Breaking News

ಬೆಂಗಳೂರು

ಕ್ವಾರಂಟೈನ್ ನಲ್ಲಿರುವರ ಬೇಡಿಕೆ ಕೇಳಿ ಬಿಬಿಎಂಪಿ ಸಿಬ್ಬಂದಿ ರೋಸಿ ಹೋಗಿದ್ದಾರೆ..

ಬೆಂಗಳೂರು: ಕ್ವಾರಂಟೈನ್ ನಲ್ಲಿರುವ ಹೊಂಗಸಂದ್ರದ ಬಿಹಾರಿಗಳು ಸಿಕ್ಕಾಪಟ್ಟೆ ಬೇಡಿಕೆ ಇಡುತ್ತಿದ್ದು, ಇವರ ಬೇಡಿಕೆ ಕೇಳಿ ಬಿಬಿಎಂಪಿ ಸಿಬ್ಬಂದಿ ರೋಸಿ ಹೋಗಿದ್ದಾರೆ. ಹೊಂಗಸಂದ್ರ- ಎಲೆಕ್ಟ್ರಾನಿಕ್ ಸಿಟಿ ಮಧ್ಯ ಭಾಗದಲ್ಲಿ ಬರುವ ಮಣಿಪಾಲ್ ಕೌಂಟಿ ಹೋಟೆಲ್ ನಲ್ಲಿ ಬಿಹಾರಿ ಮೂಲದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಈಗ ಟಿವಿ ಹಾಕಿಸಿ ಊಟ ಬೇರೆ ಕೊಡಿ ಎಂದು ಬಿಹಾರಿಗಳು ದಿನಕ್ಕೊಂದು ಬೇಡಿಕೆ ಇಟ್ಟಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಈ ಬೇಡಿಕೆಗೆ ರೋಸಿ ಹೋದ ಬಿಬಿಎಂಪಿ …

Read More »

ಕೊರೊನಾದಿಂದ ಲಾಕ್‍ಡೌನ್ ಆಗಿರುವ ಹಸಿರು ವಲಯದಲ್ಲಿರುವ ಜಿಲ್ಲೆಗಳಿಗೆ ಬಂಪರ್…..

ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಆಗಿರುವ ಹಸಿರು ವಲಯದಲ್ಲಿರುವ ಜಿಲ್ಲೆಗಳಿಗೆ ಬಂಪರ್ ಸಿಕ್ಕಿದ್ದು, ಈಗ ಲಾಕ್‍ಡೌನ್ ನಿಂದ ವಿನಾಯಿತಿ ಸಿಕ್ಕಿದೆ. ಗ್ರೀನ್ ಝೋನ್ ನಲ್ಲಿರುವ 14 ಜಿಲ್ಲೆಗಳಿಗೆ ಲಾಕ್ ಡೌನ್ ಸಡಿಲಿಕೆ ಆಗಿದ್ದು, ರೆಡ್ ಝೋನ್ ನಲ್ಲಿ ಈಗ ಇರುವಂತೆ ಲಾಕ್‍ಡೌನ್ ಮುಂದುವರಿಯಲಿದೆ. ಇಂದಿನಿಂದ ಮೇ 3ರವರೆಗೆ ಷರತ್ತುಗಳನ್ನು ವಿಧಿಸಿ ರಾಜ್ಯ ಸರ್ಕಾರ ವಿನಾಯಿತಿ ಪ್ರಕಟಿಸಿದೆ. ಎಲ್ಲಿ ವಿನಾಯಿತಿ? ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, …

Read More »

ಕೊರೊನಾ ಲಾಕ್ ಡೌನ್ ನಡುವೆಯೂ ಅಕ್ರವಾಗಿ ವಿದೇಶಿ ಮದ್ಯ ಮಾರಾಟ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆಯೂ ಅಕ್ರವಾಗಿ ವಿದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರೋಹನ್ ಬತೇಜ್ (31) ಬಂಧಿತ ಆರೋಪಿ. ಬಂಧಿತನಿಂದ ವಿವಿಧ ಬ್ರಾಂಡ್‍ನ 22 ಲೀಟರ್ ವಿದೇಶಿ ಮದ್ಯ, ಐ10 ಕಾರು, ಒಂದು ಐ ಪೋನ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ರೋಹನ್ ಐ10 ಕಾರಿನಲ್ಲಿ ಬೆಂಗಳೂರಿನ ವಿವಿಧೆಡೆ ವಿದೇಶಿ ಮದ್ಯ ಮಾರುತ್ತಿದ್ದ. ಈ ಕುರಿತು ಸಿಸಿಬಿ …

