ಬೆಂಗಳೂರು: ಹೊರ ರಾಜ್ಯದಲ್ಲಿರುವ ಕನ್ನಡಿಗರು ಇನ್ನು ಮುಂದೆ ಕರ್ನಾಟಕಕ್ಕೆ ಬರಬಹುದು. ಲಾಕ್ಡೌನ್ ಘೋಷಣೆಗೂ ಮುನ್ನ ನೆರೆ ರಾಜ್ಯಕ್ಕೆ ಹೋಗಿರುವ ಕನ್ನಡಿಗರು ಪಾಸ್ ಪಡೆಯುವ ಮೂಲಕ ಮರಳಿ ಕರ್ನಾಟಕಕ್ಕೆ ಬರಬಹುದು. ರಾಜ್ಯಕ್ಕೆ ಬರುವ ಕನ್ನಡಿಗರು ಸೇವಾ ಸಿಂಧು ವೆಬ್ಸೈಟ್ಗೆ ತೆರಳಿ ವಿವರಗಳನ್ನು ನೀಡಬೇಕಾಗುತ್ತದೆ. ಈ ಎಲ್ಲ ವಿವರಗಳು ಸರಿಯಾಗಿದ್ದರೆ ಇ ಪಾಸ್ ಡೌನ್ಲೋಡ್ ಮಾಡಬಹುದು. ಇ ಪಾಸ್ ಸಿಕ್ಕಿದ ದಿನದಿಂದ ಒಂದು ವಾರದ ವರೆಗೆ ಮಾತ್ರ ಈ ಪಾಸ್ ಉರ್ಜಿತದಲ್ಲಿರುತ್ತದೆ. ಸ್ವಂತ …
Read More »ಶ್ರಮಿಕ ವರ್ಗಕ್ಕೆ B.S.Y. ನೆರವು……..
ಬೆಂಗಳೂರು: ಕೊರೊನಾ ಲಾಕ್ಡೌನ್ ಆಗಿ 47 ದಿನಗಳು ಕಳೆದಿವೆ. ಲಾಕ್ಡೌನ್ ಅವಧಿಯಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೆ ತುತ್ತಾದವರು ಆಯಾ ದಿನದ ಕೆಲಸವನ್ನೇ ನಂಬಿ ಜೀವನ ನಡೆಸುತ್ತಾ ಬಂದಿವರೇ ಆಗಿದ್ದಾರೆ. ವೃತ್ತಿನಿರತ ಕ್ಷೌರಿಕರು, ಅಗಸರು, ರೈತರು, ಆಟೋ ಟ್ಯಾಕ್ಸಿ ಚಾಲಕರು, ಹೂ, ಹಣ್ಣು ಬೆಳೆಗಾರರು ಸಾಕಷ್ಟು ಕಷ್ಟ ನಷ್ಟಗಳನ್ನು ಉಂಡಿದ್ದರು. ಉದ್ಯಮ ವಲಯವೂ ಸ್ತಬ್ಧ ಆಗಿ ಉದ್ಯಮಿಗಳು ಕಂಗಾಲಾಗಿದ್ದರು. ಇದೀಗ ಈ ವರ್ಗದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. 1,610 ಕೋಟಿ …
Read More »ಮದ್ಯದ ಮತ್ತಿನಲ್ಲಿ ಪತ್ನಿಯ ಕತ್ತು ಸೀಳಿದ ಪಾಪಿ…….
