Breaking News

ಬೆಂಗಳೂರು

ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ದಂಡ

ಬೆಂಗಳೂರು: ಲಾಕ್‍ಡೌನ್ ವೇಳೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದ ಮನೋವೈದ್ಯರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿದೆ. ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ಸಂಬಂಧ ದೇಶದಲ್ಲಿ ಲಾಕ್‍ಡೌನ್ ಜಾರಿಯಾಗಿದ್ದು ಎಲ್ಲ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿದೆ. ಕರ್ನಾಟಕದಲ್ಲೂ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯ ವಿನೋದ್ ಕುಲಕರ್ಣಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪಿಐಎಲ್ ಸಲ್ಲಿಸಿದ್ದರು. …

Read More »

ಬೆಳಗಾವಿ ತಬ್ಲೀಗಿ ಸದಸ್ಯರ ಕುರಿತುಶೋಭಾ ಕರಂದ್ಲಾಜೆ ಅವರು ಮಾಡಿದ ಆರೋಪ‌ ಸಂಪೂರ್ಣ ಸುಳ್ಳು

ಬೆಂಗಳೂರು: ಬೆಳಗಾವಿ‌ ಜಿಲ್ಲಾ ಆಸ್ಪತ್ರೆಯ ಕ್ವಾಂರಂಟೈನ್ ನಲ್ಲಿರುವ ತಬ್ಲೀಗಿ ಸದಸ್ಯರು ವೈದ್ಯಕೀಯ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿ ಉಳುಗಿಳಿದ್ದಾರೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಅವರು ಮಾಡಿದ ಆರೋಪ‌ ಸಂಪೂರ್ಣ ಸುಳ್ಳು ಎಂದು ಇದೀಗ ತಿಳಿದು ಬಂದಿದೆ. ಕ್ವಾಂರಂಟೈನ್ ನಲ್ಲಿರುವ ಸದಸ್ಯರು ವೈದ್ಯಕೀಯ ಸಿಬ್ಬಂದಿಗೆ ಜತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಚಿಕಿತ್ಸೆ ನೀಡುವ ವೈದ್ಯರ ಮೇಲೆ ಉಗುಳಿದ್ದಾರೆ ಅಂತಾ ಸೋಮವಾರ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದರು. ಅಲ್ಲದೇ ಮಾಧ್ಯಮಗಳೊಂದಿಗೆ ಮಾತನಾಡಿ, …

Read More »

ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ಚಿಂತನೆ

ಬೆಳಗಾವಿ:  ಭಾರತ್ ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ಮದ್ಯ ವ್ಯಸನಿಗಳಿಗಾಗಿ ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ನೀಡಲು ಚಿಂತನೆ ನಡೆಸಿದೆ. ಕೊರೊನಾದಿಂದಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಅಗತ್ಯ ವಸ್ತುಗಳ ದೊರೆಯುವಂತಹ ಅಂಗಡಿಗಳನ್ನು ಹೊರತು ಪಡೆಸಿ ಉಳಿದೆಲ್ಲವನ್ನು ಬಂದ್ ಮಾಡಲಾಗಿದೆ.  ಇದರಿಂದ ರಾಜ್ಯದಲ್ಲಿ ಮದ್ಯ ಚಟಕ್ಕೆ ಒಳಗಾಗಿರುವವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಪ್ರತಿ ದಿನ ಮೂರು ಗಂಟೆ ಮಾತ್ರ …

Read More »

