Breaking News

ಬೆಂಗಳೂರು

ಇ-ಪಾಸ್​​ ಪಡೆದ ಅಂತರ್​​ ರಾಜ್ಯ ಪ್ರಯಾಣಿಕರಿಗೆ ಬಸ್​​ ವ್ಯವಸ್ಥೆ – ಕೆಎಸ್​ಆರ್​​ಟಿಸಿ ಸಂಸ್ಥೆ

ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಈ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕ್‌ಡೌನ್‌ ವಿಸ್ತರಣೆಯಾಗಿದೆ. ಎರಡು ಹಂತದ ಲಾಕ್‌ಡೌನ್‌ಗಳನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್‌ಡೌನ್‌ ಸಡಿಲಗೊಳಿಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿದೆ. ಇದರಲ್ಲಿ ಅಂತರ್‌ ರಾಜ್ಯ ಪ್ರಯಾಣವೂ ಒಂದು. ಹೌದು, ಅಂತರ್​ ರಾಜ್ಯ ಪ್ರಯಾಣಕ್ಕಾಗಿ ಜನ ಸರ್ಕಾರದಿಂದ ಇ- ಪಾಸ್‌ ಪಡೆಯಬೇಕಾದ ಅಗತ್ಯ ಇದೆ. ಯಾವುದೇ ಮುನ್ಸೂಚನೆ ಇಲ್ಲದೇ ದೇಶವ್ಯಾಪಿ …

Read More »

ಲಾಕ್‍ಡೌನ್ ಎಫೆಕ್ಟ್- ಶ್ರೀಮನ್ನಾರಾಯಣನ ಹೊಸ ಅವತಾರ

ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಿನಿಮಾ ರಂಗ ಸಂಪೂರ್ಣ ಸ್ತಬ್ಧವಾಗಿದ್ದು, ನಟ, ನಟಿಯರು ಸಹ ತಮ್ಮದೇ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಲವರು ಬೇಜಾರಲ್ಲಿ ಸಮಯ ಕಳೆದರೆ, ಇನ್ನೂ ಹಲವರು ತಮ್ಮ ಮುಂದಿನ ಪ್ರಾಜೆಕ್ಟ್‍ಗೆ ಸಿದ್ಧತೆ ನಡೆಸಿದ್ದಾರೆ, ಇನ್ನೂ ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಹೀಗೆ ಎಲ್ಲ ತಾರೆಯರು ತಮ್ಮದೇ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ನಟ ರಕ್ಷಿತ್ ಶೆಟ್ಟಿ ಸಹ ತಮ್ಮದೇ ಕಾರ್ಯದಲ್ಲಿ ತೊಡಗಿದ್ದು, ತಮ್ಮ ಹೊಸ ಅವತಾರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ …

Read More »

ನೆಲಮಂಗಲ ಬಳಿ ಟ್ರಾಫಿಕ್ ಜಾಮ್- ಬೆಂಗಳೂರಿನತ್ತ ಜನರು…………

ಬೆಂಗಳೂರು: ಲಾಕ್‍ಡೌನ್ ಆರಂಭವಾದ ದಿನಗಳಲ್ಲಿ ಬೆಂಗಳೂರು ತೊರೆದಿದ್ದ ಜನರು ನಗರಕ್ಕೆ ಆಗಮಿಸುತ್ತಿದ್ದು, ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೋಟಿಸ್ ನೀಡಿದ್ದರಿಂದ ಜನರು ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ. ಲಾಕ್‍ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ …

Read More »

ಬೆಂಗ್ಳೂರಲ್ಲಿ ದಂಪತಿಯ ಬರ್ಬರ ಹತ್ಯೆ- ಮಗ ಟೆಕ್ಕಿಯಿಂದ್ಲೇ ಕೃತ್ಯ ಶಂಕೆ………….

