Breaking News

ಬೆಂಗಳೂರು

ಗೂಡ್ಸ್ ರೈಲು ಅಡಿಗೆ ಬಿದ್ದ ಎರಡು ವರ್ಷದ ಬಾಲಕ ಬಚಾವ್​ ಆಗಿದ್ದು ಹೇಗೆ ನೋಡಿ..

ಫರೀದಾಬಾದ್​: ಹರಿಯಾಣದ ಫರೀದಾಬಾದ್ ಜಿಲ್ಲೆಯ ವಲ್ಲಭಗಢ ರೈಲ್ವೆ ನಿಲ್ದಾಣದಲ್ಲಿ ಎರಡು ವರ್ಷದ ಬಾಲಕನೊಬ್ಬ ಗೂಡ್ಸ್ ರೈಲಿನ ಅಡಿಗೆ ಬಿದ್ದು ಅದೃಷ್ಟವಶಾತ್ ಒಂದಿನಿತೂ ಗಾಯವಿಲ್ಲದೆ ಬಚಾವ್ ಆಗಿದ್ದಾನೆ. ಈ ಕುರಿತ ವಿಡಿಯೋ ವೈರಲ್​ ಆಗಿದೆ. ಗೂಡ್ಸ್ ರೈಲ್​ ವೇಗವಾಗಿ ಸಂಚರಿಸುತ್ತಿದ್ದ ವೇಳೆ, ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹಳಿಯ ಮೇಲೆ ಈ ಬಾಲಕ ಆಡವಾಡುತ್ತಿದ್ದ. ದೂರದಿಂದ ಇದನ್ನು ಗಮನಿಸಿದ ಗೂಡ್ಸ್ ರೈಲಿನ ಲೋಕೊ ಪೈಲಟ್ ಕೂಡಲೇ ತುರ್ತು ಬ್ರೇಕ್ ಹಾಕಿದ್ದ. ಆದರೆ, ಅಷ್ಟರಲ್ಲಾಗಲೇ ಸಮಯ …

Read More »

ಉದ್ಯಮಿ ಪುತ್ರನ ಅಪಹರಣ: ಪೊಲೀಸರ ಮೇಲೆ ಹಲ್ಲೆ, ಆರೋಪಿಗೆ ಶೂಟ್‌

ಬೆಂಗಳೂರು : ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ಐದು ಲಕ್ಷ ರು.ಗಳಿಗೆ ಬೇಡಿಕೆ ಇಟ್ಟಿದ್ದ ಕಿಡಿಗೇಡಿಗೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಕೋಣನಕುಂಟೆ ನಿವಾಸಿ ಕೃಷ್ಣ ಅಲಿಯಾಸ್‌ ಆಟೋ ಕೃಷ್ಣ ಎಂಬಾತನಿಗೆ ಗುಂಡೇಟು ಬಿದ್ದಿದ್ದು, ಹುಳಿಮಾವು ಸಮೀಪದ ಬೇಗೂರು-ಕೊಪ್ಪ ರಸ್ತೆಯಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದೆ. ಉದ್ಯಮಿ ಜೋಸೆಫ್‌ ಪುತ್ರ ಜೋಕಿಮ್‌ನನ್ನು ರಕ್ಷಿಸಲಾಗಿದೆ. ಬೇಗೂರು ಸುತ್ತಮುತ್ತ ಜೆಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಸಂತ್ರಸ್ತ ಜೊಕಿಮ್‌ ತಂದೆ ಜೋಸೆಫ್‌ …

Read More »

ಕಂಪ್ಲೀಟ್ ಲಾಕ್‍ಡೌನ್ ಮಾಡಿ:ಮಾಜಿಸ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯಗಳು ಕೊರೊನಾದೊಂದಿಗೆ ಬದುಕಿ ಎಂದು ಹೇಳುವ ಮೂಲಕ ನಮ್ಮ ಕೈಯಲ್ಲಿ ಸೋಂಕಿನ ನಿಯಂತ್ರಣ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ. ಶನಿವಾರ, ಭಾನುವಾರದ ಲಾಕ್‍ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಾಡಿದರೇ ಕಂಪ್ಲೀಟ್ ಲಾಕ್‍ಡೌನ್ ಮಾಡಬೇಕಿದೆ ಎಂದು ಮಾಜಿಸ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಈ ಹಿಂದೆ ಲಾಕ್‍ಡೌನ್ ತೆಗೆದು ಹಾಕಿದಾಗ ಕೋವಿಡ್ ಹೆಚ್ಚಳ ಆಗಿತ್ತು. ಆದರೆ ಆಗ ಲಾಕ್‍ಡೌನ್ ಮುಂದುವರಿಸಬೇಕಿತ್ತು. …

Read More »