Read More »

ಬೆಳಗಾವಿಯಲ್ಲಿ ಕೋಬ್ರಾ ಕಮಾಂಡೋ ಮೇಲೆ ಪೊಲೀಸರ ಹಲ್ಲೆ ಪ್ರಕರಣ: ತನಿಖೆಗೆ ಸಿಅರ್​ಪಿಎಫ್ ಒತ್ತಾಯ

ಬೆಂಗಳೂರು(ಏ. 27): ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್​ಪಿಎಫ್​ನ CoBRA ವಿಭಾಗದ ಕಮ್ಯಾಂಡೋ ಕ್ಯಾಪ್ಟನ್ ಸಚಿನ್ ಸಾವಂತ್ ಮೇಲೆ ಸ್ಥಳೀಯ ಪೊಲೀಸರು ಹಲ್ಲೆ ಎಸಗಿದ ಘಟನೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯನ್ನು ತನಿಖೆಗೊಳಪಡಿಸಬೇಕೆಂದು ಸಿಆರ್​ಪಿಎಫ್​ನ ಎಡಿಜಿಪಿ ಸಂಜಯ್ ಅರೋರಾ ಅವರು ಒತ್ತಾಯ ಮಾಡಿದ್ಧಾರೆ. ಈ ಸಂಬಂಧ, ಕರ್ನಾಟಕ ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಅರೋರಾ ಪತ್ರ ಬರೆದು …

Read More »

ರಸ್ತೆ ಮಧ್ಯೆಯೇ ಯುವತಿಯನ್ನು ಎಳೆದಾಡಿದ್ದ ಬೆಂಗಳೂರಿನ ಕಾಮುಕ ಬಂಧನ………..

ಬೆಂಗಳೂರು (ಏ. 28): ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯ ಮೈ ಮುಟ್ಟಿ, ಕೈ ಕಚ್ಚಿ ಪರಾರಿಯಾಗಿದ್ದ ಬೆಂಗಳೂರಿನ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ದೇಶಾದ್ಯಂತ ಲಾಕ್​ಡೌನ್​ ಘೋಷಣೆ ಆದಮೇಲೆ ಅಪರಾಧ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿದೆ ಎಂದು ವರದಿಯೊಂದು ತಿಳಿಸಿತ್ತು. ಆದರೆ, ಮನೆಯಿಂದ ಹೊರಗೆ ಹೋಗಲೂ ಯೋಚಿಸಬೇಕಾದ ಪರಿಸ್ಥಿತಿ ಇದ್ದರೂ ಅಪರಾಧ ಪ್ರಕರಣಗಳು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಇದಕ್ಕೆ ಉದಾಹರಣೆಯೆಂಬಂತೆ ಲಾಕ್​ಡೌನ್​​ ಬಳಿಕವೂ ಅಲ್ಲಲ್ಲಿ ಕೊಲೆ, ಅತ್ಯಾಚಾರ, ಸುಲಿಗೆ, ವಂಚನೆ, ಅಪಹರಣದ ಪ್ರಕರಣಗಳು …

Read More »

ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ.

ಬೆಂಗಳೂರು: ಉಗ್ರಂ ಖ್ಯಾತಿಯ ಶ್ರೀಮುರಳಿ ಮನೆಯಲ್ಲಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ. ಲಾಕ್‍ಡೌನ್ ದಿನಗಳು ಹಲವು ನಟ, ನಟಿಯರಿಗೆ ಸಂತಸ ನೀಡಿದ್ದು, ಕುಟುಂಬದೊಂದಿಗೆ ಕಾಲ ಕಳೆಯಲು ಅವಕಾಶ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಾಲಿವುಡ್, ಸ್ಯಾಂಡಲ್‍ವುಡ್ ಸೇರಿದಂತೆ ಬಹುತೇಕ ನಟರು ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಹತ್ತು ಹಲವು, ಚಟುವಟಿಕೆಗಳು ತಮ್ಮ ಹವ್ಯಾಸಗಳು ಸೇರಿದಂತೆ ಮನೆಗೆಲಸಗಳನ್ನೂ ಅಷ್ಟೇ …

Read More »

ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್………….

