Breaking News
Home / ಜಿಲ್ಲೆ / ಬೆಂಗಳೂರು (page 389)

ಬೆಂಗಳೂರು

ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ.

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ. ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಅನೇಕ ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2:10ಕ್ಕೆ ಮೃತಪಟ್ಟಿದ್ದು, ಅಂತ್ಯಕ್ರಿಯೆ ರಾಮನಗರ ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ನೆರವೇರಿತು. ಕಿರಿಯ ಮಗ ರಿಕಿ ರೈ ತಂದೆ ಮುತ್ತಪ್ಪ ರೈ …

Read More »

ಒಂದು ಡೆಸ್ಕ್‌ನಲ್ಲಿ 3 ಮಂದಿ – 2 ಪಾಳಿಯಲ್ಲಿ ಶಾಲೆ : ಸುತ್ತೋಲೆಯಲ್ಲಿ ಏನಿದೆ?

ಬೆಂಗಳೂರು: 2020-21 ನೇ ಸಾಲಿನ ಶೈಕ್ಷಣಿಕ ವರ್ಷ ಹತ್ತಿರ ಬರುತ್ತಿದ್ದು ಕೋವಿಡ್ 19 ಸೋಂಕು ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಲೆಯ ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಖಾಸಗಿ ಅನುದಾನಿತ ಶಾಲೆಗಳಿಗೆ ಅನ್ವಯ ಆಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಶಾಲೆಗಳು ಯಾವಾಗದಿಂದ ಆರಂಭವಾಗಲಿದೆ ಎನ್ನುವುದು ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಶಾಲೆಗಳು …

Read More »

ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ.

ಬೆಂಗಳೂರು: ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಿಯಲ್ ಸ್ಟಾರ್, ಸರ್ಕಾರವು ಬಿಪಿಎಲ್, ರಸ್ತೆ ಬದಿಯ ವ್ಯಾಪಾರಸ್ಥರು, ಕಟ್ಟಡ-ವಲಸೆ ಕೂಲಿ ಕಾರ್ಮಿಕರು, ವಿಕಲಾಂಗಚೇತನರು, ವಯೋವೃದ್ಧರು, ಆಟೋ-ಕ್ಯಾಬ್ ಚಾಲಕರು ಇತರೆ ಎಲ್ಲ ವರ್ಗದ ಜನರ ಸಂಪೂರ್ಣ ಮಾಹಿತಿಗಳನ್ನು ಪಾರದರ್ಶಕವಾಗಿ ಸಂಗ್ರಹಿಸಬೇಕು. ಈ ಮೂಲಕ ಅಗತ್ಯವಸ್ತುಗಳು ತಲುಪ ಬೇಕಾದವರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಾಜಕೀಯ …

Read More »

ದೇಶದಲ್ಲೇ ಮೊದಲ ಬಾರಿಗೆ ಸಟ್ರಕ್ ವಾಹನದ ಮೂಲಕ ಔಷಧಿ ಸಿಂಪಡಣೆ ಕಾರ್ಯಕ್ಕೆ ಚಾಲನೆ

ಬೆಂಗಳೂರು, – ಸಾಂಕ್ರಾಮಿಕ ರೋಗಗಳು ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ವ್ಯಾಪ್ತಿಯಲ್ಲಿ ಸಟ್ರಕ್ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಭಾರತದಲ್ಲೇ ಮೊದಲು ಎನಿಸಿದ ಈ ವಾಹನದ ಮೂಲಕ ಸುಮಾರು 30 ರಿಂದ 45 ಅಡಿ ಅಂತರದವರೆಗೆ ರಾಸಾಯನಿಕಗಳನ್ನು ಬಳಸಿ ಸಿಂಪಡಣೆ ಮಾಡಿ ಸಾಂಕ್ರಾಮಿಕ ರೋಗ ಹಬ್ಬುವುದನ್ನು ತಡೆಗಟ್ಟಬಹುದಾಗಿದೆ. ಮಹಾಲಕ್ಷ್ಮಿ ಲೇಔಟ್‍ನ ಶಾಸಕರೂ ಆಗಿರುವ ಆಹಾರ …

Read More »

ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ಮಾಧುಸ್ವಾಮಿ-ವಿ.ಸೋಮಣ್ಣ ನಡುವೆ ಫೈಟ್..!

