ಬೆಂಗಳೂರು,ಏ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ರೋಗ ಕೊರೊನಾ ವೈರಸ್ ಹರಡುವಿಕೆ ಶೀಘ್ರದ ಲ್ಲೇ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್ಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಕೊರೊನಾ ಹೋರಾಟದಲ್ಲಿ ಈಗ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂದರು. ಸಹಾಯವಾಣಿಯ ಉದ್ದೇಶ ರಾಜ್ಯದ ಎಲ್ಲಾ ನಿವಾಸಿಗಳಿಗೆ …
Read More »ಲಾಕ್ಡೌನ್ ನಿಂದ ಕೆಎಸ್ಆರ್ಟಿಸಿಗೆ 816 ಕೋಟಿ ಲಾಸ್..!
ಬೆಂಗಳೂರು, ಏ.22- ಲಾಕ್ಡೌನ್ ಜಾರಿಯಾದ ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 816 ಕೋಟಿ ಲಾಸ್ ಆಗಿದೆ. ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸುವ ಉದ್ದೇಶದಿಂದ ಸರ್ಕಾರ ಲಾಕ್ಡೌನ್ ಜಾರಿಗೆ ತಂದ ನಂತರ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ರಾಜ್ಯದಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿಯವರೆಗೆ ಸಂಸ್ಥೆಗೆ 816.23 ಕೋಟಿ ನಷ್ಟ ಸಂಭವಿಸಿದೆ ಎಂದು ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 314.89, ವಾಣಿಜ್ಯ …
Read More »ಆಹಾರದ ಕಿಟ್ ಹಂಚಿಕೆಯಲ್ಲೂ ತಾರತಮ್ಯ : ಸಿದ್ದರಾಮಯ್ಯ ಆರೋಪ
ಬೆಂಗಳೂರು, ಏ.22- ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ, ಕಾರ್ಮಿಕರಿಗೆ ಹಂಚುವ ಆಹಾರದ ಪೊಟ್ಟಣದಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಶಾಸಕ ರಾಮಲಿಂಗಾ ರೆಡ್ಡಿ ಅವರು ಬಡವರಿಗೆ ಹಂಚಲು ತಯಾರಿಸುತ್ತಿರುವ ಆಹಾರ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಆದಾಗಿನಿಂದ ಪ್ರತಿ ದಿನ 48 ಸಾವಿರ ನಿರ್ಗತಿಕ ಕಾರ್ಮಿಕ ವರ್ಗಕ್ಕೆ ಆಹಾರ ಮತ್ತು ದಿನ ನಿತ್ಯ ಆಹಾರ …
Read More »ಗುರುವಾರದಿಂದ ಕರ್ನಾಟಕದಲ್ಲಿ ಲಾಕ್ಡೌನ್ ಭಾಗಶಃ ಸಡಿಲ- ಏನಿದೆ, ಏನಿಲ್ಲ? – ಮದ್ಯ ಪ್ರಿಯರಿಗೆ ಸಿಗಲ್ಲ ಎಣ್ಣೆ
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ನಿಂದಾಗಿ ಹೇರಿದ್ದ ಲಾಕ್ಡೌನ್ ಗುರುವಾರದಿಂದ ಭಾಗಶಃ ಸಡಿಲಗೊಳ್ಳಲಿದೆ. ನಾಳೆಯಿಂದ ಕಟೈಂನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆಯಲ್ಲಿ ಲಾಕ್ಡೌನ್ ನಿಯಮ ಸಡಿಲಗೊಳ್ಳಲಿದೆ. ಈ ಮೂಲಕ ಕಟ್ಟಡ ನಿರ್ಮಾಣ, ಅಗತ್ಯ ವಸ್ತುಗಳ ಕೈಗಾರಿಕೆ, ಕೆಲ ಸರ್ಕಾರಿ ಕಚೇರಿಗಳು ತೆರೆಯಲಿವೆ. ಆದರೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ. ಸಾರ್ವಜನಿಕ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ. ಏನಿರುತ್ತೆ?: ಸೇಫ್ ಝೋನ್ನಲ್ಲಿ ಕಟ್ಟಡ ನಿರ್ಮಾಣ, …
Read More »ಪಾದರಾಯನಪುರ ಜಮೀರ್ ಫಾದರ್ ಪ್ರಾಪರ್ಟಿ ಅಲ್ಲ: ಸಿ.ಟಿ ರವಿ
ಚಿಕ್ಕಮಗಳೂರು: ಅನುಮತಿ ಪಡೆದು ಹೋಗಬೇಕು ಎಂದು ಹೇಳಲು ಪಾದರಾಯನಪುರ ಜಮೀರ್ ಅಹ್ಮದ್ ಅವರ ಫಾದರ್ ಪ್ರಾಪರ್ಟಿ ಅಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವಾಗ ವಿಧಾನಸಭೆಗೆ ಬಂದಿದೇನೋ ಅವಾಗಲೇ ಜಮೀರ್ ಅಹ್ಮದ್ ಕೂಡ ಬಂದಿರೋದು. ಹೀಗಾಗಿ ಜಮೀರ್ ಅವರಿಗೆ ಒಂದು ಕಾನೂನು ನನಗೊಂದು ಕಾನೂ ಇಲ್ಲ. ಈ ದೇಶದ ಕಾನೂನು ಎಲ್ಲರಿಗೂ ಒಂದೇ ರೀತಿ ಅನ್ವಯವಾಗುತ್ತದೆ. ಈಗಾಗಲೇ …
Read More »ಭಾರತದಲ್ಲಿ ಕೊರೋನಾಗೆ ಕಳೆದ 24 ಗಂಟೆಯಲ್ಲಿ 50 ಮಂದಿ ಸಾವು..! 20,000 ಸೋಂಕಿತರು
