ಅಲ್ಲು ಅರ್ಜುನ್ ನಟಿಸಿರುವ ‘ಪುಷ್ಪ’ ಸಿನಿಮಾ ದೊಡ್ಡ ಹಿಟ್ ಆಗಿದೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಮುನ್ನೂರು ಕೋಟಿಗೂ ಹೆಚ್ಚು ಹಣ ಗಳಿಸಿದೆ. ಲಕ್ಷಾಂತರ ಮಂದಿ ಸಿನಿಮಾವನ್ನು ನೋಡಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮ್ಯಾನರಿಸಂ, ಸಿನಿಮಾದಲ್ಲಿನ ಹಾಡುಗಳು, ಡ್ಯಾನ್ಸ್ ಸ್ಟೆಪ್ಗಳನ್ನು ಜನರು ಅನುಕರಿಸುತ್ತಿದ್ದಾರೆ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ದೆಹಲಿಯ ಮೂವರು ಬಾಲಕರು ‘ಪುಷ್ಪ’ ಸಿನಿಮಾದಿಂದ ಪ್ರೇರಿತರಾಗಿ ಕೊಲೆಯೇ ಮಾಡಿಬಿಟ್ಟಿದ್ದಾರೆ! ದೆಹಲಿಯ ಮೂವರು ಬಾಲಕರು ‘ಪುಷ್ಪ’ …
Read More »ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ
ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮ ನಮನ ಸಲ್ಲಿಸಿದರು.ಜ. ಮಂಜುನಾಥ ಅವರ ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಕ್ಕೆ ಭೇಟಿ ನೀಡಿದ್ದ ಸಿಎಂ ನ್ಯಾಯಮೂರ್ತಿಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಸಲ್ಲಿಸಿದ …
Read More »ಸಿದ್ದರಾಮಯ್ಯ ಮೇಲೆ ಮುಗಿಬಿದ್ದ JDS, BJP.. ಅಂಥದ್ದೇನಾಯ್ತು?
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿನ್ನೆ ದಳಪತಿಗಳು ಅಕ್ಷರಶಃ ಸಮರ ಸಾರಿದ್ರು. ಇತ್ತ ಕೇಸರಿ ಪಾಳಯ ವಿಪಕ್ಷ ನಾಯಕರ ಮೇಲೆ ಕೆಂಡಾಮಂಡಲವಾಗಿತ್ತು. ಮಾಜಿ ಸಿಎಂ ಆಡಿದ್ದ ಮಾತುಗಳು ಕಮಲ ಮತ್ತು ದಳವನ್ನ ಬಡಿದೆಬ್ಬಿಸಿತ್ತು. ಹೀಗಾಗಿ ಸಿದ್ದು ವಿರುದ್ಧ ಇವತ್ತು ಟ್ವೀಟಾಸ್ತ್ರ ಪ್ರಯೋಗವಾಗಿತ್ತು. ಅಷ್ಟಕ್ಕೂ ಸಿದ್ದು ಆಡಿದ್ದ ಮಾತುಗಳೇನು? ಅದಕ್ಕೆ ಕಮಲ-ದಳದ ತಿರುಗೇಟೇನು? ಇಲ್ಲಿದೆ ಡಿಟೇಲ್ಸ್.. ಸಿದ್ದರಾಮಯ್ಯ ಬಾಯಲ್ಲಿ ಬಂದಿದ್ದ ಬಾಲಂಗೋಚಿ ಮಾತು ದಳಪತಿಯನ್ನ ಕೆರಳಿ ಕೆಂಡವಾಗುವಂತೆ ಮಾಡಿದೆ. ಅಲ್ಲದೇ ಮಾಜಿ …
Read More »ಅಂತರರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ವಿಪಕ್ಷ ನಾಯಕರ ಜೊತೆಗೆ ಸಭೆ: ಸಿಎಂ ಬೊಮ್ಮಾಯಿ
ಕೆಲ ನೀರಾವರಿ ಯೋಜನೆಗಳು ಪ್ರಮುಖ ಘಟ್ಟಗಳಲ್ಲಿ ಇರುವುದರಿಂದ ಮತ್ತೊಮ್ಮೆ ವಿರೋಧ ಪಕ್ಷಗಳ ನಾಯಕರ ಜೊತೆಗೆ ಸಮಾಲೋಚನೆ ಮಾಡಿ, ಕಾನೂನಿನ ಪರಿಣಿತರನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿ, ಯಾವ ರೀತಿ ಮುಂದುವರಿಯಬೇಕು, ನಮ್ಮ ನಿಲುವುಗಳು ಏನಿರಬೇಕು ಎನ್ನುವ ಬಗ್ಗೆ ಸರ್ವಪಕ್ಷಗಳ ಸಭೆಯನ್ನು ಫೆಬ್ರವರಿ ಮೊದಲ ವಾರದಲ್ಲಿ ಕರೆಯುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಸಚಿವರು, ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ …
Read More »ಹೆಚ್ಡಿಡಿಗೆ ಕೊರೊನಾ ಪಾಸಿಟಿವ್ -ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಚಿಕಿತ್ಸೆಗಾಗಿ ಹೆಚ್ಡಿಡಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮಾಜಿ ಪ್ರಧಾನಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ಮಾಹಿತಿ ನೀಡಿದೆ. ಮಣಿಪಾಲ್ ಆಸ್ಪತ್ರೆ ನೀಡಿರುವ ಅಧಿಕೃತ ಮಾಹಿತಿಯ ಅನ್ವಯ, ನಿನ್ನೆ ಅಂದರೆ ಜನವರಿ 21ರಂದು ಮಾಜಿ ಪ್ರಧಾನಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆ …
