Breaking News

ಬೆಂಗಳೂರು

ಐಟಿ-ಬಿಟಿ ಕಂಪನಿ ಓಪನ್ ಇಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು ಹೇಳಿದ್ದರು. ಆದರೆ ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಓಪನ್ ಇಲ್ಲ ಎಂದು ಸಚಿವ ಮಾಧುಸ್ವಾಮಿ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೇ 3ರ ತನಕ ಲಾಕ್‍ಡೌನ್ ಇರುತ್ತದೆ. ಹೀಗಾಗಿ ಯಾವುದೇ ರಿಯಾಯಿತಿ ಇರಲ್ಲ. ರಾಜ್ಯವೇ ಫುಲ್ ಲಾಕ್‍ಡೌನ್ ಆಗುತ್ತದೆ. ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಸುಗ್ರಿವಾಜ್ಞೆಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. …

Read More »

ಪಾದರಾಯನಪುರದಲ್ಲಿ ಗರುಡ ಟೀಂ ಎಂಟ್ರಿ ಕೊಟ್ಟಿದೆ. ಈ ಮೂಲಕ ಇನ್ಮುಂದೆ ಪಾದರಾಯನಪುರದಲ್ಲಿ ಯಾರೂ ಮಿಸುಕಾಡುವಂಗಿಲ್ಲ.

ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಕೆಲ ಪುಂಡರು ಗಲಭೆ ನಡೆಸಿದ ಸಂಬಂಧ ಇದೀಗ ಏರಿಯಾಗೆ ಗರುಡ ಟೀಂ ಎಂಟ್ರಿ ಕೊಟ್ಟಿದೆ. ಈ ಮೂಲಕ ಇನ್ಮುಂದೆ ಪಾದರಾಯನಪುರದಲ್ಲಿ ಯಾರೂ ಮಿಸುಕಾಡುವಂಗಿಲ್ಲ. ರೈಫಲ್ ಹಿಡಿದುಕೊಂಡು ಗರುಡ ಕಮಾಂಡೋಗಳು ನಡು ರಸ್ತೆಯಲ್ಲಿ ನಿಂತುಕೊಳ್ಳುತ್ತಾರೆ. ಮಾಸ್ಕ್ ಹಾಕದೆ, ಹೊರಗಡೆ ಓಡಾಡುವ ಜನರಿಗೆ ಫುಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಗರುಡ ಟೀಮ್ ನೋಡಿ ಜನ ಮನೆಯಿಂದ ಹೊರಬರಲು ಭಯಪಟ್ಟಿದ್ದಾರೆ. ಇತ್ತ ಪೊಲೀಸರು ಕೂಡ ಪ್ರತಿ ಏರಿಯಾದಲ್ಲೂ ಗಸ್ತು …

Read More »

ನನ್ನ ಕೇಳಿ ಹೋಗಬೇಕಿತ್ತು -ರಾತ್ರಿ ಯಾಕೆ ಹೋದ್ರು? ಜಮೀರ್ ಅಹ್ಮದ್

ಬಿಬಿಎಂಪಿ ಮೇಲೆ ಗೂಬೆ ಕೂರಿಸಿದ ಶಾಸಕ ಜಮೀರ್ ಅಹ್ಮದ್ನನ್ನ ಕೇಳಿ ಹೋಗಬೇಕಿತ್ತು -ರಾತ್ರಿ ಯಾಕೆ ಹೋದ್ರು? ಬೆಂಗಳೂರು: ಈ ರೀತಿಯ ಘಟನೆಗಳು ನಡೆಯಬಾರದಿತ್ತು. ಗಲಾಟೆ ನಡೆಸಿದವರ ಬಗ್ಗೆ ಖಂಡಿತ ಕಠಿಣ ಕ್ರಮ ಜರುಗಿಸಬೇಕು. ರಾತ್ರಿ ವೇಳೆ ಬಿಬಿಎಂಪಿ ಅಧಿಕಾರಿಗಳು ಯಾಕೆ ಪಾದರಾಯನಪುರಕ್ಕೆ ಹೋಗಬೇಕು. ಬೆಳಗ್ಗೆ ಹೋಗಿದ್ದು ತಪ್ಪು ಎಂದು ಬಿಬಿಎಂಪಿ ಮೇಲೆ ಶಾಸಕ ಜಮೀರ್ ಅಹಮದ್ ಗೂಬೆ ಕೂರಿಸಿದ್ದಾರೆ. ಕೊರೊನಾ ಶಂಕಿತರನ್ನು ಕರೆದುಕೊಂಡು ಹೋಗುವ ಮುನ್ನ ನನ್ನನ್ನು ಕೇಳಿ ಬೇಕಿತ್ತು. …

