Breaking News

ಬೆಂಗಳೂರು

ಡಿಜೆ ಹಳ್ಳಿ ಗಲಭೆ ಪೂರ್ವ ನಿಯೋಜಿತವಲ್ಲ: ವರದಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಕೋಮು ಪ್ರೇರಿತವಾಗಲಿ, ಪೂರ್ವ ನಿಯೋಜಿತವಾಗಲಿ ಅಲ್ಲ. ಹಿಂದೂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಗಲಭೆ ನಡೆದಿಲ್ಲ. ಇದೊಂದು ಸಹಜವಾಗಿ ನಡೆದ ಘಟನೆ ಎಂದು ಬೆಂಗಳೂರು ನಾಗರೀಕ ಸಾಮಾಜಿಕ ಸಂಸ್ಥೆಗಳ ಸಹಯೋಗದಲ್ಲಿ ನಡೆಸಿದ ಸತ್ಯಶೋಧನಾ ವರದಿ ಅಭಿಪ್ರಾಯಪಟ್ಟಿದೆ.   ನಿನ್ನೆಯಷ್ಟೇ ವಿಡಿಯೋ ಸಂವಾದದ ಮೂಲಕ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ಬಿಡುಗಡೆ ಮಾಡಿದ ವರದಿಯಲ್ಲಿ ಘಟನೆಗೆ ಕಾರಣವಾಕ ಅಂಶ, …

Read More »

‘ಜಮೀರ್ ಒಬ್ರೆ ಕ್ಯಾಸಿನೋಗೆ ಹೋಗ್ತಿರಲಿಲ್ಲ, ಜೊತೆಗೆ ಇವ್ರೆಲ್ಲಾ ಇರ್ತಿದ್ರು’

ನಾಗಮಂಗಲ : ಕರ್ನಾಟಕದ ದುಡ್ಡೆಲ್ಲಾ ಶ್ರೀಲಂಕಾದ ಕ್ಯಾಸಿನೋಗೆ ಹೋಗುತ್ತಿದೆ. ರಾಜ್ಯದಲ್ಲಿ ಹೆಚ್ಚು ದುಡ್ಡು ಮಾಡಿ ಕ್ಯಾಸಿನೋದಲ್ಲಿ ಕಳೆದುಕೊಳ್ಳುತ್ತಿದ್ದಾರೆ, ಅದಕ್ಕಾಗಿ ಇಲ್ಲಿನ ದುಡ್ಡು ಇಲ್ಲೆ ಉಳಿಯಬೇಕಾದರೆ ಕ್ಯಾಸಿನೋ ಕರ್ನಾಟಕದಲ್ಲೇ ಆರಂಭಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡುವುದಾಗಿ ಶಾಸಕ ಸುರೇಶ್‌ಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣವೊಂದಿದ್ದರೆ ಪ್ರಪಂಚದಲ್ಲಿ ಸಿಗುವ ಎಲ್ಲ ವಸ್ತುಗಳು ಶ್ರೀಲಂಕಾದ ಕ್ಯಾಸಿನೋದಲ್ಲಿಯೇ ಸಿಗುತ್ತದೆ. ಇಲ್ಲಿ ಯಾರ್ಯಾರು ಹೆಚ್ಚಿಗೆ ದುಡ್ಡು ಮಾಡಿದ್ದಾರೋ ಅವರೆಲ್ಲರೂ ಅಲ್ಲಿ ಹೋಗಿ ದುಡ್ಡು ಕಳೆಯುತ್ತಿದ್ದಾರೆ. …

Read More »

ಚೌಕಾಬಾರ ಜಾಗ ಇದೀಗ ವಾಚನಾಲಯ; ವಾಹನ ಚಾಲಕರ ಟೈಂಪಾಸ್​ಗೆ ಸಚಿವರಿಂದ ಒಂದೊಳ್ಳೆ ಐಡಿಯಾ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳ ವಾಹನ ಚಾಲಕರಿಗೆ ಕಾಲ ಕಳೆಯುವುದೇ ಕಷ್ಟ! ಬೆಳಗ್ಗೆ ಕಚೇರಿಗೆ ಹೋಗುವ ಅಧಿಕಾರಿಗಳ ಬರುವುದು ಸಂಜೆಯವರೆಗೆ. ಅಲ್ಲಿಯ ವರೆಗೆ ಆ ವಾಹನಗಳ ಚಾಲಕರು ಟೈಮ್ ಪಾಸ್ ಮಾಡುವುದಕ್ಕೆ ವಿವಿಧ ರೀತಿ ಆಟ ಆಡುತ್ತಾರೆ. ಇದನ್ನು ಗಮನಿಸಿದ ಸಚಿವರು ಇವರಿಗೆ ಒಂದೊಳ್ಳೆ ಐಡಿಯಾ ಕೊಟ್ಟಿದ್ದಾರೆ. ಕೇವಲ ಐಡಿಯಾ ಮಾತ್ರವಲ್ಲ ಇದನ್ನು ಜಾರಿಗೊಳಿಸಿಯೂ ಸೈ ಎನಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು, …

Read More »