Read More »‘JDSನ ಓಡಿಸಿ’ ಎಂದ ಸಿದ್ದರಾಮಯ್ಯ.. ‘ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ’ ಅಂತ HDK ಗರಂ
ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರಕ್ಕೆ ಜೆಡಿಎಸ್ ಪಕ್ಷ ಬಾಲಂಗೋಚಿಯಾಗಿದೆ. ಆದ್ದರಿಂದ ತುಮಕೂರಿನಿಂದ ಜೆಡಿಎಸ್ ಪಕ್ಷವನ್ನು ಓಡಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಅಲ್ಲದೇ ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನೋದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, …
Read More »ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಅಧಿಕೃತ ಘೋಷಣೆ ಒಂದೇ ಬಾಕಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊವಿಡ್ ಸಭೆಯಲ್ಲಿ ವೀಕೆಂಡ್ ಕಫ್ರ್ವೂವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ, ಸಚಿವರ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಹಲವು ಸಚಿವರು ವೀಕೆಂಡ್ ಕಫ್ರ್ಯೂವನ್ನು ಜಾರಿ ಮಾಡದಂತೆ ಹಲವು ಸಚಿವರು ಸಿಎಂ ರನ್ನು ಕೇಳಿಕೊಂಡರು. ಈ ವೇಳೆ ಸಚಿವರ ಮಾತಿಗೆ ಸಹಮತ …
Read More »ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರಾರಂಭವಾದ ಕೊವಿಡ್ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃμÁ್ಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ಪರಿಣಿತರು, ಸಚಿವರು, ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್, …
Read More »ಜನಸಾಮಾನ್ಯರ ಭಾವನೆಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ: ಸಚಿವ ಡಾ.ಕೆ.ಸುಧಾಕರ್
ನಾಳೆ ನಡೆಯಲಿರುವ ಸಭೆಯಲ್ಲಿ ವೈಜ್ಞಾನಿಕ ನೆಲೆಗಟ್ಟಿನಲ್ಲಿಯೇ ಮುಖ್ಯಮಂತ್ರಿಗಳು ಎಲ್ಲರ ಸಲಹೆ ಪಡೆದುಕೊಳ್ಳುತ್ತಾರೆ. ಜನಸಾಮಾನ್ಯರನ್ನು ಯಾವುದೇ ರೀತಿ ಸಂಕಷ್ಟದಲ್ಲಿ ಸಿಲುಕಿಸಲು ಮತ್ತು ಅವರ ಭಾವನೆಗಳಿಗೆ ವಿರೋಧ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಹೈವೋಲ್ಟೇಜ್ ಕೋವಿಡ್ ಸಭೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಜನರ ಹಿತ ದೃಷ್ಟಿಯಲ್ಲಿ, ಆರೋಗ್ಯದ ಹಿತ ದೃಷ್ಟಿಯಲ್ಲಿ ಏನು …
Read More »ಕೊರೊನಾ ಪೀಕ್ಗೆ ಹೋಗುವ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚಿಸುತ್ತೇವೆ: ಸಚಿವ ಬಿ.ಸಿ.ನಾಗೇಶ್
ಈಗಾಗಲೇ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಕೊರೊನಾ ಪೀಕ್ಗೆ ಹೋಗುತ್ತೆ ಎಂದು ಬಹಳ ಜನ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ತಾಂತ್ರಿಕ ಸಲಹಾ ಸಮಿತಿ ಒಂದು ವೇಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲಿಯೂ ಶಾಲೆಗಳನ್ನು ಆರಂಭಿಸಲು ಪ್ರಯತ್ನಿಸುತ್ತೇವೆ. ನಾಳೆ ತಾಂತ್ರಿಕ ಸಲಹಾ ಸಮಿತಿ …
Read More »