Breaking News

ಬೆಂಗಳೂರು

ಕೊರೋನಾ ಭಯವಿಲ್ಲದೆ ಬೆಳ್ಳಂಬೆಳಗ್ಗೆ ಮಾಂಸ ಖರೀದಿಗೆ ಮುಗಿಬಿದ್ದ ಜನ..!

ಬೆಂಗಳೂರು, : ನಾಳೆ ಸೋಮವಾರ… ಮಂಗಳವಾರ ಶ್ರಾವಣ ಪ್ರಾರಂಭ… ನಾನ್‍ವೆಚ್ ತಿನ್ನಂಗಿಲ್ಲ… ಏನೇ ಆದ್ರೂ ಇವತ್ತು ತಿನ್ನಲೇಬೇಕು… ಕೊರೊನಾ ಒಂದು ಕಡೆ ಇರಲಿ ಎಂಬಂತೆ ನಾನ್‍ವೆಜ್ ಪ್ರಿಯರು ಇಂದು ಬೆಳ್ಳಂಬೆಳಗ್ಗೆ ಮಾಂಸ ಖರೀದಿಗಾಗಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದ ದೃಶ್ಯಗಳು ನಗರದಲ್ಲಿ ಕಂಡುಬಂದವು. ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದ್ದರೂ ಸಹ ನಾನ್‍ವೆಜ್ ಪ್ರಿಯರು ಬೆಳ್ಳಂಬೆಳಗ್ಗೆ ಚಿಕನ್, ಮಟನ್ ಹಾಗೂ ಫಿಷ್ ಖರೀದಿಸಲು ಅಂಗಡಿಗಳ ಮುಂದೆ ಸಾಲು ಸಾಲಾಗಿ ನಿಂತಿದ್ದರು. …

Read More »

ನೇಮಕಾತಿ ಮಾಡಿಕೊಳ್ಳಲು ವೈದ್ಯರು ಬರುತ್ತಿಲ್ಲ, ವೇತನ ಹೆಚ್ಚಿಸಿ: ಪಾಲಿಕೆ

ಬೆಂಗಳೂರು: ಬೆಂಗಳೂರಲ್ಲಿ ಕೊರೋನಾ ಚಿಕಿತ್ಸಾ ಕಾರ್ಯಕ್ಕೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸೂಚಿಸಿರುವ ವೈದ್ಯರು ಹಾಗೂ ಇತರೆ ಸಿಬ್ಬಂದಿಯ ಸಂಭಾವನೆ ಹೆಚ್ಚಳ ಮಾಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ಕೊರೋನಾ ಚಿಕಿತ್ಸೆಗೆ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ 300 ವೈದ್ಯರು, 600 ನರ್ಸ್‌ಗಳು ಸೇರಿ 1700 ವೈದ್ಯಕೀಯ ಸಿಬ್ಬಂದಿ ಹಾಗೂ ಡಿ ಗ್ರೂಪ್‌ ನೌಕರರನ್ನು 6 ತಿಂಗಳ ಅವಧಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿಗದಿತ ಮೊತ್ತದ ವೇತನ ಗೊತ್ತುಪಡಿಸಿ ಅನುಮತಿ …

Read More »

ದುಂದುವೆಚ್ಚ ಬಿಡಿ; ಆರೋಗ್ಯ ಸೌಕರ್ಯಕ್ಕೆ ಒತ್ತು ಕೊಡಿ: ಪಾಲಿಕೆ ಸದಸ್ಯ ಸಲಹೆ

ಬೆಂಗಳೂರು: ಕೊರೊನಾ ಸೋಂಕು ಹಬ್ಬುತ್ತಿರುವ ಈ ಸಂದರ್ಭದಲ್ಲಿ ಬಿಬಿಎಂಪಿ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಆರೋಗ್ಯ ಸೌಕರ್ಯ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದು ಪಾಲಿಕೆ ಸದಸ್ಯ ಎಂ.ಶಿವರಾಜು ಸಲಹೆ ನೀಡಿದರು. ಶಂಕರಮಠ ವಾರ್ಡ್‌ನಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾತನಾಡಿದರು. * ವಾರ್ಡ್‌ನಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಏನು ಕ್ರಮ ಕೈಗೊಳ್ಳಲಾಗಿದೆ? ಎಲ್ಲ ಬಡಾವಣೆಗಳ ಪ್ರಮುಖ ರಸ್ತೆ ಗಳಿಗೆ ಸೊಂಕು ನಿವಾರಕ ಸಿಂಪಡಿಸಿದ್ದೇವೆ. ಕೋವಿಡ್ ಪ್ರಕರಣ ಪತ್ತೆಯಾದವರ ಮನೆಗೆ, …

