Breaking News

ಬೆಂಗಳೂರು

ಹೊರ ರಾಜ್ಯದಿಂದ ಬೆಂಗ್ಳೂರಿಗೆ ಬರುವವರಿಗೆ 14 ದಿನ ಹೋಂ ಕ್ವಾರಂಟೈನ್ ಫಿಕ್ಸ್

ಬೆಂಗಳೂರು: ಹೊರರಾಜ್ಯಗಳಿಂದ ಬೆಂಗಳೂರಿಗೆ ಸಾಕಷ್ಟು ಮಂದಿ ಬರುತ್ತಿರುವ ಹಿನ್ನೆಲೆ ಅವರಿಂದ ನಗರದಲ್ಲಿ ಕೊರೊನಾ ಸೋಂಕು ಹರಡಬಾರದು ಎಂದು ಬೆಂಗಳೂರು ಜಿಲ್ಲಾಡಳಿತ ಹೊಸ ಪ್ಲಾನ್ ಮಾಡಿದೆ. ಹೊರ ರಾಜ್ಯದಿಂದ ಸಿಲಿಕಾನ್ ಸಿಟಿಗೆ ಬರುವವರಿಗೆ ಕಡ್ಡಾಯವಾಗಿ ಕೈಗೆ ಸ್ಟಾಂಪಿಂಗ್ ಮಾಡಲಾಗುತ್ತದೆ. ಅವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಇರಲೇಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ಹೊರ ರಾಜ್ಯದವರಿಂದ ನಗರದಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು …

Read More »

ಅಬಕಾರಿ ಸುಂಕ ಏರಿಕೆ – ಮದ್ಯ ಮಾರಾಟ ಇಳಿಕೆ……

ಬೆಂಗಳೂರು: ಸಿಎಂ ಯಡಿಯೂರಪ್ಪ ಮದ್ಯದ ಮೇಲೆ ಶೇ.17 ಅಬಕಾರಿ ಸುಂಕ ವಿಧಿಸಿದ ಬೆನ್ನಲ್ಲೇ ಬುಧವಾರಕ್ಕೆ ಹೋಲಿಸಿದ್ದಲ್ಲಿ ಮದ್ಯ ಮಾರಾಟ ಇಳಿಕೆಯಾಗಿದೆ. ಬುಧವಾರ ಒಟ್ಟು 230 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದ್ದರೆ ಗುರುವಾರ ಒಟ್ಟು 165 ಕೋಟಿ ರೂ. ಮದ್ಯ ಮಾರಾಟವಾಗಿದೆ ಎಂದು ಕೆಎಸ್‍ಬಿಸಿಎಲ್ (ಕರ್ನಾಟಕ ಪಾನೀಯ ನಿಯಮ) ತಿಳಿಸಿದೆ. ಇಂದು 152 ಕೋಟಿ ರೂ. ಮೌಲ್ಯದ 27.56 ಲಕ್ಷ ಲೀಟರ್ ಇಂಡಿಯನ್ ಮೇಡ್ ಲಿಕ್ಕರ್(ಐಎಂಎಲ್), 13 ಕೋಟಿ ಮೌಲ್ಯದ …

Read More »

15 ರಜೆ ಮುಗಿಸಿ ಕೆಲಸಕ್ಕೆ ಬಂದ ಮಹಿಳೆ – 2ನೇ ದಿನವೇ ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಇಂಡ್ಲವಾಡಿ ರಸ್ತೆಯ ಸ್ಟ್ರೈಡ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಇಂಡ್ಲವಾಡಿ ಮೂಲದ ಮಂಜುಳಾ (26) ಮೃತ ಮಹಿಳೆ. ಮೃತ ಮಂಜುಳಾ ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಬಂದಿದ್ದು, ನಂತರ ಸಾವನ್ನಪ್ಪಿದ್ದಾಳೆಂದು ಸಹೋದ್ಯೋಗಿಗಳು ತಿಳಿಸಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹದಿನೈದು ದಿನ ವಿತರಣೆ ಪಾಳಿಯಂತೆ ರಜೆಯಲ್ಲಿದ್ದು, ಬುಧವಾರ ಕೆಲಸಕ್ಕೆ ಹಾಜರಾಗಿದ್ದಳು. ಎಂದಿನಂತೆ …

Read More »

