Breaking News
Home / ಜಿಲ್ಲೆ / ಬೆಂಗಳೂರು (page 390)

ಬೆಂಗಳೂರು

ಮದ್ಯೋದ್ಯಮಿ ಮಲ್ಯಗೆ ಭಾರತದಲ್ಲಿ ಜೈಲೂಟ ಫಿಕ್ಸ್..!

ಲಂಡನ್: ಮದ್ಯೋದ್ಯಮಿ ವಿಜಯ್ ಮಲ್ಯ ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಇಂಗ್ಲೆಂಡ್​ (ಯುಕೆ) ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಲು ಇಲ್ಲಿನ ಹೈಕೋರ್ಟ್​ ಅವಕಾಶ ಕಲ್ಪಿಸಲಿಲ್ಲ. ಭಾರತಕ್ಕೆ ತನ್ನನ್ನು ಹಸ್ತಾಂತರ ಮಾಡದಂತೆ ಕಳೆದ ತಿಂಗಳು ವಿಜಯ್ ಮಲ್ಯ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಬ್ರಿಟನ್​ನ ಹೈಕೋರ್ಟ್ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಮಲ್ಯ ನಿರ್ಧರಿಸಿದ್ದರು. ಆದರೆ, ಮಲ್ಯ ಅವರಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಹೈಕೋರ್ಟ್​ ಇಂದು ಅವಕಾಶ ನೀಡಿಲ್ಲ. ಈ …

Read More »

ಡೆಡ್ಲಿ ಕೊರೊನಾ ಮಧ್ಯೆ ಇದೀಗ ರಾಜ್ಯದಲ್ಲಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ.

ಬೆಂಗಳೂರು: ಡೆಡ್ಲಿ ಕೊರೊನಾ ಮಧ್ಯೆ ಇದೀಗ ರಾಜ್ಯದಲ್ಲಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಕೇರಳದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೇ 17ರೊಳಗೆ ಆಮ್‍ಫಾನ್ ಚಂಡಮಾರುತದಿಂದ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೇ 15 ಮತ್ತು 16ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೇ 18ರಂದು ಈ ಆಮ್‍ಫಾನ್ ಚಂಡಮಾರುತದ ಅಬ್ಬರ ಹೆಚ್ಚಾಗಲಿದ್ದು, ಒಂದು ಗಂಟೆಗೆ 172 ಕಿ.ಮೀ. …

Read More »

ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ ಕಮಾಂಡರ್ ಡಾ. ಜಿ ಶಿವಣ್ಣ………

ಬೆಂಗಳೂರು: ದೊಡ್ಡಬಸ್ತಿಯಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣದಿಂದ ಬೆಂಗಳೂರು ಆತಂಕಗೊಂಡಿತ್ತು. ಇಡೀ ದೊಡ್ಡಬಸ್ತಿ ಕೊರೊನಾ ಹಾಟ್‍ಸ್ಪಾಟ್ ಆಗುತ್ತಾ ಅನ್ನೋ ಆತಂಕ ಜನರನ್ನು ಕಾಡಿತ್ತು. ಆದರೆ ಜನರ ಸಹಕಾರ ಹಾಗೂ ಕೋವಿಡ್ ಕಮಾಂಡರ್ ಜಿ.ಶಿವಣ್ಣ ಅವರ ಮಾಸ್ಟರ್ ಪ್ಲಾನ್‍ನಿಂದ ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ದೊಡ್ಡಬಸ್ತಿಯನ್ನ ನೋಡಿ ಪಾದರಾಯನಪುರದ ಜನ ಬುದ್ಧಿ ಕಲಿಯಬೇಕಿದೆ. ಏಪ್ರಿಲ್ 12ರಂದು ಈ ಏರಿಯಾದಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು …

Read More »

ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ. ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ. …

Read More »

ಸದ್ಯದಲ್ಲೇ ಸಿಗಲಿದೆ ದೇವರ ದರ್ಶನ, ದೇವಸ್ಥಾನಗಳನ್ನು ತೆರೆಯಲು ಮುಂದಾದ ಸರ್ಕಾರ..!

