Breaking News

ಬೆಂಗಳೂರು

ಕೊರೋನಾ ಪರಿಹಾರಕ್ಕಾಗಿ ಆಟೋ ಚಾಲಕರು ಕ್ಯೂ ನಲ್ಲಿ ನಿಲ್ಲಬೇಕಿಲ್ಲ..! ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು, ಮೇ 8-ಆಟೋ ರಿಕ್ಷಾ , ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನ ನೀಡಲು ಅರ್ಜಿಗಳನ್ನುಆನ್‍ಲೈನ್‍ನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರು ಅರ್ಜಿಗಳನ್ನು ಸಲ್ಲಿಸಲು ಅನಾವಶ್ಯಕವಾಗಿ ಪರಿಶ್ರಮ ಪಡೆಯುವ ಅವಶ್ಯಕತೆ ಇಲ್ಲ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಆಟೋ ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನವನ್ನು ಅವರವರ ಖಾತೆಗೆ ನೇರವಾಗಿ ವರ್ಗಾಯಿಸುವುದರಿಂದ ಯಾರೂ ಆತಂಕಕ್ಕೆ ಒಳಗಾಗಬಾರದೆಂದು ಸಾರಿಗೆ ಮತ್ತು ರಸ್ತೆ …

Read More »

ಪರಿಹಾರ ನಿಧಿಗೆ ಬಂದ ಹಣದ ಖರ್ಚು-ವೆಚ್ಚ ಕುರಿತು ಶ್ವೇತ ಪತ್ರ ಹೊರಡಿಸಬೇಕು : ವಿಪಕ್ಷಗಳ ಒತ್ತಾಯ

ಬೆಂಗಳೂರು, ಮೇ 8- ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂಪಾಯಿ ನೀಡಬೇಕು, ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಬೇಕು, ಪಿಎಂ ಕೇರ್ ನಿಧಿಗೆ ಪಾವತಿಯಾಗಿರುವ ಹಣವನ್ನು ಹಿಂಪಡೆಯಬೇಕು ಹಾಗೆಯೇ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿರುವ ಹಣದ ಖರ್ಚು ವೆಚ್ಚದ ಕುರಿತು ಶ್ವೇತ ಪತ್ರ ಹೊರಡಿಸಬೇಕು ಎಂದು ವಿರೋಧ ಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿರೋಧ ಪಕ್ಷಗಳ ಮುಖಂಡರು ಇಂದು ಮುಖ್ಯಮಂತ್ರಿ …

Read More »

ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 45 ಮಂದಿಗೆ ಕೊರೊನಾ

ಭಟ್ಕಳದಲ್ಲಿ 5 ತಿಂಗಳ ಕಂದಮ್ಮ, 3 ವರ್ಷದ ಬಾಲಕಿ ಸೇರಿ 12 ಮಂದಿಗೆ ಸೋಂಕು – ಬೆಳಗಾವಿ, ದಾವಣಗೆರೆಯಲ್ಲಿ ಕೊರೊನಾ ಸ್ಫೋಟ ಇಂದು 45 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.     ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 45 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಹಾಗೂ …

Read More »

ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ; ಕುಡಿದ ಅಮಲಿನಲ್ಲಿ ಕೊಲೆಯಾದ ರೌಡಿಶೀಟರ್‌

ಬ್ಯಾಟರಾಯನಪುರ ರೌಡಿಶೀಟರ್‌ ಅಶೋಕ್‌ ನಿನ್ನೆ ಕುಡಿದ ಅಮಲಿನಲ್ಲಿದ್ದಾಗ ದಾಳಿ ಮಾಡಿದ್ದ ಕೆಲವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿಯೇ ಈ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ. ಬೆಂಗಳೂರು (ಮೇ 08); ಕಳೆದ 47 ದಿನಗಳಿಂದ ಶಾಂತವಾಗಿದ್ದ ಬೆಂಗಳೂರು ಕ್ರೈಂ ಲೋಕ ಲಾಕ್‌ಡೌನ್ ಅನ್ನು ಸಡಿಲಿಸಿ ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆ ಮತ್ತೆ ಕ್ರಿಯಾಶೀಲವಾಗಿದೆ. ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ರೌಡಿಶೀಟರ್‌ ಅಶೋಕ್‌ ಅಲಿಯಾಸ್ ದಡಿಯಾ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ …

