ಹುಟ್ಟುಹಬ್ಬ

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.‘ ಗಂಡ ಹೆಂಡತಿ’ ಬೆಡಗಿಯ ವಿಶೇಷ ದಿನಕ್ಕೆ ಡ್ರಗ್ಸ್ ಮಾಫಿಯಾ ಕಾವು ತಟ್ಟಿದೆ. ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ.ಸಾಮಾನ್ಯವಾಗಿ ಸಂಜನಾ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು ನಟಿಯರು : ಜೈಲ್ ಸಿಬ್ಬಂದಿಗಳಿಗೆ ತಲೆ ನೋವು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು, ಜೈಲು ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದೇ ಕೊಠಡಿಗೆ ರಾಗಿಣಿ, ಸಂಜನಾರನ್ನು ಶಿಫ್ಟ್ ಮಾಡಲಾಗಿದ್ದು, ಜೈಲಿನಲ್ಲೇ ಇಬ್ಬರೂ ಪ್ರತಿ ದಿನ ಕಾದಾಟ ನಡೆಸಿದ್ದಾರೆ. ಚಿಕ್ಕ ಚಿಕ್ಕ ವಿಷಯಗಳಿಗೂ ಪರಸ್ಪರ ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದು, ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೂ ಹೋಗುತ್ತಿದ್ದಾರೆ ಎನ್ನಲಾಗಿದೆ. ಅಕ್ಕಪಕ್ಕದ …

Read More »

ಲಾಕ್‌ಡೌನ್ ಎಫೆಕ್ಟ್: ಪೊಲೀಸ್ ಠಾಣೆಯಲ್ಲಿ ಕೇಳೋರೇ ಇಲ್ಲ ಮಾಲೀಕರಿಲ್ಲದ ವಾಹನಗಳನ್ನು!

ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್‌ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …

Read More »

ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ

ಬೆಂಗಳೂರು: ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ಮಕ್ಕಳು, ಶಿಕ್ಷಕರ ಆರೋಗ್ಯ ಮುಖ್ಯವಾಗಿದೆ ಎಂದು ಆತಂಕದಲ್ಲಿದ್ದ ಶಿಕ್ಷಕರು, ಪೋಷಕರಿಗೆ ಸಮಾಧಾನದ ಸುದ್ದಿ ನೀಡಿದ್ದಾರೆ. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ನಿಲ್ಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ವಿದ್ಯಾಗಮ ಯೋಜನೆ ಕುರಿತಾಗಿ ಸರ್ಕಾರ ಚಿಂತನೆ ನಡೆಸಲಿದೆ. ತಜ್ಞರ ಸಮಿತಿ ವರದಿ …

Read More »

ರಾಗಿಣಿ ಬೇಲ್​ಗಾಗಿ ಹೈಕೋರ್ಟ್ ಮೊರೆ ಹೋಗಲು ಹಣವಿಲ್ಲದೇ, ಪೋಷಕರು ಪರದಾಟ

ಬೆಂಗಳೂರು : ಸ್ಯಾಂಡಲ್​ವುಡ್​ ಡ್ರಗ್​ ಲಿಂಕ್​ ಆರೋಪದಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಬೇಲ್​ಗಾಗಿ ಹಣವಿಲ್ಲದೇ ರಾಗಿಣಿ ಪೋಷಕರು ಪರದಾಡುತ್ತಿದ್ದಾರೆ ಅನ್ನೋ ಮಾಹಿತಿ ಅವರ ಆಪ್ತವಲಯದಿಂದ ಲಭ್ಯವಾಗಿದೆ. ಈ ಹಿಂದೆಯೇ ರಾಗಿಣಿ ಪೋಷಕರು, ವಕೀಲರಿಗೆ ಫೀಸ್​ ಕೊಡುವ ಸಲುವಾಗಿ, ಹಣವಿಲ್ಲದೇ ತಾವು ವಾಸವಿದ್ದ ಫ್ಲಾಟ್​ ಮಾರಲು ಮುಂದಾಗಿದ್ದರು. ಆದ್ರೆ, ಫ್ಲಾಟ್​ ಮಾರಟಕ್ಕಿಟ್ಟು ಒಂದು ತಿಂಗಳಾದ್ರು, ಇನ್ನೂ ಸೇಲ್​ ಆಗಿಲ್ಲ ಎನ್ನಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಸೇರಿರೋ ರಾಗಿಣಿ ಬೇಲ್​ಗಾಗಿ ಹೈಕೋರ್ಟ್ …

Read More »

ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪಾತ್ರ ಬಹಳ ಮುಖ್ಯ: ಡಿ.ಕೆ ಶಿವಕುಮಾರ್

ಬೆಂಗಳೂರು: ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದ ಜತೆ ಸಭೆ ನಡೆಸಿದರು. ‘ಬೈಎಲೆಕ್ಷನ್‌ನಲ್ಲಿ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಮಾಡಿ’ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾದ ಪಾತ್ರ ಮುಖ್ಯ. ಸೋಶಿಯಲ್ ಮೀಡಿಯಾ ಇನ್ನಷ್ಟು ಌಕ್ಟಿವ್ ಆಗಬೇಕು. ಸೋಶಿಯಲ್ ಮೀಡಿಯಾದಲ್ಲಿ ಮಾರ್ಕೆಟಿಂಗ್ ಮಾಡ್ತಾರೆ. ಏನೂ ಮಾಡದಿದ್ರೂ ಬಿಜೆಪಿಯವ್ರು ಮಾರ್ಕೆಟಿಂಗ್ ಮಾಡ್ತಾರೆ. ನಾವು ಹಲವು ಬಾರಿ ಈ ವಿಚಾರದಲ್ಲಿ ಎಡವಿದ್ದೇವೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಕಷ್ಟವಾಗುತ್ತದೆ …

Read More »