Breaking News

ಬೆಂಗಳೂರು

ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಹಾಲುಗಳು ದೀರ್ಘಕಾಲ ಬಾಳಿಕೆಗೆ ಬರುತ್ತಿದ್ದು, ಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿವೆ

ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿವೆ. ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್‍ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ …

Read More »

ರಾಜ್ಯದಲ್ಲಿ ಕೊರೊನಾ ವಿರುದ್ಧ ‘3ಟಿ’ ಅಸ್ತ್ರ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ಫೈನಲ್ ವಾರ್ ಎಂದು ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ‘3ಟಿ’ ಅಸ್ತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟು ಜನರಿಗೆ 197 ಕೊರೊನಾ ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 16 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬಾಗಲಕೋಟೆಯಲ್ಲಿ 3 ಮಕ್ಕಳಲ್ಲೇ ಕೊರೊನಾ ಪತ್ತೆಯಾದರೆ, ಹೊಸ 3 ಪ್ರಕರಣಗಳಲ್ಲಿ ಮಕ್ಕಳಿಂದಲೇ …

Read More »

ಏಪ್ರಿಲ್ 14ರವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. ಪರಿಸ್ಥಿತಿ ನೋಡಿ ತೀರ್ಮಾನ

ಬೆಂಗಳೂರು: ಲಾಕ್‍ಡೌನ್ ಮಧ್ಯೆ ಎಣ್ಣೆ ಬೇಕು ಎಣ್ಣೆ ಅಂತ ಗಲ್ಲಿಗಲ್ಲಿಯ ಸಂದಿ ಮೂಲೆಯಲ್ಲಿ ಸುತ್ತಾಡುತ್ತಿದ್ದ ಕುಡುಕರಿಗೆ ಅಬಕಾರಿ ಇಲಾಖೆ ಬಿಗ್‍ಶಾಕ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇತ್ತೀಚೆಗೆ ಮಾತನಾಡಿ, ಏಪ್ರಿಲ್ 14ರವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. ಏ.14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದರು. ಆದರೆ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ನಡೆಸಿದ್ದರು. ಇದಕ್ಕೆ ಬ್ರೇಕ್ ಹಾಕಲು ಅಬಕಾರಿ ಇಲಾಖೆ …

Read More »

ಕೊರೋನಾ 3ನೇ ಹಂತಕ್ಕೆ ಕಾಲಿಡದಂತೆ ಕ್ರಮ : ಸಚಿವ ಬೊಮ್ಮಾಯಿ

ಬೆಂಗಳೂರು, ಏ. 9- ದೇಶದಲ್ಲಿ ಕೊರೋನ ಸೋಂಕು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ಹಾಗೂ ಸಮಯದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕೆಲವು ರಾಜ್ಯಗಳಲ್ಲಿ ಕಠಿಣ ಕ್ರಮ ಈಗಾಗಲೇ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದಲ್ಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಮಾಡ್ತುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ತಡೆಗಟ್ಟಲು ಪರಿಣಿತರ ತಂಡ ನಿನ್ನೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. ಈ ಬಗ್ಗೆ ಇವತ್ತು ಚರ್ಚೆ ಮಾಡಿ …

Read More »

ಇಂದು ನಡೆದ ಮಹತ್ವದ ಸಂಪುಟ ಸಭೆಯ ಹೈಲೈಟ್ಸ್ …”

ಬೆಂಗಳೂರು, ಏ.9-ರಾಜ್ಯದಲ್ಲಿ ಇನ್ನು ಹದಿನೈದು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆಗೆ ಎಲ್ಲ ಸಚಿವರು‌ ಸಲಹೆ ಮಾಡಿದ್ದು,ನಾಳೆ ಪ್ರಧಾನಿ‌ ಜೊತೆ ಚರ್ಚಿಸಿದ ಬಳಿಕ ಮುಂದಿನ‌ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏ.14ರ ನಂತರ‌ ಲಾಕ್ಡೌನ್ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸಿದ ಬಳಿಕ‌ ತೀರ್ಮಾನಿಸಲಾಗುವುದು ಎಂದರು. ಲಾಕ್ಡೌನ್ ಸಂದರ್ಭದಲ್ಲಿ …

Read More »

17 ದಿನದಲ್ಲಿ ಮೊದಲ 50, ಈಗ ಕೇವಲ 4 ದಿನದಲ್ಲಿ 47 ಮಂದಿಗೆ ಕರ್ನಾಟಕದಲ್ಲಿ ಸೋಂಕು

ಬೆಂಗಳೂರು: ಕೊರೊನಾ ಪೀಡಿತ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 11ನೇ ಸ್ಥಾನ ಸಿಕ್ಕಿರಬಹುದು. ಆದರೆ ಲಾಕ್‍ಡೌನ್ ಮಧ್ಯೆ ಕೊರೊನಾ ಪೀಡಿತರ ಸಂಖ್ಯೆ ದಿಢೀರ್ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದ್ದು ಮಾರ್ಚ್ 8 ರಂದು. ಖಾಸಗಿ ಕಂಪನಿಯ ಟೆಕ್ಕಿಗೆ ಕೊರೊನಾ ಬಂದಿತ್ತು. ಇದಾದ 17 ದಿನದಲ್ಲಿ ಕೊರೊನಾ ಪೀಡಿತರ ಸಂಖ್ಯೆ 50ಕ್ಕೆ ಏರಿಕೆ ಆಗಿತ್ತು. ಮಾರ್ಚ್ 31ಕ್ಕೆ 100ನೇ ಪ್ರಕರಣ ಬಂದಿತ್ತು. ಅಂದರೆ ಮಾರ್ಚ್ 25 …