ಬೆಂಗಳೂರು: ಮದ್ಯದ ಮತ್ತಿನಲ್ಲಿ ಪಾಪಿ ಪತಿಯೊಬ್ಬ ಪತ್ನಿಯನ್ನ ಕೊಲೆಗೈದ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯ ದಿವ್ಯ (24) ಕೊಲೆಯಾದ ಪತ್ನಿ. ತೀರ್ಥಪ್ರಸಾದ್ ಕೊಲೆಗೈದ ಪತಿ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತೀರ್ಥಪ್ರಸಾದ್ ಕೃತ್ಯ ಎಸದಿದ್ದಾನೆ ಎನ್ನಲಾಗಿದೆ. ಕಾರು ಚಾಲಕನಾಗಿದ್ದ ತೀರ್ಥಪ್ರಸಾದ್ ಬುಧವಾರ ಮದ್ಯ ಕುಡಿದು ಮನೆ ಬಂದಿದ್ದ. ಈ ವೇಳೆ ಪತ್ನಿಯ ಜೊತೆಗೆ ಜಗಳ ಆರಂಭಿಸಿ ಚಾಕುವಿನಿಂದ ಕತ್ತು ಸೀಳಿ ನಾಪತ್ತೆಯಾಗಿದ್ದಾನೆ. ಈ …
Read More »ಸಾರಿಗೆ ನೌಕರರ ವೇತನವನ್ನು ಮೂರು ದಿನಗಳಲ್ಲಿ ಬಿಡುಗಡೆ ಆಗಲಿದೆ: ಸಚಿವ ಲಕ್ಷ್ಮಣ್ ಸವದಿ
ಬೆಂಗಳೂರು : ಲಾಕ್ ಡೌನ್ ಜಾರಿಯಾದ ಪರಿಣಾಮ ತಡೆಹಿಡಿಯಲಾಗಿದ್ದ ಸಾರಿಗೆ ನೌಕರರ ವೇತನವನ್ನು ಮೂರು ದಿನಗಳಲ್ಲಿ ಬಿಡುಗಡೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಾನು ಮುಖ್ಯಮಂತ್ರಿ ಬಳಿ ಮಾತನಾಡಿದ್ದೇನೆ. ಇನ್ನು 3-4 ದಿನಗಳಲ್ಲಿ ಸಂಬಳ ಆಗುತ್ತದೆ. ಸರ್ಕಾರದಿಂದ ನೇರವಾರಿ 326 ಕೋಟಿ ರೂಪಾಯಿಯನ್ನು ಪಡೆದು ಸಂಬಳ ನೀಡುತ್ತೇವೆ ಎಂದಿದ್ದಾರೆ. ಸಾರಿಗೆ ಸಿಬ್ಬಂದಿಗಳ ವೇತನವನ್ನು ಮೂರು-ನಾಲ್ಕು …
Read More »ಅರಬ್ ರಾಷ್ಟ್ರಗಳಲ್ಲಿನ ಕನ್ನಡಿಗರನ್ನು ಕರೆತರಲು ಡಿಸಿಎಂ ಅಶ್ವತ್ಥನಾರಾಯಣ ಬರೆದಿದ್ದ ಪತ್ರಕ್ಕೆ ಸ್ಪಂದಿಸಿದ ಕೇಂದ್
ಬೆಂಗಳೂರು : ಕೊವಿಡ್ನಿಂದಾಗಿ ಅರಬ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿ ದೇಶಕ್ಕೆ ವಾಪಸಾಗಲು ಬಯಸಿರುವ ಕನ್ನಡಿಗರಿಗೆ ವಿಮಾನದ ವ್ಯವಸ್ಥೆ ಮಾಡುವಂತೆ ಕೋರಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಬರೆದಿದ್ದ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಮೇ 10 ಅಥವಾ 11ಕ್ಕೆ ವಿಮಾನದ ವ್ಯವಸ್ಥೆ ಮಾಡಲಿದೆ. ಭಾನುವಾರ ದುಬೈ ಕನ್ನಡಿಗರ ಜತೆ ವೀಡಿಯೋ ಸಂವಾದ ನಡೆಸಿದ್ದ ಡಾ. ಅಶ್ವತ್ಥನಾರಾಯಣ, ಅವರ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ಕಡೆಯಿಂದ ಆಗುವ ಎಲ್ಲ ಸಹಾಯ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. …
Read More »ರಾಮನಗರ : 68 ಸಿಬ್ಬಂದಿಯ 2ನೇ ಕಾವಿಡ್ -19 ಟೆಸ್ಟ್ ಕೂಡ ನೆಗೆಟಿವ್ …….
