Breaking News

ಬೆಂಗಳೂರು

ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ : ಮೂರು ದಿನದಿಂದ ಇದೇ ಟ್ಯಾಂಕ್‌ ನ ನೀರನ್ನು ನಿವಾಸಿಗಳು ಇದೇ ನೀರನ್ನು ಸೇವಿಸಿದ್ದಾರೆ.

ಬೆಂಗಳೂರು: ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕನ್ಯೂ ಟೌನ್ ನ ನಾಲ್ಕನೆ ಹಂತದಲ್ಲಿ ಘಟನೆ ನಡೆದಿದೆ. ಶುಕ್ರವಾರದಿಂದ ಕಾಣೆಯಾಗಿದ್ದ ಮಹಿಳೆ ಅಪಾರ್ಟ್ಮೆಂಟ್ ನ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದ್ದಾರೆ. ಶುಕ್ರವಾರ ಕಾಣೆಯಾದ ನಂತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಹಣಕಾಸಿನ‌ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ಆದರೆ ಕಳೆದ ಮೂರು …

Read More »

ಕರ್ನಾಟಕದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು 5324 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊವಿಡ್ ದೃಢಪಟ್ಟಿರುವುದು ಖಚಿತವಾಗಿದೆ. ಇಂದಿನ ವರದಿ ಬಳಿಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46923ಕ್ಕೆ ಏರಿಕೆಯಾಗಿದೆ. ನಗರದಲ್ಲಿಂದು 784 ಜನರು ಗುಣಮುಖರಾಗಿದ್ದು, 26 ಜನ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 917. ರಾಜ್ಯದಲ್ಲಿಂದು 75 ಮಂದಿ ಕೊರೊನಾಗೆ …

Read More »

ಹೈಕಮಾಂಡ್ ನಾಯಕರಿಗೆ ಶಾಕ್ ಕೊಟ್ಟ B.S.Y……….

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿಕೆ ಒಂದು ವರ್ಷದ ಸಂಭ್ರಮದಲ್ಲಿರುವಾಗಲೇ ಹೈಕಮಾಂಡ್‌ ನಾಯಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಕ್‌ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಘಟಕಕ್ಕೆ ಗೊತ್ತಿಲ್ಲದೆ ನಿಗಮ ಮಂಡಳಿಗೆ ಶಾಸಕರನ್ನು ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈಗ ಪಕ್ಷ, ಸಂಘದ ನಿಷ್ಠಾವಂತ ಕಾರ್ಯಕರ್ತರಿಗೂ ಮಣೆ ಹಾಕದೇ ನೇಮಿಸಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪಕ್ಷದ ನಾಯಕರ …

Read More »

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್‍ಡೌನ್ ಜಾರಿ ಇಲ್ಲ : ಸಿಎಂ

ಬೆಂಗಳೂರು,ಜು.27-ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಲಾಕ್‍ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೆ ಪುನರುಚ್ಚರಿಸಿದ್ದಾರೆ. ಇನ್ನು ಮುಂದೆ ಲಾಕ್‍ಡೌನ್ ಕುರಿತಂತೆ ನಾನು ಚರ್ಚೆಯನ್ನೇ ಮಾಡುವುದಿಲ್ಲ. ಈಗಾಗಲೇ 45 ದಿನ ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಪುನಃ ಅದರ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದರು. ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದ ಸವಾಲುಗಳ ವರ್ಷ, ಪರಿಹಾರದ …

Read More »

ಸರ್ಕಾರ  ನಾಲ್ವರು  ಶಾಸಕರ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದು ಆದೇಶ ಹೊರಡಿಸಿದೆ.

ಬೆಂಗಳೂರು: ಕೆಲ ಹಿರಿಯ ಶಾಸಕರು ನಿಗಮ ಸ್ಥಾನಕ್ಕೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ನಾಲ್ವರು  ಶಾಸಕರ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದು ಆದೇಶ ಹೊರಡಿಸಿದೆ. ಶಾಸಕರಾದ ಜಿ.ಎಚ್. ತಿಪ್ಪಾರಡ್ಡಿ, ಲಾಲನ್ ಮಂಡೆನ್, ಬಸವರಾಜ ದಡೆಸಗೂರು,  ಪರಣ್ಣ ಮುನವಳ್ಳಿ  ಅವರಿಗೆ ನೀಡಲಾದ ನಿಗಮ ಮಂಡಳಿ ಸ್ಥಾನವನ್ನು ವಾಪಸ್ ಪಡೆಯಲಾಗಿದೆ.  ಇಂದು ಮುಂಜಾನೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದರು.  ಸಚಿವ …

Read More »