ಬೆಂಗಳೂರು, -ಬೆಂಗಳೂರು ಮಹಾನಗರದಲ್ಲಿ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಸಂಬಂಧ ಇಬ್ಬರು ಸಚಿವರ ನಡುವೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರೀ ಮಾತಿನ ಚಕಮಕಿ ನಡೆದಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ನಗರಾಭಿವೃದ್ಧಿ ಸಚಿವ ವಿ.ಸೋಮಣ್ಣ ನಡುವೆ ಪರಸ್ಪರ ಏಕವಚನದ ಬೈಗುಳ ನಡೆದಿದೆ. ಒಂದು ಹಂತದಲ್ಲಿ ಸೋಮಣ್ಣ ಮತ್ತು ಮಾಧುಸ್ವಾಮಿ ನಡುವೆ ಏಕವಚನದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಯುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಜವಾಬ್ದಾರಿಯುತ …

Read More »

ಇಲ್ಲಿದೆ ಮುತ್ತಪ್ಪ ರೈ ಬದುಕಿನ ಅಸಲಿ ಕಹಾನಿ………..

ಬೆಂಗಳೂರು, ಮೇ 15- ಆಕಸ್ಮಿಕವಾಗಿ ಅಪರಾಧ ಜಗತ್ತಿಗೆ ಕಾಲಿಟ್ಟು ಸಮಾಜ ಸೇವಕರಾಗಿ ಪರಿವರ್ತನೆಗೊಂಡು ಜನಸೇವೆಯಲ್ಲಿ ನಿರತರಾದ ಮುತ್ತಪ್ಪ ರೈ ಅವರ ಇತಿಹಾಸವೇ ರೋಚಕ. ಪುತ್ತೂರಿನಲ್ಲಿ ಸುಸಂಸ್ಕøತ ಕುಟುಂಬದ ನೆತ್ತಾಲ ನಾರಾಯಣ ರೈ ಮತ್ತು ಸುಶೀಲಾ ರೈ ದಂಪತಿ ಪುತ್ರನಾಗಿ ಜನಿಸಿದ ನೆತ್ತಾಲ ಮುತ್ತಪ್ಪ ರೈ ಅವರು ಬ್ಯಾಂಕ್ ಉದ್ಯೋಗಿಯಾಗಿದ್ದು, ದುರದೃಷ್ಟವಶಾತ್ ಅಪರಾಧ ಜಗತ್ತಿಗೆ ಕಾಲಿಡುವ ಸನ್ನಿವೇಶ ಎದುರಾಯಿತು. ಸಕಲೇಶಪುರದ ಕಾಫಿ ಎಸ್ಟೇಟ್ ವಿವಾದದ ಮೂಲಕ ಆಕಸ್ಮಿಕವಾಗಿ ಅಪರಾಧ ಜಗತ್ತಿಗೆ ಇಳಿದ …

Read More »

ಮೇ 18ರ ನಂತರ ಬಸ್ ಸೇವೆ ಪ್ರಾರಂಭದ ಸುಳಿವು ಕೊಟ್ಟ ಬಿಎಂಟಿಸಿ…….

ಬೆಂಗಳೂರು: ಮೇ 17ಕ್ಕೆ ಲಾಕ್‍ಡೌನ್ ಅವಧಿ ಮುಗಿಯುತ್ತಿರುವ ಹಿನ್ನೆಲೆ ಸಿಬ್ಬಂದಿಗೆ ಬಿಎಂಟಿಸಿ ಆದೇಶ ಹೊರಡಿಸಿದ್ದು, ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಬಸ್ ಸೇವೆ ಮತ್ತೆ ಆರಂಭವಾಗುವ ಸುಳಿವನ್ನು ನೀಡಿದೆ. ಮೇ 18ರಿಂದ ಎಲ್ಲಾ ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್‍ಡೌನ್ ಜಾರಿಗೊಳಿಸಿದ ಹಿನ್ನೆಲೆ ಬಿಎಂಟಿಸಿ ಸೇರಿದಂತೆ ಎಲ್ಲಾ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಂಡಿದ್ದವು. ಕೆಲ ಬಿಎಂಟಿಸಿ ಬಸ್‍ಗಳು …

Read More »

ಮೃತರಾದ ಮಾಜಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಅವರು ಡಾನ್ ಅದರೂ ಸಿನಿಮಾರಂಗದ ಜೊತೆ ನಿಕಟ ಸಂಬಂಧ

