Breaking News
Home / ಜಿಲ್ಲೆ / ಬೆಂಗಳೂರು (page 338)

ಬೆಂಗಳೂರು

ಬಿಬಿಎಂಪಿ ಆರೋಗ್ಯಾಧಿಕಾರಿಯ ಒಂದೇ ಕುಟುಂಬದ ಮೂವರು ಕೊರೋನಾಗೆ ಬಲಿ..!

ಬೆಂಗಳೂರು, ಜು.24- ಬಿಬಿಎಂಪಿ ಆರೋಗ್ಯಾಧಿಕಾರಿ ಕುಟುಂಬದ ಮೂವರು ಕೊರೊನಾಗೆ ಬಲಿಯಾಗಿರುವ ಘಟನೆ ಬೆಂಗಳೂರನ್ನು ಬೆಚ್ಚಿಬೀಳಿಸಿದೆ. ಕೇವಲ ನಾಲ್ಕು ದಿನಗಳಲ್ಲಿ ಈ ಕುಟುಂಬ ಮೂವರನ್ನು ಕಳೆದುಕೊಂಡಿದೆ. ಬಿಬಿಎಂಪಿ ಬೊಮ್ಮನಹಳ್ಳಿ ಆರೋಗ್ಯಾಧಿಕಾರಿ ಕುಟುಂಬದಲ್ಲಿ ಮೂವರು ಕೊರೊನಾಗೆ ತುತ್ತಾಗಿದ್ದಾರೆ. ಕಳೆದ ಸೋಮವಾರ ತಂದೆಯ ಸಾವಿನಿಂದ ಮನನೊಂದಿದ್ದ ಅಧಿಕಾರಿ ಬುಧವಾರ ತನ್ನ ಭಾವನನ್ನು ಕಳೆದುಕೊಂಡಿದ್ದಾರೆ. ಗುರುವಾರ ಅವರ ತಾಯಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಈ ಅಧಿಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ಈ ಕುಟುಂಬದಲ್ಲಿ ಮೂವರು …

Read More »

ಬೆಂಗಳೂರು ನಗರದಲ್ಲಿ ಕೋವಿಡ್‍ಗೆ ಪ್ರತಿದಿನ 50 ಜನ ಬಲಿಯಾಗುತ್ತಿದ್ದಾರೆ……!

ಬೆಂಗಳೂರು,ಜು.25- ಕೊರೋನಾದಿಂದ ಮೃತಪಟ್ಟಿರುವ ಅತಿ ಹೆಚ್ಚು ಸೋಂಕಿತರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು ಅದನ್ನು ಪತ್ತೆಹಚ್ಚಲು ಬಿಬಿಎಂಪಿ ಮುಂದಾಗಿದೆ. ನಗರದಲ್ಲಿ ಕೋವಿಡ್‍ಗೆ ಪ್ರತಿದಿನ 50 ಜನ ಬಲಿಯಾಗುತ್ತಿದ್ದಾರೆ. ಮರಣ ಹೊಂದಿದ ಅತಿ ಹೆಚ್ಚು ಸೋಂಕಿತರು ತೀವ್ರ ಉಸಿರಾಟ ತೊಂದರೆ, ಕ್ಯಾನ್ಸರ್, ಕಿಮೋಥೆರಪಿ ಪಡೆಯುತ್ತಿದ್ದವರಾಗಿದ್ದಾರೆ. ನಾನಾ ಖಾಯಿಲೆಗಳಿಂದ ಬಳಲುತ್ತಿರುವ ಸೋಂಕಿತರನ್ನು ಪತ್ತೆ ಹಚ್ಚಲು ಬಿಬಿಎಂಪಿ ಮುಂದಾಗಿದೆ. ವಿವಿಧ ಕಂಟೈನ್ಮೆಂಟ್ ಝೋನ್‍ನಲ್ಲಿರುವ ಕ್ಯಾನ್ಸರ್ ಕಿಮೋಥೆರಪಿ, ಎಚ್‍ಐವಿ, ಉಸಿರಾಟದ ತೊಂದರೆ ಇರುವ ರೋಗಿಗಳನ್ನು ಗುರುತಿಸಿ ಆಂಟಿಜೆನ್ …

Read More »

ಹೇಳಿದ್ದು 10,100 ಬೆಡ್ ಅಂತ,ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್‍ಗಳು ಮಾತ್ರ.

