Breaking News

ಬೆಂಗಳೂರು

2ನೇ ಹಂತದ ಲಾಕ್​ಡೌನ್​ ವಿಸ್ತರಣೆ; ಪೊಲೀಸ್ ಸಿಬ್ಬಂದಿಗೆ ಮತ್ತಷ್ಟು ಸೂಚನೆಗಳನ್ನು ನೀಡಿದ ಕಮಿಷನರ್ ಭಾಸ್ಕರ್ ರಾವ

 ಎರಡನೇ ಹಂತದ ವಿಸ್ತರಣೆಯ ಲಾಕ್​ಡೌನ್​ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಇಂದು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣ ಸಲುವಾಗಿ ಹೇರಲಾಗಿದ್ದ 21 ದಿನಗಳ ಲಾಕ್​ಡೌನ್ ನಾಳೆಗೆ ಮುಕ್ತಾಯಗೊಳ್ಳಲಿದೆ. ಆದರೂ ಮಾರಕ ಸೋಂಕು ಹತೋಟಿಗೆ ಬಾರದ ಕಾರಣಕ್ಕೆ ಲಾಕ್​ಡೌನ್​ ಈ ತಿಂಗಳ ಕೊನೆಯವರೆಗೂ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.  ಎರಡನೇ …

Read More »

ಸಿನಿಮಾ ಕಾರ್ಮಿಕರಿಗೆ ಉಪ್ಪಿ ಸಹಾಯ ಹಸ್ತ…………

ಬೆಂಗಳೂರು: ಇಷ್ಟು ದಿನ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಮೆಚ್ಚುಗೆ ಹಾಗೂ ಸಲಹೆ ನೀಡುತ್ತಿದ್ದ ನಟ ರಿಯಲ್ ಸ್ಟಾರ್ ಉಪೇಂದ್ರ, ಇದೀಗ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.   ಈಗಾಗಲೇ ಹಲವು ನಟ, ನಟಿಯರು ಸಹಾಯ ಮಾಡಿದ್ದು, ಕೆಲವರು ಪಿಎಂ ಕೇರ್ಸ್ ಹಾಗೂ ಸಿಎಂ ಪರಿಹಾರ ನಿಧಿಗೆ ನೀಡಿದರೆ, ಇನ್ನೂ ಕೆಲವರು ಬಡವರಿಗೆ ಆಹಾರ ಪದಾರ್ಥಗಳನ್ನು ದಾನ ಮಾಡುವ ಮೂಲಕ ನೆರವಾಗುತ್ತಿದ್ದಾರೆ. ಮಾತ್ರವಲ್ಲದೆ ನಿಖಿಲ್ ಕುಮಾರಸ್ವಾಮಿ ಸೇರಿದಂತೆ …

Read More »

ಮೂರು ಆಸ್ಪತ್ರೆಗೆ ಅಲೆದಾಡಿ ಬೆಂಗ್ಳೂರಿನ ವೃದ್ಧ ಸಾವು – ಕೊನೆಗೆ ಕೊರೊನಾ ಪರೀಕ್ಷೆ

– ಸಂಪರ್ಕಕ್ಕೆ ಬಂದಿದ್ದ 20 ಮಂದಿಗೆ ಕ್ವಾರಂಟೈನ್ – ಟಾಯ್ಲೆಟ್‍ನಲ್ಲೇ ಕುಸಿದು ಬಿದ್ದಿದ್ದ ವೃದ್ಧ – ಸೋಮವಾರ ಸಂಜೆ ಕೊರೊನಾ ದೃಢ ಬೆಂಗಳೂರು: ಕೊರೊನಾ ಸೋಂಕಿತರ ಸಾವು ಕರ್ನಾಟಕದಲ್ಲಿ 8ಕ್ಕೆ ಏರಿದ್ದು, ಕಳೆದ ದಿನವೇ ಇಬ್ಬರು ಒಂದೇ ದಿನ ಮೃತಪಟ್ಟಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯ 65 ವರ್ಷದ ವೃದ್ಧ ಮೂರು ಆಸ್ಪತ್ರೆಗೆ ಅಲೆದಾಡಿ ಕೊನೆಗೆ ಮೃತಪಟ್ಟಿದ್ದಾರೆ. ಭಾನುವಾರ ಮೃತ ವೃದ್ಧ ಕಫ, ಕೆಮ್ಮು ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ಬಂದಿದ್ದಾರೆ. …

Read More »

