Breaking News
Home / ಜಿಲ್ಲೆ / ಬೆಂಗಳೂರು (page 388)

ಬೆಂಗಳೂರು

ಒಂದೇ ವಿಡಿಯೋ – 20 ಕ್ಯಾಮೆರಾಮ್ಯಾನ್‍ಗಳಿಗೆ ಕೆಲಸ ಕೊಟ್ಟ ಸೃಜನ್….

ಬೆಂಗಳೂರು: ಲಾಕ್‍ಡೌನ್‍ನಿಂದ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿವೆ. ಇದರಿಂದ ಕಲಾವಿದರು, ಕ್ಯಾಮೆರಾಮ್ಯಾನ್‍ಗಳು ಸೇರಿದಂತೆ ಅನೇಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಆತ್ಮನಿರ್ಭರ್ ಭಾರತಕ್ಕೆ ಕೈ ಜೋಡಿಸುವ ಮೂಲಕ ಕಲಾವಿದರಿಗೆ ಸಹಾಯ ಮಾಡಿದ್ದಾರೆ. ನಟ ಸೃಜನ್ ಲೋಕೇಶ್ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಕ್ರಿಯೇಟಿವ್ ವಿಡಿಯೋ ತಯಾರಿಸಿದ್ದಾರೆ. 20 ಕ್ಯಾಮೆರಾಮ್ಯಾನ್‍ಗಳನ್ನು ಬಳಸಿ ಈ ವಿಡಿಯೋ ತಯಾರಿಸಿದ್ದು, ಕ್ಯಾಮೆರಾ ವಿಭಾಗದವರಿಗೆ ಕೆಲಸ ಸೃಷ್ಟಿಸಬೇಕೆಂಬ ಉದ್ದೇಶದಿಂದ ಈ ರೀತಿ …

Read More »

ಮಂಡ್ಯ, ಕಲಬುರಗಿಯಲ್ಲಿ ಕೊರೊನಾ ಆರ್ಭಟ-

ಬೆಂಗಳೂರು: ಮಂಡ್ಯದ ಜೊತೆ ಜೊತೆಗೆ ಹಾಸನಕ್ಕೂ ಮುಂಬೈ ಕಂಟಕ ಹೆಚ್ಚಾಗುತ್ತಲೇ ಇದೆ. ಪರಿಣಾಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗದೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಒಂದೇ ದಿನ 54 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,146ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಮಂಡ್ಯ 22, ಕಲಬುರಗಿ 10, ಹಾಸನ 6, ಧಾರವಾಡ 4, ಕೋಲಾರ, ಯಾದಗಿರಿದಲ್ಲಿ ತಲಾ …

Read More »

ನಾಳೆಯಿಂದ ಬಸ್ ಸಂಚಾರ ಸಾಧ್ಯತೆ – ಏನು ಸೇವೆ ಇರಬಹುದು?

ಬೆಂಗಳೂರು: ಇವತ್ತಿಗೆ ಲಾಕ್‍ಡೌನ್ 3.0 ಅಂತ್ಯಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ, ಹೊಸ ಆಯಾಮದಲ್ಲಿ ಲಾಕ್‍ಡೌನ್ ಜಾರಿಯಾಗಲಿದೆ. ಈಗಾಗಲೇ ಲಾಕ್‍ಡೌನ್ 4.0 ಹೇಗಿರುತ್ತೆ ಅನ್ನೋ ಕುತೂಹಲ ದೇಶದೆಲ್ಲೆಡೆ ಮನೆಮಾಡಿದೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಬಿಗ್ ರಿಲೀಫ್ ಸಿಗುತ್ತಾ ಅಂತ ಜನ ಕಾಯುತ್ತಿದ್ದಾರೆ. ಲಾಕ್‍ಡೌನ್ ಟಫ್ ಇದ್ದಷ್ಟು ದಿನ ಸೋಂಕಿತರ ಸಂಖ್ಯೆ ಕಡಿಮೆಯಿತ್ತು. ಆದರೆ ಲಾಕ್‍ಡೌನ್ ಸಡಿಲಿಕೆಯಾದ ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರೋವಾಗ 3ನೇ ಲಾಕ್‍ಡೌನ್ ಮುಗೀತಾ ಬಂದಿದೆ. ಇದರ ನಡುವೆ …

Read More »

ಸಾಮೂಹಿಕ ವಿಶೇಷ ಪ್ರಾರ್ಥನೆಗೆ ಬಿಎಸ್‍ವೈಗೆ ಪತ್ರ ಬರೆದ ಶಾಸಕ ಹ್ಯಾರಿಸ್……….

ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಬೆನ್ನಲ್ಲೇ ಶಾಸಕ ಎನ್.ಎ.ಹ್ಯಾರಿಸ್ ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಇಬ್ರಾಹಿಂ ಅವರ ಪತ್ರಕ್ಕೆ ಕಾಂಗ್ರೆಸ್‍ನ ಮುಸ್ಲಿಂ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಿದ್ದರೂ ಶಾಸಕ ಹ್ಯಾರಿಸ್ ಅವರು ಸಾಮೂಹಿಕ ಪ್ರಾರ್ಥನೆಗೆ ಪತ್ರ ಬರೆದಿರುವುದು ಚರ್ಚೆಗೆ ಕಾರಣವಾಗಿದೆ. ಪತ್ರದಲ್ಲಿ ಏನಿದೆ?: ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ …

Read More »