Read More »

ಬೆಂಗ್ಳೂರಿಗರೇ ಎಚ್ಚರ- ಮೇ ಅಂತ್ಯಕ್ಕೆ ಹೆಚ್ಚಾಗಲಿದೆ ಕೊರೊನಾ ಅಬ್ಬರ……………

ಬೆಂಗಳೂರು: ಭಾರತದಲ್ಲಿ ಜೂನ್, ಜುಲೈ ಅಂತ್ಯಕ್ಕೆ ಕೊರೊನಾ ಇನ್ನಿಲ್ಲದಂತೆ ಬಾಧಿಸಲಿದೆ ಅಂತ ಎಚ್ಚರಿಸಲಾಗಿದೆ. ಆದರೆ ಬೆಂಗಳೂರಿಗೆ ಮಾತ್ರ ಮೇ ತಿಂಗಳೇ ಕಂಟಕವಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮುಂದಿನ ವಾರ ಬೆಂಗಳೂರಿನಲ್ಲಿ ಮತ್ತಷ್ಟು ಕೊರೊನಾ ಹೆಚ್ಚಳವಾಗಲಿದ್ದು, ಮೇ ಅಂತ್ಯಕ್ಕೆ 5 ಸಾವಿರ ಪ್ರಕರಣ ಪತ್ತೆಯಾಗಬಹುದು ಅಂತ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‍ಡೌನ್ ಸಡಿಲಿಕೆ ಆಗಿ ನಾಲ್ಕು ದಿನದಲ್ಲಿ ಅಂತಹ ಕಂಟಕ ಬೆಂಗಳೂರಿಗೆ ಎದುರಾಗಿಲ್ಲ. ಆದರೆ ಮುಂದಿನ ವಾರ ಹೈ ರಿಸ್ಕ್ …

Read More »

ಅವಧಿಗೆ ತಕ್ಕಂತೆ ಪಠ್ಯವನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ ಸೂಚನೆ

ಬೆಂಗಳೂರು : ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಸಚಿವರು ಈ ಶೈಕ್ಷಣಿಕ ಸಾಲಿನ ಪ್ರಾರಂಭದ …

Read More »

ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ’- ಕಿಚ್ಚನ ಖಡಕ್ ಲುಕ್‍ಗೆ ಅಭಿಮಾನಿಗಳು ಫಿದಾ

ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಖಡಕ್ ಲುಕ್ ಹಾಗೂ ಬೇರ್ ಬಾಡಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುದೀಪ್ ಅವರು ಪೈಲ್ವಾನ್ ಸಿನಿಮಾದ ಸಮಯದಲ್ಲಿ ತಮ್ಮ ದೇಹವನ್ನು ದಂಡಿಸಿ ಖಡಕ್ ಬಾಡಿ ಮಾಡಿದ್ದರು. ಈಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿವೆ. ಕಿಚ್ಚನ ಖಡಕ್ ಲುಕ್ ಇರುವ ಈ ಫೋಟೋಗಳನ್ನು ಹಂಚಿಕೊಂಡಿರುವ ನಿರ್ದೇಶಕ ಪವನ್ …

Read More »

