Breaking News
Home / ಜಿಲ್ಲೆ / ಬೆಂಗಳೂರು (page 330)

ಬೆಂಗಳೂರು

ಎರಡು ದಿನಗಳಿಂದ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನದಿಗಳು ಉಕ್ಕಿ ಹರಿಯುತ್ತಿವೆ.

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಹೀಗಾಗಿ  ನದಿಗಳು ಉಕ್ಕಿ ಹರಿಯುತ್ತಿವೆ. ನೇತ್ರಾವತಿ, ಅಘನಾಶಿನಿ, ಕಾವೇರಿ, ಕಾಳಿ ಸೇರಿ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ.  ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್​ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ನಂತರ ಮಳೆ ಆಗಿರಲೇ ಇಲ್ಲ. ಹೀಗಾಗಿ ರಾಜ್ಯದ ಜಲಾಶಯಗಳು ಅಂದುಕೊಂಡ ಮಟ್ಟಿಗೆ ತುಂಬಿಲ್ಲ. ಆದರೆ, ಈಗ …

Read More »

ಯುಪಿಎಸ್ ಸಿಯ 1 ಸಾವಿರ ರ್ಯಾಂಕ್ ಗಳಲ್ಲಿ ರಾಜ್ಯದ ಒಟ್ಟು 37 ಜನರು

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019 ನೇ ಸಾಲಿನ ಪ್ರತಿಷ್ಠಿತ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪ್ರದೀಪ್ ಸಿಂಗ್ ದೇಶಕ್ಕೆ ಮೊದಲ ರ್ಯಾಂಕ್ ಪಡೆಇದ್ದಾರೆ. ಯಶಸ್ವಿನಿ.ಬಿ ರಾಜ್ಯದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಚಿಕ್ಕಮಗಳೂರು ಮೂಲದ ಯಶಸ್ವಿನಿ 71ನೇ ಸ್ಥಾನ ಪಡೆದು ರಾಜ್ಯಕ್ಕೆ ಮೊದಲಿಗರಾಗಿದ್ದಾರೆ. ಇನ್ನು ಎಚ್. ವಿನೋದ್ ಪಾಟೀಲ್ (132) ಹಾಗೂ ಎಚ್.ಎಸ್.ಕೀರ್ತನಾ(167) ಕ್ರಮವಾಗಿ ರಾಜ್ಯಕ್ಕೆ ಎರಡನೇ ಹಾಗೂ ಮೂರನೇ ಸ್ಥಾನ ಗಳಿಸಿದ್ದಾರೆ. ಯುಪಿಎಸ್ ಸಿಯ 1 ಸಾವಿರ ರ್ಯಾಂಕ್ …

Read More »

ದೃಷ್ಟಿ ಸಮಸ್ಯೆಯುಳ್ಳ ಮೇಘನಾ, ಬಾಲನಟಿ ಕೀರ್ತನಾ ಯುಪಿಎಸ್​ಸಿ ಪರೀಕ್ಷೆ ಪಾಸ್; ಡಾ.ರಾಜ್​ಕುಮಾರ್ ಅಕಾಡೆಮಿಯಿಂದ 19 ಮಂದಿ ತೇರ್ಗಡೆ

ಬೆಂಗಳೂರು; ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2019ನೇ ಸಾಲಿನ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಕರ್ನಾಟಕದಿಂದ ಒಟ್ಟು 37 ಮಂದಿ ತೇರ್ಗಡೆಯಾಗಿದ್ದಾರೆ. ವಿಶೇಷ ಅಂದರೆ ಈ 37 ಮಂದಿಯಲ್ಲಿ 19 ಮಂದಿ ಡಾ.ರಾಜ್​ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ ಇನ್ನು ವಿಶೇಷ ಅಂದರೆ ಇದೇ ಅಕಾಡೆಮಿಯಿಂದ ತೇರ್ಗಡೆಯಾದ ಯುಪಿಎಸ್​ಸಿ ಪರೀಕ್ಷೆಯಲ್ಲಿ 465ನೇ ರ್ಯಾಂಕ್ ಪಡೆದಿರುವ ಮೇಘನಾ ಎಂಬುವವರಿಗೆ ಪೂರ್ಣಪ್ರಮಾಣದಲ್ಲಿ ಕಣ್ಣು ಕಾಣುವುದಿಲ್ಲ. …

Read More »

ರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಹೈ ಅಲರ್ಟ್..!