ಬೆಂಗಳೂರು, ಮೇ 14- ಜಿಮ್, ಫಿಟ್‍ನೆಸ್ ಕೇಂದ್ರಗಳನ್ನು ಮುಂದಿನ ವಾರದಿಂದ ತೆರೆಯಲು ರಾಜ್ಯ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ , ಮುಚ್ಚಿದ್ದ ದೇವಾಲಯಗಳು ಕೂಡಾ ಆರಂಭವಾಗುವ ಲಕ್ಷಣಗಳು ಗೋಚರಿಸಿವೆ. ಒಂದು ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ದೇವಾಸ್ಥನಗಳು ತೆರೆದರೆ, ಅಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಭಕ್ತರು ಪಾಲಿಸಬೇಕಾಗುತ್ತದೆ. ಅದೆನೆಂದರೆ ಯಾವುದೇ ದೇವಾಲಯಗಳು ಭಕ್ತರಿಗೆ ಪ್ರಸಾದ, ತೀರ್ಥ ಕೊಡುವುದು ನಿಷಿದ್ಧ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರತಿ ಸಾಲಿನಲ್ಲಿ ಬರುವವರಿಗೆ ಕಟಕಟೆಗಳನ್ನು …

Read More »

ನಾವು ಏನಾದ್ರು ತಿಂದ್ರೆ ತಾನೆ ಮಗುವಿಗೆ ಹಾಲು ಕೊಡಲು ಸಾಧ್ಯ: ತಾಯಂದಿರ ಕಣ್ಣೀರು

ಬೆಂಗಳೂರು: ದೂರದ ಊರಿನಿಂದ ರಾಜ್ಯಕ್ಕೆ ವಾಪಸ್ ಬಂದ ಜನರಿಗೆ ಸರ್ಕಾರ ಸೂಕ್ತವಾದ ವ್ಯವಸ್ಥೆ ಕಲ್ಪಿಸದೇ ಜನಸಾಮಾನ್ಯರು ಬಿಎಂಟಿಸಿ ಬಸ್ಸಿನೊಳಗೆ ಕುಳಿತು ಪರದಾಡಿದ್ದಾರೆ. ಬೇರೆ ರಾಜ್ಯದಿಂದ ಪುಟ್ಟಪುಟ್ಟ ಮಕ್ಕಳನ್ನು ಕಟ್ಟಿಕೊಂಡು, ಮನೆಸೇರಿಕೊಳ್ಳಲು ಬಂದಿರುವ ಈ ತಾಯಂದಿರ ಕಣ್ಣೀರು ನೋಡಿದ್ರೆ ಕರಳು ಚುರುಕ್ ಅನ್ನುತ್ತೆ. ನಿನ್ನೆ ಇಂದು ರೈಲಿನಲ್ಲಿ ಪ್ರಯಾಣ ಮಾಡುತ್ತಿರುವ ಕಾರಣ ಸರಿಯಾಗಿ ಊಟ ತಿನ್ನದೇ ಮಗುವಿಗೆ ಹಾಲು ಉಣಿಸಲು ಎದೆಹಾಲು ಬರುತ್ತಿಲ್ಲ ಎಂದು ಬಿಸಿಲಿನಲ್ಲಿ ಬಸ್ಸಿನೊಳಗೆ ಕುಳಿತು ತಮ್ಮ ಕಷ್ಟವನ್ನು …

Read More »

ಪಿಪಿಇ ಕಿಟ್ ತೆಗೆಯುವಾಗ ಎಡವಟ್ಟು- ನರ್ಸ್‍ಗೆ ತಗುಲಿದೆ ಕೊರೊನಾ

ಬೆಂಗಳೂರು: ಪಿಪಿಇ ಕಿಟ್ ತೆಗೆಯುವಾಗ ಎಡವಟ್ಟು ಮಾಡಿಕೊಂಡ ಪರಿಣಾಮ ಬೆಂಗಳೂರಿನ ನರ್ಸ್ (ರೋಗಿ-928) ಅವರಿಗೆ ಡೆಡ್ಲಿ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಕೋವಿಡ್-19 ವಾರ್ಡಿನಲ್ಲಿ ಕೆಲಸ ಮಾಡುವಾಗ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸಂಪೂರ್ಣವಾಗಿ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ ಕಿಟ್) ಅಳವಡಿಸಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಅದನ್ನು ಜಾಗೃತವಾಗಿ ಬಿಚ್ಚಿ ಎಸೆಯಬೇಕು. ಆದರೆ ನರ್ಸ್ ಪಿಪಿಇ ಕಿಟ್ ಬಿಚ್ಚುವಾಗ ಎಡವಟ್ಟು ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಕೊರೊನಾ ಸೋಂಕಿತರ …

Read More »

ಲೈನ್‍ಮ್ಯಾನ್‍ಗಳ ಕೆಲಸಕ್ಕೆ ಸಿಗಲಿಲ್ಲ ಗೌರವ- ಬೇಸರವಾಗಿದೆ ಹಗಲು, ರಾತ್ರಿ ದುಡಿದ ಜೀವ…..

