Breaking News

ಬೆಂಗಳೂರು

ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು.

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿರುವ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು. ಕೋವಿಡ್‌ 19 ನಿಂದಾಗಿ ಈಗ ಇತರ ರೋಗಿಗಳಿಗೂ ಆಸ್ಪತ್ರೆಗಳಲ್ಲಿ ಬೆಡ್‌ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಬಿಬಿಎಂಪಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ಖಾಲಿ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಸಲು ಮುಂದಾಗಿದೆ. ಈ ಸಂಬಂಧ ಬಿಬಿಎಂಎಂಪಿಯ ಕೋವಿಡ್‌ 19 ವೆಬ್‌ಸೈಟ್‌ನಲ್ಲೇ …

Read More »

ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು

ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …

Read More »

ಉ. ಕರ್ನಾಟಕ, ಮಲೆನಾಡು, ಕರಾವಳಿ ಭಾಗದ ಹಲವೆಡೆ ಮಳೆ………….

ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದ ಹಲವೆಡೆ ಮಳೆ ಮುಂದುವರೆದಿದ್ದು, ಹಳ್ಳಕೊಳ್ಳಗಳು ತುಂಬುತ್ತಿವೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಕಂಡುಬರಲು ಶುರುವಾಗಿದೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತಿದೆ. ಇಂದು ನಡೆದ ಡಿಸಿಗಳ ಸಭೆಯಲ್ಲಿ ಮಳೆ ಮತ್ತು ಪ್ರವಾಹ ಸಂಬಂಧ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, ಹೆಚ್ಚು ಮಳೆ ಆಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಿದರು. ಮಹಾರಾಷ್ಟ್ರದ ಕೋಲ್ಹಾಪುರ ಡಿಸಿ ಜೊತೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ …

Read More »

ಬೆಂಗಳೂರು ಲಾಕ್‌ಡೌನ್ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಏನುರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು-ರಾಜ್ಯವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸಂಪೂರ್ಣವಾಗಿ ಸ್ತಬ್ಧಗೊಳ್ಳಲಿದ್ದು, ಅದಕ್ಕಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಗೊಂಡಿವೆ. ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದು ಭಾಗಗಳಲ್ಲಿ ಕೆಲವು ವಿನಾಯ್ತಿಗಳನ್ನು ಸರ್ಕಾರ ನೀಡಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದೆ. ಈ ಒಂದು …

Read More »

ಲಾಕ್‍ಡೌನ್ ಮಾರ್ಗಸೂಚಿ ಮಾರ್ಪಾಡು- ಮದ್ಯ ಮಾರಾಟಕ್ಕಿಲ್ಲ ಅವಕಾಶ

ಬೆಂಗಳೂರು: ಲಾಕ್‍ಡೌನ್ ಮಾರ್ಗಸೂಚಿಯನ್ನು ಸರ್ಕಾರ ಮಾರ್ಪಾಡು ಮಾಡಿದ್ದು, ಮದ್ಯ ಮಾರಾಟಕ್ಕೆ ನೀಡಿದ ಅನುಮತಿಯನ್ನು ಹಿಂಪಡೆದಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರು ಲಾಕ್ ಆಗಲಿದೆ. ಈ ಸಂಬಂಧ ಸರ್ಕಾರ ಪ್ರಕಟಿಸಿದ ಮೊದಲ ಮಾರ್ಗಸೂಚಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಬೆಳಗ್ಗೆ 10 ರಿಂದ ಸಂಜೆ 5ರವೆರೆಗೆ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿತ್ತು. ಕೇವಲ ಪಾರ್ಸೆಲ್ ನೀಡಬೇಕೆಂದು ಮಾರ್ಗಸೂಚಿಯಲ್ಲಿ ಹೇಳಿತ್ತು.ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತ ಸರ್ಕಾರ …

Read More »

ಬೆಂಗಳೂರು ಸೇರಿ ಯಾವ ಯಾವ ಜಿಲ್ಲೆಗಳಲ್ಲಿ ಲಾಕ್‍ಡೌನ್?

