Breaking News

ಬೆಂಗಳೂರು

ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ: ಮಾಳವಿಕಾ

ಬೆಂಗಳೂರು: ಸ್ಯಾಂಡಲ್‍ವುಡ್ ನಂತೆ ಬಾಲಿವುಡ್ ನಲ್ಲಿಯೂ ಡ್ರಗ್ಸ್ ಹೊಗೆಯಾಡುತ್ತಿದ್ದು, ನಟ- ನಟಿಯ ವಿಚಾರಣೆ ನಡೆಯುತ್ತಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೊಣೆಯವರನ್ನು ಕೂಡ ಎನ್‍ಸಿಬಿ ವಿಚಾರಣೆಗೆ ಕರೆದಿದ್ದು, ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ ಎಂದು ನಟಿ ಕಂ ರಾಜಕಾರಣಿ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಖಿನ್ನತೆ ಎನ್ನುವ ಕಥೆ ಕಟ್ಟಿ, ಆ ಮೂಲಕ ದೀಪಿಕಾ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದಿರುವ ವಿಚಾರ …

Read More »

ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ. ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು. ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ …

Read More »

ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?

ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್​ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​​ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …

Read More »

ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. 5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ …

Read More »

ರೈತರ ಪ್ರತಿಭಟನೆ : ಬೆಂಗಳೂರಿಗೆ ಟ್ರಾಫಿಕ್ ಬಿಸಿ

ಬೆಂಗಳೂರು-ಎಪಿಎಂಸಿ ಭೂ ಸುಧಾರಣೆ ಕಾಯ್ದೆ ವಿರೋಸಿ ರಾಷ್ಟ್ರೀಯ ಕಿಸಾನ್ ಮಹಾಸಂಘ ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ 35 ಸಂಘಟನೆಗಳು ಇಂದು ರಾಜ್ಯದ ಹಲವೆಡೆ ಹೆದ್ದಾರಿ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದವು. ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಬೆಂಗಳೂರಿನ ಗೊರಗುಂಟೆಪಾಳ್ಯ ವೃತ್ತದಲ್ಲಿ ರೈತ ಸಂಘದ ವತಿಯಿಂದ ಗಿರೀಶ್‍ಗೌಡ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಿದ್ದರಿಂದ ಕೆಲ ಕಾಲ ಟ್ರಾಫಿಕ್ ಜಾಮ್ …

Read More »

ಸಾಫ್ಟ್​ವೇರ್​ ಎಂಜಿನಿಯರ್​ to ಶಂಕರ್​: ಮಾದಕ ಜಾಲದ ಕೊಂಡಿ ಇಲ್ಲಿದೆ ನೋಡಿ

ಬೆಂಗಳೂರು: ಬಂಧಿತ ಬಾಲಿವುಡ್​ ನಟ ಕಿಶೋರ್​ಗೂ ಅನುಶ್ರೀಗೂ 5 ವರ್ಷಗಳಿಂದ ನಂಟಿದೆ ಎಂದು ತಿಳಿದುಬಂದಿದೆ. ಮುಂಬೈ ಸೇರಿ ವಿವಿಧ ಕಡೆ ಇಬ್ಬರು ಒಟ್ಟಿಗೆ ಓಡಾಡಿರುವ ಮಾಹಿತಿ ಸಹ ಸಿಕ್ಕಿದೆ. ಜೊತೆಗೆ, ಕಿಶೋರ್​ ಌಂಕರ್ ಅನುಶ್ರೀ ಜೊತೆ ಮಾತನಾಡಿರೋ ಕಾಲ್ ಲಿಸ್ಟ್ ಲಭ್ಯವಾಗಿದ್ದು ಆಕೆಗೆ ಕರೆ ಮಾಡಿದ್ದ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದಲ್ಲದೆ, ಅನುಶ್ರೀ ಜೊತೆ ಪಾರ್ಟಿ ಮಾಡಿರುವುದಾಗಿ ಮತ್ತೊಬ್ಬ ಬಂಧಿತ ಆರೋಪಿ ತರುಣ್ ಹೇಳಿದ್ದ ಎಂದು ತಿಳಿದುಬಂದಿದೆ.ಸದ್ಯ ಬೆಂಗಳೂರಲ್ಲಿ …

Read More »

