Home / ಜಿಲ್ಲೆ / ಬೆಂಗಳೂರು (page 36)

ಬೆಂಗಳೂರು

ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ.: C.M.

ಬೆಂಗಳೂರು: ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ. ರಸ್ತೆ, ಗಣಿಗಾರಿಕೆ, ಸೇತುವೆ ನಿರ್ಮಾಣ ಸೇರಿದಂತೆ ಎಲ್ಲಾ ವಲಯಗಳಲ್ಲಿ ಮೂಲಸೌಲಭ್ಯದಿಂದ ದೊಡ್ಡ ಬದಲಾವಣೆ ತರಬಹುದಾಗಿದ್ದು, ಇದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ, ಯಂತ್ರೋಪಕರಣಗಳು ಬಂದಿವೆ. ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಉದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿಎಂ ಬೊಮ್ಮಾಯಿ ಬೆಂಗಳೂರಿನ ಬಿಐಇಸಿಯಲ್ಲಿ ಮಂಗಳವಾರ ಆರಂಭವಾದ ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸ್ಕಾನ್ 2022 ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಕಂಪನಿಗಳ ನಾವೀನ್ಯತೆ, ಹೊಸ ಚಿಂತನೆಗಳ …

Read More »

ಸಭಾಪತಿ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಆಯ್ಕೆ

ಬೆಂಗಳೂರು:ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು ತಮ್ಮ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾದಂತ ಸಭಾಪತಿ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಆಯ್ಕೆ ಮಾಡಲಾಗಿದೆ.     ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು, ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನಿನ್ನೆ ಸಲ್ಲಿಸಿದ್ದರು. ಉಪ ಸಭಾಪತಿ ಇಲ್ಲದ ಕಾರಣ, ವಿಧಾನ ಪರಿಷತ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. …

Read More »

ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ

ಬೆಂಗಳೂರು: ಬೇಷರತ್ ಆಗಿ ಜೆಡಿಎಸ್ ಸೇರುತ್ತೇನೆ ಎಂದಿದ್ದ ಸಿ.ಎಂ.ಇಬ್ರಾಹಿಂ ಈಗ‌ ಪರಿಷತ್ ಸದಸ್ಯ ಸ್ಥಾನದ‌ ಮೇಲೆ ಕಣ್ಣಿಟ್ಟಿರುವ ವಿಚಾರ ಜೆಡಿಎಸ್ ನಾಯಕರಿಗೆ ಕಸಿವಿಸಿ ಸೃಷ್ಟಿಸಿದೆ. ಬದಲಾದ ಸನ್ನಿವೇಶದಲ್ಲಿ ಪರಿಷತ್ ಸ್ಥಾನಕ್ಕೆ ಒತ್ತಡ ಹಾಕುತ್ತಿರುವ ಇಬ್ರಾಹಿಂ, ನನಗೆ ಅವಕಾಶ ನೀಡಿದರೆ ಮುಸ್ಲಿಂ ಸಮುದಾಯಕ್ಕೆ ಒಳ್ಳೆಯ ಸಂದೇಶ ಕೊಟ್ಟಂತಾಗಲಿದೆ ಎಂಬ ದಾಳ ಉರುಳಿಸಿದ್ದಾರೆ. ಇಲ್ಲದೇ ಹೋದರೆ ಇಡೀ ಸಮುದಾಯ ಅನುಮಾನದಿಂದಲೇ ನೋಡುವಂತಾಗಲಿದೆ. ನನಗೆ ಪರಿಷತ್ ಸದಸ್ಯ ಸ್ಥಾನಕ್ಕೆ ಅವಕಾಶ ನೀಡಿ ಎಂದು ಇಬ್ರಾಹಿಂ …

Read More »

ಜಿ.ಪಂ-ತಾ.ಪಂ ಚುನಾವಣೆ: ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಜಿ.ಪಂ ಹಾಗೂ ತಾ.ಪಂ. ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮೇ 23ಕ್ಕೆ ಮುಂದೂಡಿದೆ. ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಿರುವುದರಿಂದ ಚುನಾವಣೆ ನಡೆಸಲು ವಿಳಂಬವಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಮೆಮೋ ಸಲ್ಲಿಸಿತ್ತು.   ಅದರಂತೆ, ನ್ಯಾಯಮೂರ್ತಿ ಎಸ್‌.ಜಿ. ಪಂಡಿತ್‌ …

Read More »

ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ

ಬೆಂಗಳೂರು: ಬಿಜೆಪಿಯ ರೀತಿ ಕಾಂಗ್ರೆಸ್ ನಲ್ಲೂ ಈಗ ಚುನಾವಣಾ ಗೆಲುವಿಗೆ ಲೆಕ್ಕಾಚಾರಗಳು ಪ್ರಾರಂಭವಾಗಿದ್ದು, ಹಾಲಿ ಶಾಸಕರ ಪೈಕಿ ಕೆಲವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಗೆಲ್ಲುವ ಸಾಮರ್ಥ್ಯ ಹೊಂದಿರುವವರಿಗೆ ಮಾತ್ರ ಮಣೆ ಹಾಕಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಸೋಲುವ ಸಾಧ್ಯತೆ ಇರುವ ಹಾಲಿ ಶಾಸಕರಿಗೆ ಟಿಕೆಟ್ ಕೊಡದಿರುವ ಬಗ್ಗೆ ಚರ್ಚೆ ನಡೆದಿದೆ.   ಕೆಲಸ ಮಾಡದ ಶಾಸಕರ ಕ್ಷೇತ್ರಗಳ ಮೇಲೆ ಹೆಚ್ಚಿನ ಗಮನಹರಿಸಲು ಮುಂದಾಗಿರುವ ನಾಯಕರು …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಡಿವೈಎಸ್ಪಿ ಆಪ್ತ ‘ಆರ್‌ಪಿಐ’ ಸೇರಿ ಇಬ್ಬರ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರ ಆಪ್ತ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್‌ಪಿಐ) ಜಿ. ಬಸವರಾಜ್ ಸೇರಿದಂತೆ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.   ‘ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕೋಳಿಗುಡ್ಡದ ಬಸವರಾಜ್, ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ವೃತ್ತಿ ಆರಂಭಿಸಿದ್ದರು. ಇನ್ನೊಬ್ಬ ಬಂಧಿತ ಸಿ.ಎಂ. ನಾರಾಯಣ, ಪಿಎಸ್‌ಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿ. ಇಬ್ಬರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ …

Read More »

ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

ಬೆಂಗಳೂರು: ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ. ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು …

Read More »

ಬೊಮ್ಮಾಯಿ, ಕಟೀಲ್‌ಗೆ ತರಾಟೆ – ಅಭಿವೃದ್ಧಿ ಬಗ್ಗೆ ಮಾತಾಡಿ ಎಂದು ಆರ್‌ಎಸ್‌ಎಸ್‌ ಚಾಟಿ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಹಾಗೂ ಬಿಜೆಪಿ ನಡವಳಿಕೆ ಬಗ್ಗೆ ಆರ್‌ಎಸ್‌ಎಸ್‌ ಗರಂ ಆಗಿದೆ. ಶನಿವಾರ ರಾತ್ರಿ ಮೂರು ಗಂಟೆಗಳ ಕಾಲ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ಕಿಡಿಕಾರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನೂ ಆರ್‌ಎಸ್‌ಎಸ್‌ ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ …

Read More »

ಸಿಎಂ ಹೆಗಲಿಗೆ ಸಂಪುಟ: ಅರುಣ್ ಸಿಂಗ್ ಹೇಳಿಕೆ | ಸಚಿವರ ಮೌನ ಕಾರ್ಯವೈಖರಿಗೆ ಕಿಡಿ

ಬೆಂಗಳೂರು: ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಬೇಕು, ಬಿಡಬೇಕು ಎನ್ನುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಷಯದಲ್ಲಿ ಮುಖ್ಯಮಂತ್ರಿಯದೇ ಪರಮಾಧಿಕಾರ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪುನರುಚ್ಚರಿಸಿದರು.   ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯದಮವರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಅದೇನಿದ್ದರೂ ಕಾಂಗ್ರೆಸ್​ನಲ್ಲಿದೆ, ಸದಾ ಗೊಂದಲದಲ್ಲಿ ಆ ಪಕ್ಷ ಮುಳುಗಿರುತ್ತದೆ ಎಂದರು. ‘ವರಿಷ್ಠರ ಒಪ್ಪಿಗೆಯಂತೆ ಮುಂದಿನ ನಡೆ ಎಂದು ಸಿಎಂ …

Read More »

ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಬೆಂಗಳೂರಿನ ಕೆಂಗೇರಿ ಫ್ಲೈಓವರ್​ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶ್​ನನ್ನು ಹಿಡಿಯಲು ಯತ್ನಿಸಿದ ಪಿಸಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.​ ಈ ವೇಳೆ ಆತನ ಮೇಲೆ ಗುಂಡು ಹಾರಿಸಲಾಗಿದೆ. ಬೆಂಗಳೂರು: ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದಆರೋಪಿಆಯಸಿಡ್ ನಾಗನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ. ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ್​, ನೈಸ್ ​ರಸ್ತೆ ಬಳಿ ವಾಹನ ನಿಲ್ಲಿಸದೆ ಬೆಂಗಳೂರಿನ ಕೆಂಗೇರಿ …

Read More »