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ 36 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ 36 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಆಲ್ಖೆ ನೀಡಿದ ಸಂಜೆಯ ಬುಲೆಟಿನ್ ಪ್ರಕಾರ ಇಂದು ರಾಜ್ಯದಲ್ಲಿ 36 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 16, ಹಾಸನ 3 ಕಲಬುರಗಿ 8, ಶಿವಮೊಗ್ಗ 3, ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, …

Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ:ಸಚಿವ ಸುರೇಶ್‌ ಕುಮಾರ್‌

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಇಂಗ್ಲೀಷ್‌ ಪತ್ರಿಕೆ ಪರೀಕ್ಷೆ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಾಹಿತಿ ನೀಡಿರುವ ಸಚಿವ ಸುರೇಶ್‌ ಕುಮಾರ್‌, 10ನೇ ತರಗತಿ ಪರೀಕ್ಷೆಗಳನ್ನು ಶೀಘ್ರದಲ್ಲಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸೋಮವಾರ ಈ ಕುರಿತು ಮಹತ್ವದ ಚರ್ಚೆ ನಡೆಯಲಿದ್ದು, ಆನಂತರ …

Read More »

ಕರ್ನಾಟಕಕ್ಕೆ ಕಂಟಕವಾಗುತ್ತಿದ್ದಾರೆ ಹೊರರಾಜ್ಯ ಮತ್ತು ವಿದೇಶಗಳಿಂದ ಬಂದವರು..!

ಬೆಂಗಳೂರು, ಮೇ 16- ರಾಜ್ಯಕ್ಕೆ ಹೊರರಾಜ್ಯ ಮತ್ತು ದೇಶಗಳಿಂದ ಬಂದವರೇ ಕಂಟಕರಾಗಿ ಪರಿಣಮಿಸಿದ್ದಾರೆ. ಇದುವರೆಗಿನ ಪ್ರಕರಣಗಳಲ್ಲಿ ಹೊರಗಡೆಯಿಂದ ಬಂದ ಪ್ರಯಾಣಿಕರಿಗೆ ಹೆಚ್ಚು ಕೊರೊನಾ ಸೋಂಕು ತಗುಲಿರುವುದು ಅಂಕಿ-ಅಂಶಗಳಿಂದ ದೃಢಪಟ್ಟಿದೆ. ಗುಜರಾತ್‍ನಿಂದ ರಾಜ್ಯಕ್ಕೆ ಆಗಮಿಸಿದ 55 ಪ್ರಯಾಣಿಕರು, ಮುಂಬೈ ಮತ್ತು ಮಹಾರಾಷ್ಟ್ರದಿಂದ ಬಂದ 53, ರಾಜಸ್ತಾನದ 30, ದುಬೈನ 20, ಚೆನ್ನೈನ 4, ಒರಿಸ್ಸಾದ 2, ತೆಲಂಗಾಣದಿಂದ ಬಂದ 3 ಮಂದಿಗೆ ಹಾಗೂ ಲಂಡನ್‍ನಿಂದ ಬಂದ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. …

Read More »

ರಾಜ್ಯದಲ್ಲಿ ಇಂದು 23 ಜನರಲ್ಲಿ ಕೊರೊನಾ,ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಗೆ ಒಂದು ದಿನ ಮಾತ್ರ ಬಾಕಿಯಿದ್ದು, ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಕೂಡ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, …

Read More »

ಬೆಳ್ಳಂಬೆಳಗ್ಗೆ ರಾಜ್ಯಕ್ಕೆ ಬಿಗ್ ಶಾಕ್- ಶಿವಾಜಿನಗರದಲ್ಲಿ ಮತ್ತೆ 14 ಮಂದಿಗೆ ಕೊರೊನಾ……….

ಬೆಂಗಳೂರು: ಕೊರೊನಾ ಹಾಟ್ ಸ್ಪಾಟ್ ಆಗಿರುವ ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಇದೀಗ ಮತ್ತೆ 14 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಹೌಸ್ ಕೀಪಿಂಗ್ ಜೊತೆ ದ್ವಿತೀಯ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ 20 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಮಂದಿಗೆ ಪಾಸಿಟಿವ್ ಇರುವುದು ದೃಢವಾಗಿದೆ. ಶುಕ್ರವಾರ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಜನರಿಗೆ ಕೊರೊನಾ ದೃಢಪಟ್ಟಿತ್ತು. …

Read More »

ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ………..

ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆ ಗುಡ್‍ನ್ಯೂಸ್ ಕೊಟ್ಟಿದ್ದು, ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ ಮಾಡಲಾಗಿದೆ. 6 ತಿಂಗಳಿಗೆ ಬಿಯರ್ ಬಾಟಲ್‍ಗಳ ಎಕ್ಸ್‌ಪೈರಿ ಡೇಟ್ ಮುಗಿಯುವ ಹಿನ್ನೆಲೆ ಮದ್ಯದಂಗಡಿಗಳಲ್ಲಿ ಇರುವ ಬಿಯರ್ ಸ್ಟಾಕ್ ಕ್ಲಿಯರೆನ್ಸ್ ಗಾಗಿ ಅಬಕಾರಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ಮೇ 17ರವರೆಗೂ ಮಾತ್ರ ಹೆಚ್ಚುವರಿ 1 ಗಂಟೆ ಅನುಮತಿ ನೀಡಲಾಗಿದೆ. ಇದರಿಂದಾಗಿ ಎಂಆರ್‌ಪಿ, ಎಂಎಸ್‍ಐಎಲ್‍ಗಳಿಗೆ ಅಷ್ಟೇ ಅಲ್ಲದೆ ಕ್ಲಬ್, ಲಾಡ್ಜ್, ಬಾರ್‌ಗಳ …

Read More »