Read More »

ದುಷ್ಕೃತ್ಯದಲ್ಲಿ ತೊಡಗಿರೋರನ್ನು ಗುರುತಿಸಿ ಕಠಿಣ ಶಿಕ್ಷೆ ನೀಡಿ: ಸಿದ್ದು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್‍ವೈ ಅವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಮಾಜಿ ಸಿಎಂ, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಬರೆದು ಬಿಎಸ್‍ವೈ ಅವರಿಗೆ ಟ್ಯಾಗ್ ಮಾಡಿದ್ದಾರೆ. ಮತ್ತೊಂದು ಟ್ವೀಟ್ …

Read More »

ಬೆಂಗಳೂರು: ಪಾದರಾಯನಪುರದ ನಿವಾಸಿಗಳಿಗೆ, ಶಾಂತಿ ಕಾಪಾಡುವಂತೆ ಶಾಸಕ ಜಮೀರ್​ ಅಹ್ಮದ್​ ಮನವಿ

ಬೆಂಗಳೂರು: ಪಾದರಾಯನಪುರದ ನಿವಾಸಿಗಳಿಗೆ, ಶಾಂತಿ ಕಾಪಾಡುವಂತೆನಿನ್ನೆ ಇಲ್ಲಿನ ಕೆಲ ನಿವಾಸಿಗಳನ್ನ ಕ್ವಾರಂಟೈನ್​ಗೆ ಒಳಪಡಿಸುವ ವಿಚಾರವಾಗಿ ಸ್ಥಳೀಯರು, ಬಿಬಿಎಂಪಿ, ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಗಲಾಟೆ ಮಾಡಿದ್ರು. ಈ ಹಿನ್ನೆಲೆ ಟ್ವೀಟ್​ ಮಾಡಿರೋ ಜಮೀರ್​ ಅಹ್ಮದ್​, ಪಾದರಾಯನಪುರ ನಿವಾಸಿಗಳೆಲ್ಲಾ ಶಾಂತಿಯಿಂದ ಇದ್ದು, ಬಿಬಿಎಂಪಿಯ ಮಾರ್ಗಸೂಚಿಗಳನ್ನ ಪಾಲಿಸುವಂತೆ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ಶಾಸಕ ಜಮೀರ್​ ಅಹ್ಮದ್​ ಮನವಿ ಮಾಡಿದ್ದಾರೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. …

Read More »

ಪ್ರತಿ ಜಿಲ್ಲೆಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಿ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸುವಂತೆ ದೇಶಪಾಂಡೆ ಆಗ್ರಹ

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶೀಘ್ರವಾಗಿ ತಪಾಸಣೆ ನಡೆಸಲು ಈ ತಿಂಗಳ 30ರ ಒಳಗಾಗಿ ಪ್ರತಿ ಜಿಲ್ಲೆಗೊಂದು ಕೋವಿಡ್-19 ಪ್ರಯೋಗಾಲಯ ಹಾಗೂ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಸಹಾಯಧನ ಘೋಷಣೆ ಮಾಡಿದೆ. ಆದರೆ ಇತರೆ ಕಾರ್ಮಿಕರ ಬದುಕು ಸಂಕಷ್ಟದಲ್ಲಿದ್ದು ಸಂಘಟಿತ …

