Breaking News

ಬೆಂಗಳೂರು

ಕೊರೊನಾ ವಿರುದ್ಧ ಹೋರಾಟಲು ದೇಹಕ್ಕೆ ವಿಟಮಿನ್ ಡಿ ಅತ್ಯಗತ್ಯ

ಬೆಂಗಳೂರು: ವಿಶ್ವವನ್ನು ಕಾಡುತ್ತಿರುವ ಕೊರೊನಾ ಮಹಾಮಾರಿ ವಿರುದ್ಧ ಹೋರಾಡಲು ಹಲವು ತಜ್ಞರು ಲಸಿಕೆ ಕಂಡು ಹಿಡಿಯುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಇತ್ತ ಕೊರೊನಾ ದಿನದಿಂದ ದಿನಕ್ಕೆ ತನ್ನ ಕಬಂಧಬಾಹುಗಳನ್ನು ಚಾಚಿಕೊಳ್ಳುತ್ತಿರುವುದು ಬಹುದೊಡ್ಡ ಸವಾಲಾಗಿದೆ. ಲಾಕ್‍ಡೌನ್, ಸಾಮಾಜಿಕ ಅಂತರ, ಶುಚಿತ್ವ ಕುರಿತು ಜಾಗೃತಿ ಮೂಡಿಸಿದರು ಕೊರೊನಾ ನಿಯಂತ್ರಣ ಮಾತ್ರ ಕಷ್ಟಸಾಧ್ಯವಾಗಿದೆ. ಕೊರೊನಾ ಸೋಂಕಿಗೆ ತುತ್ತಾಗಿರುವವರಿಗೆ ಚಿಕಿತ್ಸೆ ನೀಡುವುದು ಕೂಡ ವೈದ್ಯ ಲೋಕಕ್ಕೆ ಸವಾಲಾಗಿದೆ. ಪರಿಣಾಮ ಮಾನವನ ದೇಹದಲ್ಲಿನ ರೋಗ ನಿರೋಧ ಶಕ್ತಿ ಹೆಚ್ಚಿಸುವ …

Read More »

ವಿದ್ಯುತ್ ಕ್ಷೇತ್ರ ಸುಧಾರಣೆಗೆ ಪ್ರಧಾನಿ ಮೋದಿ ಮಹತ್ವದ ಸಲಹೆ

ನವದೆಹಲಿ, ಮೇ 28- ಗ್ರಾಹಕರು ಮತ್ತು ಬಳಕೆದಾರರ ಸಂತೃಪ್ತಿಯನ್ನು ಹೆಚ್ಚಿಸುವ ಅಗತ್ಯದ ಜೊತೆ ಕಾರ್ಯನಿರ್ವಹಣಾ ಕ್ಷಮತೆ ಮತ್ತು ಆರ್ಥಿಕ ಸುಸ್ಥಿರತೆ ವೃದ್ಧಿಗೂ ಆದ್ಯತೆ ನೀಡುವಂತೆ ವಿದ್ಯುತ್ ವಲಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ. ದೆಹಲಿಯಲ್ಲಿ ವಿದ್ಯುತ್ ಹಾಗೂ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯಗಳೊಂದಿಗೆ ಅವುಗಳ ಕಾರ್ಯನಿರ್ವಹಣೆ ಕುರಿತು ಮೋದಿ ಪರಾಮರ್ಶೆ ನಡೆಸಿದರು. ದೇಶದ ರಾಜ್ಯಗಳು ಮತ್ತು ಪ್ರಾಂತ್ಯಗಳಲ್ಲಿ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ ಸೇರಿದಂತೆ ಈ ವಲಯದಲ್ಲಿ ಎದುರಾಗಿರುವ …

Read More »

