Breaking News
Home / ಜಿಲ್ಲೆ / ಬೆಂಗಳೂರು (page 434)

ಬೆಂಗಳೂರು

ತಬ್ಲಿಘಿ ಜಮಾತ್‍ಗೆ ಕರ್ನಾಟಕದಿಂದ 1,300ಕ್ಕೂ ಹೆಚ್ಚು ಜನರು ಭಾಗಿ – ಸಿಎಂ ಮಾಹಿತಿ

ಬೆಂಗಳೂರು: ದೆಹಲಿಯ ನಿಜಾಮುದ್ದೀನ್‍ನಲ್ಲಿ ತಬ್ಲಿಘಿ ಜಮಾತ್‍ನ ಪ್ರಾರ್ಥನಾ ಸಭೆಯಲ್ಲಿ ಕರ್ನಾಟಕದಿಂದ 1,300ಕ್ಕೂ ಹೆಚ್ಚು ಜನರು ತೆರಳಿದ್ದರು ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರು ದೆಹಲಿ ಜಮಾತ್ ಕಾರ್ಯಕ್ರಮಕ್ಕೆ ಹೋದವರ ಕುರಿತು ಟ್ಟಿಟ್ಟರಿನಲ್ಲಿ ಮಾಹಿತಿ ನೀಡಿದ್ದಾರೆ. “ದೆಹಲಿಯ ನಿಜಾಮುದ್ದೀನ್‍ನ ತಬ್ಲಿಘಿ ಜಮಾತ್‍ನ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದವರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಇತರ ರಾಜ್ಯಗಳಿಗೆ ತೆರಳಿದವರ ಕುರಿತು ಸಹ ಮಾಹಿತಿ ಸಂಗ್ರಹಿಸಲಾಗಿದೆ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ …

Read More »

‘ಗುಂಡಿಕ್ಕಿ ಕೊಲ್ಲಿ’ ಎಂದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಅರೆಸ್ಟ್ ಮಾಡಿ : ಸಿದ್ದರಾಮಯ್ಯ

ಬೆಂಗಳೂರು, ಏ.8- ರಾಜಕೀಯ ಷಡ್ಯಂತ್ರದಿಂದ ಒಂದು ಸಮುದಾಯವನ್ನು ಗುರಿಯಾಸಿ ಹೇಳಿಕೆ ನೀಡಿರುವ ಮತ್ತು ಗುಂಡಿಕ್ಕಿಕೊಲ್ಲಿ ಎಂದು ಪ್ರಚೋದನಾಕಾರಿ ಮಾತನಾಡಿರುವ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ, ಕೂಡಲೇ ಬಂಧಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ವಿಡಿಯೋ ಸಂದೇಶದ ಮೂಲಕ ರಾಜ್ಯ ಸರ್ಕಾರವನ್ನು ಆಗ್ರಹ ಮಾಡಿರುವ ಅವರು, ಹೊನ್ನಾಳ್ಳಿ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಶಾಸನ ರಚಿಸುವ …

Read More »

ಕೊರೋನಾ ಭಾರತದಲ್ಲಿ ಹೆಚ್ಚು ಪ್ರಭಾವ ಬೀರಿಲ್ಲ ಏಕೆ..? ಬಯಲಾಯ್ತು ಅಸಲಿ ಕಾರಣ…!

ಬೆಂಗಳೂರು, ಏ.8- ವಿಶ್ವವನ್ನೆ ಕಂಗೆಡಿಸಿರುವ ಕೊರೊನಾ ವೈರಸ್ ಭಾರತದಲ್ಲಿ ಮಾತ್ರ ನಿಧಾನ ಗತಿಯಲ್ಲಿ ಮಿಸುಕಾಡುತ್ತಿರುವುದು ಜಗತ್ತಿನ ಹಲವು ವೈದ್ಯಕೀಯ ಸಂಶೋಧನಾ ಸಂಸ್ಥೆಗಳ ತಲೆ ಕೆಡಿಸಿದೆ. ಬಹುಶಃ ಇದಕ್ಕೆ ಭಾರತದಲ್ಲಿ ಚಾಲ್ತಿಯಲ್ಲಿರುವ ಬಿಸಿಜಿ ಚುಚ್ಚುಮದ್ದು ಕಾರಣ ಎಂಬ ಮಾಹಿತಿ ಹೊರ ಬಿದ್ದಿದೆ. ಹೌದು ಬಿಸಿಜಿ ಚುಚ್ಚುಮದ್ದು ಹಾಕಿಸಿಕೊಂಡರನ್ನು ಕೊರೊನಾ ಏಕಾಏಕಿ ಬಾಧಿಸಲಾಗುತ್ತಿಲ್ಲ. ಹಾಗಾಗಿ ಭಾರತದಲ್ಲಿ ಕಳೆದ ಫೆಬ್ರವರಿಯಲ್ಲೇ ಸೋಂಕು ಪತ್ತೆಯಾದರೂ ಈವರೆಗೂ ಅಷ್ಟೇನು ಅನಾವುತಕಾರಿ ಪರಿಣಾಮಗಳನ್ನು ಉಂಟು ಮಾಡಿಲ್ಲ. ಇತರ ದೇಶಗಳಿಗೆ …