Read More »

ಮೃತರಿಗೆ ಲ್ಯಾಬ್‌ ಬದಲು ಆಯಂಟಿಜನ್‌ ಟೆಸ್ಟ್‌: ಸ್ವಂತ ಜಮೀನಿನಲ್ಲೇ ಸೋಂಕಿತರ ಅಂತ್ಯಕ್ರಿಯೆ

ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಿರ್ದಿಷ್ಟಅವಧಿಯೊಳಗೆ ಪೂರ್ಣಗೊಳ್ಳುವಂತೆ ಕಾಲಾವಧಿ ನಿಗದಿ ಮಾಡುವ ಹಾಗೂ ಪರೀಕ್ಷಾ ಫಲಿತಾಂಶ ತ್ವರಿತವಾಗಿ ಪಡೆಯಲು ಮೃತ ದೇಹಕ್ಕೂ ಆಯಂಟಿಜನ್‌ ಪರೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಸ್ವಯಂ ಜಮೀನಿನಲ್ಲಿಯೂ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಸ್ಕಾರಕ್ಕೆ ಸಂಬಂಧಿಸಿದ ಮಾರ್ಗಸೂಚಿಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಪ್ರಮುಖವಾಗಿ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ಇನ್ನು ಮುಂದೆ ಬಿಬಿಎಂಪಿ ಅಧಿಕಾರಿ ಹೋಗಿ ದೃಢಿಕರಿಸುವ …

Read More »

ಬೆಸ್ಕಾಂ 8 ಸಿಬ್ಬಂದಿಗೆ ಸೋಂಕು, 1912 ಸಹಾಯವಾಣಿ ಸಿಗಲ್ಲ, ಈ ನಂಬರ್‌ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಬೆಸ್ಕಾಂ ಸಹಾಯವಾಣಿ ಕೇಂದ್ರದಲ್ಲಿ ಕೆಲಸ ಮಾಡುವ ಎಂಟು ಮಂದಿ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಹಾಯವಾಣಿ ಕೇಂದ್ರವನ್ನೇ 48 ಗಂಟೆಗಳ ಕಾಲ ಸೀಲ್‌ಡೌನ್‌ ಮಾಡಲಾಗಿದೆ. ಹೀಗಾಗಿ ಬೆಸ್ಕಾಂ ವಿದ್ಯುತ್‌ ಅಡಚಣೆ ಜತೆಗೆ ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಪ್ರವೇಶ ನಿರಾಕರಣೆ, ಹಾಸಿಗೆ ಸಿಗದಿರುವ ಬಗ್ಗೆ ದೂರು ಕೊಡಲೂ ಸಹ ಅವಕಾಶ ಮಾಡಿಕೊಟ್ಟಿದ್ದ 1912 ಸಹಾಯವಾಣಿ ಮುಂದಿನ 48 ಗಂಟೆಗಳ ಕಾಲ ಲಭ್ಯವಿರುವುದಿಲ್ಲ. ಸಿಲಿಂಡರ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದ ರೋಗಿ ಹೀಗಾಗಿ …

Read More »

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಆಶಾ ಕಾರ್ಯಕರ್ತೆಯರು ಪ್ರಾಣ ಲೆಕ್ಕಿಸದೇ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವರಿಗೆ ನೀಡುತ್ತಿರುವ ಮಾಸಿಕ ವೇತನ 4,000 ರೂ ಕೆಲವರಿಗೆ 6,000 ರೂ ನೀಡಲಾಗುತ್ತಿದೆ. ಆದರೆ ಸರ್ಕಾರ ಬಜೆಟ್ ನಲ್ಲಿ 8 ರಿಂದ 9 …

Read More »