ಮಧ್ಯರಾತ್ರಿ ‘ಬಿಗ್‍ಬಾಸ್’ ಖ್ಯಾತಿಯ ಕವಿತಾ ಗೌಡ ಮನೆಗೆ ಹೋಗಿ ಚಂದನ್ ಸರ್ಪ್ರೈಸ್

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್’ ಖ್ಯಾತಿಯ ಕಿರುತೆರೆ ನಟಿ ಕವಿತಾ ಗೌಡ ಮನೆಗೆ ಮಧ್ಯರಾತ್ರಿ ನಟ ಚಂದನ್ ಹೋಗಿ ಸರ್ಪ್ರೈಸ್ ಕೊಟ್ಟಿದ್ದಾರೆ. ಭಾನುವಾರ ಕವಿತಾ ಗೌಡ ಹುಟ್ಟುಹಬ್ಬ ಇತ್ತು. ಕೊರೊನಾ ಇರುವುದರಿಂದ ಮನೆಯಲ್ಲಿಯೇ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ನಟ ಚಂದನ್ 12 ಗಂಟೆಗೆ ಸರಿಯಾಗಿ ಕವಿತಾ ಗೌಡ ಮನೆಗೆ ಹೋಗಿ ಅವರಿಗೆ ಸರ್ಪ್ರೈಸ್ ನೀಡಿದ್ದಾರೆ. ಅಷ್ಟೇ ಅಲ್ಲದೇ ಕವಿತಾ ಗೌಡ ಹುಟ್ಟುಹಬ್ಬಕ್ಕೆ ಉಡುಗೊರೆಯನ್ನು ಕೊಟ್ಟಿದ್ದಾರೆ. “ಸ್ನೇಹಿತರ ಹುಟ್ಟುಹಬ್ಬದ …

Read More »

ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ.

ಕೊರೊನಾ ಎಫೆಕ್ಟ್ ನಿಂದ ಸಿನಿಮಾ ರಿಲೀಸ್ ಆಗ್ತಿಲ್ಲ. ಚಿತ್ರಮಂದಿರಕ್ಕೆ ಬಂದು ಸಿನಿಮಾ ಕಣ್ತುಂಬಿಕೊಳ್ಳೋ ಭಾಗ್ಯ ಸಿನಿರಸಿಕರ ಪಾಲಿಗೆ ಸದ್ಯಕ್ಕಿಲ್ಲ. ಹಾಗಂತ ನಮ್ಮ ಸಿನಿ ಪ್ರೇಮಿಗಳು ಸಿನಿಮಾ ನೋಡೋದು ಬಿಟ್ಟಿಲ್ಲ. ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ. ನಿಜ ಹೇಳ್ಬೇಕು ಅಂದ್ರೆ ಥಿಯೇಟರ್ ಅಂಗಳದಲ್ಲೂ ಸಿಗದ ಅದ್ಭುತ ರೆಸ್ಪಾನ್ಸ್ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಕನ್ನಡ ಸಿನಿಮಾಗಳಿಗೆ ಸಿಕ್ತಿದೆ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ ‘ನಮ್ ಗಣಿ …

Read More »

“ಯಾರು ಎಷ್ಟೇ ಟೀಕೆ ಮಾಡಿದರೂ ನಾನೆಂದೂ ದ್ವೇಷ ರಾಜಕಾರಣ ಮಾಡಲ್ಲ” : ಸಿಎಂ ಬಿಎಸ್ವೈ

ಬೆಂಗಳೂರು,ಜು.27- ನನ್ನನ್ನು ಎಷ್ಟೇ ಟೀಕೆ ಮಾಡಿದರೂ ನಾನು ಯಾರ ಬಗ್ಗೆಯೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ, ಸರ್ಕಾರದ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ನನ್ನನ್ನು ಎಷ್ಟೇ ಟೀಕೆ ಮಾಡಲಿ. ಇದರ ಬಗ್ಗೆ ಗಮನಹರಿಸುವುದಿಲ್ಲ. ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ತೀರ್ಮಾನಿಸಿದ್ದೇನೆ. ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದ್ದರೂ ಎಂದಿಗೂ ದ್ವೇಷ ರಾಜಕಾರಣ …

Read More »

ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ

ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು ರಾಜಕೀಯ ಮೊಗಸಾಲೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.  ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ವರ್ಷ ತುಂಬುತ್ತಿದ್ದಂತೆ ದೆಹಲಿಗೆ ಹಾರಿರುವ ಲಕ್ಷ್ಮಣ ಸವದಿ ಇಂದು ಬಿಜೆಪಿ ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ. ಮೊನ್ನೆಯಷ್ಟೇ ರಾಜ್ಯಪಾಲ ವಜೂಭಾಯ್ ವಾಲಾ ಕರೆಗೆ ಓಗೊಟ್ಟು ಸವದಿ ರಾಜಭವನಕ್ಕೆ ತೆರಳಿದ್ದರು. ಈ ವೇಳೆ ರಾಜ್ಯಪಾಲರು, ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವಂತೆ ಸವದಿಗೆ …

Read More »

ಸರ್ ನೀವು ನನ್ನ ಬದುಕಿಸಿದ್ದೀರಿ’ – ಕಿಚ್ಚನಿಗೆ ಜಯಶ್ರೀ ಧನ್ಯವಾದ

ಬೆಂಗಳೂರು: ಇತ್ತೀಚೆಗೆ ‘ಬಿಗ್‍ಬಾಸ್ ಸೀಸನ್ 3’ ರಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಟಿ ಜಯಶ್ರೀ ಫೇಸ್‍ಬುಕ್‍ನಲ್ಲಿ ಬರೆದುಕೊಳ್ಳುವ ಮೂಲಕ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು ಸುದೀಪ್ ಸರ್. ನೀವು ನನ್ನನ್ನು ಬದುಕಿಸಿದ್ದೀರಿ. ಸುದೀಪ್ ಅವರ ತಂಡದ ಸದಸ್ಯರು, ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾನು ತುಂಬಾ ಪ್ರೀತಿಸುತ್ತೇನೆ. …

Read More »