Read More »

ಗಂಗಮ್ಮನ ಸಾವು ತೀವ್ರ ನೋವುಂಟುಮಾಡಿದೆ’ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಏ.7-ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟು ಮಾಡಿತು. ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷಿಕರಿಸುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗಂಗಮ್ಮ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ. ಸರ್ಕಾರದ್ದೂ …

Read More »

ಕೊರೊನಾ ಸೋಂಕು ಯಾವುದೇ ಜಾತಿ, ಧರ್ಮ ನೋಡಿ ಬರಲ್ಲ. ಒಂದು ಸಮುದಾಯದತ್ತ ಬೆರಳು ಮಾಡಿ ತೋರಿಸಬೇಡಿ : ಸಿ.ಎಂ.ಇಬ್ರಾಹಿಂ

ಬೆಂಗಳೂರು: ಕೊರೊನಾ ಸೋಂಕು ಯಾವುದೇ ಜಾತಿ, ಧರ್ಮ ನೋಡಿ ಬರಲ್ಲ. ಒಂದು ಸಮುದಾಯದತ್ತ ಬೆರಳು ಮಾಡಿ ತೋರಿಸಬೇಡಿ ಎಂದು ವಿಧಾ‌ನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಮಾಹಾಮಾರಿ ಕೊರೊನಾ ಕಂಟಕವಾಗಿದೆ. ಲಾಕ್​ಡೌನ್ ಆದೇಶವನ್ನು ನಾವೆಲ್ಲರೂ ಅನುಸರಿಸುತ್ತಿದ್ದೇವೆ. ನಾವ್ಯಾರು ಮಸೀದಿ ಕಡೆ ತಲೆ ಹಾಕುತ್ತಿಲ್ಲ. ಮನೆಗಳಲ್ಲೇ ನಮಾಜ್ ಮಾಡ್ತಿದ್ದೇವೆ. ಮುಂಬರುವ ರಂಜಾನ್ ಹಬ್ಬವನ್ನೂ ನಾವು ಮನೆಯಲ್ಲೇ ಮಾಡಿಕೊಳ್ತೇವೆ. ಇದನ್ನ …

Read More »

ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್

ಬೆಂಗಳೂರು- ನಿನ್ನೆ ನಿಧನರಾದ ಹಾಸ್ಯ ನಟ ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಕಣ್ಣೀರು ಕಪಾಳಕ್ಕೆ ಸುರಿಸುವ, ಘಟನೆಯೊಂದು ನಡೆಯಿತು. ಬುಲೇಟ್ ಪ್ರಕಾಶ್ ಅವರು ಅತ್ಯಂತ ಮುದ್ದಿನಿಂದ ಸಾಕಿದ ನಾಯಿ ಶವ ಪೆಟ್ಟಿಗೆಯ ಮೇಲೆ ಕುಳಿತಾಗ ಅಲ್ಲಿ ನೆರೆದಿದ್ದ ನೂರಾರು ಜನ ಕಣ್ಣೀರು ಸುರಿಸಿದರು ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್ಲ,ಬುಲೇಟ್ ಪ್ರಕಾಶ್ ಅವರ ಪ್ರೀತಿಯ ಸಂಕೋಲೆಯಿಂದ ಟೈಸನ್ ನನ್ನು ಬಿಡಿಸಲು ಪರದಾಡಬೇಕಾಯಿತು. ಒದ್ದಾಡುತ್ತಲೇ ಟೈಸನ್ ತನ್ನ …