ಬೆಂಗಳೂರು,ಜು25- ಕೊರೋನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್‍ಗಳಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳು ಸಿಗುತ್ತಿಲ್ಲ. ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರು ಹೊರ ವಲಯದ ಮಾದಾವರದ ಬಿಐಇಸಿಯಲ್ಲಿ ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್‍ಗಳು ಮಾತ್ರ. ಇಲ್ಲಿ 10,100 ಬೆಡ್‍ಗಳ ಬೃಹತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಈವರೆಗೆ ಕೇವಲ 5 ಸಾವಿರ ಬೆಡ್‍ಗಳನ್ನು ಮಾತ್ರ ಕಲ್ಪಿಸಲಾಗಿದೆ. ಆದರೆ ಚಿಕಿತ್ಸೆಗೆ ಲಭ್ಯವಿರುವುದು 1 ಸಾವಿರ ಬೆಡ್‍ಗಳು ಮಾತ್ರ ಎಂದು ಸ್ವತಃ ಬಿಬಿಎಂಪಿ ಆಯುಕ್ತರೇ …

Read More »

ಸರ್ಕಾರಕ್ಕೆ ಸಿದ್ದು ಪಂಚಪ್ರಶ್ನೆ………

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ 2 ಸಾವಿರ ಕೋಟಿ ರೂ. ಹಗರಣದ ಆರೋಪ ಮಾಡಿದ ಬೆನ್ನಲ್ಲೇ ತಾನು ಹೆಣೆದ ಬಲೆಯಲ್ಲಿ ಬಿಜೆಪಿ ಸರ್ಕಾರ ಸಿಲುಕಿಕೊಳ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆ ಏಳಲು ಕಾರಣ ಸರ್ಕಾರದ ಅನುಮಾನದ ನಡೆ. ಯಾಕಂದ್ರೆ, ಕೊರೊನಾ ವೈದ್ಯಕೀಯ ಸಲಕರಣೆಗಳ ಖರೀದಿ ಆರೋಪ ಕೇಳಿ ಬಂದ ದಿನದಿಂದಲೂ ಸರ್ಕಾರದ ಪ್ರತಿಯೊಂದು ನಡೆಯೂ ಅನುಮಾನ ಮೂಡಿಸುವಂತೆ ಇದೆ. ಆರಂಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ತನಿಖೆಯನ್ನು ಸರ್ಕಾರ ತಡೆದಿತ್ತು. …

Read More »

ಬೆಂಗಳೂರಿಗರೇ ಹುಷಾರ್, ಯಾಮಾರಿದ್ರೆ ಕೊರೋನಾ ಹೆಗಲೇರುವುದು ಗ್ಯಾರಂಟಿ..!

ಬೆಂಗಳೂರು, ಜು.24- ಪ್ರತಿ ವಾರ್ಡ್‍ಗಳಲ್ಲೂ ಕೊರೊನಾ ತನ್ನ ರೌದ್ರನರ್ತನವನ್ನು ಮುಂದುವರಿಸುತ್ತಿದೆ. ಕ್ಷಣ ಕ್ಷಣಕ್ಕೂ ಕೊರೊನಾ ಪ್ರಕರಣಗಳು ದುಪ್ಪಟ್ಟಾಗುತ್ತಿವೆ. ನಮ್ಮ ವಾರ್ಡ್‍ಗಳಲ್ಲಿ ಹೆಚ್ಚೇನೂ ಕೊರೊನಾ ಕೇಸ್‍ಗಳಿಲ್ಲ ಎಂದು ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ. ಬೆಂಗಳೂರಿನ 198 ವಾರ್ಡ್‍ಗಳ ಪೈಕಿ 197 ವಾರ್ಡ್‍ಗಳಲ್ಲಿ ಕೊರೊನಾ ತನ್ನ ಕಬಂಧಬಾಹುವನ್ನು ಚಾಚಿದೆ. 197 ವಾರ್ಡ್‍ಗಳು ಕೂಡ ಡೇಂಜರ್ ಝೋನ್‍ನಲ್ಲಿವೆ. ಬೆಂಗಳೂರಿನ 41 ವಾರ್ಡ್‍ಗಳಲ್ಲಿ 100ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಇವೆ. 33 ವಾರ್ಡ್‍ಗಳಲ್ಲಿ 80 ರಿಂದ …

Read More »

ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಕೊರೋನಾ ಆಸ್ಫೋಟ, ಇಂದು 5007 ಮಂದಿಗೆ ಪಾಸಿಟಿವ್, 110 ಸಾವು..!