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಳೆಯಿಂದ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಅನುಮತಿ ಸಿಗಲಿದೆ. ಕ್ರಷರ್ ವ್ಯವಹಾರ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಬ್‍ರಿಜಿಸ್ಟ್ರಾರ್ ಚೇರಿಗೆ ಬರುವ ಮುನ್ನ ಕಚೇರಿಗೆ ಕರೆ ಮಾಡಿ ಅಧಿಕಾರಿಗಳಿಗೆ ಸಮಯ ಕೇಳಿ ಬರಬೇಕಾಗುತ್ತದೆ.ಕಚೇರಿಗೆ ಬರುವವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಕಂದಾಯ ಸಚಿವ ಅಶೋಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಅಗತ್ಯ ಸೇವೆ ಜೊತೆ ಆರ್ಥಿಕ …

Read More »

ಲಾಕ್‍ಡೌನ್ ನಿರ್ಧಾರ ರಾಜ್ಯಗಳಿಗೆ ಬಿಟ್ಟರೆ ಬಿಎಸ್‍ವೈ ಪ್ಲಾನ್ ಏನು?

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಹಿನ್ನೆಲೆ ಮೇ 3ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಆ ಬಳಿಕ ಕೇಂದ್ರ ಸರ್ಕಾರವು ಲಾಕ್‍ಡೌನ್ ನಿರ್ಧಾರವನ್ನು ರಾಜ್ಯಗಳಿಗೆ ಬಿಟ್ಟರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದಿನ ನಡೆ ಏನು ಎಂಬ ಚರ್ಚೆ ಶುರುವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಕೂಡ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದರ ಆಧಾರದ ಮೇಲೆ ಸಿಎಂ ನಿರ್ಧಾರ …

Read More »

ಕೊರೊನಾ ತಡೆಗೆ ಮೋದಿ ‘ತ್ರಿ’ ಸೂತ್ರ- ಕರ್ನಾಟಕದ 6 ಜಿಲ್ಲೆಗಳು ರೆಡ್ ಝೋನ್

ಬೆಂಗಳೂರು: ಪ್ರಧಾನಿ ಮೋದಿ ಕೊರೊನಾ ತಡೆಗೆ ತ್ರಿ ಝೋನ್ ಮಂತ್ರವನ್ನು ಇಂದೂ ಕೂಡ ಪಠಿಸಿದ್ದಾರೆ. ಸೋಂಕಿನ ತೀವ್ರತೆಯ ಆಧಾರದ ಮೇಲೆ ಝೋನ್‍ಗಳನ್ನು ವಿಂಗಡಿಸಲಾಗಿದ್ದು, ಅಲ್ಲಿನ ಪರಿಸ್ಥಿತಿಗಳಿಗೆ ಅನುಗುಣವಾಗಿ ಪ್ರಣಾಳಿಕೆ ರೂಪಿಸಿ ಎಂದು ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಮೋದಿ ಸಲಹೆ ಅನ್ವಯ ಬೆಂಗಳೂರು, ಮೈಸೂರು, ಕಲಬುರಗಿ ಸೇರಿದಂತೆ, ರೆಡ್ ಜೋನ್ ಜಿಲ್ಲೆಗಳಲ್ಲಿ ಕೊರೊನಾ ಲಾಕ್‍ಡೌನ್ ಮುಂದುವರೆಯುವ ಸಾಧ್ಯತೆಗಳಿವೆ ಹೆಚ್ಚಿವೆ. ಒಂದಿಷ್ಟು ಮಾನದಂಡಗಳನ್ನು ಇಟ್ಟುಕೊಂಡು ಇವತ್ತು ಕೊರೊನಾಗೆ ಸಂಬಂಧಿಸಿದಂತೆ …

Read More »

ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಸಿಎಂಗೆ ಎಚ್‍ಡಿಡಿ ಪತ್ರ

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಮಾರುಕಟ್ಟೆಗಳಿಗೆ ಫಸಲು ಸಾಗಿಸಲಾರದೇ, ಖರೀದಿದಾರರು ಸಿಗದೇ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಿಎಂ ಯಡಿಯೂರಪ್ಪಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ. 2 ಪುಟಗಳ ಪತ್ರ ಬರೆದಿರುವ ಎಚ್‍ಡಿಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ರೈತರು ಕೂಡ ಈಗ ಬೀದಿಗೆ ಬೀಳುವಂತಾಗಿದೆ. ಹಣ್ಣು, ತರಕಾರಿ, ಹೂವು ಬೆಳೆಗಾರರ ನೆರವಿಗೆ ಬರಬೇಕು. ಕೃಷಿ, ತೋಟಗಾರಿಕೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ನಷ್ಟ …

Read More »