ಬೆಂಗ್ಳೂರಲ್ಲಿ 30 ಸಾವಿರ ಗಡಿ ಸನಿಹಕ್ಕೆ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರವೂ ಎರಡು ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, 49 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಶನಿವಾರ ನಗರದಲ್ಲಿ ಒಟ್ಟು 2,125 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ. ಈ ಪೈಕಿ 1,307 ಪುರುಷರು, 818 ಮಂದಿ ಮಹಿಳೆಯರಾಗಿದ್ದಾರೆ. ಈ ಮೂಲಕ ಬೆಂಗಳೂರಿನ ಒಟ್ಟು ಸೋಂಕಿತರ ಸಂಖ್ಯೆ 29,621ಕ್ಕೆ ಏರಿಕೆಯಾಗಿದೆ. ಬೆಸ್ಕಾಂ 8 ಸಿಬ್ಬಂದಿಗೆ ಸೋಂಕು, 1912 ಸಹಾಯವಾಣಿ ಸಿಗಲ್ಲ, ಈ ನಂಬರ್‌ಗೆ ವಾಟ್ಸಾಪ್ ಮಾಡಿ ಶನಿವಾರ ಮೃತಪಟ್ಟ49 ಮಂದಿಯಲ್ಲಿ …

Read More »

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದು ಇದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ 2012, ಮಗುವಿಗೆ ಮಾನಸಿಕ ಆರೋಗ್ಯ, ವೈದ್ಯಕೀಯ ನೆರವು, ಮಗು ಮತ್ತು ಮಗುವಿನ ಕುಟುಂಬದ ನಡುವೆ ಸಂಬಂಧ ಕಲ್ಪಿಸುವುದು ಮುಂತಾದ ವಿವಿಧ ರೀತಿಯ ಸಹಾಯವನ್ನು ಒದಗಿಸಲು ‘ಬೆಂಬಲಿಸುವ ವ್ಯಕ್ತಿಗಳನ್ನು(ಸಪೊರ್ಟ್ ಪರ್ಸನ್ಸ್)’ ನೇಮಕ …

Read More »

ರಾಜ್ಯದಲ್ಲಿ ವೆಂಟಿಲೇಟರ್ ಖರೀದಿ ಹಗರಣ ಆರೋಪ- ‘ಉತ್ತರ ಕೊಡಿ ಬಿಜೆಪಿ’ ಎಂದ ಡಿಕೆಶಿ

ಬೆಂಗಳೂರು: ಕೊರೊನಾ ಚಿಕಿತ್ಸಾ ಉಪಕರಣ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಲೆಕ್ಕಕೊಡಿ ಅಭಿಯಾನ ಆರಂಭಿಸಿದ್ದರು. ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ‘ಉತ್ತರ ಕೊಡಿ ಬಿಜೆಪಿ’ ಅಂತಾ ಸಮರ ಸಾರಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವೆಂಟಿಲೇಟರ್ ಹಗರಣದ ಆರೋಪ ಮಾಡಿದ್ದಾರೆ. ತಮಿಳುನಾಡು ಸರ್ಕಾರ ತಲಾ 4.78 ಲಕ್ಷ ರೂಪಾಯಿಗೆ ಖರೀದಿಸಿದ ವೆಂಟಿಲೇಟರ್ ಗೆ ಕರ್ನಾಟಕ ಸರ್ಕಾರ 18.20 ಲಕ್ಷ ರೂಪಾಯಿ …

Read More »

ಬೆಂಗಳೂರಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ?- ಸಚಿವರಲ್ಲಿ ಗೊಂದಲವೋ, ಗೊಂದಲ

ಬೆಂಗಳೂರು: ಲಂಗು ಲಗಾಮಿಲ್ಲದೇ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕೊರೊನಾ ಮಾರಿ ಬೆಂಗಳೂರಲ್ಲಿ ಕಂಟ್ರೋಲ್ ಸಿಗುತ್ತಿಲ್ಲ. ಒಂದು ವಾರ ಸಾವಿರ ರೇಂಜ್‍ನಲ್ಲಿದ್ದ ಸೋಂಕು ಈಗ 2 ಸಾವಿರ ರೇಂಜ್‍ಗೆ ಬಂದಿದೆ. ಕಳೆದ ಮೂರು ದಿನಗಳಿಂದ 2 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗ್ತಿವೆ. ಇದನ್ನರಿತ ಸರ್ಕಾರ ಒಂದು ವಾರ ಬೆಂಗಳೂರಿಗೆ ಬೀಗ ಜಡಿದಿದೆ. ಅದರಲ್ಲಿ ಈಗ 3 ದಿನ ಕಳೆದು ಹೋಗಿದೆ. ಉಳಿದಿರೋದು ಇನ್ನೂ ನಾಲ್ಕು ದಿನ ಮಾತ್ರ. ಅಷ್ಟರಲ್ಲಿ ಕೊರೊನಾ ಕಂಟ್ರೋಲ್‍ಗೆ ಸಿಗುತ್ತಾ? …

Read More »