Breaking News
Home / ಜಿಲ್ಲೆ / ಬೆಂಗಳೂರು (page 52)

ಬೆಂಗಳೂರು

‘ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ’ ದಿನೇಶ್​ ಗುಂಡೂರಾವ್​ ಆಕ್ರೋಶ

ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ …

Read More »

ಡಿಕೆಎಸ್ ಕಮೀಷನ್ ಗಿರಾಕಿ’ ಹೇಳಿಕೆ: ‘ಇದು ನಿಶ್ಚಿತವಾಗಿಯೂ ಷಡ್ಯಂತ್ರ’ ಎಂದ ಸೋಮಶೇಖರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸ್ವಪಕ್ಷಿಯರ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಎಸ್​​ಟಿ ಸೋಮಶೇಖರ್​ ಪ್ರತಿಕ್ರಿಯಿಸಿ.. ಇದು ನಿಶ್ಚಿತವಾಗಿಯೂ ಒಂದು ಷಡ್ಯಂತ್ರ. ಮೊದಲಿನಿಂದಲೂ ನಾನು ಈ ಬಗ್ಗೆ ಹೇಳುತ್ತಿದ್ದೇನೆ ಎಂದರು. ಕಾಂಗ್ರೆಸ್​​ನಲ್ಲಿ ಮೊದಲಿನಿಂದಲೂ ಡಿ.ಕೆ.ಶಿವಕುಮಾರ್ ವರ್ಸಸ್ ಸಿದ್ದರಾಮಯ್ಯ ನಡೆಯುತ್ತಿದೆ. ಅವರ ವಿರುದ್ಧ ಇವರು, ಇವರ ವಿರುದ್ಧ ಅವರು ಷಡ್ಯಂತರ ನಡೆಸುತ್ತಿದ್ದಾರೆ. ಇದು ಈಗ ಮುಂದುವರಿದಿದೆ. ನನಗೆ ಪರ್ಸೆಂಟೆಜ್ ವ್ಯವಹಾರದ ಬಗ್ಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಬರೀ ಶಾಸಕನಾಗಿದ್ದೆ ಅಷ್ಟೇ …

Read More »

ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ: ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ- ಇಬ್ಬರು ಕಾಂಗ್ರೆಸ್ ನಾಯಕರ ಸ್ಫೊಟಕ ಮಾತು ವೈರಲ್.

ಬೆಂಗಳೂರು, ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರ ಬಗ್ಗೆ ಇಬ್ಬರು ಕಾಂಗ್ರೆಸ್ ನಾಯಕರ ಸ್ಪೋಟಕ ಮಾತು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಿಕೆ ಶಿವಕುಮಾರ್ ರದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್,ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ. ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿರುವ ಆಡಿಯೋ ವೈರಲ್ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ …

Read More »

ಮೂರು ಕೈಗಾರಿಕಾ ಟೌನ್​ಶಿಪ್​ಗಳಿಂದ ಅಂದಾಜು 10 ಸಾವಿರ ಕೋಟಿ ಖಾಸಗಿ ಬಂಡವಾಳ ಆಕರ್ಷಿಸಲು ಉದ್ದೇಶಿಸಲಾಗಿದೆ. ಟೌನ್​ಶಿಪ್​ಗಳ ನಿರ್ಮಾಣದಿಂದ ಐದು ಲಕ್ಷ ಉದ್ಯೋಗಾಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ.