ಇಂದು 12 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ

– ಬಾಗಕೋಟೆಯ ರೋಗಿ-607ರಿಂದ ಮೂವರಿಗೆ ಕೊರೊನಾ – ದಾವಣಗೆರೆಯಲ್ಲಿ ಕೊರೊನಾಗೆ ಮತ್ತೊಂದು ಸಾವು – ಬೆಳಗಾವಿಯ 13ರ ಬಾಲಕಿಗೆ ಸೋಂಕು ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 12 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ-694) ಕೊರೊನಾಗೆ ಇಂದು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಈವರೆಗೂ ಕೊರೊನಾದಿಂದ ನಾಲ್ವರು …

Read More »

ಕಂಠಪೂರ್ತಿ ಕುಡಿದವ್ರ ಕಿಕ್ಕಿಳಿಸಿದ ರಾಜ್ಯ ಸರ್ಕಾರ……..

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಒಂದೂವರೆ ತಿಂಗಳ ಬಳಿಕ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ಕೊಟ್ಟಿತ್ತು. ಇದೀಗ ಎಣ್ಣೆ ಮತ್ತಿನಲ್ಲಿ ತೇಲಾಡುತ್ತಿದ್ದ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ನೀಡಿದೆ. ಮದ್ಯದ ಮೇಲೆ ಕೋವಿಡ್ -19 ಸೆಸ್ ವಿಧಿಸಲಾಗಿದೆ. ಇಂದಿನಿಂದ ಮದ್ಯದ ಹೊಸದರ ಜಾರಿಗೆ ಬರಲಿದೆ. ಸರ್ಕಾರ ಅವಕಾಶ ಕೊಟ್ಟಿದ್ದೆ ತಡ ವೈನ್ ಶಾಪ್, ಎಂಆರ್‌ಪಿ ಶಾಪ್ ಎದುರು ಅಪಾರ ಜನರು ಸೇರುತ್ತಿದ್ದಾರೆ. ಮಧ್ಯಾಹ್ನ ಎನ್ನದೇ ಮದ್ಯಪ್ರಿಯರು ಕಾದುನಿಂತು ಎಣ್ಣೆ ತೆಗೆದುಕೊಂಡು ಹೋಗಿದ್ದಾರೆ. ಸಂಜೆಯಾಗುತ್ತಲೇ …

Read More »

78 ವರ್ಷದ ವೃದ್ಧ ಕೊರೊನಾದಿಂದ ಗುಣಮುಖ…….

ಬೆಂಗಳೂರು: 78 ವರ್ಷದ ವೃದ್ಧ ಕೊರೊನಾದಿಂದ ಗುಣಮುಖರಾಗಿ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗುಜರಾತ್ ಮೂಲದ ವೃದ್ಧ ಕರ್ನಾಟಕದಲ್ಲೇ ವಾಸವಾಗಿದ್ದರು. ಮೊದಲು ವೃದ್ಧನಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾದಾಗ ಕೋವಿಡ್-19 ಸೋಂಕು ತಗುಲಿರೋದು ದೃಢಪಟ್ಟಿತ್ತು. ತಮ್ಮ ಆತ್ಮಮನೋಬಲದಿಂದ ಡೆಡ್ಲಿ ಕೊರೊನಾಗೆ ಸೆಡ್ಡು ಹೊಡೆದು ಬಂದಿದ್ದಾರೆ. ಮಾರ್ಚ್ 1ಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಮಾರ್ಚ್ 17ರಂದು ಗುಣಮುಖರಾಗಿ ಹೊರ ಬಂದಿದ್ದರು. ತಮಗೆ ಹೇಗೆ ಚಿಕಿತ್ಸೆ ನೀಡಲಾಯ್ತು ಎಂಬಿತ್ಯಾದಿ …

Read More »

‘ಸಾಲ ತೀರಿಸಬೇಕು, ಬಾಡಿಗೆ ಕಟ್ಟಬೇಕು, ಕೆಲಸಗಾರರಿಗೆ ಸಂಬಳ ನೀಡಬೇಕು‘: ನಮಗೂ ಎಣ್ಣೆ ಮಾರಲು ಅವಕಾಶ ಕೊಡಿ ಎಂದು ಸಿಎಂಗೆ ಬಾರ್​ ಮಾಲೀಕರ ಮನವಿ

