Breaking News
Home / ಜಿಲ್ಲೆ / ಬೆಂಗಳೂರು (page 379)

ಬೆಂಗಳೂರು

ರೆಬೆಲ್‍ಸ್ಟಾರ್ ಬರ್ತ್‍ಡೇಗೆ ಡಿಫರೆಂಟಾಗಿ ವಿಶ್ ಮಾಡಿದ್ರು ನೀನಾಸಂ ಸತೀಶ್!

ಭೌತಿಕವಾಗಿ ಮರೆಯಾದರೂ ಪ್ರತಿಯೊಬ್ಬರ ಮನಸ್ಸುಗಳಲ್ಲಿಯೂ ಅಜರಾಮರವಾಗಿರುವವರು ರೆಬೆಲ್ ಸ್ಟಾರ್ ಅಂಬರೀಶ್. ಹುಸಿಮುನಿಸು, ಒಂದಷ್ಟು ಬೈಗುಳಗಳ ಮೂಲಕವೇ ಪ್ರಾಂಜಲ ಪ್ರೀತಿಯನ್ನು ಎಲ್ಲರತ್ತಲೂ ದಾಟಿಸುತ್ತಿದ್ದ, ಎದುರು ಯಾರೇ ನಿಂತರೂ ಬೆಚ್ಚಗಿನ ಸ್ನೇಹವನ್ನು ಮನಸಾರೆ ಪ್ರವಹಿಸುತ್ತಿದ್ದ ಅಂಬರೀಶ್‍ರ ಬಗ್ಗೆ ಒಂದೇ ಗುಕ್ಕಿನಲ್ಲಿ ವಿವರಿಸೋದು ಕಷ್ಟ. ಎಷ್ಟೇ ಮಾತಾಡಿದರೂ, ಬರೆದರೂ ಅದರ ನಿಲುಕಿಗೆ ಸಿಗದ ಅಸಂಗತ ವ್ಯಕ್ತಿತ್ವ ಹೊಂದಿದ್ದ ಅಂಬರೀಶ್ ಹುಟ್ಟಿದ ದಿನವಿಂದು. ಈ ಸಂದರ್ಭದಲ್ಲಿ ಬಹುತೇಕರು ತಂತಮ್ಮದ್ದೇ ಆದ ರೀತಿಯಲ್ಲಿ ವಿಶ್ ಮಾಡುತ್ತಿದ್ದಾರೆ. ಅಂಬರೀಶ್‍ರನ್ನು …

Read More »

ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆ………

ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,466 ಜನರು‌ ಹೊಸದಾಗಿ ಕೊರೋನಾ ಪೀಡಿತರಾಗಿದ್ದಾರೆ. ಇದರಿಂದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 1,65,799ಕ್ಕೆ ಏರಿಕೆಯಾಗಿದೆ. ಅಲ್ಲದೇ ಭಾರತ ಜಾಗತಿಕವಾಗಿ ಅತಿಹೆಚ್ಚು ಕೊರೋನಾ ಪೀಡಿತರಿರುವ ದೇಶಗಳ ಟಾಪ್ 10 ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಏರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಅಮೇರಿಕಾ ಮೊದಲ ಸ್ಥಾನದಲ್ಲಿದೆ. ಬ್ರಿಜಿಲ್ ಮತ್ತು ರಷ್ಯಾ‌ …

Read More »

ಬಿಜೆಪಿಯಲ್ಲಿನ ಗೊಂದಲಕ್ಕೆ ಶಾಸಕ ಉಮೇಶ್ ಕತ್ತಿ ಸ್ಪಷ್ಟನೆ……..

ಬೆಂಗಳೂರು: ಉತ್ತರ ಕರ್ನಾಟಕದ ಶಾಸಕರು ನಮ್ಮ ಮನೆಯಲ್ಲಿ ಊಟ ಮಾಡಿದ್ದರು. ಆದರೆ ಈ ವೇಳೆ ಯಾವುದೇ ಬಂಡಾಯದ ಚರ್ಚೆಯಾಗಿಲ್ಲ, ಅಸಮಾಧಾನ ಇಲ್ಲ ಎಂದು ಶಾಸಕ ಉಮೇಶ್ ಕತ್ತಿ ಸ್ಪಷ್ಟಪಡಿಸಿದರು. ಶಾಸಕ ಉಮೇಶ್ ಕತ್ತಿ, ಕೊರೊನಾದಿಂದ ಬೆಂಗಳೂರಿನಿಂದ ಬಂದಂತಹ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಶಾಸಕರಿಗೆ ತೊಂದರೆಯಾಗಿದೆ. ಏಳು ದಿನಗಳ ಹಿಂದೆ ನಮ್ಮ ಮನೆಯಲ್ಲಿ ಊಟ ಮಾಡಿದ್ವಿ. ಇದೇ ಗುರುವಾರ ಮತ್ತೆ ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ವಿ. ಇದು ಮುಖ್ಯಮಂತ್ರಿ ಅವರ …

