ಬೆಂಗಳೂರು: ಕೊರೊನಾ ಪರಿಹಾರಕ್ಕಾಗಿ ಪ್ರಧಾನಿ ಮೋದಿ ಸ್ಥಾಪಿಸಿದ ‘ಪಿಎಂ ಕೇರ್ಸ್’ ನಿಧಿಗೆ ಅಪ್ಪ ಅಮ್ಮನೆ ಇಲ್ಲವಂತೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ. ಕೊರೊನಾ ಹೆಸರಲ್ಲಿ ಪ್ರಧಾನಿ ಮೋದಿ ಅವರು ಸಂಗ್ರಹಿಸಿದ ಹಣವನ್ನು ತಮ್ಮ ಮನೆಯ ಖರ್ಚಿಗೆ ಬಳಸುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಫೇಸ್ಬುಕ್ನಲ್ಲಿ ಪೋಸ್ಟ್ ಹಾಕುವ ಮೂಲಕ ಪಿಎಂ ಕೇರ್ ಫಂಡ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ. “ಕೊರೊನಾ ಪರಿಹಾರಕ್ಕಾಗಿ ಮೋದಿ ಸ್ಥಾಪಿಸಿದ ‘ಪಿಎಂ …
Read More »ಆಯುಷ್ ಇಲಾಖೆ ಅಧಿಕಾರಿ ವರ್ತನೆ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ಹಿಂದಿ ಮಾತನಾಡಲು ಬಾರದವರು ತರಬೇತಿಯಿಂದ ಹೊರ ನಡೆಯಬಹುದು ಎಂದು ತಾಕೀತು ಮಾಡಿದ್ದ ಆಯುಷ್ ಇಲಾಖೆ ಅಧಿಕಾರಿ ವರ್ತನೆ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಆಯುಷ್ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಹಿಂದಿ ಮಾತನಾಡಲು ಬಾರದವರು ತರಬೇತಿಯಿಂದ ಹೊರ ನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್ …
Read More »ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಜನ ಮಾಂಸದ ಅಂಗಡಿಗಳ ಮುಂದೆ
ಬೆಂಗಳೂರು: ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಜನ ಮಾಂಸದ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತು ಮಾಂಸ ಖರೀದಿಸುತ್ತಿದ್ದು, ಒಂದು ತಿಂಗಳಿಂದ ಬಿಕೋ ಎನ್ನುತ್ತಿದ್ದ ಮಟನ್ ಅಂಗಡಿಗಳು ಇಂದು ಫುಲ್ ಆಗಿವೆ.ಕೊರೊನಾ ನಿಯಮಗಳನ್ನು ಪಾಲನೆ ಮಾಡುತ್ತಲೇ ಸಾಲುಗಟ್ಟಿ ನಿಂತು ಗ್ರಾಹಕರು ಮಾಂಸ ಖರೀದಿಸುತ್ತಿದ್ದಾರೆ. ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸೈನಿಟಸರ್ ಬಳಸುತ್ತಿದ್ದಾರೆ. ಈ ಮೂಲಕ ಕೊರೊನಾ ನಿಯಮಗಳನ್ನು ಪಾಲಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶ್ರಾವಣ ಮಾಸ ಹಿನ್ನೆಲೆ ಕಳೆದ ನಾಲ್ಕು ವಾರದಿಂದ ಮಟನ್ ಶಾಪ್ ಗಳು …
Read More »ದುಡ್ಡು ಕೊಟ್ರೆ ರಾಜ್ಯಕ್ಕೆ ಪಾಸ್ ಇಲ್ಲದಿದ್ರು ಸಿಗುತ್ತೆ ಎಂಟ್ರಿ
ಬೆಂಗಳೂರು: ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ಅಲ್ಲಿನ ಜನಕ್ಕೆ ಪಾಸ್ ಇದ್ದರೆ ಮಾತ್ರ ಕರ್ನಾಟಕಕ್ಕೆ ಪ್ರವೇಶ ಸಿಗುತ್ತದೆ. ಆದರೆ ಅಲ್ಲಿನ ಪೊಲೀಸರಿಗೆ ಸ್ವಲ್ಪ ಹಣ ಕೊಟ್ಟರೆ ಯಾವುದೇ ಪಾಸ್ ಇಲ್ಲದಿದ್ದರೂ ರಾಜ್ಯಕ್ಕೆ ಎಂಟ್ರಿ ಕೊಡಿಸುತ್ತಾರೆ. ಕರ್ನಾಟಕ ಸರ್ಕಾರದ ನಿರ್ಲಕ್ಷ ತಮಿಳುನಾಡು ಪೊಲೀಸರಿಗೆ ವರದಾನವಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ತಳಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರಿಗೆ ಹಣ ನೀಡಿದ್ರೆ ಕರ್ನಾಟಕ ಪ್ರವೇಶಿಸಬಹುದು. ತಮಿಳುನಾಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆ …
Read More »ಗಣಪನ ಅವತಾರದಲ್ಲಿ ಜೂ.ಯಶ್ ಮಿಂಚಿಂಗ್
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಆಗಾಗ ತಮ್ಮ ಮಕ್ಕಳ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಐರಾ ಮತ್ತು ಜೂ.ಯಶ್ ಫೋಟೋಗಳನ್ನ ಶೇರ್ ಮಾಡಿದ ಕ್ಷಣಾರ್ಧದಲ್ಲಿ ವೈರಲ್ ಆಗುತ್ತೆ. ಇದೀಗ ನಟ ಯಶ್ ಪುತ್ರ ಗಣಪನ ಅವತಾರದಲ್ಲಿ ಮಿಂಚಿದ್ದಾನೆ. ಇತ್ತೀಚಿಗೆ ಕೃಷ್ಣ ಜನ್ಮಾಷ್ಟಮಿ ದಿನ ಐರಾ ಮತ್ತು ಜೂನಿಯರ್ ಯಶ್ಗೆ ರಾಧೆ ಹಾಗೂ ಕೃಷ್ಣನ ಉಡುಪು ಧರಿಸಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. …
Read More »ಇಬ್ಬರು ಶಾಸಕರಿಗೆ ಕೊರೋನಾ ಪಾಸಿಟಿವ್
ಬೆಂಗಳೂರು : ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೋನಾ ಪಾಸಿಟಿವ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ …
Read More »10 ತರಗತಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗೆ ಇದು ಪ್ರಥಮ ಪ್ರಯತ್ನ ಎಂದು ಪರಿಗಣಿಸಲಾಗುತ್ತಿದ್ದು, ಅಂಥವರು ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ. ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಆರಂಭವಾಗಲಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ. ಸೆಪ್ಟಂಬರ್ 21 …
Read More »ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆ.
ಬೆಂಗಳೂರು: ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, …
Read More »ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿದ್ದಾರೆ
ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ಮಾಡುವವರು ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯದ ಒತ್ತಡ ಸ್ವೀಕಾರ ಮಾಡಿ ಕೆಲಸ ಮಾಡುವವರು ಸರ್ಕಾರದಲ್ಲಿರಬೇಕು. ಇಲ್ಲದಿದ್ದರೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸಮಾಡಲಿ ಎಂದರು ಗರಂ ಆದರು ಪ್ರತಿಭಟನೆ ಕರೆ ಕೊಟ್ಟವರಿಗೆ ಗಣೇಶ ಹಬ್ಬದ ದಿನ ಆ ದೇವರು ಸದ್ಬುದ್ಧಿ ಕೊಡಲೆಂದು …
Read More »ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ. ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ …
Read More »
Laxmi News 24×7