ಚನ್ನಣ್ಣವರ್ ಬಗ್ಗೆ ಸಿಎಂ ಬಳಿ ನಾನು ದೂರಿಲ್ಲ:ಲಕ್ಷ್ಮಣ ಸವದಿ

ಬೆಂಗಳೂರು – ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ  ರವಿ  ಚನ್ನಣ್ಣನವರ್ ಅವರ ವಿರುದ್ಧ ನಾನು   ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು  ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.  ರವಿಚನ್ನಣ್ಣವರ್ ಅವರೊಬ್ಬ ಒಳ್ಳೆಯ  ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ  ವಿನ: ಅವರು …

Read More »

ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕಳೆದ ಜನೆವರಿಯಿಂದ ಬೆಂಗಳೂರಿನಲ್ಲಿರುವ  ಕೆಎಂಎಫ್ ಚೇರಮನ್  ಬಾಲಚಂದ್ರ ಜಾರಕಿಹೊಳಿ, ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಮೂಡಲಗಿಯ ಈರಣ್ಣ ದೇವಸ್ಥಾನದ ಆವರಣದಲ್ಲಿ ಸೋಮವಾರ ದೂರವಾಣಿ ಮೂಲಕ ಮೂಡಲಗಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಲಾಕ್ ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ್ರಸ್ತುತ ವಿಶ್ವದಾದ್ಯಂತ ಕಾಡುತ್ತಿರುವ ಪ್ರಬಲ ಕೊರೋನಾ ವೈರಸ್ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ …

Read More »

ಆರ್ಥಿಕ ಪರಿಸ್ಥಿತಿ ನಿಭಾಯಿಸಲು 12 ಸಾವಿರ ನಿವೇಶನಗಳ ಹರಾಜಿಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು : ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಲಾಕ್ ಡೌನ್ ಅನುಷ್ಠಾನ ಮಾಡಿದ ಪರಿಣಾಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದರಿಂದ ಬಿಡಿಎ ವ್ಯಾಪ್ತಿಯಲ್ಲಿ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 12 ಸಾವಿರ ನಿವೇಶನಗಳನ್ನು ಮಾರಾಟ ಮಾಡುವುದರಿಂದ ಸುಮಾರು15 ಸಾವಿರ ಕೋಟಿ‌ ರೂ ಆದಾಯ ನಿರೀಕ್ಷೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಡಿಯಲ್ಲಿ ತಿಳಿಸಿದರು.ಅನಧಿಕೃತ ಕಟ್ಟಡಗಳ ಸಂಬಂಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಕ್ರಮ …

Read More »

ಕ್ವಾರೆಂಟೈನ್ ಟೈಂನಲ್ಲಿ ‘ಪಕೋಡಾ’ ಹುಡುಕಿದ ಅಗ್ನಿಸಾಕ್ಷಿ ತಂಡ

ಬೆಂಗಳೂರು: ಬಾಲಿವುಡ್ ಬಿಗ್‍ಬಿ ಅಮಿತಾಬ್ ಬಚ್ಚನ್ ನೇತೃತ್ವದಲ್ಲಿ ಬಹುಭಾಷಾ ನಟರ ತಂಡ ಈ ಹಿಂದೆ ಮನೆಯಲ್ಲೇ ಇದ್ದುಕೊಂಡು ಶಾರ್ಟ್ ಫಿಲ್ಮ್ ಮಾಡುವ ಮೂಲಕ ಸಾಮಾಜಿಕ ಅಂತರದ ಮಹತ್ವವನ್ನು ಸಾರಿತ್ತು. ಈ ಚಿತ್ರ ಇತರರಿಗೆ ಪ್ರೇರಣೆಯಾಗಿತ್ತು ಸಹ. ಅದೇ ರೀತಿ ಇದೀಗ ಅಗ್ನಿಸಾಕ್ಷಿ ಧಾರಾವಾಹಿ ತಂಡ ಸಹ ಇಂತಹದ್ದೇ ಪ್ರಯತ್ನವನ್ನು ಮಾಡಿದ್ದು, ಫನ್ನಿಯಾಗಿರುವ ಕಥೆಯನ್ನಿಟ್ಟುಕೊಂಡು ಜನತೆಯನ್ನು ನಗಿಸಿದ್ದಾರೆ. ಬಿಗ್‍ಬಿ ನೇತೃತ್ವದಲ್ಲಿ ಮಾಡಿದ ಶಾರ್ಟ್ ಫಿಲ್ಮ್‍ನಲ್ಲಿ ಕನ್ನಡಕ ಹುಡುಕುವ ಕಾನ್ಸೆಪ್ಟ್ ಇತ್ತು. ಆದರೆ …

Read More »

ಯಡಿಯೂರಪ್ಪ ಪರೋಕ್ಷವಾಗಿ ಏಪ್ರಿಲ್ ‌ 15ರಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಸುಳಿವು

