ಬೆಂಗಳೂರು: ಮೊಬೈಲ್ ಟವರ್ಗಳನ್ನೇ ಟಾರ್ಗೇಟ್ ಮಾಡಿ RRU ಕಾರ್ಡ್ಗಳನ್ನು ಇಬ್ಬರು ಖತರ್ನಾಕ ಕಳ್ಳರು ಕಳ್ಳತನ ಮಾಡುತ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಬ್ಬರು ಖತರ್ನಾಕ ಕಳ್ಳರು ಟವರ್ ಬಳಿ RRU ಕಾರ್ಡ್ ಕಳ್ಳತನ ಮಾಡುತ್ತಿದ್ದರು. ಕೆಂಗೇರಿ, ನಾಗರಬಾವಿ, ಚಂದ್ರಲೇಔಟ್, ಪದ್ಮನಾಭನಗರ ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಲ್ಲಿಯವರೆಗೆ 10 ಲಕ್ಷಕ್ಕೂ ಹೆಚ್ಚು ಮೌಲ್ಯದ RRU (Riote Radio Unit) ಕಳ್ಳತನ ಮಾಡಿದ್ದಾರೆ. ಈ ಘಟನೆ ಸಂಬಂಧ ಇಂಡಸ್ …
Read More »ಇಡಿ ಅಧಿಕಾರಿಗಳು ಫಿಲ್ಡ್ಗೆ ಇಳಿದು ಹುಡುಕಿದ್ರು ಸಿಗದ ಬಿಬಿಎಂಪಿ ಕೊರೆದ 9,588 ಕೊಳವೆ ಬಾವಿಗಳು
ಬೆಂಗಳೂರು: ನಗರದಲ್ಲಿ ಕೊಳವೆ ಬಾವಿ (Borewells) ಹಾಗೂ ಶುದ್ಧಕುಡಿಯುವ ನೀರಿನ ಘಟಕ (Drinking water plants) ಸ್ಥಾಪನೆ ವಿಚಾರದಲ್ಲಿ ನಡೆದ ಮಹಾ ಭ್ರಷ್ಟಾಚಾರದ (Corruption) ಬೆನ್ನು ಬಿದ್ದ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ತಲೆ ಕೆಡಿಸಿಕೊಳ್ಳುವಂತಾಗಿದೆ. ಬಿಬಿಎಂಪಿ (BBMP) ವತಿಯಿಂದ ಕೊರೆಯಲಾದ ಸಾವಿರಾರು ಕೊಳವೆ ಬಾವಿಗಳೇ ಅಧಿಕಾರಿಗಳ ಕಣ್ಣಿಗೆ ಕಾಣಿಸುತ್ತಿಲ್ಲ. ಸ್ಥಳ ಪರಿಶೀಲನೆ ವೇಳೆಯೂ 9,588 ಕೊಳವೆ ಬಾವಿಗಳ ಪೈಕಿ 5 ಸಾವಿರ ಕೊಳವೆ ಬಾವಿಗಳ ಲೆಕ್ಕ ಸಿಗುತ್ತಿಲ್ಲ. ನೂರಾರು ಕೋಟಿ ಖರ್ಚು ಮಾಡಿ ಕೊರೆಸಿದ ಕೊಳವೆ ಬಾವಿಗಳೇ ನಾಪತ್ತೆಯಾಗಿದೆ. ಹಾಗಿದ್ದರೆ ಬಿಬಿಎಂಪಿಯಿಂದ …
Read More »ವಿಧಾನಸೌಧದ ಬಳಿ ಹಣ ಪತ್ತೆ: ಪೊಲೀಸರ ವಿರುದ್ಧ ಆರೋಪಿ ಜಗದೀಶ್ ಪರ ವಕೀಲ ಗರಂ
ಬೆಂಗಳೂರು: ವಿಧಾನಸೌಧ ಬಳಿ ಪಿಡಬ್ಲ್ಯೂಡಿ ಎಂಜಿನಿಯರ್ ಜಗದೀಶ್ ಎಂಬವರಿಂದ 10 ಲಕ್ಷ ರೂಪಾಯಿ ಹಣ ಸಿಕ್ಕಿರುವ ಪ್ರಕರಣ ನಿನ್ನೆ ನಡೆದಿತ್ತು. ಈ ಕುರಿತು ಟ್ವೀಟ್ ಮಾಡಿರುವ ಬಂಧಿತ ಎಂಜಿನಿಯರ್ ಜಗದೀಶ್ ಪರ ವಕೀಲ ರಾಜು ಗಡೇಕರ್, ‘ಡಿಸಿಪಿ ಆಣತಿಯಂತೆ ವಕೀಲರೊಂದಿಗೆ ಠಾಣೆಗೆ ಹಾಜರಾದ ವ್ಯಕ್ತಿಯನ್ನು ಅಕ್ರಮವಾಗಿ ಕೂಡಿ ಹಾಕಿದ್ದು, ನಂತರ ಭೇಟಿ ಮಾಡಲು ಅವಕಾಶ ಕಲ್ಪಿಸಿಲ್ಲ’ ಎಂದು ಆರೋಪಿಸಿದ್ದಾರೆ. ಎಂಜಿನಿಯರ್ ಜಗದೀಶ್ ಬ್ಯಾಗ್ನಲ್ಲಿ ಹಣ ಪತ್ತೆ: ಮಂಡ್ಯದ ಸಹಾಯಕ ಕಾರ್ಯ …
Read More »ಸಿದ್ದರಾಮಯ್ಯ- ರಮೇಶ ಜಾರಕಿಹೊಳಿ ರಹಸ್ಯ ಸಭೆ: ಮೂಲ ಗೂಡಿಗೆ ಮರಳಲಿದ್ದಾರಾ ಪ್ರಭಾವಿ ಮುಖಂಡ?