ಕೊರೋನಾ ಹಿನ್ನೆಲೆಯಲ್ಲಿ ಬುಲೆಟ್ ಪ್ರಕಾಶ್ ಅಂತಿಮ ದರ್ಶನಕ್ಕೆ ಅವಕಾಶವಿಲ್ಲ: ಸಚಿವ ಆರ್​ ಅಶೋಕ್

ಬೆಂಗಳೂರು(ಏ. 06): ಕೊರೋನಾ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ​ನಟ ಬುಲೆಟ್ ಪ್ರಕಾಶ್ ಪಾರ್ಥಿವ ಶರೀರದ ಸಾರ್ವಜನಿಕರ ದರ್ಶನಕ್ಕೆ  ಅವಕಾಶ ನಿರಾಕರಿಸಲಾಗಿದೆ. ಇದೇ ರೀತಿಯಾಗಿ ಸೆಲೆಬ್ರಿಟಿಗಳು ಸಹ ಅಂತಿಮ ದರ್ಶನ ಪಡೆಯುವಂತಿಲ್ಲ. ಆದರೆ, ಸಂಬಂಧಿಕರಿಗಷ್ಟೇ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಸಚಿವ ಆರ್​ ಅಶೋಕ್​​​ ತಿಳಿಸಿದ್ದಾರೆ. ಲಾಕ್ ಡೌನ್ ಮುಗಿದ ನಂತರ ಕಡಿಮೆ ಜನರು ಪೂಜೆ ಸಂಸ್ಕಾರದಲ್ಲಿ ಭಾಗಿಯಾಗಬಹುದು. ದೂರದಿಂದಲೇ ನಟ ಬುಲೆಟ್​​ ಪ್ರಕಾಶ್​ ಅವರಿಗೆ ನಮನ ಸಲ್ಲಿಸುವಂತೆ ಅಭಿಮಾನಿಗಳಲ್ಲಿ …

Read More »

ಬೆಂಗಳೂರು: ಕೊರೊನಾ ಆತಂಕದ ನಡುವೆ ಸೋಮವಾರ ವರುಣದೇವ ಅಬ್ಬರಿಸಿದ್ದಾರೆ. ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಇಂದಿನಿಂದ ಎರಡು ದಿನ ಭಾರೀ ಮಳೆಯಾಗಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಲ್ಲಿ ಸೋಮವಾರ ರಾತ್ರಿ ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಶಿವಾಜಿನಗರ, ರಾಜಾಜಿನಗರ, ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಗರದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು: ಕೊರೊನಾ ಆತಂಕದ ನಡುವೆ ಸೋಮವಾರ ವರುಣದೇವ ಅಬ್ಬರಿಸಿದ್ದಾರೆ. ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಇಂದಿನಿಂದ ಎರಡು ದಿನ ಭಾರೀ ಮಳೆಯಾಗಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಲ್ಲಿ ಸೋಮವಾರ ರಾತ್ರಿ ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಶಿವಾಜಿನಗರ, ರಾಜಾಜಿನಗರ, ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಗರದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ …

Read More »

ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

ಬೆಂಗಳೂರು: ಸ್ಯಾಂಡಲ್‍ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದು, ಕೊನೆಯ ಬಾರಿಗೆ ಅವರನ್ನು ನೋಡಲು ಆಗಲಿಲ್ಲ ಎಂದು ಬೆಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ನನ್ನ ಸ್ನೇಹಿತ ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂದು ಕೇಳಿದಾಗ ಬೇಸರವಾಯಿತು. ಇನ್ನೂ ಹೆಚ್ಚು ದುಃಖಕರವಾದ ಸಂಗತಿಯೆಂದರೆ ಸಿನಿಮಾ ಉದ್ಯಮದ ಸ್ನೇಹಿತರು ಕೊನೆಯ ಬಾರಿಗೆ ಅವರನ್ನು ನೋಡಲು ಅವರ ಮನೆಗೆ ಭೇಟಿ ನೀಡಲು ಸಾಧ್ಯವಿಲ್ಲ. …

Read More »

ರಾಜಕೀಯ ಕನಸು ಕಂಡಿದ್ದ ಬುಲೆಟ್ ಪ್ರಕಾಶ್: ರಂಗಾಯಣ ರಘು

ಬೆಂಗಳೂರು: ಗೆಳೆಯ ಬುಲೆಟ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನೋವು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಹಾಸ್ಯ ನಟ ರಂಗಾಯಣ ರಘು ಹೇಳಿದ್ದಾರೆ. ನಾನು ಹಾಗೂ ಬುಲೆಟ್ ಪ್ರಕಾಶ್ ಹೋಗೋ ಬಾರೋ ಫ್ರೆಂಡ್ಸ್. ಅವರಿಗೆ ನಾನಷ್ಟೇ ಅಲ್ಲ ದೊಡ್ಡ ಸಂಖ್ಯೆಯ ಸ್ನೇಹ ಬಳಗವೇ ಇದೆ. ಪ್ರಕಾಶ್ ಅವರ ಏರಿಯಾದಲ್ಲಿ ಅನೇಕ ಸ್ನೇಹಿತರಿದ್ದಾರೆ. ಎಲ್ಲರೊಂದಿಗೂ ಹಾಸ್ಯವಾಗಿ, ನಗು ಮುಖದಿಂದ ಇರುತ್ತಿದ್ದರು. ಎಲ್ಲವನ್ನೂ ತಮಾಷೆಯಾಗಿ ತೆಗೆದುಕೊಳ್ಳುತ್ತಿದ್ದ ಎಂದು …

Read More »