ಬೆಂಗಳೂರು: ಲಾಕ್​ಡೌನ್​ನಿಂದಾಗಿ 22 ದಿನಗಳಿಂದ ರಾಜ್ಯದೆಲ್ಲೆಡೆ ಮಾಲ್, ಬಾರ್, ಪಬ್​ಗಳನ್ನು ಮುಚ್ಚಲಾಗಿತ್ತು. ಆದರೆ ಇದೀಗ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಡುವ ಸಾಧ್ಯತೆಯಿದೆ. ಲಾಕ್​ಡೌನ್​ ಅನ್ನು ಏ. 30ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ ನಂತರ ಇನ್ನೂ 18 ದಿನ ಸಾರಾಯಿ ಸಿಗುವುದಿಲ್ಲ ಎಂಬ ನಿರಾಸೆ ಮದ್ಯಪ್ರಿಯರನ್ನು ಕಾಡಿತ್ತು. ಆದರೆ, ಈ ಬಗ್ಗೆ ಸದ್ಯದಲ್ಲೇ ಘೋಷಿಸಲಿರುವ ರಾಜ್ಯ ಸರ್ಕಾರ ಬುಧವಾರದಿಂದಲೇ ಸಾರಾಯಿ ಮಾರಾಟಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಹೆಚ್ಚಾಗಿದೆ.ರಾಜ್ಯದಲ್ಲಿ …

Read More »

ಬೆಂಗಳೂರು ರೌಂಡ್ ಹಾಕಿ ಲಾಕ್‍ಡೌನ್ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೋನಾ ಲಾಕ್‌ಡೌನ್ ಮೊದಲ ಹಂತದ ಅಂತಿಮ ಚರಣದಲ್ಲಿರುವ ಸಂದರ್ಭದಲ್ಲಿ ಜನರ ತೊಂದರೆಗೆ ಕಿವಿಗೊಡಲು ಖುದ್ದು ಸಿಎಂ ಯಡಿಯೂರಪ್ಪ ರೋಡಿಗಿಳಿದರು. ಭಾನುವಾರ ಅಧಿಕಾರಿಗಳ ಸಮೇತ ಯಡಿಯೂರಪ್ಪ ಬೆಂಗಳುರಿನ ಸಿಟಿ ರೌಂಡ್ಸ್ ಕೈಗೊಂಡು ಜನ ಮತ್ತು ವ್ಯಾಪಾರಸ್ಥರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಸಿಟಿ ರೌಂಡ್ಸ್ ವೇಳೆ ಮುಖ್ಯಮಂತ್ರಿಗೆ ವ್ಯಾಪಾರಿಗಳಿಂದ ದೂರುಗಳ ಸುರಿಮಳೆಯೇ ಆಯಿತು. ವ್ಯಾಪಾರ ಕಮ್ಮಿ, ಪಾಸ್ ಕೊಡ್ತಿಲ್ಲ. ಪೊಲೀಸರು ಬಿಡ್ತಿಲ್ಲ ಎಂದು ವ್ಯಾಪಾರಿಗಳು ಗೋಳು ತೋಡಿಕೊಂಡರು. ಈ ಮಧ್ಯೆ …

Read More »

ನನ್ನಂಥವರಿಗೆ ಡಾ. ರಾಜ್ ಸ್ಫೂರ್ತಿ’ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ನನ್ನಂಥವರು ವರನಟ ಡಾ. ರಾಜ್ ಅವರ ಸಿನಿಮಾಗಳನ್ನು ನೋಡಿ ಸ್ಫೂರ್ತಿಗೊಂಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ‌.ಡಾ. ರಾಜ್ ಕುಮಾರ್ ಜಗತ್ತು ಕಂಡ ಮೇರು ನಟರಾಗಿದ್ದರು ಎಂದು ಟ್ವಿಟರ್ ನಲ್ಲಿ ಅವರು ತಿಳಿಸಿದ್ದಾರೆ. ಕನ್ನಡ ಸಿನಮಾ ಲೋಕದ ಉತ್ತುಂಗದ ಸ್ಟಾರ್ ಅಷ್ಟೇ ಅಲ್ಲ. ತಮ್ಮ ನಾಡು ನುಡಿಯ ಬಗ್ಗೆ ಅದಮ್ಯ ಕಾಳಜಿ ಇಟ್ಟುಕೊಂಡಿದ್ದ ಹೋರಾಟಗಾರ ಎಂದು ಹೇಳಿದ್ದಾರೆ. ತಮ್ಮ ಅಭಿನಯ ಮತ್ತು ಬದುಕು ಎರಡರ ಮೂಲಕವೂ ಸಾಂಸ್ಕೃತಿಕ …

Read More »