ಬೆಂಗಳೂರು,ಫೆ.6 – ಅಂತೂ ಇಂತೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಮೂಲ ಹಾಗೂ ವಲಸಿಗರ ಸಂಘರ್ಷದ ನಡುವೆಯೂ ಉಪಚುನಾವಣೆಯಲ್ಲಿ ಗೆದ್ದಿದ್ದ 10 ಮಂದಿ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲ ವಿ.ಆರ್.ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಳೆದ ಡಿಸೆಂಬರ್ನಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದ 10 ಶಾಸಕರು ಇಂದು …
Read More »ಹೆಬ್ಬಾಳದ ಕೆಂಪಾಪುರದಲ್ಲಿ ನಾಲ್ಕು ಅಂತಸ್ತಿನ ಪಿಜಿ ಕಟ್ಟಡದಲ್ಲಿ ಬಿರುಕು :ಬೆಂಗಳೂರು
ಬೆಂಗಳೂರು, ಫೆ.5- ನಗರದಲ್ಲಿ ಕಟ್ಟಡಗಳು ವಾಲುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದ್ದು, ಇಂದು ಮತ್ತೊಂದು ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡು ಆತಂಕದಿಂದ ಜನರು ಮನೆ ಖಾಲಿ ಮಾಡಿದ್ದಾರೆ. ಹೆಬ್ಬಾಳದ ಕೆಂಪಾಪುರದಲ್ಲಿ ನಾಲ್ಕು ಅಂತಸ್ತಿನ ಪಿಜಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಟ್ಟಡ ವಾಲಿಕೊಂಡಿದೆ. ಬೆಳಗ್ಗೆ 8.30ರ ಸುಮಾರಿಗೆ ವಿಷಯ ಗೊತ್ತಾಗುತ್ತಿದ್ದಂತೆ ಹೆದರಿದ ಜನರು ಕಟ್ಟಡದಿಂದ ಹೊರಬಂದಿದ್ದಾರೆ. ಮನೆಯವರು ಅಗ್ನಿಶಾಮಕ ದಳ ಮತ್ತು ಬಿಬಿಎಂಪಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ …
Read More »ದೇಶಾದ್ಯಂತ ಕಿಚ್ಚು ಹಚ್ಚಿದ್ದ ಎನ್ಆರ್ಸಿ ಬಗ್ಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು, ಎನ್ಆರ್ಸಿಯನ್ನು ದೇಶಾದ್ಯಂತ ಜಾರಿಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ
ಬೆಂಗಳೂರು, ಫೆ.4-ದೇಶಾದ್ಯಂತ ಕಿಚ್ಚು ಹಚ್ಚಿದ್ದ ಎನ್ಆರ್ಸಿ ಬಗ್ಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು, ಎನ್ಆರ್ಸಿಯನ್ನು ದೇಶಾದ್ಯಂತ ಜಾರಿಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದೆ. ಲೋಕಸಭೆಯಲ್ಲಿ ಸಂಸದರು ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ನ್ಯಾಷನಲ್ ರಿಜಿಸ್ಟರ್ ಆಫ್ ಇಂಡಿಯನ್ ಸಿಟಿಜನ್ (ಎನ್ಆರ್ಐಸಿ)ಯನ್ನು ರಾಷ್ಟ್ರವ್ಯಾಪಿ ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ. ಈ ಮೊದಲು ಪೌರತ್ವ ತಿದ್ದುಪಡಿ …
Read More »ಲಕ್ಷ್ಮಣ ಸವದಿಯನ್ನು ಸಂಪುಟಕ್ಕೆ ತೆಗೆದುಕೊಂಡಿದ್ದರ ಹಿಂದೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳಿವೆ……..
ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ನಡೆಸಬಾರದು. ಇಷ್ಟವೋ ಕಷ್ಟವೋ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ಪ್ರತಿಯೊಬ್ಬರೂ ಪಾಲನೆ ಮಾಡಲೇಬೇಕು. ಲಕ್ಷ್ಮಣ ಸವದಿಯನ್ನು ಸಂಪುಟಕ್ಕೆ ತೆಗೆದುಕೊಂಡಿದ್ದರ ಹಿಂದೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳಿವೆ ಬೆಂಗಳೂರು, ಫೆ.4- ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ನಡೆಸಬಾರದು. ವರಿಷ್ಠರು ತೆಗೆದುಕೊಂಡ ತೀರ್ಮಾನವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಯಾರೊಬ್ಬರೂ ಪ್ರತ್ಯೇಕ ಸಭೆ ನಡೆಸಬಾರದೆಂದು ಬಿಜೆಪಿ ದೆಹಲಿ ವರಿಷ್ಠರು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳು ನಿನ್ನೆ ಶಾಸಕರ …
Read More »ಚೀನಾ-ಬೆಂಗಳೂರು ನಡುವೆ ವಿಮಾನ ಸಂಚಾರ ಬಂದ್..!
ಬೆಂಗಳೂರು, ಫೆ.4-ಕೊರೋನಾ ವೈರಸ್ ಭೀತಿಯಿಂದಾಗಿ ಚೀನಾ-ಬೆಂಗಳೂರು ನಡುವೆ ಸಂಚರಿಸುವ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಉಳಿದಂತೆ ಹಾಂಕಾಂಗ್, ಥೈಲ್ಯಾಂಡ್, ಸಿಂಗಪೂರ್ ನಡುವಿನ ಸಂಚಾರ ಮುಂದುವರೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹುತೇಕ ಕೊರೋನಾ ವೈರಸ್ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸುವುದನ್ನು ಕಡಿಮೆ ಮಾಡಲಾಗಿದೆ. ಕಳೆದ ವಾರದವರೆಗೂ ಚೀನಾದಿಂದ ವಿಮಾನಗಳು ಭಾರತಕ್ಕೆ ಆಗಮಿಸುತ್ತಿದ್ದವು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚೀನಾದಿಂದ ನೇರವಾಗಿ ವಿಮಾನಗಳು ಸಂಚರಿಸುತ್ತಿದ್ದವು. ಆದರೆ ಕೊರೋನಾ ವೈರಸ್ನ ಹರಡುವಿಕೆ ಹೆಚ್ಚಾಗಿದ್ದರಿಂದಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ.ಚೀನಾದಿಂದ …
Read More »ವಿಧಾನಸಭೆಯಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಳೆ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರು, ಫೆ.4- ವಿಧಾನಸಭೆಯಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಳೆ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಗುರುವಾರ ಕಡೆ ದಿನವಾಗಿದ್ದು, ಬಿಜೆಪಿಯಿಂದ ಸವದಿ ನಾಳೆ ಪಕ್ಷದ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಸೋಮವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. 17ರಂದು ಅಗತ್ಯವಿದ್ದರೆ ಚುನಾವಣೆ ನಡೆಯಲಿದೆ. ಈಗಿರುವ ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಬಿಜೆಪಿಗೆ ಒಂದು …
Read More »ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು
ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು ನೀವು ಹೇಳಿದ್ದಕ್ಕೆ ನಾನು ಮಂತ್ರಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಆರ್.ಶಂಕರ್, ಅವರ ಪತ್ನಿ ಹಾಗೂ ಪುತ್ರ ಯಡಿಯೂರಪ್ಪನವರ ನಿವಾಸಕ್ಕೆ ಬಂದು ತಮಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕೆಂದು ಮನವಿ ಬೆಂಗಳೂರು, ಫೆ.4- ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮೇಲೆ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ. ಡಾಲರ್ಸ್ …
