ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೇಡಿಕೆಗಳ ಕುರಿತು ಜುಲೈ 12ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸೋಮವಾರ ಹಾಗೂ ಮಂಗಳವಾರ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ …
Read More »ಆಹಾರ ಇಲಾಖೆಯಿಂದ ರಾಜ್ಯದ ಹಲವು ಮಳಿಗೆಗಳು, ಹೋಟೆಲ್ಗಳಿಗೆ ನೋಟಿಸ್, ಭಾರಿ ದಂಡ
ಬೆಂಗಳೂರು, ಜುಲೈ 11: ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆಹಾರ ಇಲಾಖೆ (Food Department) ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಹೊಟೇಲ್ (Hotel), ರೆಸ್ಟೋರೆಂಟ್, ಬೀದಿ ಬದಿ ವ್ಯಾಪಾರ ಘಟಕಗಳಲ್ಲಿ ಪರಿಶೀಲನೆ ನಡೆಸಿದೆ. ಆಹಾರ ಇಲಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಕಳಪೆ ಗುಣಮಟ್ಟದ ಆಹಾರ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆಯು ಹೊಟೇಲ್, ರೆಸ್ಟೋರೆಂಟ್ ಮತ್ತು ಬೀದಿ ಬದಿ ವ್ಯಾಪಾರ ಘಟಕಗಳಿಗೆ ನೋಟಿಸ್ ನೀಡಿ, ದಂಡ ವಿಧಿಸಿದೆ. ಆಹಾರ ಇಲಾಖೆಯು ರಾಜ್ಯಾದ್ಯಂತ 720 ಹೋಟೆಲ್ …
Read More »ಸಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್ಸಿ ರವಿಕುಮಾರ್ಗೆ ಜಾಮೀನು
ಬೆಂಗಳೂರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ (BJP MLC N Ravikumar) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. …
Read More »ಶಾಪಿಂಗ್ಗೆ ಹೋಗಿ ಬಂದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ
ಬೆಂಗಳೂರು: ಪತ್ನಿ ಶಾಪಿಂಗ್ಗೆ ಹೋಗಿ ಬಂದಿದ್ದಕ್ಕೆ ತಗಾದೆ ತೆಗೆದು ಕತ್ತು ಹಿಸುಕಿ ಹತ್ಯೆಗೈದಿದ್ದ ಪತಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಬಂಧಿತ ಆರೋಪಿ. ಪದ್ಮಜಾ (29) ಕೊಲೆಯಾದವರು. ಜುಲೈ 6ರಂದು ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮರುದಿನ ಆಸ್ಪತ್ರೆಯಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದರು. ಕೋಲಾರದ ಶ್ರೀನಿವಾಸಪುರ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದರು. ಪದ್ಮಜಾ ಅವರು ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ಸ್ ವಿಭಾಗದಲ್ಲಿ ಬಿಇ …
Read More »ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಹಣ ಸುಲಿಗೆ ಆರೋಪ: ಮೂವರು ಆರೋಪಿಗಳ ಬಂಧನ
ಬೆಂಗಳೂರು: ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿ ಬಳಿಕ ಹಣ ಸುಲಿಗೆ ಮಾಡಿದ್ದಲ್ಲದೆ ಮನೆಯಲ್ಲಿದ್ದ ಪಿಠೋಪಕರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ಧಾರೆ. 35 ವರ್ಷದ ಮಹಿಳೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹೆಬ್ಬಗೋಡಿ ಸುತ್ತಮುತ್ತಲಿನ …
Read More »ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿ: ಹೈಕೋರ್ಟ್
ಬೆಂಗಳೂರು: ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶಿಸಿತು. ಸುಪ್ರೀಂ ಕೋರ್ಟ್ ಆದೇಶಗಳ ಪ್ರಕಾರ ಮೊದಲಿಗೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಬೇಕು. ಈ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ಮುಂದಿನ 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಅತ್ಯಾಚಾರ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಎರಡನೇ ಬಾರಿಗೆ ಜಾಮೀನು …
Read More »ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಏಕೆ ಮೋದಿ ಟಿಕೆಟ್ ಕೊಡಲಿಲ್ಲ?: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಿಜೆಪಿಯ ಕಳಪೆ ಪ್ರಾಡಕ್ಟ್ಗಳಿಗೆ ನಾನು ಬೇಕಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ನಾನು ಟ್ಯಾಲೆಂಟ್ ಅಂತಾರೆ. ಮತ್ತೇಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಟಿಕೆಟ್ ಕೊಡಲಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಆಡಿಯೋ ಕೇಳಿದ್ರಾ? ಅಥವಾ ಮೊಬೈಲ್ ಸೀಸ್ ಆಗಿದ್ದಾಗ ಏನಾದ್ರು ಸಿಕ್ತಾ? ಯಾಕೆ ನಿಮಗೆ ಟಿಕೆಟ್ ಕೊಡಲಿಲ್ಲ ಅನ್ನೋದನ್ನು …
Read More »ವಿಧಾನ ಪರಿಷತ್ ಉಪಕಾರ್ಯದರ್ಶಿ ಜಲಜಾಕ್ಷಿ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಧಾನಪರಿಷತ್ ಕಾರ್ಯದರ್ಶಿ ಆದೇಶ: ‘ಸಂವಿಧಾನದ ದಿನದ’ ಅಂಗವಾಗಿ ವಿಧಾನಪರಿಷತ್ತಿನ ಸಚಿವಾಲಯದಲ್ಲಿ 2024ರ ನವೆಂಬರ್ 26ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲವೆಂಬ ಆರೋಪದ ಮೇಲೆ …
Read More »ರಾಜಧಾನಿಯಲ್ಲಿ ಟೋಯಿಂಗ್ ಮರುಜಾರಿ ಸದ್ಯಕ್ಕಿಲ್ಲ
ಬೆಂಗಳೂರು: ಮೂರು ವರ್ಷಗಳ ಬಳಿಕ ರಾಜಧಾನಿಯಲ್ಲಿ ಟೋಯಿಂಗ್ ಮರುಜಾರಿಗೆ ಹಲವು ಸಭೆಗಳನ್ನ ರಾಜ್ಯ ಸರ್ಕಾರ ಚರ್ಚೆ ನಡೆಸಿದರೂ ಒಮ್ಮತದ ನಿರ್ಧಾರದ ಬಗ್ಗೆ ಜಿಜ್ಞಾಸೆ ಮೂಡಿದ ಪರಿಣಾಮ ಸದ್ಯಕ್ಕೆ ಟೋಯಿಂಗ್ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದಾಗಿ ನಗರದ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಮುಖ್ಯವಾಗಿ ಪೀಕ್ ಅವರ್ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಟೋಯಿಂಗ್ ಮತ್ತೆ ಆರಂಭಿಸುವುದಾಗಿ ಸರ್ಕಾರ ಹೇಳಿತ್ತು. ಈ ಬಾರಿ …
Read More »ಅಶ್ರಫ್ ಕುಟುಂಬಸ್ಥರು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಸ್ಪೀಕರ್ ಯು. ಟಿ. ಖಾದರ್ ಇದ್ದಾರೆ (
ಬೆಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆ. ಸಿ. ವೇಣುಗೋಪಾಲ್ ಕೋರಿಕೆಯಂತೆ, ಗುಂಪು ಹತ್ಯೆಯಲ್ಲಿ ಹಲ್ಲೆಗೀಡಾದ ಅಶ್ರಫ್ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು. ಟಿ. ಖಾದರ್, ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ. ಕೆ. ಹರಿಪ್ರಸಾದ್, …
Read More »
Laxmi News 24×7