ನಿನ್ನಗಲಿಕೆ ನೋವು ಹೇಳತೀರದು – ಪ್ರೀತಿಯ ಸುಬ್ಬಿ ಸಾವಿಗೆ ಡಾಲಿ ಸಂತಾಪ

ಬೆಂಗಳೂರು: ಚಿತ್ರೀಕರಣ ನಡೆಯುತ್ತಿದ್ದ ವೇಳೆ ಹೃದಯಾಘಾತವಾಗಿ ಖ್ಯಾತ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ. ಇವರ ಅಗಲಿಗೆ ನಟ ಧನಂಜಯ್ ಸಂತಾಪ ಸೂಚಿಸಿದ್ದಾರೆ. ನಟ ಧನಂಜಯ್ ಇನ್‍ಸ್ಟಾಗ್ರಾಂನಲ್ಲಿ ಅವರ ಜೊತೆಗಿರುವ ಫೋಟೋವೊಂದನ್ನು ಪೋಸ್ಟ್ ಮಾಡಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಪ್ರೀತಿಯ ಸುಬ್ಬಿ, ಸಿಕ್ಕಾಗಲೆಲ್ಲ ನಗಿಸುತ್ತ, ಬದುಕಿನ ಫಿಲಾಸಫಿಗಳ ನಿನ್ನದೇ ರೀತಿಯಲ್ಲಿ ಅದ್ಭುತವಾಗಿ ಹೇಳುತ್ತ, ಪ್ರೀತಿಯಿಂದ ತಬ್ಬಿ ಒಳ್ಳೆಯದೆ ಆಗುತ್ತದೆ ಎಂದು ಹರಸುತ್ತಿದ್ದೆ. ನಿನ್ನಗಲಿಕೆಯ ನೋವು ಹೇಳತೀರದು. ಶಾಂತಿಯಿಂದ ನಿದ್ರಿಸು …

Read More »

ಕೊರೊನಾ ಊಹೆಗೆ ನಿಲುಕದ ವೈರಸ್- ಮತ್ತೆ ಲಾಕ್‍ಡೌನ್ ಸುಳಿವು ನೀಡಿದ ಸಿಟಿ ರವಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಲ್ ಲಾಕ್‍ಡೌನ್ ಮಾತು ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸಚಿವ ಸಿಟಿ ರವಿ ಅವರು ಮತ್ತೆ ಲಾಕ್‍ಡೌನ್ ಮಾಡುವ ಕುರಿತ ಸುಳಿವನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಿಟಿ ರವಿ, ಕೊರೊನಾ ನಮ್ಮ ಊಹೆಗೂ ನಿಲುಕದ ವೈರಸ್ ಆಗಿದ್ದು, ಈ ಬಗ್ಗೆ ಯೋಚನೆ ಮಾಡಬೇಕಾದ ಸ್ಥಿತಿ ಬಂದಿದೆ ಎಂದು ತಿಳಿಸಿದರು ಸದ್ಯ ಆರೋಗ್ಯವಾಗಿದ್ದ ಕೇಂದ್ರ ಸಚಿವರು ವಿಧಿವಶರಾಗಿದ್ದು, ರಾಜ್ಯ, ದೇಶಕ್ಕೆ ದೊಡ್ಡ …

Read More »

ಸಿನಿ ಕಲಾವಿದರಾದ ರಾಕ್‍ಲೈನ್ ಸುಧಾಕರ್ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ.

ಬೆಂಗಳೂರು: ಹೃದಯಾಘಾತವಾಗಿ ಸ್ಯಾಂಡಲ್‍ವುಡ್‍ನ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿ …

Read More »

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಇಂದು ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದು ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಆವರಣದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದ್ದು, ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವಿಚಾರಣೆ ವೇಳೆ ರಾಗಿಣಿ ಅರ್ಜಿಗೆ ರಾಗಿಣಿ ಪರ ವಕೀಲರು ವಾದ ಮಂಡಿಸಿದ್ದರು. ಸಿಸಿಬಿ ಕೂಡ …

Read More »

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು. ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು …

Read More »

ಅಸಂಸದೀಯ ಪದ ಬಳಕೆ: ರಮೇಶ್‌ ಕುಮಾರ್‌- ಸುಧಾಕರ್ ಜಟಾಪಟಿ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಕಾಂಗ್ರೆಸ್‌ನ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್‌, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್‌ಗಳ ಖರೀದಿ ಮಾಡಲಾಗುತ್ತಿದೆ’ ಎಂದರು. ಆಗ ಎದ್ದು ನಿಂತ ರಮೇಶ್‌ ಕುಮಾರ್‌, ‘ಪಿಪಿಇ ಕಿಟ್‌ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್‌ಗಳನ್ನು ₹300ಕ್ಕೆ …

Read More »

ಲಾಕ್‍ಡೌನ್ ಅವಧಿಯನ್ನು ಮುಗಿಸಿ ಮತ್ತೆ ಚಿತ್ರೀಕಣಕ್ಕೆ ಹೊರಡಲು ಸಿದ್ಧರಾಗಿದ್ದಾರೆ. ಧ್ರುವ

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಲಾಕ್‍ಡೌನ್ ಅವಧಿಯನ್ನು ಮುಗಿಸಿ ಮತ್ತೆ ಚಿತ್ರೀಕಣಕ್ಕೆ ಹೊರಡಲು ಸಿದ್ಧರಾಗಿದ್ದಾರೆ. ಸದ್ಯಕ್ಕೆ ಧ್ರುವ ಬಹು ನಿರೀಕ್ಷೆಯ ‘ಪೊಗರು’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಈಗ ಮತ್ತೊಂದು ಹಾಡಿನ ಚಿತ್ರೀಕರಣಕ್ಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರತಂಡ ‘ಪೊಗರು’ ಸಿನಿಮಾದ ಟೈಟಲ್ ಸಾಂಗ್ ಸೆರೆಹಿಡಿಯುತ್ತಿದೆ. ಈ ಹಾಡನ್ನು ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗುತ್ತಿದೆ. ಅಲ್ಲದೇ ‘ಪೊಗರು’ ಚಿತ್ರದ ಟೈಟಲ್ ಹಾಡಿನ ಚಿತ್ರೀಕರಣಕ್ಕೆ ಬರೋಬ್ಬರಿ 1.50 ಕೋಟಿಯ …

Read More »