Breaking News

ಬೆಂಗಳೂರು

ಗಣೇಶ ಚತುರ್ಥಿಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿಯಲಿದ್ದು, ಗಣೇಶ ಹಬ್ಬದ ದಿನ(ಆ.31) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಭರ್ಜರಿ ಮಳೆಯಾಗಿರುತ್ತಿರುವ ಪರಿಣಾಮ ನದಿಗಳು ಮೈದುಂಬಿ ಹರಿಯುತ್ತಿವೆ. ಇದು ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, …

Read More »

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್: ಸರ್ಕಾರದಿಂದ ಸುಗ್ರೀವಾಜ್ಞೆ

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡಿ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ತಿದ್ದುಪಡಿ) ಅಧ್ಯಾದೇಶ-2022′ ಅನ್ನು ರಾಜ್ಯ ಸರ್ಕಾರ ಹೊರಡಿಸಿದೆ.   ಈ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ವಿಧೇಯಕ-2022ರ ಸೆಕ್ಷನ್‌ 121 ಹಾಗೂ ಸೆಕ್ಷನ್‌ 160ಗೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಆಗಸ್ಟ್‌ 20ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ …

Read More »

ಬಿಪಿಎಲ್ ಕುಟುಂಬಗಳಿಗೆ ಬಿಗ್ ಶಾಕ್: ‘ಅನ್ನಭಾಗ್ಯ’ದ 5 ಕೆಜಿ ಅಕ್ಕಿ ಕಡಿತ ಸಾಧ್ಯತೆ

ಬೆಂಗಳೂರು: ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣ ಕಡಿತವಾಗುವ ಸಾಧ್ಯತೆ ಇದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಆಹಾರಧಾನ್ಯವನ್ನು ಸೆಪ್ಟಂಬರ್ ವರೆಗೆ ವಿತರಿಸಲಾಗುವುದು. ಸೆಪ್ಟೆಂಬರ್ ಗೆ ಅವಧಿ ಮುಗಿಯುವ ಕಾರಣ ಬಿಪಿಎಲ್ ಕುಟುಂಬದ ತಲಾ ಸದಸ್ಯರಿಗೆ 5 ಕೆಜಿ ಅಕ್ಕಿ ಕಡಿತವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಬಡವರಿಗೆ ಆಹಾರ ಭದ್ರತೆ …

Read More »

ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ.   ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್‍ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ …

Read More »

ಡೂಪ್ಲಿಕೇಟ್‌ ಮತದಾರರ ಪತ್ತೆಗೆ ತಂತ್ರಜ್ಞಾನ; 4 ಲಕ್ಷ ಡೂಪ್ಲಿಕೇಟ್‌’ ಮತದಾರರ ಹೆಸರು ಡಿಲೀಟ್‌

ಬೆಂಗಳೂರು: ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡೆರಡು ಕಡೆ ವಿಳಾಸ ನೀಡಿ ಗುರುತಿನ ಚೀಟಿ ಪಡೆದವರ ಪತ್ತೆಗೆ ರಾಜ್ಯ ಚುನಾವಣಾ ಆಯೋಗ ಹೊಸ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂ ಥ 4 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದಿದೆ. ಶೀಘ್ರವೇ ಇತರೆಡೆಯಲ್ಲೂ ಪರಿಶೀಲಿಸಲಿದೆ. ಎರಡೆರಡು ವಾರ್ಡ್‌ಗಳಲ್ಲಿ ಮತದಾರರ ಪಟ್ಟಿಗೆ ನೋಂದಾಯಿಸಿದ ವ್ಯಕ್ತಿಗಳನ್ನು ಫೋಟೋ ಸಿಮಿಲರ್‌ ಎಂಟ್ರೀಸ್‌ ಮತ್ತು ಡೆಮೋಗ್ರಾಫಿಕ್‌ ಸಿಮಿಲರ್‌ ಎಂಟ್ರೀಸ್‌ ಎಂಬ …

