Breaking News

ಬೆಂಗಳೂರು

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದ 11 ಜನರಿಗೆ ಕೊರೋನಾ ಸೋಂಕು; ಮಾದಾವರ ಬಳಿ ಹೈ ಅಲರ್ಟ್

ಬೆಂಗಳೂರು (ಮೇ 06); ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (Bangalore International Exhibition Centre) ಕೆಲಸ ಮಾಡುವ ಉತ್ತರಪ್ರದೇಶ ಮೂಲದ 11 ಜನರಲ್ಲಿ ಇದೀಗ ಕೊರೋನಾ ಸೋಂಕು ಪತ್ತೆಯಾಗಿದ್ದು ಮಾದಾವರ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರಿ ಮಾದಾವರ ಬಳಿ ಇರುವ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಅನೇಕ ಉತ್ತರ ಭಾರತೀಯರು ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ  ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿದ ವೇಳೆ ಹೈ ಟೆಂಪರೇಚರ್ ಕಂಡುಬಂದಿತ್ತು. ಹೀಗಾಗಿ 11 ಜನರನ್ನು ನೆನ್ನೆ ವಿಕ್ಟೊರಿಯಾ ಆಸ್ಪತ್ರೆಗೆ ರವಾನೆ …

Read More »

ಇಂದಿನಿಂದ ಎಣ್ಣೆ ಮತ್ತಷ್ಟು ದುಬಾರಿ?……..

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಎಣ್ಣೆ ಇಲ್ಲದೆ 42 ದಿನಗಳನ್ನು ಮುಗಿಸಿದ ಮದ್ಯಪ್ರಿಯರಿಗೆ ಇಂದು ಬಿಗ್ ಶಾಕ್ ಸುದ್ದಿಯೊಂದು ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಶೇ.6 ರಷ್ಟು ಅಬಕಾರಿ ಸುಂಕ ಹೆಚ್ಚಳದ ಬಿಸಿ ಅನುಭವಿಸಿದ್ದ ಮದ್ಯಪ್ರಿಯರಿಗೆ ಈಗ ಕೊರೊನಾ ಶಾಕ್ ಫಿಕ್ಸ್ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಹೌದು. ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆಯೆಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಅಬಕಾರಿ ಸುಂಕದ ಜೊತೆಗೆ ಮದ್ಯದ …

Read More »

ಪಬ್‍ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಕೊಲೆಗೈದವನ ಕಾಲಿಗೆ ಗುಂಡೇಟು…..

ಬೆಂಗಳೂರು: ಪಬ್ ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಗೆಳೆಯನನ್ನು ಕೊಲೆಗೈದಿದ್ದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡೇಟು ಸದ್ದು ಕೇಳಿದೆ. ಪಬ್ ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದ ಅನ್ನೋ ಕಾರಣಕ್ಕೆ ಕರಣ್ ಸಿಂಗ್ ಎಂಬವನ್ನ ರೌಡಿ ಶೀಟರ್ ಪ್ರಭು ಕೊಲೆ ಮಾಡಿದ್ದನು. ಇಂದು ಪೊಲೀಸರು ಆಚಾರ್ಯ ಕಾಲೇಜ್ ಬಳಿಯ ಸಾಸಿವೆಘಟ್ಟದಲ್ಲಿ ಪ್ರಭು ಬಂಧನಕ್ಕೆ ಮುಂದಾಗಿದ್ದರು. ಈ ವೇಳೆ ಪೇದೆ …

Read More »

ಧಾರಾವಾಹಿ ಶೂಟಿಂಗ್‍ಗೆ ಸರ್ಕಾರದಿಂದ ಅನುಮತಿ..!

ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿರುವ ಧಾರಾವಾಹಿ ಶೂಟಿಂಗ್‍ಗಳಿಗೆ ಸರ್ಕಾರ ಅನುಮತಿ ನೀಡಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು ಮಂಗಳವಾರ ಮಾತನಾಡಿದ್ದ ಕಂದಾಯ ಸಚಿವ ಆರ್​. ಅಶೋಕ್​, ಧಾರಾವಾಹಿ ಮತ್ತು …

Read More »

ಕುಡುಕರ ಅವಾಂತರದಿಂದ ಮತ್ತೊಂದು ಕೊಲೆ!

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ 43 ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದ ಕುಡುಕರು ಸೋಮವಾರ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮದ್ಯ ಸೇವಿಸಿ ಸುಮ್ಮನಿರದ ಕೆಲವರು ಕೊಲೆ, ಹಲ್ಲೆಗೆ ನಡೆಸಿರುವ ಘಟನೆಗಳು ವರದಿಯಾಗುತ್ತಲೇ ಇವೆ. ಇಂತಹದ್ದೇ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಕಾಮಾಕ್ಷಿಪಾಳ್ಯದ ಆದಿತ್ಯ ಬಾರ್ ಮುಂದೆ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ …

Read More »