ಬೆಂಗಳೂರು: ಬೆಂಗಳೂರು-ಮುಂಬೈ, ಬೆಂಗಳೂರು-ಚೆನ್ನೈ ಕಾರಿಡಾರ್‌ಗಳಲ್ಲಿ ಕೈಗಾರಿಕಾ ಟೌನ್‌ಶಿಪ್ ಸ್ಥಾಪನೆಗೆ ಕರ್ನಾಟಕ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಈ ಕೈಗಾರಿಕಾ ಕಾರಿಡಾರ್‌ಗಳು ಈಮುನ್ನ ಬಜೆಟ್‌ನಲ್ಲಿ ಘೋಷಿಸಲ್ಪಟ್ಟಿದ್ದವು. ತಲಾ ಕನಿಷ್ಠ 500 ಎಕರೆ ಜಾಗದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣಗೊಳ್ಳಲಿವೆ. ಅಂದಾಜು 10 ಸಾವಿರ ಕೋಟಿ ಖಾಸಗಿ ಬಂಡವಾಳ ಆಕರ್ಷಿಸಲು ಉದ್ದೇಶಿಸಲಾಗಿದೆ. ಟೌನ್​ಶಿಪ್​ಗಳ ನಿರ್ಮಾಣದಿಂದ ಐದು ಲಕ್ಷ ಉದ್ಯೋಗಾಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ. ಕೈಗಾರಿಕಾ ಪ್ರದೇಶದಲ್ಲಿ ರೆಸಿಡೆನ್ಷಿಯಲ್ ಟೌನ್​ಶಿಪ್ ನಿರ್ಮಾಣ; ಸಚಿವ …

Read More »

ಮ್ಯಾನೇಜ್ಮೆಂಟ್ ಕೋಟಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಮ್ಯಾನೇಜ್ಮೆಂಟ್ ಕೋಟಾ ಅಡಿ 13 ಸಾವಿರ ಜನ ವಿದ್ಯಾರ್ಥಿಗಳು ಇದ್ದಾರೆ. ಮಾನವೀಯ ಆಧಾರದ ಮೇಲೆ ಅವರಿಗೂ ವಿದ್ಯಾರ್ಥಿ ವೇತನದ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ. ಇದಕ್ಕಾಗಿ 8-9 ಕೋಟಿ ಹಣ ವೆಚ್ಚವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿದ್ಯಾರ್ಥಿ ವೇತನ ಬಂದಿಲ್ಲ ಅಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆ ಇಂದು (ಅ.12) ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ …

Read More »

ರವಿಚಂದ್ರನ್ ನನ್ನ ಪಾಲಿಗೆ ಲಕ್ಕಿ..; ಮಿಸ್ ನಂದಿನಿ ಮುಹೂರ್ತದಲ್ಲಿ ಪ್ರಿಯಾಂಕಾ

ಬೆಂಗಳೂರು: ‘ರವಿಚಂದ್ರನ್ ಯಾವತ್ತಿದ್ದರೂ ನನಗೆ ಲಕ್ಕಿ. ನನ್ನ ಸಿನಿಮಾದ ಯಾವುದಾದರೂ ಕಾರ್ಯಕ್ರಮಕ್ಕೆ ಅವರನ್ನು ಕರೆಸಬೇಕೆಂಬ ಆಸೆ ತುಂಬ ದಿನಗಳಿಂದ ಇತ್ತು. ಇದೀಗ ಆ ಕನಸು ನನಸಾಗಿದೆ …’ ಹೀಗೆ ಖುಷಿಯಾಗಿ ಹೇಳಿಕೊಂಡರು ಪ್ರಿಯಾಂಕಾ ಉಪೇಂದ್ರ. ಅವರು ‘ಮಿಸ್ ನಂದಿನಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ವಿಚಾರ ಇತ್ತೀಚೆಗಷ್ಟೇ ಅಧಿಕೃತವಾಗಿತ್ತು. ಇದೀಗ ಸದ್ದಿಲ್ಲದೆ ಮುಹೂರ್ತ ಮುಗಿಸಿ, ಶೂಟಿಂಗ್ ಸಹ ಶುರುಮಾಡಿದೆ ತಂಡ. ಈ ಮುಹೂರ್ತ ಕಾರ್ಯಕ್ರಮಕ್ಕೆ ರವಿಚಂದ್ರನ್ ಆಗಮಿಸಿ ಕ್ಲಾಪ್ ಮಾಡಿ ಶುಭಾಶಯ …

Read More »

ವಿದ್ಯುತ್ ಉತ್ಪಾದನಾ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ : ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು : ರಾಜ್ಯ ಸರಕಾರ ವಿದ್ಯುತ್ ಉತ್ಪಾದನೆ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ ಮಾಡಿದೆ, ಹೀಗಾಗಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮೊದಲಿನಿಂದಲೂ ಅಗತ್ಯಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿತ್ತು.ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯೋ, ಕೃತಕ ಅಭಾವವೋ ಮೊದಲು ಗೊತ್ತಾಗಬೇಕು ಎಂದು ಆಗ್ರಹಿಸಿದರು. ಇನ್ನೊಂದೆಡೆ, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದು ಮತ್ತು ವಿದ್ಯುತ್ ಅಭಾವ ಸೃಷ್ಟಿಯಾಗದು ಎಂದು ಇಂಧನ …