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆಗೆ ಸಹಕಾರ: ಸಿಎಂ

ಬೆಂಗಳೂರು: ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ವರ್ಚುಯಲ್ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಅಮೆರಿಕದ ರಾಯಭಾರ ಕಚೇರಿ ತೆರೆಯಬೇಕೆನ್ನುವುದು ನಮ್ಮ ಬಹು ದಿನಗಳ ಬೇಡಿಕೆಯಾಗಿದ್ದು, ಕಚೇರಿಯ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು. ಭಾರತದಲ್ಲಿರುವ 100 ಅಮೆರಿಕಾ ಸಂಸ್ಥೆಗಳ ಪೈಕಿ ಸಿಸ್ಕೋ, ಐಬಿಎಂ, ಇಂಟೆಲ್, ಜಿಇ, ಎಚ್ಪಿ, ಒರಾಕಲ್, ಯುಟಿಸಿ ಸೇರಿದಂತೆ 90 ಕಂಪನಿಗಳು ಬೆಂಗಳೂರಿನಲ್ಲಿಯೇ ನೆಲೆಸಿವೆ ಎಂದು …

Read More »

ಬಿಎಸ್‌ವೈ ಇಂದು ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಬೆಳಿಗ್ಗೆ ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಇದೇ 18 ರಂದು ಕರ್ನಾಟಕ ಭವನ ನಂ-1 ರ (ಕಾವೇರಿ) ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 19 ರಂದು ನಗರಕ್ಕೆ ವಾಪಸಾಗಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ …

Read More »

ಭಾಷೆಗಳ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ : ಹೆಚ್ಡಿಕೆ ಬೇಸರ

ಬೆಂಗಳೂರು, ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.     ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ …

Read More »

ಮೇಕೆದಾಟು ಯೋಜನೆ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ‌

ಬೆಂಗಳೂರು: ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …

Read More »

ಸಂಜನಾಗೆ ಇಂದೂ ಮುಂದುವರೆದ ಸಿಸಿಬಿ ಡ್ರಿಲ್

ಬೆಂಗಳೂರು,   ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಅವರ ವಿಚಾರಣೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ್ದಾರೆ. ಸಂಜನಾ ಅವರ ಪೊಲೀಸ್ ಕಸ್ಟಡಿ ಇಂದು ಮುಗಿಯುವ ಹಿನ್ನೆಲೆಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ತಲೆ ಮರೆಸಿಕೊಂಡಿರುವ ಶೇಖ್ ಫಾಝಿಲ್ ಎಲ್ಲಿದ್ದಾನೆ, ಆತನ ಚಟುವಟಿಕೆಗಳೇನು, ಕ್ಯಾಸಿನೋ ಪಾರ್ಟಿಗೆ ಯಾರ್ಯಾರನ್ನು ಕರೆದೊಯ್ಯುತ್ತಿದ್ದ ಎಂಬಿತ್ಯಾದಿಗಳ ಬಗ್ಗೆ ಸಂಜನಾ ಅವರಿಂದ ಉತ್ತರ ಪಡೆಯುತ್ತಿದ್ದಾರೆ. ಆದಿತ್ಯ ಆಳ್ವಾ ಅವರ ವಿಶಾಲವಾದ ಭವ್ಯ ಬಂಗಲೆಯಲ್ಲಿ ಪಾರ್ಟಿಗಳು ನಡೆಯುತ್ತಿತ್ತೇ , ನೀವೇನಾದರೂ …

Read More »

ಮನಮೋಹನ್ ಸಿಂಗ್, ಚಿದಂಬರಂ ಸೇರಿ 16 ಸಂಸದರು ಅಧಿವೇಶನಕ್ಕೆ ಗೈರು

ನವದೆಹಲಿ,  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದಂತೆ 16 ರಾಜ್ಯಸಭಾ ಸಂಸದರು ಸಂಸತ್ ಮುಂಗಾರು ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಮೇಲ್ಮನೆಗೆ ಮಾಹಿತಿ ನೀಡಿದ್ದಾರೆ. ಇಂದು ಸದನವು 14 ಸಂಸದರಿಗೆ ರಜೆ ಅನುಮೋದನೆ ನೀಡಿದ್ದರೆ, ಸೋಮವಾರ ತೃಣಮೂಲ ಕಾಂಗ್ರೆಸ್ ಸುಖೇಂಡು ಶೇಖರ್ ರಾಯ್ ಮತ್ತು ಸುಭಾಶಿಶ್ ಚಕ್ರವರ್ತಿ ಎಂಬ ಇಬ್ಬರು ಸಂಸದರಿಗೆ ರಜೆ ನೀಡಿತ್ತು. ಮನ್‍ಮೋಹನ್ ಸಿಂಗ್, ಚಿದಂಬರಂ ಮತ್ತು ಆಸ್ಕರ್ ಫರ್ನಾಂಡಿಸ್ (ಕಾಂಗ್ರೆಸ್), …

Read More »

ಶಿರಾ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣಕ್ಕೆ

ಬೆಂಗಳೂರು,  ಶಿರಾ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಅಭ್ಯರ್ಥಿಯಾಗಬೇಕೆಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಕೆ.ಎನ್.ರಾಜಣ್ಣ ಅವರ ಉಪಾಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಕೆ.ಎನ್.ರಾಜಣ್ಣ ಅವರು ಜಯಚಂದ್ರ ಅವರ ಅಭ್ಯರ್ಥಿಗಳಾಗಬೇಕೆಂದು …

Read More »