ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. …
Read More »ಕೊರೊನಾ ವಿರುದ್ಧ ಭಾರತದ ಯುದ್ಧ- ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ
ದೇಶದಲ್ಲಿ ಕೊರೊನಾ ಸೋಂಕು 300ರ ಗಡಿದಾಟಿದೆ. ಸೋಂಕು ತಡೆಗಟ್ಟಲು ನಮಗೆ ನಾವೇ ಮುಂಜಾಗ್ರತೆ ವಹಿಸಿ ಮಹಾಮಾರಿ ಹಬ್ಬುವುದನ್ನ ನಿಯಂತ್ರಿಸಬೇಕಿದೆ. ಪ್ರಧಾನಿ ಮೋದಿ ದೇಶದ ಜನತೆಗೆ ಸ್ವಯಂ ಗೃಹಬಂಧನ ವಿಧಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇಶದ ಮೇಲೆ ಪರಕೀಯರು ದಾಳಿ ಮಾಡಿದ್ರೆ ಭಾರತೀಯರೆಲ್ಲರೂ ಹೇಗೆ ಎದೆಕೊಟ್ಟು ಹೋರಾಟ ಮಾಡಲು ಸಿದ್ಧವಾಗುವಿರೋ ಹಾಗೇ ಇಂದು ಕಾಣದ ಶತ್ರುವಿನ ವಿರುದ್ಧ ಜನತಾ ಕಫ್ರ್ಯೂ ವಿಧಿಸಿಕೊಂಡು ಹೋರಾಡಬೇಕಿರೋದು ದೇಶದ ಪ್ರಜೆಯಾಗಿ …
Read More »ಬೆಂಗಳೂರು, ಮಾ.21: ಸಾರ್ವತ್ರಿಕ ರಜಾ ದಿನಗಳು ಸೇರಿದಂತೆ ಮಾ.31 ರವರೆಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯಾವ ಅಧಿಕಾರಿಯೂ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಇಲಾಖೆ ಸೂಚನೆ ನೀಡಿದೆ. ಈ ಹಿಂದೆ ಎರಡು ವಾರಗಳಿಗೆ ಸೀಮಿತವಾಗಿದ್ದ ನಿರ್ಬಂಧ ಹೇರಲಾಗಿತ್ತು. ಆದರೆ, ಕೊರೋನ ಮಹಾಮಾರಿ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದ್ದು, ಈ ತಿಂಗಳ ಅಂತ್ಯದವರೆಗೂ ಆರೋಗ್ಯ ಸೇವೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಜೆ ನೀಡಲಾಗುವುದಿಲ್ಲ ಎಂದು ಸೂಚನೆಯಲ್ಲಿ ಹೇಳಲಾಗಿದೆ.
Read More »ನಾಳೆ ಜನತಾ ಕರ್ಫ್ಯೂನಲ್ಲಿ ಏನೆಲ್ಲಾ ಬಂದ್ ಇರುತ್ತೆ
ಬೆಂಗಳೂರು : ಮಾರ್ಚ್ 22ರ ಭಾನುವಾರದಂದು (ನಾಳೆ) ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಪ್ಯೂಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬಹುತೇಕ ಜನರು ಅಂದು ಸ್ವಯಂ ಗೃಹ ಬಂಧನಕ್ಕೆ ಒಳಗಾಗಲಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಮನೆಯಿಂದ ಹೊರಗೆ ಬಾರದೇ ಪ್ರಧಾನಿಯವರ ಜನತಾ ಕರ್ಪ್ಯೂಗೆ ಬೆಂಬಲ ಸೂಚಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಏನೆಲ್ಲಾ ವ್ಯವಸ್ಥೆ ಇರೋದಿಲ್ಲ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.. ಮಾರ್ಚ್ 22ರ ಭಾನುವಾರದಂದು ಪ್ರಧಾನಿ ನರೇಂದ್ರ …
Read More »ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲವೆಂದು ಹೆತ್ತ ಕರುಳನ್ನೇ ಕತ್ತುಹಿಸುಕಿ ಕೊಲೆಗೈದ ಪಾಪಿ ತಂದೆ
ಬೆಂಗಳೂರು: ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲ, ಅವರ ಅಮ್ಮನ ರೀತಿ ಬೆಳೆಯುತ್ತಿವೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ದಾರುಣ ಘಟನೆ ಅಕ್ಷಯನಗರದ ಹನಿ ಡಿವ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ ಎನ್ನಲಾಗಿದೆ. ತೌಶಿನಿ( 3), ಶಾಸ್ತಾ(1.5) ಮೃತ ಕಂದಮ್ಮಗಳು. ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲ. ಇಂತಹ ಮಕ್ಕಳು ನನಗೆ ಬೇಡ್ವೇ ಬೇಡ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ತಂದೆ ಜತಿನ್(35) ಮಕ್ಕಳ ಕತ್ತುಹಿಸುಕಿ ಕೊಲೆಗೈದಿದ್ದಾನೆ. ಕೇರಳ ಮೂಲದ …
