Breaking News
Home / ಜಿಲ್ಲೆ / ಬೆಂಗಳೂರು (page 450)

ಬೆಂಗಳೂರು

ಇಂದು ಬೆಂಗಳೂರಿಗೆ ಬರುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅತೃಪ್ತರಿಂದ ಅಹವಾಲು ಸ್ವೀಕಾರ

ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ನಂತರ ಕೆಲವರು ಅತೃಪ್ತಿಗೊಂಡವರು ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಮೇಶ್ ಕತ್ತಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ …

Read More »

‘ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದೆವೆ

ಬೆಂಗಳೂರು,ಮಾ.13- ಬೆಂಗಳೂರು ನಗರ ಸೇರಿದಂತೆ ಯಾವುದೇ ಪ್ರದೇಶಕ್ಕೂ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.  ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಜಲಸಂಪನ್ಮೂಲ ಇಲಾಖೆಯ ಸಿವಿಲ್ ಇಂಜಿನಿಯರಿಂಗ್ ಸಂಘದ ಡೈರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉತ್ತಮ ಮಳೆಯಾಗಿದೆ. ಎಲ್ಲ ಜಲಾಶಯಗಳಲ್ಲೂ ಸಾಕಷ್ಟು ನೀರಿದೆ. ಆ ನೀರನ್ನು ಕಾಪಾಡಿಕೊಂಡು ಸರಿಯಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗಾಗಲೇ …

Read More »

ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸ್ತಿದ್ದ ಯುವಕನನ್ನ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಪೇದೆಗೆ ಹಲ್ಲು ಮುರಿಯುವಂತೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: ಕಾನೂನು ಪಾಲನೆ ಮಾಡಿ ಅನ್ನೋದೆ ತಪ್ಪಾಗಿ ಹೋಗಿದೆ. ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸ್ತಿದ್ದ ಯುವಕನನ್ನ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಪೇದೆಗೆ ಹಲ್ಲು ಮುರಿಯುವಂತೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.ಹೆಲ್ಮೆಟ್ ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೇದೆ ಮೇಲೆ ಹಲ್ಲೆ ಮಾಡಿದ್ದ ವಿಜಯ್ ತರುಣ್ (21) ಬಂಧನ ಮಾಡಲಾಗಿದೆ. ಮಂಗಳವಾರ ಸಂಜೆ 5:30 ರ ಸುಮಾರಿಗೆ ತನ್ನ ಗೆಳೆಯನೊಂದಿಗೆ ಬರುತ್ತಿದ್ದ ಆರೋಪಿ ವಿಜಯ್ ತರುಣ್ ನನ್ನ ಪೊಲೀಸರು ತಡೆದಿದ್ದರು.ಈ ವೇಳೆ ಹೆಲ್ಮೆಟ್ …

Read More »

2 ತಿಂಗಳೊಳಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ

ಬೆಂಗಳೂರು : ರಾಜ್ಯದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ಎರಡು ತಿಂಗಳೊಳಗಾಗಿ ನಿವಾರಣೆ ಮಾಡುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.  ವಿಧಾನಸಭೆಯಲ್ಲಿ ಶಾಸಕರಾದ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ಈ ಮೊದಲು ಲೋಕಸೇವಾ ಆಯೋಗದ ಮೂಲಕ ವೈದ್ಯg ನೇಮಕಾತಿಯಾಗುತ್ತಿತ್ತು. ಸಚಿವರು, ಶಾಸಕರ ಒತ್ತಾಯದ ಮೆರೆಗೆ ನೇರ ನೇಮಕಾತಿಗೆ ಮುಖ್ಯಮಂತ್ರಿ ಅವರು ಅವಕಾಶ ಮಾಡಿಕೊಟ್ಟಿದ್ದಾರೆ ಅಲ್ಲದೆ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಿಸಿಕೊಳ್ಳಲು ಜಿಲ್ಲಾ …

Read More »

ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ

ಬೆಂಗಳೂರು, ಮಾ.12: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳು, ಬಾರ್ ಆಯಂಡ್ ರೆಸ್ಟೊರೆಂಟ್, ಹೊಟೇಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್‌ಒಸಿ ಪ್ರತಿ ಪಡೆಯದೆ …

Read More »

ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ

ಬೆಂಗಳೂರು: ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ. ಮುಂದೆ ಏನು ಮಾಡಬೇಕು ಯಾವ ಹೆಜ್ಜೆ ಇಡಬೇಕು ನಡೆ ಏನು ಎನ್ನುವ ಆತಂಕದಲ್ಲಿದ್ದಾರೆ. ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಿಜ್ವಾನ್ ಅರ್ಷದ್, ಜಮೀರ್ ಅಹಮ್ಮದ್, ಎಂ.ಬಿ.ಪಾಟೀಲ್ ಮುಂದಿನ ನಡೆ ಏನು ಎನ್ನುವ ಹೊಸ ಮಾತು ಕೈ ಪಾಳಯದಲ್ಲಿ ಆರಂಭವಾಗಿದೆ. ಡಿಕೆಶಿಗೆ ಪಟ್ಟ ತಪ್ಪಿಸಿ ಕೃಷ್ಣಬೈರೇಗೌಡರಿಗೆ ಪಟ್ಟ ಕಟ್ಟಲು ಈ …

Read More »

ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ

ಬೆಂಗಳೂರು,- ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ. ಹಾಗಾಗಿ ಗದ್ದಲ ಮಾಡಿ ಚರ್ಚೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ಕಾಂಗ್ರೆಸ್ ಶಾಸಕರು ಬಿಜೆಪಿ ಶಾಸಕರ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಕ್ಕುಚ್ಯುತಿಯಿಂದ ಸಲ್ಲಿಕೆಯಾಗಿರುವ ಎರಡು ಸೂಚನೆಗಳ ಚರ್ಚೆಗೆ ಅವಕಾಶ ಮಾಡಿ ಕೊಡುವುದಾಗಿ ಹೇಳಿದ್ದಂತೆ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಆಹ್ವಾನಿಸಿದ್ದರು. ಈ ವೇಳೆ ಬಿಜೆಪಿಯ ಕೆ.ಜಿ.ಬೋಪಯ್ಯ ಮಾತನಾಡಿ, …

Read More »

ಹಿರಿಯ ಶಾಸಕರ ರಮೇಶ್‍ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಗದ್ದಲ

ಬೆಂಗಳೂರು,ಮಾ.11- ಹಿರಿಯ ಶಾಸಕರ ರಮೇಶ್‍ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಹಿನ್ನೆಲೆಯಲ್ಲಿ ನಡೆಯುತ್ತಿರುವ ಗದ್ದಲ ವಿಧಾನಸಭೆಯಲ್ಲಿ ಮುಂದುವರೆದಿದ್ದು, ಕೋಲಾಹಲದ ವಾತಾವರಣ ನಿರ್ಮಿಸಿತು.  ಒಂದು ಹಂತದಲ್ಲಿ ವಿರೋಧ ಪಕ್ಷದವರು ಸಮಾಧಾನಗೊಂಡು ಕಲಾಪಕ್ಕೆ ಸಹಕರಿಸಲು ಮುಂದಾದರೂ ಆಡಳಿತ ಪಕ್ಷದ ಶಾಸಕರು ರೊಚ್ಚಿಗೆದ್ದಿದ್ದರಿಂದ 15 ನಿಮಿಷ ಸದನ ಮುಂದೂಡಬೇಕಾದ ಅನಿವಾರ್ಯತೆ ಎದುರಾಯಿತು. ಇಂದು ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಕೆ.ಎಸ್.ಈಶ್ವರಪ್ಪ ಇಬ್ಬರೂ ಏಕಕಾಲಕ್ಕೆ ಎದ್ದು ನಿಂತು ನಿನ್ನೆಯ ಘಟನೆಯ …

Read More »

ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ

ಬೆಂಗಳೂರು:  ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರೋ ಅವರು, ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ.   

Read More »

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ

ಬೆಂಗಳೂರು: ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಶಾಸಕಾಂಗ ನಾಯಕನ ಹುದ್ದೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ. ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನೇಮಕ ಮಾಡುವುದರ ಮೂಲಕ ಪಕ್ಷ ಬಲವರ್ಧನೆಯ ಮಹತ್ವದ ಜವಾಬ್ದಾರಿ ಎಐಸಿಸಿ ಎಲ್ಲರ ಮೇಲೂ ಹಾಕಿದೆ, ಈ ಕುರಿತು ಇಂದು ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊನೆಗೂ ಕೆಪಿಸಿಸಿಗೆ …

Read More »