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ನಾಳೆ ರಾತ್ರಿಯಿಂದ ಒಂದು ವಾರದ ಮಟ್ಟಿಗೆ ಬೆಂಗಳೂರು ಅರ್ಧಂಬಂಧ ಲಾಕ್‍ಡೌನ್ ಆಗುತ್ತಿದೆ. ಆದರೆ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡೋ ವಿಚಾರವಾಗಿ ಸರ್ಕಾರ ದೊಡ್ಡ ಗೊಂದಲ ಸೃಷ್ಟಿಸಿದೆ. ಹೈರಿಸ್ಕ್ ಜಿಲ್ಲೆಗಳಲ್ಲಿ ಲಾಕ್‍ಡೌನ್ ಜಾರಿ ಮಾಡೋ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಹಿಂದೇಟು ಹಾಕಿದ್ರಾ ಎನ್ನುವ ಪ್ರಶ್ನೆ ಎದ್ದಿದೆ. ಬೆಂಗಳೂರು ಲಾಕ್‍ಡೌನ್ ವಿಚಾರದಲ್ಲಿ ಖಡಕ್ ನಿರ್ಣಯ ತೆಗೆದುಕೊಂಡ ಸಿಎಂ, ಜಿಲ್ಲೆಗಳ ಹೊಣೆಯನ್ನು ಉಸ್ತುವಾರಿ …

Read More »

ನಟ ದರ್ಶನ್ ಮೇಕಪ್ ಮ್ಯಾನ್ ಹೃದಯಾಘಾತದಿಂದ ಸಾವು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸ್ವತಃ ನಟ ದರ್ಶನ್ ಅವರೇ ಟ್ವೀಟ್ ಮಾಡಿದ್ದು, ಎರಡು ದಶಕಗಳಿಂದ ನನ್ನ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸೀನ ಅಲಿಯಾಸ್ ಶ್ರೀನಿವಾಸ್ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಬರೆದುಕೊಂಡು ಸಂತಾಪ …

Read More »

ಭಾರತದಲ್ಲಿ 75 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದೆ ಗೂಗಲ್‌

ಬೆಂಗಳೂರು: ಮುಂದಿನ ದಿನಗಳಲ್ಲಿ ಡಿಜಿಟಲ್‌ ಕ್ಷೇತ್ರದಲ್ಲಿ ಅದರಲ್ಲೂ ಭಾರತದಲ್ಲಿ ಭಾರೀ ಬೆಳವಣಿಗೆ ಆಗಲಿದೆ ಎಂಬುದನ್ನು ಊಹಿಸಿರುವ ಬಹುರಾಷ್ಟ್ರೀಯ ಕಂಪನಿಗಳು ಈಗ ದೇಶದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದು, ಗೂಗಲ್‌ ಒಟ್ಟು 10 ಶತಕೋಟಿ ಡಾಲರ್‌(75 ಸಾವಿರ ಕೋಟಿ ರೂ.) ಹೂಡಿಕೆ ಮಾಡುವುದಾಗಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಿದ ಬಳಿಕ ಗೂಗಲ್‌ ಕಂಪನಿಯ ಸಿಇಒ ಸುಂದರ್‌ ಪಿಚೈ 10 ಶತಕೋಟಿ ಡಾಲರ್‌ …

Read More »

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಸಿಎಂಗೆ ಡಿಸಿಎಂ ಸಲಹೆ

ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು‌‌ ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ …

Read More »

ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟ

ಬೆಂಗಳೂರು: ಮಾರ್ಚ್ 18ರ ಸುಮಾರಿಗೆ ಫಲಿತಾಂಶ ಬರಬಹುದೆಂದು ನಿರೀಕ್ಷಿಸಲಾಗಿದ್ದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್​ಬುಕ್ ಲೈವ್​ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ …

Read More »