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಮಗ ಟೆಕ್ಕಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದಂಪತಿ. ಇವರನ್ನು ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ ಅವರು ಆರ್‍ಬಿಐ ನಿವೃತ್ತ ನೌಕರನಾಗಿದ್ದು, ಮಗ ನವೀನ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಂದೆ-ತಾಯಿಯನ್ನು ಕೊಲೆ …

Read More »

ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟ ಸರ್ಕಾರ…….

ಬೆಂಗಳೂರು: ಇತ್ತೀಚೆಗಷ್ಟೆ ಧಾರಾವಾಹಿಗಳ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದ್ದ ಸರ್ಕಾರ ಇದೀಗ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಮಾತ್ರ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ಸರ್ಕಾರ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಶೂಟಿಂಗ್ ಬೇಡ ಬದಲಿಗೆ ಪೋಸ್ಟ್ ಪ್ರೊಡಕ್ಷನ್, ಪ್ರೀ ಪ್ರೊಡಕ್ಷನ್ ಕೆಲಸಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಎಡಿಟಿಂಗ್, ಮಿಕ್ಸಿಂಗ್, ಗ್ರಾಫಿಕ್ಸ್ ಈ ರೀತಿಯ ಕೆಲಸ ಮಾಡಿಕೊಳ್ಳಬಹುದು ಎಂದು …

Read More »

ಮೇ 17ರ ಬಳಿಕ.. ಏನಿರುತ್ತೆ? ಏನಿರಲ್ಲ?………..

ಬೆಂಗಳೂರು: ಕೊರೊನಾ ಲಾಕ್‍ಡೌನ್ 3.0 ಮುಕ್ತಾಯಕ್ಕೆ ಇನ್ನು 7 ದಿನ ಬಾಕಿ ಇದೆ. ಈ ಹೊತ್ತಲ್ಲೇ ಮೇ 17ರ ಬಳಿಕ ಮುಂದಿನ ಕಥೆ ಏನು? ಲಾಕ್‍ಡೌನ್ ಅಂತ್ಯ ಆಗುತ್ತಾ? ಮತ್ತೆ ಏನಾದರೂ ಮುಂದುವರಿಸ್ತಾರಾ? ಮುಂದುವರಿಸೋದಾದ್ರೆ, ಯಾವ ಮಾರ್ಗಸೂಚಿ ಇರುತ್ತೆ? ಲಾಕ್‍ಡೌನ್ ಎಂಡ್ ಆದರೆ ಮತ್ತೆ ವೈರಸ್ ಹಬ್ಬಿದ್ರೆ ಏನ್ ಮಾಡೋದು? ಅನ್ನೋ ಎಲ್ಲಾ ಲೆಕ್ಕಾಚಾರ-ಆತಂಕದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಧ್ಯಾಹ್ನ 3 ಗಂಟೆಗೆ ಎಲ್ಲಾ ರಾಜ್ಯಗಳ …

Read More »

ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಇಂದು ತಾಯ್ನಾಡಿಗೆ 326 ಕನ್ನಡಿಗರು ಬಂದಿಳಿದಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಭಾರತ ನಲುಗಿ ಹೋಗಿದೆ. ಹೀಗಾಗಿ ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ವಾಪಸ್ಸಾಗುತ್ತಿದ್ದಾರೆ. ಇಂದು ತಾಯ್ನಾಡಿಗೆ 326 ಕನ್ನಡಿಗರು ಬಂದಿಳಿದಿದ್ದಾರೆ. ಬೆಂಗಳೂರಿಗೆ 323 ಜನ ಕನ್ನಡಿಗರು ಬಂದಿಳಿದಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಸುಕಿನ ಜಾವ 4.47ಕ್ಕೆ ಕನ್ನಡಿಗರು ಆಗಮಿಸಿದ್ದಾರೆ. ಮೊದಲಿಗೆ ವಿಮಾನ ಲಂಡನ್‍ನಿಂದ  ದೆಹಲಿಗೆ ಬಂದಿದೆ. ನಂತರ ದೆಹಲಿಯಿಂದ ಬೆಂಗಳೂರಿಗೆ …

Read More »

ವಾಣಿ ವಿಲಾಸ್ ಆಸ್ಪತ್ರೆ ಸಿಬ್ಬಂದಿ ದಿಢೀರ್ ಪ್ರತಿಭಟನೆ, ಕಾರಣವೇನು ಗೊತ್ತೇ..