Read More »

ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು:ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಇಂದು ಬಂಡಾಯದ ವಿಚಾರವಾಗಿ ಮಾಧ್ಯಮಗಳ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ನನ್ನನ್ನು ಕರೆದಿದ್ದು ನಿಜ. ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಹೇಳಿದ್ದೇನೆ. ಜೊತೆಗೆ ಹಣ ಬಿಡುಗಡೆ ಆಗಿಲ್ಲ ಎಂದು ಬೇಜಾರ್ ಆಗಿದೆ ಎಂದು ಸಿಎಂ …

Read More »

ಜೂ.1ರಿಂದ ವಿಶೇಷ ರೈಲುಗಳು ಸಂಚಾರ ಆರಂಭ……….

ಬೆಂಗಳೂರು, ಮೇ 29- ವಲಸೆ ಕಾರ್ಮಿಕರು ತಮ್ಮ ಸ್ವಸ್ಥಾನಗಳಿಗೆ ಮರಳಲು ಅನುಕೂಲವಾಗುವಂತೆ ಭಾರತೀಯ ರೈಲ್ವೆ ದೇಶಾದ್ಯಂತ ಆರಂಭಿಸಿರುವ ಶ್ರಮಿಕ್ ವಿಶೇಷ ರೈಲು ಸೇವೆಯನ್ನು ಅತಿ ಜರೂರು ಇದ್ದ ಸಂದರ್ಭದಲ್ಲಿ ಮಾತ್ರ ವಯೋ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ. ರಕ್ತದೊತ್ತಡ, ಮಧುಮಹ, ಹೃದಯ ರೋಗ, ಕ್ಯಾನ್ಸರ್ ಮತ್ತಿತರ ರೋಗದಿಂದ ನರಳುತ್ತಿರುವವರು, 65 ವರ್ಷ ಮೇಲ್ಪಟ್ಟವರು 10 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಅಗತ್ಯವಿದ್ದರೆ ಮಾತ್ರ ಈ …

Read More »

‘ಪ್ರತ್ಯೇಕ ಸಭೆ ನಡೆಸಿದ್ದು ನಿಜ’ : ಉಲ್ಟಾ ಹೊಡೆದ ಶಾಸಕ ಯತ್ನಾಳ್…………

ಬೆಂಗಳೂರು, ಮೇ 29- ನಾವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವದ ವಿರುದ್ಧವಾಗಲಿ ಅಥವಾ ಸರ್ಕಾರವನ್ನು ಪತನಗೊಳಿಸಲು ಪ್ರತ್ಯೇಕ ಸಭೆ ನಡೆಸಿಲ್ಲ ಎಂದು ವಿಜಾಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಒಂದೇ ದಿನದಲ್ಲೇ ಉಲ್ಟಾ ಹೊಡೆದಿದ್ದಾರೆ. ನಾವೆಲ್ಲರೂ ಪ್ರತ್ಯೇಕ ಸಭೆ ನಡೆಸಿದ್ದು ನಿಜ. ಅಲ್ಲಿ ಏನೇನು ಮಾತುಕತೆ ನಡೆದಿದೆ ಎಂಬುದರ ಬಗ್ಗೆ ಮಾಧ್ಯದವರ ಮುಂದೆ ಬಹಿರಂಗ ಪಡಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್ ಈ ಹಿಂದಿಗಿಂತಲೂ …

Read More »

ಲಾಕ್‍ಡೌನ್ 4.0 ಮುಗಿಯಲು ಇನ್ನೂ ಮೂರು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಜೂನ್ 1 ರಿಂದ ಹೊಸ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆ?………

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮಾಡಲಾಗಿದ್ದ ಲಾಕ್‍ಡೌನ್ 4.0 ಮುಗಿಯಲು ಇನ್ನೂ ಮೂರು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಜೂನ್ 1 ರಿಂದ ಹೊಸ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸುತ್ತಿದ್ದು, ಲಾಕ್‍ಡೌನ್ ಸ್ವರೂಪದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ ಲಾಕ್‍ಡೌನ್ ರಿಲೀಫ್ ಬಗ್ಗೆ ರಾಜ್ಯಗಳ ಅಭಿಪ್ರಾಯ ಪಡೆದಿದ್ದಾರೆ. ಹೀಗಾಗಿ ಜನರಿಗೆ ಜೂನ್ …

Read More »

ದಿ. 29.05.2020 ರ ನಂತರ ಯಾವುದೇ ದಿನದಂದು ಕೆಲಸ ಬಹಿಷ್ಕರಿಸಿ ಅನಿರ್ದಿಷ್ಟಾವಧಿ (ಅಸಹಕಾರ ಚಳುವಳಿ ಹೋರಾಟ) ಮುಷ್ಕರಕ್ಕಿಳಿಯುತ್ತಿದ್ದೆವೆಂದು ಸಂಘದಿಂದ ಸರ್ಕಾರಕ್ಕೆ ಅಂತಿಮ ಗಡುವು