ಬೆಂಗಳೂರು: ಪಾದರಾಯನಪುರ ಗಲಭೆಯ ಆರೋಪಿಗಳು ರಾಮನಗರದ ಜಿಲ್ಲಾ ಕಾರಾಗೃಹದಲ್ಲಿದ್ದ ವೇಳೆ ಅವರ ಮೇಲೆ ನಿಗಾವಹಿಸಿದ್ದ ವಿವಿಧ ಇಲಾಖೆಗಳ ಸಿಬ್ಬಂದಿ ಸೇರಿ ಒಟ್ಟು 68 ಮಂದಿಯ ಎರಡನೇ ಬಾರಿಯ ಕೊರೊನಾ ತಪಾಸಣಾ ಫಲಿತಾಂಶ ನೆಗಟಿವ್ ಬಂದಿದೆ. “ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳಿಂದ ಜಿಲ್ಲೆ ಈಗಲೂ ಗ್ರೀನ್ ಝೋನ್ ಆಗಿ ಉಳಿದಿದೆ ಎಂಬ ಈ ಸಂತಸದ ಸುದ್ದಿಯನ್ನು ಹಂಚಿಕೊಳ್ಳಲು ಖುಷಿ ಆಗುತ್ತಿದೆ, ” ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ …
Read More »ಸಿಎಂ ರಿಲೀಫ್ ಫಂಡ್ಗೆ 2 ಕೋಟಿ ರೂ. ದೇಣಿಗೆ ನೀಡಿದ ಕೋರೆ………
ಬೆಂಗಳೂರು: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ರಾಜ್ಯಸಭಾ ಸದಸ್ಯ, ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ್ ಕೋರೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಭಾಕರ್ ಕೋರೆ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದ 2 ಕೋಟಿ ರೂ. ಚೆಕ್ ಸ್ವೀಕರಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ರಮೇಶ್ ಜಾರಕಿಹೊಳಿ, ಶಾಸಕ ಮಹಾಂತೇಶ ಕವಟಗಿಮಠ ಇದ್ದರು. …
Read More »ಕೊರೊನಾ ವಾರಿಯರ್ಸ್ಗಾಗಿ ಪಿಪಿಇ ಕಿಟ್, ಮಾಸ್ಕ್ ತಯಾರಿಸ್ತಿದ್ದಾರೆ ಮಹಿಳೆಯರು
ಬೆಂಗಳೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಹಾಗೆ ಮಹಿಳೆಯರೆಲ್ಲಾ ಸೇರಿ ಕೌಶಲ್ಯ ಪಡೆದು ಇಡೀ ಕುಟುಂಬದ ಆರ್ಥಿಕ ಮಟ್ಟ ಸುಧಾರಿಸಿ, ಮಾರಾಣಾಂತಿಕ ಕೋವಿಡ್-19 ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ಗೆ ಅಗತ್ಯವಾದ ಪಿಪಿಇ ಕಿಟ್ ತಯಾರಿಸಿ ನೆರವಾಗುತ್ತಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ಸಮೀಪ ಬ್ಲಾಕ್ ಸ್ತ್ರೀ ಶಕ್ತಿ ಸೊಸೈಟಿ ಅಡಿಯಲ್ಲಿ ಮಹಿಳೆಯರು ಕೋವಿಡ್ 19 ವಾರಿಯರ್ಸ್ಗೆ ತಮ್ಮ ಅಳಿಲು ಸೇವೆ ಮಾಡಿ, ಕೊರೊನಾ ಸಂದರ್ಭದಲ್ಲಿ ನೆರವಾಗಿ ಸಾರ್ಥಕತೆ ಮೆರೆಯುತ್ತಿದ್ದಾರೆ. ಈ …
Read More »ಇಂದು 20 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ…….
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ 20 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಬುಲೆಟಿನ್ನಲ್ಲಿ, ಬಾಗಲಕೋಟೆಯಲ್ಲಿ 13, ಬೆಂಗಳೂರು 2, ದಕ್ಷಿಣ ಕನ್ನಡ 3, ಕಲಬುರಗಿ ಹಾಗೂ ವಿಜಯಪುರದಲ್ಲಿ ಒಬ್ಬರಿಗೆ ಕೊರೊನಾ ಪ್ರಕರಣ …
Read More »ಜೈಜಗದೀಶ್ ವಿರುದ್ಧ ಕಾನೂನು ಹೋರಾಟ ಮಾಡ್ತೀನಿ : ಸಾ.ರಾ.ಗೋವಿಂದ್
ಬೆಂಗಳೂರು, ಮೇ6- ನಟ, ನಿರ್ಮಾಪಕ ಜೈಜಗದೀಶ್ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ನಿರ್ಮಾಪಕ, ವಿತರಕ ಹಾಗೂ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ತಿಳಿಸಿದ್ದಾರೆ. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿ ಸಿಲುಕಿರುವ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕರಿಗೆ ಉಚಿತ ಆಹಾರ ಕಿಟ್ಗಳನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ನೀಡಲು ಮುಂದಾಗಿದ್ದರು. ಇದಕ್ಕೆ ಸಹಕಾರಿಯಾಗಿ ನಾನು ನಿಂತಿದ್ದೆ. ಈ ಕುರಿತು ನಟ ಜೈಜಗದೀಶ್ ನಮ್ಮ ಸೇವೆಯನ್ನು ಸಹಿಸದೆ ಅವಾಚ್ಯ ಶಬ್ದಗಳಿಂದ ನಿಂದಿಸಿ …
Read More »