ರಾಜ್ಯಾದ್ಯಂತ ರೈತರು ಬೃಹತ್​ ಪ್ರತಿಭಟನೆ : ಗೊರಗುಂಟೆ ಪಾಳ್ಯ ರಾಷ್ಟ್ರೀಯ ಹೆದ್ದಾರಿ ಬಂದ್

ಬೆಂಗಳೂರು: ಕೃಷಿ ಮಸೂದೆಗಳನ್ನ ವಿರೋಧಿಸಿ ಇಂದು ಭಾರತ್​ ಬಂದ್​​ಗೆ ಕರೆ ನೀಡಿರೋ ಹಿನ್ನೆಲೆ ಇಂದು ರಾಜ್ಯಾದ್ಯಂತ ರೈತರು ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆ ರೈತ ಸಂಘದ ಅಧ್ಯಕ್ಷ ಗಿರೀಶ್​ಗೌಡ ನೇತೃತ್ವದಲ್ಲಿ ಗೊರಗುಂಟೆ ಪಾಳ್ಯ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಿ ಪ್ರತಿಭಟಿಸಲಾಯ್ತು. 20 ನಿಮಿಷಗಳ ಕಾಲ ರಸ್ತೆ ತಡೆ ಮಾಡಲು ಪೊಲೀಸರು ಅನುಮತಿ ನೀಡಿದ್ದರು. ತುಮಕೂರು- ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನ ಗೊರಗುಂಟೆ ಪಾಳ್ಯದ ಸಿಗ್ನಲ್ ಬಳಿ …

Read More »

ಬೆಂಗಳೂರಲ್ಲಿ ಸೋಂಕು ಪತ್ತೆ ಶೇ.5ಕ್ಕಿಂತ ಕಡಿಮೆ ಮಾಡಿ: ಪ್ರಧಾನಿ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೊರೋನಾ ಸೋಂಕು ಪರೀಕ್ಷೆ ಪ್ರಮಾಣ ದ್ವಿಗುಣಗೊಳಿಸಿ ಹಾಗೂ ಸೋಂಕು ಪತ್ತೆ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೊಳಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಕ್ಕೆ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕಳೆದ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ರಾಜ್ಯದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದರು. ಈ ವೇಳೆ ವಿಶೇಷವಾಗಿ ಬೆಂಗಳೂರಿನಲ್ಲಿ ಕೊರೋನಾ …

Read More »

BSY ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಮಂಡನೆ..!

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರವು ಸದನದ ವಿಶ್ವಾಸ ಕಳೆದುಕೊಂಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಅವಿಶ್ವಾಸ ಪ್ರಸ್ತಾಪಕ್ಕೆ ಅನುಮತಿ ಸಿಕ್ಕಿದೆ. ಕೋವಿಡ್‌ನಿಂದಾಗಿ ಆಡಳಿತಾರೂಢ ಬಿಜೆಪಿಯ ಹಲವು ಸಚಿವರು ಹಾಗೂ ಶಾಸಕರು ಸದನಕ್ಕೆ ಆಗಮಿಸುವುದು ಕಷ್ಟವಿರುವುದರಿಂದ ಈ ನಿರ್ಣಯ ಎದುರಿಸಿ ಗೆಲ್ಲುವುದು ಸಹಜವಾಗಿಯೇ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಾಗಿ ಪರಿಣಮಿಸಿದೆ. ಗುರುವಾರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ನೋಟಿಸ್‌ ನೀಡಲಾಗಿದ್ದು, …

Read More »

ಈ ವರ್ಷ ವ್ಯಾಕ್ಸಿನ್‌ ಅನುಮಾನ : ಜನರೇ ಎಚ್ಚರ

ಬೆಂಗಳೂರು : ಕೊರೋನಾ ಸೋಂಕಿಗೆ ಪ್ರಸಕ್ತ ವರ್ಷದಲ್ಲಿ ವ್ಯಾಕ್ಸಿನ್‌ ಬರುವುದು ಬಹುತೇಕ ಅನುಮಾನ. ಜತೆಗೆ, ಈ ಹಂತದಲ್ಲಿ ಲಾಕ್ಡೌನ್‌ ಮಾಡುವುದು ಸಹ ಪ್ರಯೋಜನಕಾರಿಯಲ್ಲ. ಹೀಗಾಗಿ ಸಾರ್ವಜನಿಕರೇ ಹೆಚ್ಚು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಕೊರೋನಾ ಟಾಸ್ಕ್‌ಫೋರ್ಸ್‌ ಸದಸ್ಯರಾದ ಡಾ.ಸಿ.ಎನ್‌. ಮಂಜುನಾಥ್‌ ಹೇಳಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರೂ ಆದ ಮಂಜುನಾಥ್‌ ಅವರ ಪ್ರಕಾರ, ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಈಗಾಗಲೇ ಸೋಂಕು ಹರಡಿರುವುದರಿಂದ ಈ ಹಂತದಲ್ಲಿ …

Read More »