Read More »

KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ

ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ. 1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ ಕಿರಿಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. 2019-20 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿ 2021ರ ಸೆಪ್ಟೆಂಬರ್ 18, 19 ರಂದು ಪರೀಕ್ಷೆ ನಡೆಸಲಾಗಿತ್ತು. ಆಗಸ್ಟ್ 25 ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು. ಗ್ರೂಪ್ ಎ ಹುದ್ದೆ …

Read More »

ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ: ಕಾಂಗ್ರೆಸ್‌

ಬೆಂಗಳೂರು: ಪೋಲಿಸರನ್ನು ಕಟ್ಟಿ ಹಾಕಿ ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಸುಳ್ಯದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರ ಕಾರಿನ ಮೇಲೆ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಪೋಲಿಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದರು. ಆ ವೇಳೆ ಲಾಠಿ ಚಾರ್ಜ್‌ ಮಾಡಿದ್ದ ಪೊಲೀಸರ ಎತ್ತಂಗಡಿ ಮಾಡಿ ಈ ಸರ್ಕಾರ ತಾವು ಎಂದೆಂದಿಗೂ ಗೂಂಡಾಗಿರಿಯ ಪರ ಎಂದು ತೋರಿಸಿ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿತ್ತು. ಇದೀಗ …

Read More »

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ”ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ, ನಾವು ಕಾಂಗ್ರೆಸ್ ಪಕ್ಷದವರು, ಗಾಂಧೀಜಿ ತತ್ವ ಅನುಸರಿಸುತ್ತಿರುವವರು” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.   ಫೇಸ್ ಬುಕ್ ಲೈವ್ ನಲ್ಲಿಸಿದ್ದರಾಮಯ್ಯ ಅವರತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಲಪಾಡ್, ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡುತ್ತೇವೆ. ರಾಜ್ಯದ ಎಲ್ಲೆಡೆ ಪ್ರತಿಭಟನೆ ಮಾಡುತ್ತೇವಾ. ಎಲ್ಲಾ ಸಚಿವರಿಗೂ ಮೊಟ್ಟೆ ಕಳುಹಿಸಿ …

Read More »

ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಪಕ್ಷದ ಚುನಾವಣಾ ತಂತ್ರ: KPCC ಕಚೇರಿಯಲ್ಲಿ ಸಭೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಪಕ್ಷದ ಚುನಾವಣಾ ತಂತ್ರಗಾರ ಸುನಿಲ್‌ ಕನುಗೊಳ್ ಜೊತೆ ರಾಜ್ಯ ಕಾಂಗ್ರೆಸ್‌ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಈ ಸಭೆ ನಡೆಯುತ್ತಿದೆ.   ಎಐಸಿಸಿ ಸೂಚನೆಯಂತೆ ರಾಜ್ಯದಲ್ಲಿನ ಕಾಂಗ್ರೆಸ್‌ನ ಸ್ಥಿತಿಗತಿ ಬಗ್ಗೆ ಸುನಿಲ್‌ ಕನುಗೊಳ್ ತಂಡ ಇತ್ತೀಚೆಗೆ ಸಮೀಕ್ಷೆ ನಡೆಸಿತ್ತು. ಈಗಾಗಲೇ ಈ ಸಮೀಕ್ಷೆಯ ವರದಿಯನ್ನು ಎಐಸಿಸಿಗೆ ತಂಡ ಸಲ್ಲಿಸಿದೆ. …

Read More »

ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ:B.S.Y.ಶುಭ ಕೋರಿದ ಗಣ್ಯರು

ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ. ಹೌದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಶು¨s ಕೋರಿದರು. ಈ ವೇಳೆ ಯಡಿಯೂರಪ್ಪನವರಿಗೆ ಶಾಲು ಹೊದಿಸಿ ಸನ್ಮಾನಿಸಿ …

Read More »