ಕೊರೊನಾ ಪೀಡಿತರ ಸಂಖ್ಯೆ 2493ಕ್ಕೆ ಏರಿಕೆ – ಒಟ್ಟು 28 ಮಂದಿ ಡಿಸ್ಚಾರ್ಜ್

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಒಟ್ಟು 75 ಮಂದಿಗೆ ಸೋಂಕು ಬಂದಿದ್ದು, ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆಯಾಗಿದೆ. 75 ಸೋಂಕಿತರ ಪೈಕಿ 46 ಮಂದಿ ಮಹಾರಾಷ್ಟ್ರದಿಂದ ಮರಳಿದ್ದರೆ, 6 ಮಂದಿ ತಮಿಳುನಾಡಿನಿಂದ ಬಂದಿದ್ದಾರೆ. ಉಡುಪಿಯಲ್ಲಿ ಒಟ್ಟು 27 ಮಂದಿಗೆ ಸೋಂಕು ಬಂದಿದೆ. ಈ ಪೈಕಿ 26 ಮಂದಿ ಮಹಾರಾಷ್ಟ್ರದಿಂದ ಬಂದಿದ್ದರೆ, ತೆಲಂಗಾಣದಿಂದ ಬಂದ ಓರ್ವ ಮಹಿಳೆಗೆ ಸೋಂಕು ಬಂದಿದೆ. ಹಾಸನದಲ್ಲಿ ಒಟ್ಟು 13 ಮಂದಿಯಲ್ಲಿ ಪಾಸಿಟಿವ್ ಕಾಣಿಸಿದ್ದು, 10 …

Read More »

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ತಳ್ಳಿ ಹಾಕಿರುವ ಹೈಕೊರ್ಟ್

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ತಳ್ಳಿ ಹಾಕಿರುವ ಹೈಕೊರ್ಟ್, ಸೂಕ್ತ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದಂತೆ ನಿರ್ದೇಶನ ಕೋರಿ ವಕೀಲ ಲೋಕೇಶ್ ಎಂಬುವವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ …

Read More »

ಐರ್ಲೆಂಡ್‍ನ ದುಬ್ಲಿನ್ ನಿಂದ ಬೆಂಗಳೂರಿಗೆ ಬಂದಿಳಿದ 136 ಪ್ರಯಾಣಿಕರು ……

ಬೆಂಗಳೂರು, ಮೇ 28- ಐರ್ಲೆಂಡ್‍ನ ದುಬ್ಲಿನ್‍ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತನೇ ಏರ್ ಇಂಡಿಯಾ ವಿಮಾನದಲ್ಲಿ 136 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿ ಬಂದಿಳಿದ ಒಟ್ಟು 136 ಮಂದಿ ಪ್ರಯಾಣಿಕರಲ್ಲಿ ಒಂದು ಮಗು ಸೇರಿದಂತೆ 75 ಪುರುಷರು ಮತ್ತು 61 ಮಹಿಳೆಯರು ಇದ್ದಾರೆ. ನಂತರ ಏರ್ ಇಂಡಿಯಾ …

Read More »

ಕೊರೊನಾ ಸಮಯದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ಜನರ ಪ್ರಾಣಕ್ಕಿಂತ ಆದಾಯವೇ ಹೆಚ್ಚಾಯ್ತಾ

ಬೆಂಗಳೂರು: ಕೇವಲ ಏಳು ದಿನಕ್ಕೆ ಬಿಎಂಟಿಸಿ ಲಾಕ್‍ಡೌನ್ ನಿಯಮಗಳನ್ನು ಬ್ರೇಕ್ ಮಾಡಿದೆ. ಇದನ್ನ ಸರಿ ಮಾಡಬೇಕಾದ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಅವರು ಮಾತ್ರ ಅವ್ಯವಸ್ಥೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಸಚಿವರ ಮಾತುಗಳನ್ನು ಕೇಳಿದ್ರೆ ಜನರ ಪ್ರಾಣಕ್ಕಿಂತ ಆದಾಯವೇ ಹೆಚ್ಚಾಯ್ತಾ ಅನ್ನೋ ಪ್ರಶ್ನೆ ನಿಮ್ಮಲ್ಲಿ ಹುಟ್ಟಿಕೊಳ್ಳುತ್ತದೆ. ರಾಜ್ಯದಲ್ಲಿ ಲಾಕ್‍ಡೌನ್ ರಿಲೀಫ್ ಸಿಕ್ಕಾಗ ಜನ ಬಿಂದಾಸ್ ಆಗಿ ಎಲ್ಲೆಂದರಲ್ಲಿ ಓಡಾಡೋಕೆ ಶುರುಮಾಡಿದರು. ನಂತರದ ದಿನಗಳಲ್ಲಿ ಒಂದಷ್ಟು ನಿಯಮಗಳನ್ನ ಹಾಕಿ ಸಾರ್ವಜನಿಕ ಸಾರಿಗೆ …

Read More »

ಮಹಾಮಾರಿ ಕೊರೊನಾ ವೈರಸ್‍ ಹೊಡೆದೋಡಿಸಲು ಕರ್ನಾಟಕ ಹೊಸ ಅಸ್ತ್ರ ರೆಡಿ ಮಾಡುತ್ತಿದೆ.

