ಬೆಂಗಳೂರು; ಕಳ್ಳತನ ಮಾಡಿದ್ದ ಹಣವನ್ನು ಹಂಚಿಕೊಳ್ಳೋ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಜೆ.ಪಿ. ನಗರದ ರೌಡಿಶೀಟರ್ ಆಗಿದ್ದ ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸಂತೋಷ್ ಆ್ಯಂಡ್ ಟೀಂನಿಂದ ಈ ಕೊಲೆ ನಡೆದಿದ್ದು, ಸದ್ಯ ಹೆಚ್ಎಎಲ್ ಪೊಲೀಸರು ಸಂತೋಷ್ ಸೇರಿ 9 ಜನರನ್ನು ಬಂಧನ ಮಾಡಿದ್ದಾರೆ. ಜೂನ್ 6ರಂದು ಸಂತೋಷ್ ಆ್ಯಂಡ್ ಟೀಂನಿಂದ ಪಾಗಲ್ ಶ್ರೀನಿವಾಸ್ ಕೊಲೆ ಮಾಡಲಾಗಿತ್ತು. ಇನ್ನು ಪಾಗಲ್ ಸೀನ ಹಾಗೂ ಸಂತೋಷ್ …
Read More »ಮತ್ತೇ ಲಾಕ್ ಡೌನ್ ಆಗತ್ತಾ?..ಬಿಎಸ್ ವಾಯ ಹೇಳಿದ್ದೇನು..
ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು
Read More »ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯ
ಬೆಂಗಳೂರು: ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಇಂದು ಈ ಕಾರ್ಯಕ್ರಮಕ್ಕಾಗಿ ಡಿಕೆ ಶಿವಕುಮಾರ್ ಅವರ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿತ್ತು. ಮೂರು ದಿನಗಳ ಹಿಂದೆಯಷ್ಟೇ ಎಸ್ಎಂಕೆ ನಿವಾಸಕ್ಕೆ ಡಿಕೆಶಿ ಕುಟುಂಬ ಹೋಗಿದ್ದರು. ಇಂದು ಗುರು-ಹಿರಿಯ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು …
Read More »ಜೆಡಿಎಸ್ ಪರಿಷತ್ ಅಭ್ಯರ್ಥಿ ಆಯ್ಕೆ ಕುರಿತು ಗೌಡರ ನಿರ್ಧಾರವೇ ಫೈನಲ್
ಬೆಂಗಳೂರು, ಜೂ.15- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸದಸ್ಯ ಸ್ಥಾನಕ್ಕೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಮಾಡುವ ಅಧಿಕಾರವನ್ನು ಪಕ್ಷದ ವರಿಷ್ಠರಿಗೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಪಕ್ಷದಲ್ಲಿ ಹಲವು ಆಕಾಂಕ್ಷಿಗಳಿದ್ದು, ಒಂದು ಸ್ಥಾನ …
Read More »ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ…………
ಬೆಂಗಳೂರು, ಜೂ.15-ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ. 198 ವಾರ್ಡ್ಗಳಲ್ಲಿ ಈಗಾಗಲೇ 122 ವಾರ್ಡ್ಗಳಿಗೆ ಮಹಾಮಾರಿ ಕಾಲಿಟ್ಟಿದ್ದು, 142 ಕಂಟೇನ್ಮೆಂಟ್ ಜೋನ್ಗಳನ್ನು ಸ್ಥಾಪಿಸಲಾಗಿದೆ. ನಿನ್ನೆಯಿಂದೀಚೆಗೆ 32 ಕಂಟೈನ್ಮೆಂಟ್ ಪ್ರದೇಶಗಳನ್ನು ಗುರುತಿಸಲಾಗಿದ್ದು, ನಗರದ ಪ್ರತಿಯೊಂದು ರಸ್ತೆಗೂ ಬೀಳುತ್ತಿವೆ ಸೀಲ್ಡೌನ್ ಬ್ಯಾರಿಕೇಡ್ಗಳು. ನಗರದ ಎಂಟು ವಲಯಗಳಿಗೂ ಮಹಾಮಾರಿ ಹಬ್ಬುತ್ತಿದ್ದು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕು ತಡೆಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ …
Read More »ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ
ಬೆಂಗಳೂರು: ಲಾಕ್ಡೌನ್ ಸಡಿಲಿಕೆಯ ನಂತರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನೇ ದಿನೇ ಕೊರೊನಾದಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಲಾಕ್ಡೌನ್ ನಂತರ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಮುಂದೆ ಕೊರೊನಾ ತಡೆಗೆ ಏನೂ ಮಾಡಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಭೆಯ ಮುಖ್ಯಾಂಶಗಳು 1. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ …
Read More »Cinema ರಾಸಾಯನಿಕವಿಲ್ಲದೆ ನೈಸರ್ಗಿಕ ಕೃಷಿ ಮಾಡಿ ತೋರಿಸಿದ ಉಪೇಂದ್ರ……….
