Breaking News
Home / ಜಿಲ್ಲೆ / ಬೆಂಗಳೂರು (page 420)

ಬೆಂಗಳೂರು

ನಮ್ಮಲ್ಲಿ ಅಜ್ಞಾನವಿದೆ, ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ – ಸಿಎಂ ಇಬ್ರಾಹಿಂ

ಬೆಂಗಳೂರು: ಪಾದರಾಯನಪುರದ ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ತೆಗೆದುಕೊಳ್ಳಿ. ಘಟನೆಗೆ ಏನು ಕಾರಣ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.ಹೃದಯ ಸೀಳಿದ್ರೆ ಅಕ್ಷರವಿಲ್ಲ ಅಂತ ತೇಜಸ್ವಿ ಸೂರ್ಯ ಹೇಳಿದ್ದರು. ನಮ್ಮಲ್ಲಿ ಶಿಕ್ಷಣ ಇಲ್ಲ. ಪೊಲೀಸರು ಬಂದರೆ ಬಂಧಿಸುತ್ತಾರೆ ಎಂಬ ಅಜ್ಞಾನವಿದೆ. ಮುಸ್ಲಿಮರು ಅನಕ್ಷರಸ್ಥರು. ಹೀಗಾಗಿ ಕೆಲ ಗೊಂದಲ ಆಗಿರಬಹುದು. ಮುಸ್ಲಿಮರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಮನವೊಲಿಸಿ ಕ್ವಾರಂಟೈನ್ ಮಾಡಬೇಕು ಎಂದು ಅವರು …

Read More »

ಸಿಎಂ ಕಾರ್ಯವೈಖರಿಗೆ ಕೆಲ ಸಚಿವರಿಂದ ಅಸಮಾಧಾನ

ಬೆಂಗಳೂರು: ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಬಿಎಸ್‍ವೈ ಕಾರ್ಯವೈಖರಿ ಬಗ್ಗೆ ಕೆಲ ಸಚಿವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಠಿ ಕೈಗೆತ್ತಿಕೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದು ತಪ್ಪು. ಅವತ್ತು ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಾಗಲೇ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಕೆಲ ಸಚಿವರು ಅಸಮಾಧನ ತೋರ್ಪಡಿಸಿದ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ಲಾಕ್‍ಡೌನ್ ವಿಚಾರದಲ್ಲಿ ಮೃದು ಧೋರಣೆ ಬೇಡ. ಇನ್ನೇನಿದ್ದರೂ ದಂಡಂ ದಶಗುಣಂ ಇರಬೇಕು ಎಂದು …

Read More »

ಮುಸ್ಲಿಂ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೀಟಿಂಗ್ …….

ಬೆಂಗಳೂರು, ಏ.20- ಕೊರೊನಾ ಸೋಂಕಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಾದರಾಯನಪುರದ ಗಲಭೆ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ಮುಖಂಡರ ಜತೆ ಸೋಮವಾರ ಸಭೆ ನಡೆಸಿದರು. ಗಲಭೆ ಹಿನ್ನೆಲೆಯಲ್ಲಿ ಇಂದು ತುರ್ತು ಸಭೆ ನಡೆಸಲಾಗಿದೆ. ಶಾಸಕ ಜಮೀರ್ ಅಹಮದ್ ಖಾನ್ ಅವರಿಗೂ ಮೊದಲು ಆಹ್ವಾನ ನೀಡಲಾಗಿತ್ತು. ಆದರೆ ಅಲ್ಲಿನ ಪರಿಸ್ಥಿತಿ ಸುಧಾರಿಸಲು …

Read More »

ಬಿಬಿಎಂಪಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ, ಇಲ್ಲಿದೆ ಹೈಲೈಟ್ಸ್

ಬೆಂಗಳೂರು, ಏ.20- ಬಿ ಖಾತಾ ಆಸ್ತಿಗಳನ್ನು ಎ ಖಾತಾಗಳಾಗಿ ಪರಿವರ್ತಿಸುವುದು, ಹೊಸ ವಲಯಗಳಲ್ಲಿನ ಆಸ್ತಿಗಳ ಖಾತಾ ನಕಲು ಮತ್ತು ಖಾತಾ ದೃಢೀಕರಣ ಪತ್ರಗಳ ಗಣಕೀಕರಣ, ಶುಲ್ಕ ದ್ವಿಗುಣ, ಉದ್ಯಮ ಪರವಾನಗಿ ವ್ಯವಸ್ಥೆ ಸರಳೀಕರಣ, ನಾಡಪ್ರಭು ಕೆಂಪೇಗೌಡರ ಹೆಸರಲ್ಲಿ ಹೊಸದಾಗಿ ಶಾಲೆ ನಿರ್ಮಾಣ, ಸ್ಮಾರ್ಟ್ ಶಿಕ್ಷಣ ವ್ಯವಸ್ಥೆ, ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಹಲವು ಕಾರ್ಯಕ್ರಮಗಳು ಸೇರಿದಂತೆ ಬಿಬಿಎಂಪಿ 2020-21ನೆ ಸಾಲಿನ 10,899.23 ಕೋಟಿ ಆಯವ್ಯಯವನ್ನು ಇಂದು ಮಂಡಿಸಿತು. ಮೇಯರ್ ಗೌತಮ್‍ಕುಮಾರ್ ಅವರ …

Read More »

ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ಗೆ ಸಿಎಂ ಚಾಲನೆ

ಬೆಂಗಳೂರು, ಏ.20-ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನ ಸಿ.ಇ.ಟಿ ಮತ್ತು ನೀಟ್ ಪರೀಕ್ಷೆಗೆ ಆನ್‍ಲೈನ್ ಕೋಚಿಂಗ್ ತರಬೇತಿಗಳನ್ನು ನಡೆಸಲು ಕಿಯೋನಿಕ್ಸ್ ಸಂಸ್ಥೆಯ ಮುಖಾಂತರ ಅಭಿವೃದ್ಧಿಪಡಿಸಿರುವ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್19ರ ಸೋಂಕಿನಿಂದಾಗಿ ಜನ ಜೀವನದ ಜೊತೆಗೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದರು. ಶೈಕ್ಷಣಿಕ ತರಗತಿಗಳು ಹಾಗೂ ಕೋಚಿಂಗ್ ಮುಂದೂಡುವುದರಿಂದ ದ್ವಿತೀಯ …

Read More »

ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು – ರಾಜ್ಯದಲ್ಲಿ ಬರಲಿದೆ ಕಠಿಣ ಕಾನೂನು ಕ್ರಮ

ಬೆಂಗಳೂರು: ಪೊಲೀಸರು, ಆರೋಗ್ಯ ಇಲಾಖೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ಕೇರಳ ಮತ್ತು ಉತ್ತರಪ್ರದೇಶ ರಾಜ್ಯಗಳ ಮಾದರಿಯಲ್ಲಿ ಕಾನೂನು ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ಮಾಡಿದ್ದು, ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಯಿದೆ. ಸರ್ಕಾರದ ತರಲಿರುವ ಹೊಸ ಕಾನೂನಿನಲ್ಲಿ ಏನೇನು ಇರಲಿದೆ? * ಯುಪಿ ಹಾಗೂ ಕೇರಳ ರಾಜ್ಯಗಳ ಸುಗ್ರೀವಾಜ್ಞೆಯಲ್ಲಿನ ಉಪಯುಕ್ತ ಅಂಶಗಳು ರಾಜ್ಯದ ಕಾನೂನಿನಲ್ಲಿ ತರಲಾಗುತ್ತಿದೆ. * ಸರ್ಕಾರದ ಸಿಬ್ಬಂದಿ …

Read More »

ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆ

ಮುಂಬೈಯಲ್ಲಿ ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಮಾಧ್ಯಮದವರಿಗಾಗಿಯೇ ಏರ್ಪಡಿಸಲಾಗಿದ್ದ ವಿಶೇಷ ವೈದ್ಯಕೀಯ ಶಿಬಿರದಲ್ಲಿ 171 ಜನರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಇನ್ನಷ್ಟೆ ಪೂರ್ಣ ವರದಿ ಬರಬೇಕಿದೆ. ಆದರೆ, ಈವರೆಗೆ ಬಂದಿರುವ ವರದಿಗಳ ಪೈಕಿ ಕನಿಷ್ಟ 30 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ವಿನೋದ ಜಗದಾಳೆ ತಿಳಿಸಿದ್ದಾರೆ. ಟಿವಿ ವರದಿಗಾರರು ಮತ್ತು ಕ್ಯಾಮರಾಮನ್ ಗಳೇ ಇದರಲ್ಲಿ ಹೆಚ್ಚಾಗಿದ್ದಾರೆ. ಸಂಸದೆ ಪ್ರಿಯಾಂಕಾ ಚತುರ್ವೇದಿ …