  ಬೆಂಗಳೂರು :ಸರ್ಕಾರದ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ನಮ್ಮ ಬೇಡಿಕೆಗಳನ್ನು ನಿರ್ದಿಷ್ಟಾವಧಿಯಲ್ಲಿ (ಕಾಲಮಿತಿಯಲ್ಲಿ) ಈಡೇರಿಸಲು ಕ್ರಮವಹಿಸುವ ಬಗ್ಗೆ ಸನ್ಮಾನ ಸಚಿವರಿಗೆ ಹಾಗೂ ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕು. ಕ. ಸೇವೆಗಳು ಹಾಗೂ ವೈ. ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರಿಗೆ ಅಧಿಕೃತವಾಗಿ ಪತ್ರದ ಮುಖೇನ ಈಗಾಗಲೇ ತಿಳಿಸಲಾಗಿದೆ. ಅದಲ್ಲದೆ ಸಂಘದ ವತಿಯಿಂದ ಗೌರವಾಧ್ಯಕ್ಷರಾದ ಮಾನ್ಯ ಶ್ರೀ ಆಯನೂರು ಮಂಜುನಾಥ್ ರವರು ಸರ್ಕಾರದ ಅಪರ …

Read More »

ಕೊರೊನಾ ವಿರುದ್ಧ ಹೋರಾಟಲು ದೇಹಕ್ಕೆ ವಿಟಮಿನ್ ಡಿ ಅತ್ಯಗತ್ಯ

ಬೆಂಗಳೂರು: ವಿಶ್ವವನ್ನು ಕಾಡುತ್ತಿರುವ ಕೊರೊನಾ ಮಹಾಮಾರಿ ವಿರುದ್ಧ ಹೋರಾಡಲು ಹಲವು ತಜ್ಞರು ಲಸಿಕೆ ಕಂಡು ಹಿಡಿಯುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಇತ್ತ ಕೊರೊನಾ ದಿನದಿಂದ ದಿನಕ್ಕೆ ತನ್ನ ಕಬಂಧಬಾಹುಗಳನ್ನು ಚಾಚಿಕೊಳ್ಳುತ್ತಿರುವುದು ಬಹುದೊಡ್ಡ ಸವಾಲಾಗಿದೆ. ಲಾಕ್‍ಡೌನ್, ಸಾಮಾಜಿಕ ಅಂತರ, ಶುಚಿತ್ವ ಕುರಿತು ಜಾಗೃತಿ ಮೂಡಿಸಿದರು ಕೊರೊನಾ ನಿಯಂತ್ರಣ ಮಾತ್ರ ಕಷ್ಟಸಾಧ್ಯವಾಗಿದೆ. ಕೊರೊನಾ ಸೋಂಕಿಗೆ ತುತ್ತಾಗಿರುವವರಿಗೆ ಚಿಕಿತ್ಸೆ ನೀಡುವುದು ಕೂಡ ವೈದ್ಯ ಲೋಕಕ್ಕೆ ಸವಾಲಾಗಿದೆ. ಪರಿಣಾಮ ಮಾನವನ ದೇಹದಲ್ಲಿನ ರೋಗ ನಿರೋಧ ಶಕ್ತಿ ಹೆಚ್ಚಿಸುವ …

Read More »

ವಿದ್ಯುತ್ ಕ್ಷೇತ್ರ ಸುಧಾರಣೆಗೆ ಪ್ರಧಾನಿ ಮೋದಿ ಮಹತ್ವದ ಸಲಹೆ

ನವದೆಹಲಿ, ಮೇ 28- ಗ್ರಾಹಕರು ಮತ್ತು ಬಳಕೆದಾರರ ಸಂತೃಪ್ತಿಯನ್ನು ಹೆಚ್ಚಿಸುವ ಅಗತ್ಯದ ಜೊತೆ ಕಾರ್ಯನಿರ್ವಹಣಾ ಕ್ಷಮತೆ ಮತ್ತು ಆರ್ಥಿಕ ಸುಸ್ಥಿರತೆ ವೃದ್ಧಿಗೂ ಆದ್ಯತೆ ನೀಡುವಂತೆ ವಿದ್ಯುತ್ ವಲಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ. ದೆಹಲಿಯಲ್ಲಿ ವಿದ್ಯುತ್ ಹಾಗೂ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯಗಳೊಂದಿಗೆ ಅವುಗಳ ಕಾರ್ಯನಿರ್ವಹಣೆ ಕುರಿತು ಮೋದಿ ಪರಾಮರ್ಶೆ ನಡೆಸಿದರು. ದೇಶದ ರಾಜ್ಯಗಳು ಮತ್ತು ಪ್ರಾಂತ್ಯಗಳಲ್ಲಿ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ ಸೇರಿದಂತೆ ಈ ವಲಯದಲ್ಲಿ ಎದುರಾಗಿರುವ …

Read More »