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಆಸ್ಫೋಟಗೊಂಡಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 5007 ಮಂದಿಗೆ ಪಾಸಿಟಿವ್ ಬಂದಿದ್ದು, 110 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 85870ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1724 ಏರಿಕೆಯಾಗಿದೆ.   ಇತ್ತ ರಾಜಧಾನಿ ಬೆಂಗಳೂರಲ್ಲೂ ಸಹ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು ಇಂದು 2267 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಜೊತೆಗೆ 50 ಮಂದಿ …

Read More »

ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ.: ಡಾ.ಕೆ.ಸುಧಾಕರ್

ಬೆಂಗಳೂರು: ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ. ಪ್ರಮಾಣಿಕವಾಗಿ ಕೆಲಸ ಮಾಡಿದ್ದೆವೆ ಎಂದರೆ ಭಯವೇಕೆ ? ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಿ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ  ಸಚಿವ ಡಾ.ಕೆ.ಸುಧಾಕರ್ ಅವರಿಗೆ ಸವಾಲು ಹಾಕಿದ್ದಾರೆ. ನಿನ್ನೆ ಸಚಿವ ಸುಧಾಕರ್ ಅವರ ಮಾತಿಗೆ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರಸ್ತಾವನೆ, ಮಂಜೂರಾತಿ, ಅನುಮೋದನೆ, ವೆಚ್ಚ ಅಂದರೆ ಏನು ಎಂದು ಗೊತ್ತಿಲ್ಲದೇ ನಾನು 13 ಬಜೆಟ್ ಮಂಡಿಸಿದ್ದೇನಾ..? ನಾನು …

Read More »

ಸರ್ಕಾರದ ಆದೇಶ ಪಾಲಿಸದ ಖಾಸಗಿ ಆಸ್ಪತ್ರೆಗಳು, ಅಧಿಕಾರಿಗಳಿಗೆ ಚಾಟಿ ಬೀಸಿದ ಸಿಎಂ..!

ಬೆಂಗಳೂರು,ಜು.24- ಸರ್ಕಾರದ ಆದೇಶವನ್ನು ಪಾಲನೆ ಮಾಡಲು ಮೀನಾಮೇಷ ಎಣಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಮತ್ತೆ ಚಾಟಿ ಬೀಸಿದ್ದಾರೆ. ಒಪ್ಪಂದದಂತೆ ಖಾಸಗಿ ಆಸ್ಪತ್ರೆಯವರು ಸರ್ಕಾರಕ್ಕೆ ಈವರೆಗೂ ಕೊಟ್ಟ ಭರವಸೆಯಂತೆ ಹಾಸಿಗೆಗಳನ್ನು ನೀಡದೆ ನಮ್ಮ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿನ ಬೆಲೆ ನೀಡುತ್ತಿಲ್ಲ. ಒಂದು ಹಂತದವರೆಗೂ ಸಹಿಸಿಕೊಳ್ಳಬಹುದು. ಖಾಸಗಿ ಆಸ್ಪತ್ರೆಗಳ ವರ್ತನೆ ಅತಿಯಾಗಿದೆ. ಕೂಡಲೇ ಕಾನೂನು ಕ್ರಮ ಜರುಗಿಸಿ ಎಂದು ಎಚ್ಚರಿಕೆ ಕೊಟ್ಟರು. …

Read More »

ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್‍ಡೌನ್

ಬೆಂಗಳೂರು: ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್‍ಡೌನ್ ಮಾಡಿರುವ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ. ಬಿಬಿಎಂಪಿಯ ಮಹಾ ಎಡವಟ್ಟು ಮಾಡಿಕೊಂಡಿದ್ದು, ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯ ಮನೆ ಬಾಗಿಲಿಗೆ ಅಡ್ಡಲಾಗಿ ಕಬ್ಬಿಣದ ಶೀಟ್ ಅಳವಡಿಕೆ ಮಾಡಿದ್ದರು. ಆ ಮೂಲಕ ಸೋಂಕಿತ ವ್ಯಕ್ತಿ ಮನೆಯಿಂದ ಹೊರಬರದಂತೆ ಸೀಲ್‍ಡೌನ್ ಮಾಡಲಾಗಿತ್ತು. ಶಾಂತಿನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಘಟನೆ ನಡೆದಿದೆ.ಅಧಿಕಾರಿಗಳ ಯಡ್ಡವಟ್ಟು ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು …

Read More »

ಮಕ್ಕಳ ಅಶ್ಲೀಲ ಫೋಟೋವನ್ನ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡ್ತಿದ್ದ ರೌಡಿಶೀಟರ್ ಬಂಧನ

ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ರೌಡಿಶೀಟರ್. ಆರೋಪಿ ಚಾಮರಾಜಪೇಟೆ ಮೂಲದವನಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದನು. ಬಂಧಿತ ಆರೋಪಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿ ಲೈಂಗಿಕ ಅಪರಾಧ ಮಾಡುತ್ತಿದ್ದನು. ಆರೋಪಿ ವಿರುದ್ಧ ಕ್ರಮ ಜರಗಿಸುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಸಾರ್ವಜನಿಕರು ದೂರು …

Read More »