Read More »

ವಿಜಯ್ ಸೇತುಪತಿ ಜಾಗಕ್ಕೆ ಧನಂಜಯ್?…………

ಬೆಂಗಳೂರು: ಡಾಲಿ ಖ್ಯಾತಿಯ ಧನಂಜಯ್ ಮತ್ತೊಮ್ಮೆ ಟಾಲಿವುಡ್‍ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತ ಎನ್ನಲಾಗಿದ್ದು, ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಇನ್ನೊಂದು ಅಚ್ಚರಿಯ ಪಾತ್ರವೆಂದರೆ ತಮಿಳಿನ ವಿಜಯ್ ಸೇತುಪತಿಯವರ ಜಾಗಕ್ಕೆ ಡಾಲಿ ಆಯ್ಕೆಯಾಗಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಈ ಹಿಂದೆ ಕನ್ನಡದ ಭೈರವಗೀತ ಚಿತ್ರದಲ್ಲಿ ಧನಂಜಯ್ ಅಭಿನಯಿಸಿದ್ದರು, ಅದು ತೆಲುಗಿಗೂ ಡಬ್ ಆಗಿತ್ತು. ಇದೀಗ ಪುಷ್ಪ …

Read More »

ಐಟಿ-ಬಿಟಿ ಕಂಪನಿ ಓಪನ್ ಇಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು ಹೇಳಿದ್ದರು. ಆದರೆ ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಓಪನ್ ಇಲ್ಲ ಎಂದು ಸಚಿವ ಮಾಧುಸ್ವಾಮಿ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೇ 3ರ ತನಕ ಲಾಕ್‍ಡೌನ್ ಇರುತ್ತದೆ. ಹೀಗಾಗಿ ಯಾವುದೇ ರಿಯಾಯಿತಿ ಇರಲ್ಲ. ರಾಜ್ಯವೇ ಫುಲ್ ಲಾಕ್‍ಡೌನ್ ಆಗುತ್ತದೆ. ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಸುಗ್ರಿವಾಜ್ಞೆಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. …

Read More »

ಪಾದರಾಯನಪುರದಲ್ಲಿ ಗರುಡ ಟೀಂ ಎಂಟ್ರಿ ಕೊಟ್ಟಿದೆ. ಈ ಮೂಲಕ ಇನ್ಮುಂದೆ ಪಾದರಾಯನಪುರದಲ್ಲಿ ಯಾರೂ ಮಿಸುಕಾಡುವಂಗಿಲ್ಲ.

ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಕೆಲ ಪುಂಡರು ಗಲಭೆ ನಡೆಸಿದ ಸಂಬಂಧ ಇದೀಗ ಏರಿಯಾಗೆ ಗರುಡ ಟೀಂ ಎಂಟ್ರಿ ಕೊಟ್ಟಿದೆ. ಈ ಮೂಲಕ ಇನ್ಮುಂದೆ ಪಾದರಾಯನಪುರದಲ್ಲಿ ಯಾರೂ ಮಿಸುಕಾಡುವಂಗಿಲ್ಲ. ರೈಫಲ್ ಹಿಡಿದುಕೊಂಡು ಗರುಡ ಕಮಾಂಡೋಗಳು ನಡು ರಸ್ತೆಯಲ್ಲಿ ನಿಂತುಕೊಳ್ಳುತ್ತಾರೆ. ಮಾಸ್ಕ್ ಹಾಕದೆ, ಹೊರಗಡೆ ಓಡಾಡುವ ಜನರಿಗೆ ಫುಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಗರುಡ ಟೀಮ್ ನೋಡಿ ಜನ ಮನೆಯಿಂದ ಹೊರಬರಲು ಭಯಪಟ್ಟಿದ್ದಾರೆ. ಇತ್ತ ಪೊಲೀಸರು ಕೂಡ ಪ್ರತಿ ಏರಿಯಾದಲ್ಲೂ ಗಸ್ತು …

Read More »