Read More »ಕೊರೊನಾ ಭಯದಲ್ಲಿ ಮಾಲ್ಡೋವಾದಲ್ಲಿ ಸಿಲುಕಿದ ಕನ್ನಡಿಗ ವಿದ್ಯಾರ್ಥಿಗಳು
ನೆಲಮಂಗಲ: ಕೊರೊನಾ ಭೀತಿಯಲ್ಲಿ ಮಾಲ್ಡೋವಾದಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಸಿಲುಕಿ ಪರದಾಡುತ್ತಿದ್ದಾರೆ. ರಾಜ್ಯದ ಸುಮಾರು 12 ವಿದ್ಯಾರ್ಥಿಗಳು ಮಾಲ್ಡೋವಾ ದೇಶದ Nicolae Testemiteanu state university of medicine and pharmacy ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ಮಾಲ್ಡೋವಾ ದೇಶದಲ್ಲಿ ಈಗಾಗಲೇ ಕೊರೊನಾ ವ್ಯಾಪಿಸುತ್ತಿದ್ದು, ಕ್ವೆರೆಂಟೈನ್ ಆಗಿರುವ ವಿದ್ಯಾರ್ಥಿಗಳು ಮಾಲ್ಡೋವಾದಲ್ಲಿ ಕರ್ಫೂ ಜಾರಿಯಾಗಿರುವ ಹಿನ್ನೆಲೆ ಯಾವುದೇ ದಿನನಿತ್ಯದ ಪದಾರ್ಥಗಳು ಸಿಗದೆ ಒದ್ದಾಡುತ್ತಿದ್ದಾರೆ. ನಮ್ಮನ್ನು ರಕ್ಷಿಸಿ ಭಾರತಕ್ಕೆ ವಾಪಸ್ …
Read More »ಬೆಂಗಳೂರು,: ಸರ್ಕಾರಿ ಕಚೇರಿಗಳಿಗೆ ಥರ್ಮಲ್ ಸಿಸಿ ಕ್ಯಾಮಾರ ಅಳವಡಿಕೆಗೆ ಚಿಂತನೆ
ಬೆಂಗಳೂರು, ಮಾ.21- ಸರ್ಕಾರಿ ಕಚೇರಿಗಳಲ್ಲಿ , ಜನಸಂದಣೀಯ ಪ್ರಮುಖ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮಾರ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೊರೊನಾ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಆತಂಕ ದುಪ್ಪಟ್ಟಾಗಿದೆ. ಖಾಸಗಿ ಸಂಸ್ಥೆಗಳು ಬಹುತೇಕ ಮನೆಗೆಲಸದ ಪದ್ಧತಿಯನ್ನು ಅಳವಡಿಸಿಕೊಂಡಿವೆ. ವಾಣಿಜ್ಯ ಸಂಕೀರ್ಣಗಳು, ಮಾಲ್ಗಳು, ಚಿತ್ರಮಂದಿರಗಳು, ಪ್ರಮುಖ ಮಾರುಕಟ್ಟೆಗಳು ಮುಚ್ಚಿವೆ. ಆದರೆ ಸರ್ಕಾರ ಇನ್ನೂ ಸರ್ಕಾರಿ ಕಚೇರಿಗಳಿಗೆ ರಜೆ ನೀಡಿಲ್ಲ. ಎಲ್ಲಾ ಸರ್ಕಾರಿ ಕಚೇರಿಗಳು ಚಾಲ್ತಿಯಲ್ಲಿವೆ. …
Read More »ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದರು. ಬೆಂಗಳೂರಿನಲ್ಲಿರುವ ಮೊಯ್ಲಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸತೀಶ ಜಾರಕಿಹೊಳಿ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಲಕ್ಷ್ಮಣರಾವ …
Read More »ಬೆಂಗಳೂರು: ಜನತಾ ಕರ್ಫ್ಯೂ ಪಾಲಿಸಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ.
ಬೆಂಗಳೂರು: ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಐಟಿ-ಬಿಟಿ ಕಂಪನಿಗಳ ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ. ಐಟಿ- ಬಿಟಿ, ಸ್ಟಾರ್ಟ್ ಅಪ್ ಕಂಪನಿಗಳ ಮುಖ್ಯಸ್ಥರ ಜತೆ ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ನಡೆಸಿದ ಡಾ. ಅಶ್ವತ್ಥನಾರಾಯಣ, ಕೊರೊನಾ ನಿಯಂತ್ರಣ ಸಂಬಂಧ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜತೆಗೆ ಅವರಿಂದ ಸಲಹೆ- ಸೂಚನೆಗಳನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ …
Read More »ಕೇರಳದಂತೆ ರಾಜ್ಯದಲ್ಲೂ ವಿಶೇಷ ಪ್ಯಾಕೆಜ್ ಘೋಷಿಸಿ: ಹೆಚ್ ಡಿ ಕುಮಾರಸ್ವಾಮಿ
ಕೊರೊನಾ ವೈರಸ್ ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೊರೊನಾ ವೈರಸ್ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ …
Read More »