ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ನ್ಯಾಷನಲ್ ಇನ್ವೆಸ್ಟಿಗೇಶನ್ ಏಜೆನ್ಸಿ (ಎನ್ಐಎ)ಯ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಎಂದು ಮನವಿ ಸಲ್ಲಿಸಿದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್ಗಳನ್ನು ಎನ್ಐಎ ವಿಫಲಗೊಳಿಸಿದೆ. ಹೀಗಾಗಿ ಎನ್ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ …
Read More »ಶಾಸಕ ರಾಮಪ್ಪ ಸೇರಿ 150 ಮಂದಿಗೆ ನೀಡಲು ತಂದಿದ್ದ ನಕಲಿ ಗೌರವ ಡಾಕ್ಟರೇಟ್ ಪದವಿ: ನಕಲಿ ವಿವಿ ಗ್ಯಾಂಗ್ ಅರೆಸ್ಟ್
ಬೆಂಗಳೂರು : ನಕಲಿ ವಿವಿ ಹೆಸರಿನಲ್ಲಿ ಹಣ ಪಡೆದು ಗೌರವ ಡಾಕ್ಟರೇಟ್ ನೀಡುತ್ತಿದ್ದ ತಮಿಳುನಾಡು ಮೂಲದ ಸಂಸ್ಥೆಯೊಂದು ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, ಹರಿಹರದ ಶಾಸಕ ರಾಮಪ್ಪ ಸೇರಿದಂತೆ ಸುಮಾರು 150 ಮಂದಿಗೆ ನಕಲಿ ಗೌರವ ಡಾಕ್ಟರೇಟ್ ಪದವಿ ನೀಡಲು ತಮಿಳುನಾಡು ಮೂಲದ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯದ ಹೆಸರಿನ ಸಂಸ್ಥೆಯೊಂದು ಅದ್ಧೂರಿ ಸಮಾರಂಭವನ್ನು ಆಯೋಜಿಸಿತ್ತು. ಈ ಸುದ್ದಿ ತಿಳಿದ ಡಿಸಿಪಿ ಡಾ.ಎ. ಎನ್. …
Read More »ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ.
ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ‘ನನಗೆ ಕೋವಿಡ್ ರೋಗಲಕ್ಷಣ ಇಲ್ಲರಲ್ಲ. ಆದರೆ ಕೋವಿಡ್ ಟೆಸ್ಟ್ನ ವರದಿ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್ …
Read More »ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ.
ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಎರಡನೇ ಪ್ರತಿಪಕ್ಷ ಜೆಡಿಎಸ್ ತಟಸ್ಥ ನಿಲುವು ಅನುಸರಿಸಿತ್ತು. ಅವಿಶ್ವಾಸವನ್ನು ವಿಭಜನೆಯ ಮತಕ್ಕೆ ಹಾಕುವುದಾದರೆ ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಪಿಪಿಇ ಕಿಟ್ ಹಾಕಿಸಿ ವಿಧಾನಸಭೆಗೆ ಕರೆ ತರುವುದಾಗಿ ಬಿಜೆಪಿ ಹೇಳಿತ್ತು. ಈ ಕುರಿತಂತೆ ಬೆಳಗ್ಗೆ ನಡೆದ ಚರ್ಚೆಯಲ್ಲಿ …
Read More »ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ.
ಬೆಂಗಳೂರು: ಇದ್ದಕ್ಕಿದ್ದಂತೆ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ. ಸದ್ಯದ ಪರಿಹಾರ ಎಂಬಂತೆ ವ್ಯಾಪಾರಿಗಳು ಈಗಾಗಲೇ ಅರ್ಧ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸಿದ್ದಾರೆ. ಸ್ಥಳೀಯ ಮಾರುಕಟ್ಟೆಯಲ್ಲಿನ ಕೊರತೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14 ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ ಈರುಳ್ಳಿ ರಫ್ತು ನಿಷೇಧಿಸಿತ್ತು, ಇದು ಕರ್ನಾಟಕ ಮತ್ತು ಮಹಾರಾಷ್ಟ್ರದ ಉತ್ಪಾದನಾ ಪ್ರದೇಶಗಳಲ್ಲಿ ಮಳೆ ಹಾನಿಗೊಳಗಾದ ನಂತರ ಬೆಲೆ ಏರಿಕೆಗೆ ಕಾರಣವಾಯಿತು. ಈರುಳ್ಳಿ ರಫ್ಚು …
Read More »ದೀಪಿಕಾ ಪಡುಕೋಣೆ ಶನಿವಾರ ವಿಚಾರಣೆಗೆ ಹಾಜರಾಗಲಿದ್ದಾರೆ
ಬೆಂಗಳೂರು: ಬಾಲಿವುಡ್ನಲ್ಲಿ ಭುಗಿಲೆದ್ದಿರುವ ಡ್ರಗ್ ಮಾಫಿಯಾಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ಶನಿವಾರ ವಿಚಾರಣೆಗೆ ಹಾಜರಾಗಲಿದ್ದಾರೆ. ಸಾರಾ ಅಲಿಖಾನ್, ರಾಕುಲ್ ಪ್ರೀತ್ ಸಿಂಗ್, ಶ್ರದ್ಧಾ ಕಪೂರ್ ಸಹ ವಿಚಾರಣೆ ಎದುರಿಸಲಿದ್ದಾರೆ. ಇದೀಗ ಈ ಎಲ್ಲ ಬೆಳವಣಿಗೆಗಳ ಬಗ್ಗೆ ನಟಿ, ರಾಜಕಾರಣಿ ಮಾಳವಿಕಾ ಅವಿನಾಶ್ ಪ್ರತಿಕ್ರಿಯಿಸಿದ್ದಾರೆ. ನಿಮಗೆಲ್ಲರಿಗೂ ಗೊತ್ತಿರುವಂತೆ, ಖಿನ್ನತೆ ಎನ್ನುವ ಕಥೆ ಕಟ್ಟಿ ಅದರ ಮೂಲಕ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದ ದೀಪಿಕಾ, ಇದೀಗ ಆ ಮಾಲ್ ಎಂಬ ಹೊಗೆ ಅವರನ್ನೇ …
Read More »ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ.: ರಮೇಶ್ ಜಾರಕಿಹೊಳಿ
ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ …
Read More »ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ: ಮಾಳವಿಕಾ
ಬೆಂಗಳೂರು: ಸ್ಯಾಂಡಲ್ವುಡ್ ನಂತೆ ಬಾಲಿವುಡ್ ನಲ್ಲಿಯೂ ಡ್ರಗ್ಸ್ ಹೊಗೆಯಾಡುತ್ತಿದ್ದು, ನಟ- ನಟಿಯ ವಿಚಾರಣೆ ನಡೆಯುತ್ತಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೊಣೆಯವರನ್ನು ಕೂಡ ಎನ್ಸಿಬಿ ವಿಚಾರಣೆಗೆ ಕರೆದಿದ್ದು, ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ ಎಂದು ನಟಿ ಕಂ ರಾಜಕಾರಣಿ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಖಿನ್ನತೆ ಎನ್ನುವ ಕಥೆ ಕಟ್ಟಿ, ಆ ಮೂಲಕ ದೀಪಿಕಾ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದಿರುವ ವಿಚಾರ …
Read More »ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್ವೈ ಪುತ್ರಿ
ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ. ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು. ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ …
Read More »ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?
ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …
Read More »
Laxmi News 24×7