ಮೂರನೇ ಲಾಕ್ ಡೌನ್ ನಂತರ ಏನು? ಸುಳಿವು ಕೊಟ್ಟ ಗೃಹಸಚಿವ ಬೊಮ್ಮಾಯಿ

ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ ಎನ್ನುವ ಕಾರಣಕ್ಕಾಗಿ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲಾಗಿದೆ, ಇದರರ್ಥ ಕೊರೊನಾ ಕಮ್ಮಿಯಾಗಿದೆ ಎಂದಲ್ಲ” ಎಂದು ಬೊಮ್ಮಾಯಿ ಹೇಳಿದ್ದಾರೆ. ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಕೊರೊನಾವನ್ನು ಸಂಪೂರ್ಣ ತೊಲಗಿಸಲು ಸಾಧ್ಯ. ಮೂರನೇ ಲಾಕ್ ಡೌನ್ ಅನ್ನು ಯಶಸ್ವಿಗೊಳಿಸುವ ಸಂಪೂರ್ಣ ಜವಾಬ್ದಾರಿ ಜನರದ್ದು”ಎಂದು ಬೊಮ್ಮಾಯಿ ಪುನರುಚ್ಚಿಸಿದ್ದಾರೆ. ಮೇ ಹದಿನೇಳರ ನಂತರ ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ, ಮುಂದೆ ಕಠಿಣ ಕ್ರಮ ತೆಗೆದುಕೊಳ್ಳುವ ಅನಿವಾರ್ಯತೆ ಸರಕಾರಕ್ಕೆ ಬರಲಿದೆ”ಎಂದು …

Read More »

ಪತ್ರಕರ್ತರಿಗೆ ಯಾಕೆ ಜೀವ ವಿಮೆ ಘೋಷಿಸಿಲ್ಲ?: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ನಲ್ಲಿ PIL ಸಲ್ಲಿಕೆ

ಬೆಂಗಳೂರು: ಮಾರಕ ಕೊರೋನಾ ವೈರಸ್​​ ವಿರುದ್ಧ ಹೋರಾಡುತ್ತಿರುವ ವೈದ್ಯರು, ಪೊಲೀಸರು ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಪೌರ ಕಾರ್ಮಿಕರಿಗೆ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಘೋಷಿಸಿದೆ. ಈ ಮೂಲಕ ಕೊರೋನಾ ವಿರುದ್ಧದ ಸಮರದಲ್ಲಿ ಸಾವನ್ನಪ್ಪುವ ವಾರಿಯರ್ಸ್​ಗೆ 30 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಲಾಗಿದೆ. ಆದರೀಗ, ವೈದ್ಯರು, ಪೊಲೀಸರು, ಪೌರ ಕಾರ್ಮಿಕರು ಮತ್ತು ಅಂಗನವಾಡಿ ಕಾರ್ಯಕರ್ತರಂತೆಯೇ ತಮ್ಮ ಪ್ರಾಣವನ್ನು …

Read More »

ಶಿವಾಜಿನಗರ ನಾಲ್ವರಲ್ಲಿ ಕೊರೋನಾ ಸೋಂಕು; ಬೆಂಗಳೂರಿನ ಬಹುತೇಕ ಕಡೆ ಅಡ್ಡಾಡಿರುವ ಸೋಂಕಿತರು

ಬೆಂಗಳೂರು:  ಹೌಸ್​ ಕೀಪಿಂಗ್​ ಜೊತೆ ವಾಸವಿದ್ದ ಶಿವಾಜಿನಗರ ನಾಲ್ವರು ವ್ಯಾಪಾರಿಗಳಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕೊರೋನಾ ಸೋಂಕಿತ ಹೌಸ್​ ಕೀಪಿಂಗ್ ವ್ಯಕ್ತಿ ಜತೆ ಒಟ್ಟು  ಏಳು ಜನ ಇದ್ದರು. ಇವರಲ್ಲಿ ನಾಲ್ಕು ಜನರಲ್ಲಿ ಪಾಸಿಟಿವ್ ಕಂಡುಬಂದಿದೆ.  13 ಜನರಲ್ಲಿ 5 ಮಂದಿಗೂ ಕೊರೋನಾ ಸೋಂಕು ತಗುಲಿದೆ. ಉಳಿದ 9 ಜನರ ಫಲಿತಾಂಶ ನಾಳೆ ಬರಲಿದೆ. ಇದೀಗ ಕೊರೋನಾ ಪಾಸಿಟಿವ್ ವರದಿ ಬಂದ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 19, 22, 25 …

Read More »