2ನೇ ದಿನವೂಮದ್ಯ ಮಾರಾಟದಲ್ಲಿ ಬಂಪರ್- 197 ಕೋಟಿ ರೂ. ಮದ್ಯ ಮಾರಾಟ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ನಿಯಮಗಳ ಸಡಿಲಿಕೆಯ 2ನೇ ದಿನವೂ ಮದ್ಯ ಮಾರಾಟ ಜೋರಾಗಿದ್ದು, ಇಂದು 197 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ಮಾಡಲಾಗಿದೆ ಎಂದು ಕೆಎಸ್‍ಬಿಸಿಎಲ್ ಅಧಿಕಾರಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಮಾರಾಟವಾಗಿರುವ ಮದ್ಯದ ಮಾಹಿತಿ ನೀಡಲಾಗಿದ್ದು, 36.37 ಲಕ್ಷ ಲೀಟರ್ ಭಾರತೀಯ ಮದ್ಯ ಹಾಗೂ 7.02 ಲಕ್ಷ ಲೀಟರ್ ಬಿಯರ್ ಮಾರಾಟ ಮಾಡಲಾಗಿದೆ. ಉಳಿದಂತೆ ಬೆಳಗ್ಗೆಯಿಂದ ನಾಲ್ಕು ಗಂಟೆಯವರೆಗೆ ಕರ್ನಾಟಕ ಪಾನೀಯ ನಿಗಮ (ಕೆಎಸ್‍ಬಿಸಿಎಲ್‍) ನಿಂದ …

Read More »

ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣೆಗೆರೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯೊಂದರಲ್ಲೇ ಇಂದು 12 ಜನರಲ್ಲಿ ಸೋಂಕು …

Read More »

ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.ಸುವಿದ್ಯಾ ವೆಬ್​ಸೈಟ್​ನಲ್ಲಿ ಲಭ್ಯ

ಬೆಂಗಳೂರು: ಕಳೆದ ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್​ಡೌನ್​ ಹಿನ್ನೆಲೆ ಸುವಿದ್ಯಾ ವೆಬ್​ಸೈಟ್​ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸುವಿದ್ಯಾ ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ನಂಬರ್​ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಕೊರೊನಾ ಸೋಂಕು ಹರಡುವ ಭೀತಿಯಿಂದ ಸುವಿದ್ಯಾ …

Read More »

ದೇವನಹಳ್ಳಿ ಬಳಿ ವಿದೇಶದಿಂದ ಕರೆತರುವ ಕನ್ನಡಿಗರ ಕ್ವಾರಂಟೈನ್, ಸ್ಥಳೀಯ ಶಾಸಕರ ವಿರೋಧ

ಬೆಂಗಳೂರು, ಮೇ.5- ವಿದೇಶದಿಂದ ಕರೆತರುತ್ತಿರುವ ಕನ್ನಡಿಗರನ್ನು ದೇವನಹಳ್ಳಿ ಬಳಿ ಕ್ವಾರಂಟೈನ್ ಮಾಡುತ್ತಿರುವ ಸರ್ಕಾರದ ಕ್ರಮಕ್ಕೆ ಸ್ಥಳೀಯ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಕೊರೊನಾ ಮಹಾಮಾರಿ ವ್ಯಾಪಿಸುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವಿದೇಶಿಗರನ್ನು ದೇವನಹಳ್ಳಿಯಲ್ಲಿ ಕ್ವಾರಂಟೈನ್ ಮಾಡುತ್ತಿರುವುದರಿಂದ ಈ ಭಾಗದಲ್ಲಿ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಶಾಸಕರಾದ ನಾರಾಯಣಸ್ವಾಮಿ ಹಾಗೂ ವೆಂಕಟರಮಣಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನ ಹೆಮ್ಮಾರಿ ಇಡೀ ಪ್ರಪಂಚವನ್ನೆ ಕಿತ್ತು ತಿನ್ನುತ್ತಿದ್ದು ಲಕ್ಷಾಂತರ ಜನರನ್ನ ಬಲಿ …

Read More »

ಇಂದೂ ಕೂಡ ಉಚಿತವಾಗಿ KSRTC ಬಸ್‍ಗಳಲ್ಲಿ ಊರು ಕಡೆ ಪ್ರಯಾಣ ಬೆಳೆಸಿದ ಕಾರ್ಮಿಕರು

ಬೆಂಗಳೂರು, ಮೇ 5-ಲಾಕ್‍ಡೌನ್‍ನಿಂದಾಗಿ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಕಾರ್ಮಿಕರನ್ನು ಅವರವರ ಊರುಗಳಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಉಚಿತವಾಗಿ ಕಳುಹಿಸುವ ವ್ಯವಸ್ಥೆ ಮೂರನೇ ದಿನವಾದ ಇಂದು ಕೂಡ ಮುಂದುವರಿಯಿತು. ಸತತ ಮೂರನೇ ದಿನವಾದ ಇಂದು ನೂರಾರು ಬಸ್‍ಗಳಲ್ಲಿ ಕಾರ್ಮಿಕರು ಸ್ವಗ್ರಾಮಕ್ಕೆ ತೆರಳಿದರು.ಇಂದು ಬೆಳಗ್ಗೆ ಕೆಂಪೇಗೌಡ (ಮೆಜೆಸ್ಟಿಕ್) ಬಸ್ ನಿಲ್ದಾಣಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಅವರು ಭೇಟಿ ನೀಡಿ ಕಾರ್ಮಿಕರಿಗೆ ನೀರು, ಆಹಾರದ ಪೊಟ್ಟಣಗಳು, ಸ್ಯಾನಿಟೈಸರ್, ಮಾಸ್ಕ್‍ಗಳನ್ನು ವಿತರಿಸಿದರು. ಅವರಿಗೆ ಸಚಿವರಾದ ಕೆ.ಗೋಪಾಲಯ್ಯ, ಎಸ್.ಟಿ.ಸೋಮಶೇಖರ್ , …

Read More »