ಬೆಂಗಳೂರು: ಮೃತರಾದ ಮಾಜಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಅವರು ಡಾನ್ ಅದರೂ ಸಿನಿಮಾರಂಗದ ಜೊತೆ ನಿಕಟ ಸಂಬಂಧವನ್ನು ಹೊಂದಿದ್ದರು. ಹಲವು ವರ್ಷಗಳಿಂದ ಕ್ಯಾನ್ಸರ್ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ಮುತ್ತಪ್ಪ ರೈ ಇಂದು ನಸುಕಿನ ಜಾವ 2.10ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಒಂದು ಕಾಲದಲ್ಲಿ ಡಾನ್ ಆಗಿ ಮೆರೆದಿದ್ದ ರೈ ನಂತರ ಜಯಕರ್ನಾಟಕ ಸಂಘಟನೆ ಕಟ್ಟಿ ಸಮಾಜ ಸೇವೆಯ ಕಡೆ ಮುಖ ಮಾಡಿದ್ದರು. ಜೊತೆಗೆ ಸಿನಿಮಾದಲ್ಲೂ …

Read More »

28 ದಿನಗಳ ಬಳಿಕ ತನ್ನ ಹಸುಗೂಸನ್ನು ಅಪ್ಪಿಕೊಂಡು ಮುದ್ದಾಡಿರುವ ಭಾವುಕ ಘಟನೆ ಸಿಲಿಕಾನ್ ಸಿಟಿಯ ದೊಡ್ಡಬಸ್ತಿಯಲ್ಲಿ

ಬೆಂಗಳೂರು: ಕೊರೊನಾ ಗೆದ್ದ ಮಹಿಳೆ 28 ದಿನಗಳ ಬಳಿಕ ತನ್ನ ಹಸುಗೂಸನ್ನು ಅಪ್ಪಿಕೊಂಡು ಮುದ್ದಾಡಿರುವ ಭಾವುಕ ಘಟನೆ ಸಿಲಿಕಾನ್ ಸಿಟಿಯ ದೊಡ್ಡಬಸ್ತಿಯಲ್ಲಿ ನಡೆದಿದೆ. ದೊಡ್ಡಬಸ್ತಿಯಲ್ಲಿ ರೋಗಿ ನಂಬರ್ 259 ಮಹಿಳೆ ಕೊರೊನಾದಿಂದ ಗುಣಮುಖರಾಗಿ ತನ್ನ ಮನೆಗೆ ವಾಪಸ್ಸಾಗಿದ್ದಾರೆ. ಡೆಲಿವರಿಯಾದ ನಾಲ್ಕೇ ದಿನದಲ್ಲಿ ತನ್ನ ಹಸುಗೂಸಿನಿಂದ ದೂರವಾಗಿದ್ದರು. ಮಗುವಿಗೆ ಎದೆಹಾಲು ಉಣಿಸಲಾಗದಂತಹ ಅಸಹಾಯಕ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ 28 ದಿನಗಳ ಬಳಿಕ, ಈ ಮಹಿಳೆ ಕೊರೊನಾ ಗೆದ್ದು ಮನೆಗೆ ಬಂದಿದ್ದು, ತನ್ನ …

Read More »

ಉಚಿತವಾಗಿ ಹಂಚುವ ರೇಷನ್ ಕಿಟ್‍ಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರ ಸೆರೆ

ಬೆಂಗಳೂರು, – ಕಾರ್ಮಿಕ ಇಲಾಖೆಯಿಂದ ಬಡವರಿಗೆ ಉಚಿತವಾಗಿ ಹಂಚುವ ರೇಷನ್ ಕಿಟ್‍ಗಳನ್ನು ಹಣಕ್ಕೆ ಮಾರಾಟ ಮಾಡುತ್ತಿದ್ದ ನಾಲ್ವರು ಆರ್‍ಟಿ ನಗರ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರ್ಮಿಕ ಇಲಾಖೆಯ ರೇಷನ್‍ಕಿಟ್‍ಗಳನ್ನು ತಲಾ ಒಂದು ಕಿಟ್‍ಗೆ 150ರೂ. ಪಡೆದು ಕೆಲವರು ಮಾರಾಟ ಮಾಡುತ್ತಿದ್ದರು. ಆದರೆ, ಈ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಪಾಲಿಕೆ ಸದಸ್ಯರಿಗೆ ಮಾಹಿತಿ ಇರಲಿಲ್ಲ. ಆರ್‍ಟಿ ನಗರದಲ್ಲಿ ಮೆಟೆಡೋರ್‍ನಲ್ಲಿ ಕಾರ್ಮಿಕ ಇಲಾಖೆಯ ಕಿಟ್‍ಗಳನ್ನು ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ …

Read More »