ಬೆಂಗಳೂರು, : ರಾಜ್ಯ ರಾಜಕಾರಣವು ಹೊಸದೊಂದು ಸಂಚಲನಕ್ಕೆ ಅಣಿಯಾಗುತ್ತಿದೆ ಎಂಬ ಮಾತುಗಳು ಓಡಾಡುತ್ತಿವೆ. ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ತಮ್ಮ ಗುರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು. ಆದರೆ, ಅವರಿಬ್ಬರ ನಡುವೆ ನಡೆದ ಮಾತುಕತೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲದ ಪ್ರಕಾರ, ರಮೇಶ ಜಾರಕಿಹೊಳಿ ಅವರು ಬಿಜೆಪಿಯ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ತಮಗೆ ಸಚಿವ ಸ್ಥಾನ ನೀಡಬೇಕೆಂದು …
Read More »ಮೀಸಲಾತಿ | ರಂಗನ ಮಂಗ ಮಾಡಲು ಹೊರಟಿದ್ದಾರೆ” H.D.K
ತುಮಕೂರು: ಒಕ್ಕಲಿಗ, ಲಿಂಗಾಯತ ಸಮುದಾಯದ ಮೀಸಲಾತಿ ಸಂಬಂಧ ಪ್ರವರ್ಗ ಬದಲಾವಣೆ ಮಾಡುವ ಮೂಲಕ ‘ರಂಗನ ಮಂಗ ಮಾಡಲು’ ಬಿಜೆಪಿಯವರು ಹೊರಟಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಶುಕ್ರವಾರ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರವರ್ಗ ಬದಲಾವಣೆ ಮಾಡಿರುವುದರಿಂದ ಎರಡೂ ಸಮುದಾಯಗಳಿಗೂ ಯಾವುದೇ ಪ್ರಯೋಜನವಿಲ್ಲ. ಇದರಿಂದ ಮೀಸಲಾತಿ ಪ್ರಮಾಣದಲ್ಲಿ ಯಾವುದೇ ಹೆಚ್ಚಳ ಆಗುವುದಿಲ್ಲ. ಪ್ರವರ್ಗ ಬದಲಾವಣೆ ಮಾಡಿರುವುದೇ ಸಾಧನೆ. ಈವರೆಗೆ ಮೂಗಿಗೆ ತಪ್ಪ ಹಚ್ಚುತ್ತಿದ್ದವರು, ಈಗ ಹಣೆಗೆ ಹಚ್ಚಿದ್ದಾರೆ. …
Read More »ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪ ಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್
ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ಆಂಧ್ರ ಪ್ರದೇಶ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಠಾಣಾ ವ್ಯಾಪಿಯಲ್ಲಿರುವ ಅಟ್ಟಿಕಾ ಗೋಲ್ಡ್ ಬಾಬು ನಿವಾಸದಲ್ಲಿ ಸಿಸಿಬಿ ಪೊಲೀಸರ ಸಹಾಯದೊಂದಿಗೆ ಆಂಧ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಿಚಾರಣೆಗಾಗಿ ಬಂಧಿಸಿ ಆಂಧ್ರಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
Read More »ಆಕ್ಟರ್ ಆಗ್ಬೇಕು ಅಂತ ಭಾಳ ಹುಚೈತ್ರಿ.: ಶಿವಪುತ್ರಪ್ಪ, ಮಲ್ಲು