Read More »

ಡಿಸೆಂಬರ್‌ವರೆಗೂ ಅಲರ್ಟ್ ಆಗಿರುವಂತೆ ಸಾರ್ವಜನಿಕರಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಮನವಿ

ಬೆಂಗಳೂರು: ಕೊವಿಡ್‌ 19 ವೈರಸ್‌ ಸಂಪೂರ್ಣ ನಿರ್ನಾಮ ಆಗುವವರೆಗೂ ಅಂದರೆ ಕನಿಷ್ಠ ಮುಂದಿನ 7-8 ತಿಂಗಳು ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಉಪ ಮುಖ್ಯಮಂತ್ರಿ ಡಾ. ಸಿ ಎನ್‌ ಅಶ್ವತ್ಥನಾರಾಯಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಬಿಬಿಎಂಪಿಯ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮಲ್ಲೇಶ್ವರದಲ್ಲಿ ಬುಧವಾರ ಪಡಿತರ ವಿತರಣೆ ಮಾಡಿದ ಡಾ. ಅಶ್ವತ್ಥನಾರಯಣ ಅವರು, ಅಡುಗೆ ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. “ಪ್ರಸ್ತುತ ಸಭೆ, …

Read More »

ಎಂಎಲ್‌ಎ, ಎಂಎಲ್‍ಸಿಗಳ ವೇತನ ಕಡಿತಕ್ಕೆ ರಾಜ್ಯ ಸರಕಾರ ಚಿಂತನೆ ….”

ಬೆಂಗಳೂರು : ಕೊರೋನಾ ತಂಡದೊಡ್ಡಿರುವ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು ಎಂಎಲ್‌ಎ, ಎಂಎಲ್ಸಿಗಳ ವೇತನ ಕಡಿತಕ್ಕೆ ಸರಕಾರ ಚಿಂತನೆ ನಡೆಸಿದೆ. ಪ್ರತಿಪಕ್ಷ ನಾಯಕರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ದೂರವಾಣಿ ಮೂಲಕ ಮಾತನಾಡಿದ ಸಿಎಂ, ಎಲ್ಲಾ ಶಾಸಕರ, ಪ್ರತಿಪಕ್ಷದ ನಾಯಕರ, ಪರಿಷತ್ ಸದಸ್ಯರ ವೇತನ ಕಡಿತ ಮಾಡೋ ಬಗ್ಗೆ ಮಾತುಕತೆ‌ ನಡೆಸಿದರು. ಶೇ. …

Read More »

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾದ ಸಿಎಂ

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಲಿದ್ದಾರೆ ಸಿಎಂ ಯಡಿಯೂರಪ್ಪ, ಹೌದು, ಕೊರೋನಾ ಹೊಡೆತಕ್ಕೆ ರಾಜ್ಯ ತತ್ತರಿಸಿರುವ ಹಿನ್ನೆಲೆಯಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಆಡಳಿತ ಯಂತ್ರಕ್ಕೆ ಹಿಡಿದಿರುವ ಕಿಲುಬನ್ನು ತಿಕ್ಕಿ ತೊಳೆಯಲು ಬಯಸಿರುವ ಸಿಎಂ ಇದಕ್ಕಾಗಿ ಪೂರ್ವಭಾವಿ ತಯಾರಿ ಆರಂಭಿಸಿದ್ದಾರೆ. ಆಡಳಿತ ಯಂತ್ರ ದುಬಾರಿ ವೆಚ್ಚದ್ದಾಗಿ ಪರಿಣಮಿಸಿರುವುದರಿಂದ ಮೊದಲು ತಮ್ಮ ಸಿಬ್ಬಂದಿಗಳು ಹಾಗೂ ಸಚಿವರ ಸಿಬ್ಬಂದಿಗಳ ಸಂಖ್ಯೆಗೆ ಸಿಎಂ ಕತ್ತರಿ ಹಾಕಲಿದ್ದಾರೆ. …

Read More »

ಕೊರೊನಾ ರೋಗಿ ಸಾವು – ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಬೀಗ, ಸಿಬ್ಬಂದಿಗೆ ಕ್ವಾರಂಟೈನ್

ಬೆಂಗಳೂರು: ಕೊರೊನಾ ಸೋಂಕಿತ ರೋಗಿ ನಂಬರ್ 177 ಸಾವಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯ ಎಡವಟ್ಟು ಕಾರಣವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇರವಾಗಿ ದೂರಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿಯ ಖಾಸಗಿ ಆಸ್ಪತ್ರೆಯು ಎರಡು ದಿನಗಳ ಕಾಲ ರೋಗಿಯನ್ನು ಇಟ್ಟುಕೊಂಡಿತ್ತು. ಆದರೆ ಈ ಬಗ್ಗೆ ಸರ್ಕಾರಿ ಆಸ್ಪತ್ರೆಗೆ ಯಾವುದೇ ಮಾಹಿತಿ ಕೊಟ್ಟಿರಲಿಲ್ಲ. ಎರಡು ದಿನಗಳ ಬಳಿಕ ಅಲ್ಲಿಂದ ಇಎಸ್‍ಐ ಆಸ್ಪತ್ರೆಗೆ ಶಿಫ್ಟ್ …

Read More »