Read More »

ವೀಕ್‌ಎಂಡ್‌ ಹುಮಸ್ಸಿನಲ್ಲಿದ್ದ ಜನರಿಗೆ ಕಿರಿಕಿರಿ ಉಂಟು ಮಾಡಿದ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ಬೆಳಗ್ಗೆಯಿಂದಲೇ ಮಳೆ ಸುರಿದ ಕಾರಣ ವೀಕ್‌ಎಂಡ್‌ ಹುಮಸ್ಸಿನಲ್ಲಿದ್ದವರಿಗೆ ಕಿರಿಕಿರಿ ಉಂಟು ಮಾಡಿತು. ಮಳೆಯಿಂದಗಾಗಿ ರಾಜಧಾನಿಯ ರಸ್ತೆಗಳು ಜಲಾವೃತಗೊಂಡಿದ್ದವು. ಜತೆಗೆ ಮ್ಯಾನ್‌ ಹೋಲ್‌ಗ‌ಳು ಕೂಡ ಉಕ್ಕಿಹರಿದ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಗಾಳಿಸಹಿತ ಮಳೆ ಸುರಿದ ಹಿನ್ನೆಲೆಯಲ್ಲಿ ತಿಪ್ಪಸಂದ್ರ, ಪುಷ್ಪಾಂಜಲಿ ಚಿತ್ರಮಂದಿರ, ಕರಿರೇನಹಳ್ಳಿ, ಮತ್ತು ವೆಸ್ಟ್‌ ಆಫ್ ಕಾರ್ಡ್‌ ರಸ್ತೆಗಳಲ್ಲಿ ಮರಗಳು ಉರುಳಿ ಬಿದ್ದಿದ್ದು ಬಿಬಿಎಂಪಿ ಅಧಿಕಾರಿಗಳು ಮರಗಳ ತೆರವು …

Read More »

ಪ್ರಧಾನಿ ಮೋದಿ ಬಡವರನ್ನ ಮರೆಯೊಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: 70 ವರ್ಷದಲ್ಲಿ ಯಾರಾದರು ಪ್ರಧಾನಿಗಳು ಬಡವರ ಔಷಧಿ ಬಗ್ಗೆ ಯೋಚನೆ ಮಾಡಿದ್ದರಾ ? ಎಂದು ಪ್ರಶ್ನಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು.ಜನೌಷಧ ಅನುಷ್ಠಾನ ಮಾಡೋದು ಸುಲಭವಲ್ಲ. ಆದರೆ, ಮೋದಿಯವರು ಅದನ್ನು ಯಶಸ್ವಿಯಾಗಿ ಮಾಡಿದ್ದಾರೆ ಎಂದರು. ಭಾನುವಾರ ಬಸವನಗುಡಿಯ ಜನೌಷಧಿ ಕೇಂದ್ರಕ್ಕೆ ಭೇಟಿ‌ ನೀಡಿ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ಮೋದಿಯವರು ಇಂಜಿನ್ ಹಾಗೆ ದೇಶವನ್ನು ಮುಂದೆ ನಿಂತು ನಡೆಸುತ್ತಾರೆ. ನಮ್ಮ ಪ್ರಧಾನಿ ಬಡವರಲ್ಲಿ ಬಡವರನ್ನ ಮರೆಯೊಲ್ಲ. ಅದಕ್ಕೆ ಉದಾಹರಣೆ ಜನೌಷಧಿ. …

Read More »

ಯುವತಿಗಾಗಿ ಹೊಡೆದಾಟ : ಕೊಲೆಯಲ್ಲಿ ಅಂತ್ಯವಾದ ಜಗಳ

ಬೆಂಗಳೂರು : ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್‌ಎಎಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಲಿಖಿತ್ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. …

Read More »