ಬೆಂಗಳೂರು: ಕೊರೊನಾ ಲಾಕ್ ಡೌನ್ ಸಮಯದಲ್ಲಿ ಕೆಲಸ ಮಾಡಿದ ಹಲವು ಇಲಾಖೆಗಳಿಗೆ ಕೊರೊನಾ ವಾರಿಯರ್ಸ್ ಅಂತ ಹೆಸರು ಕೊಡಲಾಯ್ತು. ಜೀವಕ್ಕೆ ಹೆದರದೆ ಕೊರೊನಾ ಸೋಂಕಿತರಿಗಾಗಿ ಕೆಲಸ ಮಾಡಿದವರಿಗೆ ಮನ್ನಣೆ ಕೊಡಲಾಯ್ತು. ಆದರೆ ಕೆಇಬಿಯ ಲೈನ್‍ಮ್ಯಾನ್‍ಗಳಿಗೆ ಯಾವುದೇ ಗೌರವ ಸಲ್ಲಲಿಲ್ಲ ಅನ್ನೋ ಬೇಸರ ಹಲವರಲ್ಲಿದೆ. ಲಾಕ್‍ಡೌನ್ ಟೈಮ್‍ನಲ್ಲಿ ಕೆಲಸ ಮಾಡಿದ ಅನುಭವ ಹೇಗಿತ್ತು..? ಏನಾಯ್ತು ಅನ್ನೊದ್ರ ಬಗ್ಗೆ ಲೈನ್‍ಮ್ಯಾನ್‍ಗಳು ಡಿಟೈಲ್ ಆಗಿ ಹೇಳಿಕೊಂಡಿದ್ದಾರೆ. ಲಾಕ್‍ಡೌನ್ ಅನೌನ್ಸ್ ಆಯ್ತು. ಕೊರೊನಾ ಕಂಟಕದಿಂದ ಪಾರಾಗಲು …

Read More »

ಮಾಜಿ ಭೂಗತ ಪಾತಕಿ ಮತ್ತು ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರ ಆರೋಗ್ಯ ಪರಿಸ್ಥಿತಿ ಗಂಭೀರ

ಬೆಂಗಳೂರು: ಮಾಜಿ ಭೂಗತ ಪಾತಕಿ ಮತ್ತು ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮುತ್ತಪ್ಪ ರೈ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಜೊತೆಗೆ ದೈಹಿಕವಾಗಿ ಕುಗ್ಗಿ ಹೋಗಿದ್ದರು. ಈಗ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೇಲೆ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ …

Read More »

ದಿಲ್ಲಿಯಿಂದ ಬಂದವ್ರ ಆಕ್ರೋಶ,ನಾವು ಬಡವರು, 1,800-2,000 ರೂ. ಹೋಟೆಲ್ ಗೆ ಹೇಳುತ್ತಿದ್ದಾರೆ. ನಾವು ಎಲ್ಲಿಂದ ಹಣ ತರುವುದು ದೆಹಲಿಯಿಂದ ಬಂದ ಮಹಿಳಾ ಪ್ರಯಾಣಿಕರೊಬ್ಬರು ಸರ್ಕಾರದ ವಿರುದ್ಧ ಕಿಡಿ

ಬೆಂಗಳೂರು: ದೆಹಲಿಯಿಂದ ಇಂದು ಸುಮಾರು 1 ಸಾವಿರ ಮಂದಿ ಬೆಂಗಳೂರಿಗೆ ರೈಲಿನಲ್ಲಿ ಆಗಮಿಸಿದ್ದಾರೆ. ಇದೀಗ ಅವರನ್ನು ಕ್ವಾರಂಟೈನ್ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು, ಪ್ರಯಾಣಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ನಮಗೆ ಕ್ವಾರಂಟೈನ್ ಮಾಡುವ ವಿಚಾರವೇ ಗೊತ್ತಿರಲಿಲ್ಲ. ಕ್ವಾರಂಟೈನ್ ಆಗಲು ನಾವು ಇಲ್ಲಿ ಬರಬೇಕಿತ್ತಾ ಇಂದು ಕಿಡಿಕಾರಿದ್ದಾರೆ.   ದೆಹಲಿಯಿಂದ ಬಂದ ಟ್ರೈನ್‍ನಲ್ಲಿ ಕುಡಿಯೋಕೆ ನೀರಿಲ್ಲ. ಟಾಯ್ಲೆಟ್ ನಲ್ಲಿ ಕೂಡ ನೀರು ಇರಲಿಲ್ಲ. ಇದೀಗ ಕ್ವಾರೆಂಟೈನ್ ಅಂತಾ ಓಡಾಡ್ತಿದ್ದಾರೆ. ದೆಹಲಿಯಿಂದ ಇಲ್ಲಿಗೆ ಬರುವ …

Read More »