ಬೆಂಗಳೂರು, ಮೇ 9- ಪಿಪಿಇ ಕಿಟ್ ಇಲ್ಲ. ನಮಗೆ ಇಲ್ಲಿ ಯಾವ ಸೇಫ್ಟಿ ಇಲ್ಲ… ಕನಿಷ್ಠ ಸುರಕ್ಷಾ ಕ್ರಮಗಳಿಲ್ಲ. ಸೋಂಕಿತರನ್ನೆಲ್ಲಾ ಇಲ್ಲಿಗೆ ಸ್ಥಳಾಂತರ ಮಾಡಿದರೆ ನಾವು ಕೆಲಸ ಮಾಡುವುದು ಹೇಗೆ. ನಮಗೂ ಸೋಂಕು ತಗುಲುವ ಆತಂಕವಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದರು. ವೈದ್ಯರು, ನರ್ಸ್‍ಗಳು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಬಹಳಷ್ಟು ಜನ ಆಸ್ಪತ್ರೆಯ ಮುಂದೆ ಜಮಾಯಿಸಿ …

Read More »

ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ ಭಾರಿ ವರ್ಗಾವಣೆ

ಬೆಂಗಳೂರು, ಮೇ 9- ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಇಲಾಖೆಯನ್ನು ಮರು ವಿನ್ಯಾಸಗೊಳಿಸಿ ಅಧಿಕಾರಿಗಳ ಸ್ಥಳ ನಿಯುಕ್ತಿ ಹಾಗೂ ವರ್ಗಾವಣೆ ಮಾಡಲಾಗಿದೆ. 11 ಮಂದಿ ಅಬಕಾರಿ ಉಪ ಆಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಅದೇ ರೀತಿ 15 ಮಂದಿ ಅಬಕಾರಿ ಉಪ ಅಧೀಕ್ಷಕರಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮೂರು ಮಂದಿ ಅಬಕಾರಿ ಅಧೀಕ್ಷಕರುಗಳನ್ನು ವರ್ಗಾವಣೆ ಮಾಡಲಾಗಿದೆ ಹಾಗೂ 14 ಮಂದಿ …

Read More »

ಎದ್ದು ಬಿದ್ದು ಸ್ವಗ್ರಾಮಕ್ಕೆ ತೆರಳಿದ್ದ ಕಾರ್ಮಿಕರು ಅಷ್ಟೇ ವೇಗದಲ್ಲಿ ಬೆಂಗಳೂರಿಗೆ ವಾಪಾಸ್..!

ಬೆಂಗಳೂರು, ಮೇ 9- ದೇಶಾದ್ಯಂತ ಲಾಕ್ ಡೌನ್ ಸಡಿಲಿಸಿ ವಲಸೆ ಕಾರ್ಮಿಕರಿಗೆ ತಮ್ಮೂರಿಗೆ ಸೇರಿಕೊಳ್ಳಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಬರುತ್ತಿರುವ ವಾಹನಗಳ ಸಂಖ್ಯೆ 20 ಪಟ್ಟು ಹೆಚ್ಚಾಗಿದೆ. ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯ ಪ್ರದೇಶದಗಳಿಂದ ಸಾವಿರಾರು ವಾಹನಗಳು ಬರಲಾರಂಭಿಸಿವೆ. ಇಲ್ಲಿಂದ ಬೇರೆ ಹೋಗಿ ಕೆಲಸ ಮಾಡುತ್ತಿದ್ದವರು ವಾಪಸ್ ಬರುವುದು ಒಂದು ಕತೆಯಾದರೆ, ಇಲ್ಲಿದ್ದು ಮೇ 4ರ ನಂತರ ಸ್ವಂತ ಅಥವಾ ಬಾಡಿಗೆ …

Read More »