ಲಾಕ್‍ಡೌನ್‍ನಿಂದ ಕಾಂಡಿಮೆಂಟ್ಸ್, ಬೇಕರಿಗಳಿಗೆ ವಿನಾಯ್ತಿ ನೀಡಿದ ರಾಜ್ಯ ಸರ್ಕಾರ

ಭಾರತ ಲಾಕ್‍ಡೌನ್ ನಡುವೆ ರಾಜ್ಯದಲ್ಲಿ ಬೇಕರಿ, ಕಾಂಡಿಮೆಂಟ್ಸ್, ಮಿಠಾಯಿ ಹಾಗೂ ಸಿಹಿ ತಿನಿಸುಗಳ ತಯಾರಿಕಾ ಘಟಕಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಬೇಕರಿಯ ತಿಂಡಿ ತಿನಿಸುಗಳು, ಅವುಗಳಲ್ಲಿ ಪ್ರಮುಖವಾಗಿ ಬ್ರೆಡ್ ಹಾಗೂ ಬಿಸ್ಕೆಟ್‍ಗಳನ್ನ ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿನ ರೋಗಿಗಳು ಹಾಗೂ ವಯಸ್ಸಾದವರು ಸೇರಿದಂತೆ ಮಕ್ಕಳು ಹಾಗೂ ಸಾಮಾನ್ಯ ಜನ ಸಹ ತಿನ್ನುತ್ತಾರೆ. ಹೀಗಾಗಿ ಬೇಕರಿ ತಿಂಡಿ ತಿನಿಸುಗಳ ಅವಶ್ಯಕತೆ ಇರುವ ಕಾರಣ ಬೇಕರಿ ಹಾಗೂ ಕಾಂಡಿಮೆಂಟ್ಸ್ ಗಳಿಗೆ …

Read More »

ಕೊರೋನಾ ಸೋಂಕು‌ ಹರಡುವುದನ್ನು‌ ತಡೆಯುವ‌ ವಿಚಾರದಲ್ಲಿ‌ ಇನ್ನಷ್ಟು ಎಚ್ಚರಿಕೆ ಅಗತ್ಯ:H.D.D.

ಬೆಂಗಳೂರು, ಏ.6-ಕೊರೋನಾ ಸೋಂಕು‌ ಹರಡುವುದನ್ನು‌ ತಡೆಯುವ‌ ವಿಚಾರದಲ್ಲಿ‌ ಇನ್ನಷ್ಟು ಎಚ್ಚರಿಕೆ ಅಗತ್ಯ ಎಂದು‌ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ‌ ಬೇಕಾದ ಸಿದ್ಧತೆ ಮಾಡಿಕೊಳ್ಳುವುದರಲ್ಲಿ ಹಿಂದೆ ಬಿದ್ದಿದ್ದೇವೆ. ಮೆಡಿಕಲ್ ಕಿಟ್, ಔಷಧಿ ತರಿಸಿದ್ದಾರೆ. ಕೊರೊನಾ ಶಂಕಿತರಿಗೆ ಚಿಕಿತ್ಸೆ ಕೊಡುತ್ತಿದ್ದಾರೆ‌. ಮೂರನೇ ಹಂತ, ನಾಲ್ಕನೇ‌ ಹಂತ ಎನ್ನುತ್ತಿದ್ದಾರೆ. ಕಡಿಮೆಯಾದ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲ ಮಾಡುತ್ತೇವೆ ಎಂದು ಸರ್ಕಾರ ಹೇಳಿದೆ ಎಂದರು.ಕೋವಿಡ್ -19 ಸುಮಾರು ಇನ್ನೂರು ದೇಶಗಳಲ್ಲಿ ಇದೆ. ಅತ್ಯಂತ …

Read More »

ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜಮಾತಿಗೆ ಹೋದವರಿಂದಲೇ ಕೊರೊನಾ ಹಬ್ಬತ್ತಿದೆ ಅನ್ನೋ ಚರ್ಚೆ, ಒಂದು ಸಮುದಾಯ ಗುರಿಯಾಗಿಸಿರುವ ವಿಚಾರವಾಗಿದೆ. ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಕೆಲವರು ಇದೇ ರೀತಿ ವರ್ತನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಈಗಾಗಲೇ ಕಮೀಷನರ್ ಹೇಳಿದ್ದಾರೆ ಎಂದರು. ಅಂತೆಯೇ, ಇಂದಿರಾ ಕ್ಯಾಂಟಿನ್ ನಿಲ್ಲಿಸಬಾರದು, ಉದ್ಯೋಗ ಸಿಗುವವರೆಗೂ …

Read More »