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ ಹೊಡೆದೋಡಿಸಲು ಕರ್ನಾಟಕ ಹೊಸ ಅಸ್ತ್ರ ರೆಡಿ ಮಾಡುತ್ತಿದೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಹೊಸ ಸೂತ್ರ ಸಿದ್ಧತೆ ಮಾಡಲಾಗುತ್ತಿದ್ದು, ಕರ್ನಾಟಕದಲ್ಲೂ ಇಸ್ರೇಲ್ ಮಾದರಿ ಸೂತ್ರ ಅನುಸರಿಸಲು ಸಿದ್ಧತೆ ಮಾಡಲಾಗುತ್ತಿದೆ. ತಜ್ಞ ವೈದ್ಯರ ಸಲಹೆ ಮೇರೆಗೆ ಇಸ್ರೇಲ್ ಮಾದರಿಯಲ್ಲಿ ರಾಜ್ಯದಲ್ಲೂ ಆರೋಗ್ಯ ನೋಂದಾವಣೆಗೆ ಸರ್ಕಾರ ಸಿದ್ಧತೆ ಮಾಡುತ್ತಿದೆ ಎನ್ನಲಾಗಿದೆ. ಹೀಗಾಗಿ ಶೀಘ್ರವಾಗಿ ಆರೋಗ್ಯ ನೋಂದಾವಣೆ ಬಗ್ಗೆ ಅಧಿಕೃತ ಆದೇಶಕ್ಕೆ ಸರ್ಕಾರ ತಯಾರಿ ಮಾಡುತ್ತಿದೆ ಎಂದು …

Read More »

ಇಂದಿನಿಂದ ರಾಜ್ಯದಲ್ಲಿ ಇನ್ನಷ್ಟು ಮಳೆಯಬ್ಬರದ ಮುನ್ನೆಚ್ಚರಿಕೆ……..

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು, 6 ಜಿಲ್ಲೆಗಳನ್ನು ಬಿಟ್ಟು ಉಳಿದ 24 ಜಿಲ್ಲೆಗಳಲ್ಲಿ ಮಳೆ ಆಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನಿಡಿದೆ. ಜೂನ್ 1ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ಮಳೆಯ ಆರ್ಭಟ …

Read More »

ಪಕ್ಷಾಂತರ ನಿಷೇಧ ಕಾಯಿದೆ : ನಾಳೆ ಸಂಸದೀಯ ಗಣ್ಯರ ಸಭೆ

ಬೆಂಗಳೂರು, ಮೇ 27- ಪಕ್ಷಾಂತರ ನಿಷೇಧ ಕಾಯಿದೆಗೆ ಸಂಬಂಸಿದಂತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಕಾರಿಗಳಿಗೆ ಲಭ್ಯವಿರುವ ಅಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ನಾಳೆ ಬೆಳಿಗ್ಗೆ 10.30 ಕ್ಕೆ ವಿಧಾನಸೌಧದ ಮೊದಲನೆಯ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಸಭಾಧ್ಯಕ್ಷ …

Read More »

ರಾಜ್ಯದಲ್ಲಿ ಪ್ರತಿ ಮನೆಗೂ ತೆರಳಿ ಆರೋಗ್ಯ ಸಮೀಕ್ಷೆ ಮಾಡಲು ಮುಂದಾದ ರಾಜ್ಯಸರ್ಕಾರ

ಬೆಂಗಳೂರು, ಮೇ 27- ರಾಜ್ಯದಲ್ಲಿ ಪ್ರತಿ ಮನೆಗೂ ತೆರಳಿ ಆರೋಗ್ಯ ಸ್ಥಿತಿಗತಿಯನ್ನು ಸಮೀಕ್ಷೆ ನಡೆಸುವ ಮೂಲಕ ಹೆಲ್ತ್ ರಿಜಿಸ್ಟರ್ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೆಲ್ತ್ ರಿಜಿಸ್ಟರ್ ಬಗ್ಗೆ ಹದಿನೆಂಟು ವಿಭಾಗದಲ್ಲಿ ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಕೆಲಸ ಮಾಡಿದ ತಜ್ಞರ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು, ಈ ಸಮೀಕ್ಷೆಯಿಂದ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಸಾಕಷ್ಟು ಅನುಕೂಲಗಳಾಗಲಿವೆ ಎಂದರು ಈ …

Read More »