ನವದೆಹಲಿ/ಮುಂಬೈ,ಏ.22-ವೈದ್ಯರು ಮತ್ತು ಆರೋಗ್ಯರಕ್ಷಕರ ನಿರಂತರ ಹೋರಾಟದ ನಡುವೆಯೂ ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಮುಂದೇನು ಎಂಬ ಆತಂಕ 135 ಕೋಟಿ ಭಾರತೀಯರಲ್ಲಿ ಮನೆ ಮಾಡಿದೆ. ಭಾರತದಲ್ಲಿ ಮೃತರ ಸಂಖ್ಯೆ 650ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 20,000ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ಮಧ್ಯರಾತ್ರಿವರೆಗಿನ ಅಧಿಕೃತ ವರದಿ …
Read More »ಬ್ರೇಕಿಂಗ್ : ರಾಜ್ಯದಲ್ಲಿ 4 ತಿಂಗಳ ಮಗು ಸೇರಿ ಇಂದು 7 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 425ಕ್ಕೇರಿಕೆ
ಬೆಂಗಳೂರು, ಏ.22- ಕಲಬುರಗಿಯಲ್ಲಿ ನಾಲ್ಕು ತಿಂಗಳ ಗಂಡು ಮಗುವಿಗೆ ಕೊರೊನಾ ಸೋಂಕು ತಗುಲಿರುವುದು ಸೇರಿದಂತೆ ಇಂದು ಒಟ್ಟು 7 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, 129 ಮಂದಿ ಕೋವಿಡ್-19ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 54 ವರ್ಷದ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ಕೊರೊನಾ ಸೋಂಕಿತರಾಗಿದ್ದು, ಇವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊರೊನಾ ಸೋಂಕಿತ ರೋಗಿ …
Read More »ಬೆಂಗಳೂರಲ್ಲಿ ಲಾಕ್ಡೌನ್ ಮತ್ತಷ್ಟು ಟೈಟ್ : ರಸ್ತೆಗಿಳಿದರೆ ವಾಹನ ಸೀಜ್ ಆಗುತ್ತೆ ಹುಷಾರ್..!
ಬೆಂಗಳೂರು, ಏ.22- ಬೇಕಾಬಿಟ್ಟಿ ವಾಹನ ಸಂಚಾರದಿಂದ ನಿನ್ನೆ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸಂಚಾರಿ ಪೊಲೀಸರು ಇಂದು ನಗರದಲ್ಲಿ ಲಾಕ್ಡೌನ್ ಬಿಗಿಗೊಳಿಸಿದ್ದಾರೆ. ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಿ ಅನಗತ್ಯವಾಗಿ ಓಡಾಡುತ್ತಿದ್ದ 1000ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇದುವರೆಗೂ 759 ವಾಹನಗಳನ್ನು ವಶಪಡಿಸಿಕೊಂಡಿದ್ದು, ತಪಾಸಣೆ ಮುಂದುವರಿಸಿರುವ ಪೊಲೀಸರು ರಸ್ತೆಯಲ್ಲಿ ಓಡಾಡುವ ಪ್ರತಿಯೊಂದು ವಾಹನಗಳ ನಂಬರ್ ನೋಟ್ ಮಾಡಿಕೊಳ್ಳುತ್ತಿದ್ದು, ವಾಹನ …
Read More »ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.
ಬೆಂಗಳೂರು: ಪುಟ್ಟಗೌರಿ ಮದುವೆ ನಂತರ ‘ಕನ್ನಡತಿ’ ಧಾರಾವಾಹಿ ಮೂಲಕ ಮನೆ ಮಾತಾಗಿರುವ ರಂಜನಿ ರಾಘವನ್ ಏನ್ ಮಾಡ್ತಿದ್ದಾರೆ ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಲಾಕ್ಡೌನ್ ಹಿನ್ನೆಲೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದ್ದು, ಎಲ್ಲ ವಾಹಿನಿಗಳು ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ. ಹೀಗಿರುವಾಗ ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್ ಇದೀಗ …
Read More »ಲಾಕ್ಡೌನ್ ನಡ್ವೆ ಪೊಲೀಸರ ಮೊಬೈಲ್ ಕದ್ದ ಕಳ್ಳರು………..
ಬೆಂಗಳೂರು: ಲಾಕ್ಡೌನ್ ನಡುವೆಯೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕದ್ದಿದ್ದಾರೆ. ಪಾದರಾಯನಪುರದಲ್ಲಿ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರನ್ನು ತಡೆದು ಪೊಲೀಸರು ವಾಪಸ್ ಕಳುಹಿಸುತ್ತಿದ್ದರು. ಈ ವೇಳೆ ಕೆಲವರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ರು. ಈ ಸಮಯದಲ್ಲಿಯೇ ಕಳ್ಳ ಪೇದೆಗಳಿಬ್ಬರ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಸದ್ಯ ಕಳ್ಳತನ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಲಾಕ್ಡೌನ್ ಇದ್ರೂ ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚು ಬೈಕ್ ಗಳು ರಸ್ತೆಗಿಳಿದಿವೆ. ಬೆಂಗಳೂರು-ತುಮಕೂರು …
Read More »
Laxmi News 24×7