Read More »

ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ : ಶಿವರಾಮ ಹೆಬ್ಬಾರ್

ಬೆಂಗಳೂರು, :ಕಟ್ಟಡ ಕಾರ್ಮಿಕರದ್ದಾಗಲೀ ಅಥವಾ ಇತರೆ ಯಾವುದೇ ಕಾರ್ಮಿಕರದ್ದಾಗಲೀ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್ ಅವರು ಪ್ರಕಟಿಸಿದ್ದಾರೆ. ಕಾರ್ಮಿಕರ ಆರೋಗ್ಯ ದೃಷ್ಠಿಯಿಂದ ಎಲ್ಲಾ ಕಾರ್ಮಿಕರಿಗೂ ಮುಖಗವಸು ಹಾಗೂ ಸ್ಯಾನಿಟೈಜರ್‍ಗಳನ್ನು ಒದಗಿಸುವುದರ ಜೊತೆಗೆ ಕಾರ್ಮಿಕ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳು ಪ್ರತಿ ದಿನ ಎರಡು ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಕಾರ್ಮಿಕರ ಯೋಗ ಕ್ಷೇಮವನ್ನು ವಿಚಾರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು …

Read More »

54 ಮಂದಿ ಪಾದರಾಯನಪುರ ಪುಂಡರು ವಶಕ್ಕೆ..! ಘಟನೆ ಹಿಂದಿದೆ ಇಬ್ಬರ ಕೈವಾಡ..?

ಬೆಂಗಳೂರು : ಕಳೆದ ರಾತ್ರಿ ನಗರದ ಪಾದರಾಯನಪುರದಲ್ಲಿ ಕೊರೊನಾ ವಾರಿಯಸ್೯ ( ಕಾರ್ಯಕರ್ತೆಯರು ) ಮೇಲೆ ನಡೆದ ದಾಳಿ ಸಂಬಂಧ ಮಿಂಚಿನ ಕಾರ್ಯಚಾರಣೆ ನಡೆಸಿರುವ ಪೊಲೀಸರು 54 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸಿಸಿ ಕ್ಯಾಮರಾ ಮತ್ತು ಮೊಬೈಲ್ ದೃಶ್ಯಾವಳಿಗಳನ್ನು ಆಧರಿಸಿ 54 ಜನರನ್ನು ಜೆ.ಜೆ.ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಜೊತೆಗೆ ಪಾದರಾಯನಪುರದಲ್ಲಿ ದಾಂಧಲೆ ಎಸಗಿದವರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ಗಳನ್ನು ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 353, …

Read More »

ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದರಾಯನಪುರದಲ್ಲಿ ನಡೆದ ಘಟನೆ ಬಗ್ಗೆ ಕಠಿಒಣ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆಮಾತನಾಡಿದ ಅವರು, ಘಟನೆ ಸಂಬಂಧ ಈಗಾಗಲೇ 60 ಜನರನ್ನ ಬಂಧನ ಮಾಡಲಾಗಿದೆ. ಘಟನೆಯಾದ 3-4 ಗಂಟೆಯಲ್ಲಿ ಎಲ್ಲಾ ಪ್ರಮುಖರನ್ನ ಅರೆಸ್ಟ್ ಮಾಡಿದ್ದೇವೆ. ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇವೆ ಎಂದರು. ಪೊಲೀಸರು, …

Read More »

ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು:H.D.K

ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ,ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.ದೇಶದ ಸ್ವಾಸ್ಥ್ಯ ಕಿಂತ ಬೇರಾವುದೂ ಮುಖ್ಯವಲ್ಲ. ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದು. ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ,ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧ. ಯಾವುದೇ ಧರ್ಮದವರಿರಲಿ ಈ ದೇಶದ ಕಾನೂನಿಗೆ ತಲೆ ಬಾಗಿಸಬೇಕು. ಇಂತಹ ಅತಿರೇಕದ ಹುಚ್ಚಾಟಗಳನ್ನು …

Read More »