ಬೆಂಗಳೂರು: ಕೊರೋನಾ ಲಾಕ್​ಡೌನ್​​ ನಡುವೆಯೇ ಕೊನೆಗೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಎರಡು ದಿನಗಳಿಂದ ಮಹಿಳೆಯರು ಮತ್ತು ಪುರುಷರು ಎನ್ನದೇ ಎಲ್ಲಾ ವಯೋಮಾನದವರು ಬೆಳಿಗ್ಗೆ 7 ಗಂಟೆಯಿಂದಲೇ ವೈನ್ ಸ್ಟೋರ್​​ಗಳು, ಎಂಆರ್​​ಪಿ ಎಣ್ಣೆ ಅಂಗಡಿಗಳ ಮುಂದೆ ನಿಂತು ಮದ್ಯ ಖರೀದಿ ಮಾಡುತ್ತಿದ್ದಾರೆ. ಕೊರೋನಾ ವೈರಸ್​​ ಕಾರಣ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿರುವುದು ನೋಡುತ್ತಿದ್ದೇವೆ. ಹೀಗಿರುವಾಗ ರಾಜ್ಯದಲ್ಲಿ ಎಂಆರ್​​ಪಿ ಹಾಗೂ ಎಂಎಸ್​ಐಎಲ್ ಮಳಿಗೆಗಳಲ್ಲಿ ಮಾತ್ರ ಮದ್ಯ …

Read More »

ಬಾರ್, ರೆಸ್ಟೋರೆಂಟ್ ಸದ್ಯಕ್ಕೆ ಓಪನ್ ಮಾಡಲ್ಲ: ಸಚಿವ ನಾಗೇಶ್

ಬೆಂಗಳೂರು, : ಮೂರನೇ ಅವಧಿಯ ಲಾಕ್ಡೌನ್ ನಡುವೆಯೂ ಷರತ್ತುಗಳ ನಡುವೆ ಮೇ.04ರಿಂದ ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರವು ಸಂಪೂರ್ಣ ಅನುಮತಿ ನೀಡಿದೆ. ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಇದರಿಂದ ಭರ್ಜರಿ ಗಳಿಕೆಯೂ ಆಗುತ್ತಿದೆ. ಆದರೆ, ಇದರ ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಮಾಡಲಾಗುತ್ತೆ ಎಂಬ ಸುದ್ದಿ ಹಬ್ಬುತ್ತಿದೆ. ಆದ್ರೆ, ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ …

Read More »

ಕೆಎಸ್ಆರ್‌ಟಿಸಿ ಉಚಿತ ಬಸ್ ಸಂಚಾರ ಶುಕ್ರವಾರದಿಂದ ಸ್ಥಗಿತ?

ಬೆಂಗಳೂರು, ಮೇ 07 : ಬೆಂಗಳೂರು ನಗರದಿಂದ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ತಲುಪಿಸಲು ಕೆಎಸ್ಆರ್‌ಟಿಸಿ ಆರಂಭಿಸಿದ್ದ ಬಸ್ ಸೇವೆ ಮೇ 8ರಿಂದ ಸ್ಥಗಿತಗೊಳ್ಳಲಿದೆ. ಗುರುವಾರದ ತನಕ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಕಳೆದ 5 ದಿನಗಳಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ವಲಸೆ ಕಾರ್ಮಿಕರು ತೆರಳಿದ್ದಾರೆ. ಉಚಿತ ಪ್ರಯಾಣಕ್ಕೆ ಗುರುವಾರ ಕೊನೆ ದಿನವಾಗಿದ್ದು, ಶುಕ್ರವಾರದಿಂದ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಇದುವರೆಗೂ ಸುಮಾರು 3,500 ಬಸ್‌ಗಳನ್ನು …

Read More »

ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ: ಸಿಎಂ ಪ್ಯಾಕೇಜ್‌ ಬಗ್ಗೆ ಸಿದ್ಧರಾಮಯ್ಯ ಟೀಕೆ

ಬೆಂಗಳೂರು,: ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರು, ಚಾಲಕರು, ರೈತರು ಸೇರಿ ಇತರೆ ವರ್ಗದ ಜನರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 1610 ಕೋಟಿ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ ಈ ವಿಶೇಷ ಪ್ಯಾಕೇಜ್ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು, ‘ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ಇದ್ದಂತೆ ಇದು ಎಂದಿದ್ದಾರೆ. ಸಿಎಂ ಘೋಷಣೆ ಮಾಡಿರುವ ಆರ್ಥಿಕ ನೆರವಿನ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ”ನಾವು …

Read More »