Read More »

ಎಲ್ಲಿ ಮಲಗಿದ್ದಾರೋ’ ಎಂದ ಡಿಕೆಶಿಗೆ ತಿರುಗೇಟು ನೀಡಿದ ಸಚಿವ ಈಶ್ವರಪ್ಪ

ಬೆಂಗಳೂರು,ಏ.7- ರಾಜ್ಯದ 49 ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರಿಗಾಗಿ ತಾಲ್ಲೂಕಿಗೆ ತಲಾ ಒಂದು ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ‌ ಗ್ರಾಮ ಪಂಚಾಯ್ತಿಗಳಲ್ಲಿ ಕೊರೋನಾ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ. ಗ್ರಾಮಗಳಲ್ಲೂ ಸಮಿತಿಗಳನ್ನು ಮಾಡಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ನರೇಗಾ ಯೋಜನೆಯಲ್ಲಿ ಕೇಂದ್ರದಿಂದ 1,861 ಕೋಟಿ …

Read More »

ಪ್ರಾಣದ ಹಂಗು ತೊರೆದು ಪೇಂಟರ್ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ನೆಲಮಂಗಲ: ಬಣ್ಣ ಬಳಿಯಲು ಹೋಗಿ ಸುಮಾರು 12 ಅಡಿ ಆಳದ ನೀರಿನ ಸಂಪ್‍ಗೆ ಬಿದ್ದು ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ಪ್ರಾಣದ ಹಂಗು ತೊರೆದು ರಕ್ಷಿಸಿ ಹೀರೋ ಆಗಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಸುಭಾಷ್ ನಗರದಲ್ಲಿ ಘಟನೆ ನಡೆದಿದ್ದು, ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದ ವ್ಯಕ್ತಿ ಒಟ್ಟು ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ …

Read More »

ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ದಂಡ

ಬೆಂಗಳೂರು: ಲಾಕ್‍ಡೌನ್ ವೇಳೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದ ಮನೋವೈದ್ಯರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿದೆ. ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ಸಂಬಂಧ ದೇಶದಲ್ಲಿ ಲಾಕ್‍ಡೌನ್ ಜಾರಿಯಾಗಿದ್ದು ಎಲ್ಲ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿದೆ. ಕರ್ನಾಟಕದಲ್ಲೂ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯ ವಿನೋದ್ ಕುಲಕರ್ಣಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪಿಐಎಲ್ ಸಲ್ಲಿಸಿದ್ದರು. …

Read More »

ಬೆಳಗಾವಿ ತಬ್ಲೀಗಿ ಸದಸ್ಯರ ಕುರಿತುಶೋಭಾ ಕರಂದ್ಲಾಜೆ ಅವರು ಮಾಡಿದ ಆರೋಪ‌ ಸಂಪೂರ್ಣ ಸುಳ್ಳು

ಬೆಂಗಳೂರು: ಬೆಳಗಾವಿ‌ ಜಿಲ್ಲಾ ಆಸ್ಪತ್ರೆಯ ಕ್ವಾಂರಂಟೈನ್ ನಲ್ಲಿರುವ ತಬ್ಲೀಗಿ ಸದಸ್ಯರು ವೈದ್ಯಕೀಯ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿ ಉಳುಗಿಳಿದ್ದಾರೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಅವರು ಮಾಡಿದ ಆರೋಪ‌ ಸಂಪೂರ್ಣ ಸುಳ್ಳು ಎಂದು ಇದೀಗ ತಿಳಿದು ಬಂದಿದೆ. ಕ್ವಾಂರಂಟೈನ್ ನಲ್ಲಿರುವ ಸದಸ್ಯರು ವೈದ್ಯಕೀಯ ಸಿಬ್ಬಂದಿಗೆ ಜತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಚಿಕಿತ್ಸೆ ನೀಡುವ ವೈದ್ಯರ ಮೇಲೆ ಉಗುಳಿದ್ದಾರೆ ಅಂತಾ ಸೋಮವಾರ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದರು. ಅಲ್ಲದೇ ಮಾಧ್ಯಮಗಳೊಂದಿಗೆ ಮಾತನಾಡಿ, …

Read More »