Read More »ಬಿಜೆಪಿ ಎಂಪಿಗಳಿಗೆ ಕೇಂದ್ರ ಸರ್ಕಾರದಲ್ಲಿ ಮಾತನಾಡುವ ಧಮ್ ಇಲ್ಲ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ
ಬಂಗಾರಪೇಟೆ, ಫೆ.4- ದೇಶದಲ್ಲಿ ಕೇಂದ್ರ ಸರ್ಕಾರ ಸರಿಯಾಗಿ ಬೆಂಬಲ ನೀಡುತ್ತಿಲ್ಲ. ಬಿಜೆಪಿ ಎಂಪಿಗಳಿಗೆ ಕೇಂದ್ರ ಸರ್ಕಾರದಲ್ಲಿ ಮಾತನಾಡುವ ಧಮ್ ಇಲ್ಲ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಟೀಕಿಸಿದರು. ಕಾಮಸಮುದ್ರಂನಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗಂಗಮ್ಮ ದೇವಸ್ಥಾನಕ್ಕೆ ಭೇಟಿ ನೀಡುವ ಮುಂಚೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಕೇಂದ್ರ ಬಡ್ಜೆಟ್ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಬಿಜೆಪಿ ಸದಸ್ಯರ ವಿರುದ್ದ ಅಸಮಧಾನ ಹೊರಹಾಕಿದರು. ರಾಜ್ಯದಲ್ಲಿ 25 ಅಭ್ಯರ್ಥಿಗಳನ್ನು …
Read More »ಕೊಟ್ಟ ಮಾತಿನಂತೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕು,: ರಮೇಶ್ ಜಾರಕಿಹೊಳಿ ಶತಪ್ರಯತ್ನ
ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆಪ್ತ ಮಹೇಶ್ ಕುಮಟಳ್ಳಿಗೆ ಸ್ಥಾನ ಕಲ್ಪಿಸಲು ರಮೇಶ್ ಜಾರಕಿಹೊಳಿ ಶತಪ್ರಯತ್ನ ಪಟ್ಟು ಸಡಿಲಿಸದ ರಮೇಶ್ ಜಾರಕಿಹೊಳಿ ಮಹೇಶ್ಕುಮಟಳ್ಳಿ, ಶ್ರೀಮಂತ ಪಾಟೀಲ್ಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ನೀವು ಉಪಚುನಾವಣೆಯಲ್ಲಿ ಇದೇ ಮಾತನ್ನು ಹೇಳಿದ್ದೀರಿ, ಈಗ ಕೊಟ್ಟ ಮಾತಿನಿಂದ ಹಿಂದೆ ಸರಿದರೆ ಅನ್ಯಾಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು,ಫೆ.3- ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿರುವ ಬೆನ್ನಲ್ಲೇ ಸಂಪುಟಕ್ಕೆ ಸೇರ್ಪಡೆಯಾಗಲು …
Read More »ಇಂದು ಬೆಂಗಳೂರಿಗೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆಯ ಬಿಸಿ ತಟ್ಟಲಿದೆ.
ಬೆಂಗಳೂರು: ಇಂದು ಬೆಂಗಳೂರಿಗೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆಯ ಬಿಸಿ ತಟ್ಟಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜಧಾನಿಗೆ ಆಗಮಿಸಿರುವ ಕಾರ್ಯಕರ್ತೆಯರು ಸಿಐಟಿಯು ನಾಯಕಿ ವರಲಕ್ಷ್ಮಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಲಿದ್ದಾರೆ. ಆದರೆ ಇದಕ್ಕೆ ಪೊಲೀಸರು ಅವಕಾಶ ಕೊಟ್ಟಿಲ್ಲ. ಮುಂಜಾಗ್ರತೆಯಿಂದ ಸಿಐಟಿಯುನ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಮೆಜೆಸ್ಟಿಕ್ನ ರೈಲ್ವೇ ನಿಲ್ದಾಣಕ್ಕೆ ಬಂದಿರೋ ಕಾರ್ಯಕರ್ತೆಯರಿಗೆ ಪೊಲೀಸರು ದಿಗ್ಬಂಧನ ಹಾಕಿದ್ದಾರೆ. ಅತ್ತ ಫ್ರೀಡಂ ಪಾರ್ಕ್ಗೆ ಬರುತ್ತಿದ್ದ ಸಾವಿರಾರು ಕಾರ್ಯಕರ್ತೆಯರನ್ನು …
Read More »
Laxmi News 24×7