ಬೆಂಗಳೂರು:ಅಯೋಧ್ಯೆಯಲ್ಲಿ ನಾಳೆ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ರಾಜಧಾನಿ ಬೆಂಗಳೂರು,ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಡಿಕೇರಿ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ಕಲಬುರಗಿ, ಸೇರಿದಂತೆ ರಾಜ್ಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಈ ಸಂಬಂಧ …

Read More »

ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್

ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …

Read More »

24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್​ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ. 24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್​​ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್​​ಚಾರ್ಜ್​ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್​​ಚಾರ್ಜ್​ …

Read More »

ಬೆಡ್ ಖಾಲಿ ಇದೆ, ಐಸಿಯು ಖಾಲಿ ಇದೆ ಕೊರೊನಾ ರೋಗಿಗಳೇ ಬನ್ನಿ ಬನ್ನಿ” ಎಂದು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಭರ್ಜರಿ ಆಫರ್ ಕೊಟ್ಟಿದೆ.

ಬೆಂಗಳೂರು: “ಬೆಡ್ ಖಾಲಿ ಇದೆ, ಐಸಿಯು ಖಾಲಿ ಇದೆ ಕೊರೊನಾ ರೋಗಿಗಳೇ ಬನ್ನಿ ಬನ್ನಿ” ಎಂದು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಭರ್ಜರಿ ಆಫರ್ ಕೊಟ್ಟಿದೆ. ನಗರದಲ್ಲಿ ಶೇ.50ರಷ್ಟು ಬೆಡ್ ಬಿಟ್ಟು ಕೊಡುವುದಕ್ಕೆ ಕಳ್ಳಾಟ ವಾಡುತ್ತಿರುವ ಖಾಸಗಿ ಆಸ್ಪತ್ರೆಯ ಮಧ್ಯೆ ಲಗ್ಗೆರೆಯ ‘ಬೆಥಲ್ ಮೆಡಿಕಲ್ ಮಿಷನ್’ ಆಸ್ಪತ್ರೆ ಸೇವಾ ಮನೋಭಾವ ಹೊಂದಿದೆ. ಈ ಡಿಸೆಂಬರಿನಲ್ಲಿ ಉದ್ಘಾಟನೆಯಾಗಬೇಕಾಗಿದ್ದ ಆಸ್ಪತ್ರೆಯನ್ನು ಸಂಪೂರ್ಣ ಕೊರೊನಾ ರೋಗಿಗಳಿಗೆ ಮೀಸಲಿಟ್ಟಿದೆ. ಬರೋಬ್ಬರಿ 400 ಬೆಡ್, 12 ಐಸಿಯು ವೆಂಟಿಲೇಟರ್ ಬೆಡ್ …

Read More »

ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕೊವಿಡ್ ತಗುಲಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ …

Read More »

ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲು

ಬೆಂಗಳೂರು: ಮಣಿಪಾಲ್ ಆಸ್ಪತ್ರೆ ರಾಜ್ಯ ರಾಜಕಾರಣದ ಕೇಂದ್ರ ಬಿಂದು ಆಗಿದೆ. 24 ಗಂಟೆಯ ಅಂತರದಲ್ಲಿ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಯಾಕಂದ್ರೆ ಇದೇ 24 ಗಂಟೆಯ ಅಂತರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಪ್ರಭಾವಿ ರಾಜಕೀಯ ನಾಯಕರು ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಷ್ಟೇ ಅಲ್ಲ ಒಂದೇ ಫ್ಲೋರ್​ನಲ್ಲಿದ್ದಾರೆ. ಅದ್ರಲ್ಲೂ ಒಂದೇ ಸಾಲಿನಲ್ಲಿರೋ ರೂಮ್ …

Read More »

ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲು

ಬೆಂಗಳೂರು: ಮಣಿಪಾಲ್ ಆಸ್ಪತ್ರೆ ರಾಜ್ಯ ರಾಜಕಾರಣದ ಕೇಂದ್ರ ಬಿಂದು ಆಗಿದೆ. 24 ಗಂಟೆಯ ಅಂತರದಲ್ಲಿ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಯಾಕಂದ್ರೆ ಇದೇ 24 ಗಂಟೆಯ ಅಂತರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಪ್ರಭಾವಿ ರಾಜಕೀಯ ನಾಯಕರು ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಷ್ಟೇ ಅಲ್ಲ ಒಂದೇ ಫ್ಲೋರ್​ನಲ್ಲಿದ್ದಾರೆ. ಅದ್ರಲ್ಲೂ ಒಂದೇ ಸಾಲಿನಲ್ಲಿರೋ ರೂಮ್ …

Read More »