ಬೆಂಗಳೂರು : ಟ್ಯಾಲೆಂಟ್ ಯಾರಪ್ಪನ ಮನೆಯ ಆಸ್ತಿ ಅಲ್ಲ ಎನ್ನುವ ಮಾತು ಎಷ್ಟು ನಿಜ ಅಲ್ವಾ. ನಿಮ್ಮ ಹತ್ರ ಪ್ರತಿಭೆ ಇತ್ತು ಅಂದ್ರೆ ಸಾಧನೆ ಮಾಡುವುದರಿಂದ ನಿಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸಾಧನೆ ಮಾಡಲು ಬಡತನ, ಶ್ರೀಮಂತಿಕೆ ಅಂತ ಭೇದ ಭಾವ ಇಲ್ಲ. ಆತ್ಮ ವಿಶ್ವಾಸ ಬಹಳ ಮುಖ್ಯ ಅಷ್ಟೆ. ಅದೇ ರೀತಿ ಉತ್ತರ ಕರ್ನಾಟಕ ಪ್ರತಿಭೆ ಶಿವಪುತ್ರಪ್ಪ, ಮಲ್ಲು ಜಮಖಂಡಿ ಕೂಡ. ತಮ್ಮದೆ ಶೈಲಿಯಲ್ಲಿ ವಿಡಿಯೋ ಮಾಡಿ ಇಂದು ಖ್ಯಾತಿ …
Read More »ಬೇಕರಿ ಸಿಬಂದಿಗೆ ಮನಸೋ ಇಚ್ಛೆ ಹಲ್ಲೆ ಮೂವರ ಬಂಧನ
ಬೆಂಗಳೂರು: ಚಹಾ ಹಾಗೂ ಸಿಗರೇಟ್ ಕೊಡುವ ವಿಚಾರದಲ್ಲಿ ಕುಂದಲಹಳ್ಳಿ ಗೇಟ್ ಬಳಿಯ ಬೇಕರಿ ಸಿಬಂದಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪಕ್ಕದ ಅಂಗಡಿಯ ಮಾಲಕನೇ ತನ್ನ ಸಹಚರರ ಮೂಲಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ ಸಂಬಂಧ ನಾಲ್ವರನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ನಡೆದ ಬೇಕರಿಯ ಪಕ್ಕದ ಅಂಗಡಿಯ ಮಾಲಕ ಮಂಜುನಾಥ್, ಡೆಲಿವರಿ ಬಾಯ್ ಅಶ್ವತ್ಥ ನಗರದ ಕಾರ್ತಿಕ್, ಅಲ್ಯೂಮಿನಿಯಂ ಕೆಲಸ …
Read More »ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: C.M. ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 10 : ರುಡ್ ಸೆಟ್ ನಂತಹ ಉತ್ತಮ ತರಬೇತಿ ಕೇಂದ್ರದಿಂದ ಕರ್ನಾಟಕದ ಮಕ್ಕಳು ಲಾಭವನ್ನು ಪಡೆದು, ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶನಿವಾರ ರುಡ್ಸೆಟ್ ರಾಷ್ಟ್ರೀಯ ಅಕಾಡೆಮಿ ಹಾಗೂ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪ್ರಧಾನ ಮಂತ್ರಿಗಳು ಕೌಶಲ್ಯ ಭಾರತದಡಿ ಶೇ 44 ರಷ್ಟಿರುವ ಯುವಕರಿಗೆ ಕೌಶಲ್ಯ …
Read More »ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ; ಮುಹೂರ್ತ ಫಿಕ್ಸ್
ಬೆಂಗಳೂರು: ವಿಧಾನಮಂದಲ ಚಳಿಗಾಲದ ಅಧಿವೇಶನದ ನಡುವೆಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 21ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿಯೇ ಚುನಾವಣೆ ನಡೆಯಲಿದೆ. ಹಾಲಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಕಾರ್ಯನಿರ್ವಹಿಸುತ್ತಿದ್ದು, ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ …
Read More »
Laxmi News 24×7