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ರಜಾಕೀಯ, ಸಿನಿಮಾ ಎರಡರಲ್ಲೂ ಬ್ಯುಸಿಯಾಗಿದ್ದು, ಎರಡನ್ನೂ ನಿಭಾಯಿಸುತ್ತಿದ್ದಾರೆ. ರಾಜಕೀಯಕ್ಕೆ ಹೊಸ ಭಾಷ್ಯ ಬರೆಯಲು ಯತ್ನಿಸುತ್ತಿರುವ ಉಪೇಂದ್ರ ತಮ್ಮ ಐಡಿಯಾಗಳ ಮೂಲಕ ಜನರ ಮುಂದೆ ಹೋಗುತ್ತಿದ್ದಾರೆ. ಆದರೆ ಇದೀಗ ಸಿನಿಮಾ, ಪ್ರಜಾಕೀಯ ಹೊರತುಪಡಿಸಿ ಹೊಲದಲ್ಲಿ ಕೆಲಸ ಮಾಡಲು ಪ್ರಾರಂಬಿಸಿದ್ದಾರೆ. ತಾವೇ ಕೆಲಸ ಮಾಡಿ ಫಸಲನ್ನೂ ತೆಗೆದಿದ್ದಾರೆ. ಸಿನಿಮಾ ರಂಗದಲ್ಲಿ ವಿಭಿನ್ನ ಕ್ರಿಯೇಟಿವಿಟಿ ಮೂಲಕ ಫ್ಯಾನ್ ಫಾಲೋವರ್ಸ್ ಹೊಂದಿರುವ ಉಪೇಂದ್ರ, ಸ್ಯಾಂಡಲ್ವುಡ್ನಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. …
Read More »ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು.
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಕರುನಾಡಿಗೆ ರವಿವಾರ ಕಂಟಕವಾಗಿದೆ. ಇಪ್ಪತ್ತಾಲ್ಕು ಗಂಟೆಯಲ್ಲಿ 176 ಜನರಿಗೆ ಸೋಂಕು ತಗುಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಸಧ್ಯ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇಂದು 312 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ3955 …
Read More »ನೂತನ ಕೆಪಿಸಿಸಿ ಆಡಿಟೋರಿಯಂನಲ್ಲಿ ಡಿ.ಕೆ ಶಿವಕುಮಾರ್ರಿಂದ ವಿಶೇಷ ಹೋಮ-ಹವನ
ಬೆಂಗಳೂರು: ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಮುಂಜಾನೆ ನೂತನ ಕೆಪಿಸಿಸಿ ಆಡಿಟೋರಿಯಂನಲ್ಲಿ ವಿಶೇಷ ಹೋಮ-ಹವನ ನೆರವೇರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರೋ ಹಿನ್ನೆಲೆಯಲ್ಲಿ ಮುಂದೆ ಯಾವುದೇ ವಿಘ್ನಗಳು ಎದುರಾಗದಂತೆ ಜ್ಯೋತಿಷಿ ಡಾ. ನಾಗರಾಜ್ ಆರಾಧ್ಯ ಹಾಗೂ ಅರ್ಚಕ ಮಹಂತೇಶ್ ಭಟ್ ನೇತೃತ್ವದಲ್ಲಿ ಹೋಮ ನಡೆಸಲಾಗಿದೆ. ಹೋಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭಾಗಿಯಾಗಿದ್ದರು. ಗಣಪತಿ ಹೋಮ, ವಾಸ್ತು ಹೋಮ, ರಕ್ಷೋಜ್ಞ ಹೋಮ, ಭೂವರಹ ಹೋಮ, ನವಗ್ರಹ ಹೋಮ, …
Read More »ಬೆಂಗಳೂರು-ಬೆಳಗಾವಿ ರೈಲು ವೇಳಾಪಟ್ಟಿ ಬದಲಾವಣೆ
ಬೆಂಗಳೂರು: ಬೆಂಗಳೂರು-ಬೆಳಗಾವಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 13ರಿಂದಲೇ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ. ವಾರದಲ್ಲಿ ಮೂರು ದಿನ ಬೆಂಗಳೂರು-ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ರೈಲು ರೈಲು ಸಂಖ್ಯೆ 06598 ಬೆಳಗಾವಿಯಿಂದ ಬೆಳಗ್ಗೆ 8 ಗಂಟೆಗೆ ಪ್ರತಿ ಮಂಗಳವಾರ, ಗುರುವಾರ …
Read More »
Laxmi News 24×7